ಬೆಂಗಳೂರು: ಕರ್ನಾಟಕ ವಿಧಾನಸಭಾ ಚುನಾವಣೆ ವೇಳೆ ರಾಜಕೀಯ ಪಕ್ಷಗಳು ಭರಪೂರ ದೇಣಿಗೆ ಸಂಗ್ರಹಿಸಿವೆ. ಆದರೆ ಚುನಾವಣೆಗೆಂದೇ ಸಂಗ್ರಹವಾದ ದೇಣಿಗೆಯಲ್ಲಿ ಸ್ವಲ್ಪಭಾಗವನ್ನಷ್ಟೇ ಖರ್ಚು ಮಾಡಿವೆ ಎಂದು ಅಸೋಸಿಯೇಷನ್ ಫಾರ್ ಡೆಮಾಕ್ರಟಿಕ್ ರಿಫಾರ್ಮ್ಸ್ (ಎಡಿಆರ್) ತನ್ನ ಅಧ್ಯಯನ ವರದಿಯಲ್ಲಿ ಹೇಳಿದೆ. ರಾಜಕೀಯ ಪಕ್ಷಗಳು ಚುನಾವಣಾ ಆಯೋಗಕ್ಕೆ ಸಲ್ಲಿಸಿದ್ದ ಮಾಹಿತಿಯನ್ನು ಆಧರಿಸಿ ಈ ವರದಿ ಸಿದ್ಧಪಡಿಸಲಾಗಿದೆ.