<p><strong>ಬೆಂಗಳೂರು</strong>: ವಿಧಾನ ಮಂಡಲದ ಅಧಿವೇಶನ ಮಾರ್ಚ್ 3ರಿಂದ ಆರಂಭವಾಗಲಿದ್ದು, ಮಧ್ಯಾಹ್ನದ ಭೋಜನದ ನಂತರ ವಿಧಾನಸಭೆ ಕಲಾಪಕ್ಕೆ ಶಾಸಕರು ಗೈರಾಗುವುದನ್ನು ತಪ್ಪಿಸಲು ಮೊಗಸಾಲೆಯಲ್ಲಿಯೇ ‘ಸುಖಾಸೀನ ಕುರ್ಚಿ’ಗಳನ್ನು ಅಳವಡಿಸಲು ಸಭಾಧ್ಯಕ್ಷ ಯು.ಟಿ. ಖಾದರ್ ನಿರ್ಧರಿಸಿದ್ದಾರೆ.</p>.<p>ಸುದ್ದಿಗಾರರ ಜೊತೆ ಮಾತನಾಡಿದ ಖಾದರ್, ‘ಭೋಜನದ ಬಳಿಕ ಕೆಲ ಹೊತ್ತು ನಿದ್ದೆಗೆ ಜಾರುವ ಅಭ್ಯಾಸ ಹೊಂದಿರುವ ಶಾಸಕರು, ಆ ನೆಪದಲ್ಲಿ ಕಲಾಪಕ್ಕೆ ಗೈರಾಗುತ್ತಿದ್ದಾರೆ. ಇದನ್ನು ತಪ್ಪಿಸಲು ಬಾಡಿಗೆಗೆ ಸುಖಾಸೀನ ಕುರ್ಚಿಗಳನ್ನು ಪಡೆದು ಅಳವಡಿಸುವ ಉದ್ದೇಶವಿದೆ’ ಎಂದರು.</p>.<p>‘ಮಧ್ಯಾಹ್ನ ಊಟ ಮುಗಿಸಿದ ಬಳಿಕ ನಿದ್ದೆ ಮಾಡಲು ಸಮಯಾವಕಾಶ ನೀಡುವಂತೆ ಕೆಲವು ಹಿರಿಯ ಶಾಸಕರು ಮನವಿ ಮಾಡಿದ್ದಾರೆ. ಆ ಕಾರಣಕ್ಕೆ ವಿಧಾನಸೌಧದಿಂದ ಹೊರಗೆ ಹೋಗುವ ಶಾಸಕರು ಮರಳಿ ಬರುವ ಸಾಧ್ಯತೆ ಇಲ್ಲ. ಸುಖಾಸೀನ ಕುರ್ಚಿ ಒದಗಿಸಿದರೆ ಶಾಸಕರಿಗೆ ಅನುಕೂಲ ಮಾಡಿಕೊಡಬಹುದು’ ಎಂದೂ ಹೇಳಿದರು.</p>.<p>‘ಮೊಗಸಾಲೆಯಲ್ಲಿ ಕನಿಷ್ಠ 15 ಸುಖಾಸೀನ ಕುರ್ಚಿಗಳನ್ನು ಸ್ಥಾಪಿಸಲು ಉದ್ದೇಶಿಸಲಾಗಿದೆ. ಕಲಾಪದ ಸಮಯದಲ್ಲಿ ಮಾತ್ರ ಈ ಕುರ್ಚಿಗಳು ಉಪಯೋಗಕ್ಕೆ ಬರುತ್ತವೆ. ಹೀಗಾಗಿ ಅವುಗಳನ್ನು ಖರೀದಿಸಿ ಹಣ ವ್ಯರ್ಥ ಮಾಡುವ ಬದಲು ಬಾಡಿಗೆಗೆ ಪಡೆಯಲು ನಿರ್ಧರಿಸಿದ್ದೇನೆ’ ಎಂದರು.</p>.<p>‘ಅಧಿವೇಶನದ ಸಂದರ್ಭದಲ್ಲಿ ಶಾಸಕರು ಎದುರಿಸುತ್ತಿರುವ ಕೆಲವು ಸಮಸ್ಯೆಗಳನ್ನು ಪರಿಗಣಿಸಿ ಬೆಳಗ್ಗಿನ ಉಪಾಹಾರ, ಮಧ್ಯಾಹ್ನದ ಊಟ, ಚಹಾ-ಕಾಫಿ ಮತ್ತು ತಿಂಡಿಗಳ ವ್ಯವಸ್ಥೆ ಮಾಡಲಾಗಿದೆ. 