ಜನವರಿ ತಿಂಗಳಿನಿಂದಲೇ ಕಾಂಗ್ರೆಸ್ ಪಕ್ಷ 5 ಗ್ಯಾರಂಟಿಗಳನ್ನು ಘೋಷಣೆ ಮಾಡಿತು. ಆದರೆ ಬಿಜೆಪಿ ನಾಯಕರು ಆಗ ಮಲಗಿದ್ದು, ಚುನಾವಣೆ ಒಂದು ವಾರ ಇರುವಾಗ ಅರ್ಧ ಲೀಟರ್ ಹಾಲು ನೀಡುವುದಾಗಿ ಘೋಷಿಸಿದರು. ಬಿಜೆಪಿ ಪ್ರಣಾಳಿಕೆ ತಯಾರಿಕೆ ಹೊಣೆಯನ್ನು ಹಿರಿಯರಿಗೆ ವಹಿಸದೇ ಕೆ.ಸುಧಾಕರ್ ಅವರಿಗೆ ನೀಡಿದ್ದರಿಂದ ಪಕ್ಷ ಸೋಲಬೇಕಾಯಿತು’ ಎಂದು ಬಿಜೆಪಿ ಮಾಜಿ ಶಾಸಕ ಎಂ.ಪಿ. ರೇಣುಕಾಚಾರ್ಯ ಟೀಕಿಸಿದರು.