2024ರ ಜುಲೈನಲ್ಲಿ ನಡೆದ ವಿಧಾನಮಂಡಲದ ಅಧಿವೇಶನಗಳಲ್ಲಿಯೂ ಸುಖಾಸೀನ ಕುರ್ಚಿಗಳನ್ನು ಅಳವಡಿಸಲಾಗಿತ್ತು’ ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು</strong>: ವಿಧಾನ ಮಂಡಲದ ಅಧಿವೇಶನ ಮಾರ್ಚ್ 3ರಿಂದ ಆರಂಭವಾಗಲಿದ್ದು, ಮಧ್ಯಾಹ್ನದ ಭೋಜನದ ನಂತರ ವಿಧಾನಸಭೆ ಕಲಾಪಕ್ಕೆ ಶಾಸಕರು ಗೈರಾಗುವುದನ್ನು ತಪ್ಪಿಸಲು ಮೊಗಸಾಲೆಯಲ್ಲಿಯೇ ‘ಸುಖಾಸೀನ ಕುರ್ಚಿ’ಗಳನ್ನು ಅಳವಡಿಸಲು ಸಭಾಧ್ಯಕ್ಷ ಯು.ಟಿ. ಖಾದರ್ ನಿರ್ಧರಿಸಿದ್ದಾರೆ.</p>.<p>ಸುದ್ದಿಗಾರರ ಜೊತೆ ಮಾತನಾಡಿದ ಖಾದರ್, ‘ಭೋಜನದ ಬಳಿಕ ಕೆಲ ಹೊತ್ತು ನಿದ್ದೆಗೆ ಜಾರುವ ಅಭ್ಯಾಸ ಹೊಂದಿರುವ ಶಾಸಕರು, ಆ ನೆಪದಲ್ಲಿ ಕಲಾಪಕ್ಕೆ ಗೈರಾಗುತ್ತಿದ್ದಾರೆ. ಇದನ್ನು ತಪ್ಪಿಸಲು ಬಾಡಿಗೆಗೆ ಸುಖಾಸೀನ ಕುರ್ಚಿಗಳನ್ನು ಪಡೆದು ಅಳವಡಿಸುವ ಉದ್ದೇಶವಿದೆ’ ಎಂದರು.</p>.<p>‘ಮಧ್ಯಾಹ್ನ ಊಟ ಮುಗಿಸಿದ ಬಳಿಕ ನಿದ್ದೆ ಮಾಡಲು ಸಮಯಾವಕಾಶ ನೀಡುವಂತೆ ಕೆಲವು ಹಿರಿಯ ಶಾಸಕರು ಮನವಿ ಮಾಡಿದ್ದಾರೆ. ಆ ಕಾರಣಕ್ಕೆ ವಿಧಾನಸೌಧದಿಂದ ಹೊರಗೆ ಹೋಗುವ ಶಾಸಕರು ಮರಳಿ ಬರುವ ಸಾಧ್ಯತೆ ಇಲ್ಲ. ಸುಖಾಸೀನ ಕುರ್ಚಿ ಒದಗಿಸಿದರೆ ಶಾಸಕರಿಗೆ ಅನುಕೂಲ ಮಾಡಿಕೊಡಬಹುದು’ ಎಂದೂ ಹೇಳಿದರು.</p>.<p>‘ಮೊಗಸಾಲೆಯಲ್ಲಿ ಕನಿಷ್ಠ 15 ಸುಖಾಸೀನ ಕುರ್ಚಿಗಳನ್ನು ಸ್ಥಾಪಿಸಲು ಉದ್ದೇಶಿಸಲಾಗಿದೆ. ಕಲಾಪದ ಸಮಯದಲ್ಲಿ ಮಾತ್ರ ಈ ಕುರ್ಚಿಗಳು ಉಪಯೋಗಕ್ಕೆ ಬರುತ್ತವೆ. ಹೀಗಾಗಿ ಅವುಗಳನ್ನು ಖರೀದಿಸಿ ಹಣ ವ್ಯರ್ಥ ಮಾಡುವ ಬದಲು ಬಾಡಿಗೆಗೆ ಪಡೆಯಲು ನಿರ್ಧರಿಸಿದ್ದೇನೆ’ ಎಂದರು.</p>.<p>‘ಅಧಿವೇಶನದ ಸಂದರ್ಭದಲ್ಲಿ ಶಾಸಕರು ಎದುರಿಸುತ್ತಿರುವ ಕೆಲವು ಸಮಸ್ಯೆಗಳನ್ನು ಪರಿಗಣಿಸಿ ಬೆಳಗ್ಗಿನ ಉಪಾಹಾರ, ಮಧ್ಯಾಹ್ನದ ಊಟ, ಚಹಾ-ಕಾಫಿ ಮತ್ತು ತಿಂಡಿಗಳ ವ್ಯವಸ್ಥೆ ಮಾಡಲಾಗಿದೆ. 2024ರ ಜುಲೈನಲ್ಲಿ ನಡೆದ ವಿಧಾನಮಂಡಲದ ಅಧಿವೇಶನಗಳಲ್ಲಿಯೂ ಸುಖಾಸೀನ ಕುರ್ಚಿಗಳನ್ನು ಅಳವಡಿಸಲಾಗಿತ್ತು’ ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>