<p><strong>ಬೆಂಗಳೂರು:</strong> ‘ನಮ್ಮ ಐದು ವರ್ಷಗಳ ನಮ್ಮ ಸರ್ಕಾರದ ಸಾಧನೆಗಳನ್ನು ರಾಜ್ಯಪಾಲರ ಭಾಷಣದ ಮೂಲಕ ಗುರುತಿಸಿ ಶ್ಲಾಘಿಸಿದ ಮತ್ತು ತಮ್ಮ ಸರ್ಕಾರದ ಸಾಧನೆಯ ಬಗ್ಗೆ ಹೇಳಿಕೊಳ್ಳಲು ಏನೂ ಇಲ್ಲ ಎಂದು ಪ್ರಾಮಾಣಿಕವಾಗಿ ಒಪ್ಪಿಕೊಂಡ ಬಿಜೆಪಿ ಸರ್ಕಾರಕ್ಕೆ ಧನ್ಯವಾದ’ ಎಂದು ವಿಧಾನಸಭೆ ವಿರೋಧ ಪಕ್ಷದ ನಾಯಕಪ್ರತಿಕ್ರಿಯಿಸಿದರು.</p>.<p>‘ನೆರೆ ಹಾವಳಿಯಿಂದ ಸಂಕಷ್ಟಕ್ಕೆ ಸಿಲುಕಿದ ರಾಜ್ಯದ ಹಲವು ಸಮಸ್ಯೆಗಳಿಗೆ ರಾಜ್ಯಪಾಲರು ಸ್ಪಂದಿಸಬಹುದು ಎಂಬ ನಿರೀಕ್ಷೆ ಹುಸಿಯಾಗಿದೆ. ಆರು ತಿಂಗಳು ಸರ್ಕಾರವನ್ನು ಭದ್ರಪಡಿಸುವುದರಲ್ಲೇ ಸಮಯ ಕಳೆದುಹೋಗಿದೆ, ಜನರ ಕಷ್ಟಗಳಿಗೆ ಸ್ಪಂದಿಸುವುದಕ್ಕೆ ಇವರಿಗೆ ಸಾಧ್ಯವಾಗಿಲ್ಲ’ ಎಂದು ಅವರು ಸೋಮವಾರ ಸುದ್ದಿಗಾರರಿಗೆ ತಿಳಿಸಿದರು.</p>.<p>‘ಭಾಷಣ ತೀರಾ ಸಪ್ಪೆಯಾಗಿದ್ದು, ಇದರ ಬಗ್ಗೆ ಹೇಳಿಕೊಳ್ಳುವುದಕ್ಕೆ ಏನೂ ಉಳಿದಿಲ್ಲ’ ಎಂದು ಅವರು ಹೇಳಿದರು.</p>.<p><strong>ಕೇಂದ್ರದಿಂದಲೇ ಈ ಸ್ಥಿತಿ:</strong> ‘ರಾಜ್ಯಪಾಲರ ಭಾಷಣ ಯಾವುದೇ ಹೊಸ ವಿಷಯ ಒಳಗೊಂಡಿಲ್ಲ. ಜಿಎಸ್ಟಿ, ನರೇಗಾ ಸೇರಿದಂತೆ ಕೇಂದ್ರದ ಹಲವು ಯೋಜನೆಗಳ ಹಣ ಬಂದಿಲ್ಲ. ಕೇಂದ್ರದಿಂದಾಗಿಯೇ ರಾಜ್ಯಕ್ಕೆ ಈ ಸ್ಥಿತಿ ಬಂದಿದೆ’ ಎಂದು ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕ ಎಚ್.ಡಿ.ಕುಮಾರಸ್ವಾಮಿ ಹೇಳಿದರು.</p>.<p>‘ನನ್ನ ಕಾಲದಲ್ಲಿ ರೈತರ ಸಾಲ ಮನ್ನಾ ಜೊತೆಗೆ ಹೊಸ ಯೋಜನೆಗೂ ಚಾಲನೆ ನೀಡಿದ್ದೆ. ಕಳೆದ 6-7 ತಿಂಗಳುಗಳಲ್ಲಿನ ಈ ಸರ್ಕಾರದ ಸಾಧನೆ ಎಂದರೆ ಅವರ ವೈಫಲ್ಯ ಮುಚ್ಚಿಕೊಳ್ಳುವುದಷ್ಟೇ. ನಾನು ಇಲಾಖಾವಾರು ಹಣ ಕಡಿತ ಮಾಡಿರಲಿಲ್ಲ’ ಎಂದು ಅವರು ಸುದ್ದಿಗಾರರಿಗೆ ತಿಳಿಸಿದರು.</p>.<p>*<br />ಭಾಷಣದ ಉದ್ದಕ್ಕೂ ಸುಳ್ಳು ಹೇಳಿದ್ದಾರೆ. ಕೃಷ್ಣಾ, ಮಹದಾಯಿ ವಿಚಾರದಲ್ಲಿ ಪರಿಹಾರಗಳನ್ನು ಪ್ರಸ್ತಾಪಿಸದೆ ಜನರಿಗೆ ಅನ್ಯಾಯ ಮಾಡಲಾಗಿದೆ<br /><em><strong>–ಎಸ್.ಆರ್.ಪಾಟೀಲ ವಿಧಾನ ಪರಿಷತ್ ವಿರೋಧ ಪಕ್ಷದ ನಾಯಕ</strong></em></p>.<p><em><strong>*</strong></em><br />ಜನಪರ ಕಾರ್ಯಕ್ರಮಗಳಿಗೆ ಅವಕಾಶವನ್ನೇ ನೀಡಿಲ್ಲ. ಅಧಿಕಾರಕ್ಕೆ ಬಂದು ಆರು ತಿಂಗಳಾದರೂ ಇನ್ನೂ ಏನೂ ಮಾಡಿಲ್ಲ ಬಸವರಾಜ<strong> </strong><br /><em><strong>–ಹೊರಟ್ಟಿ ವಿಧಾನ ಪರಿಷತ್ ಜೆಡಿಎಸ್ ಸದಸ್ಯ</strong></em></p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು:</strong> ‘ನಮ್ಮ ಐದು ವರ್ಷಗಳ ನಮ್ಮ ಸರ್ಕಾರದ ಸಾಧನೆಗಳನ್ನು ರಾಜ್ಯಪಾಲರ ಭಾಷಣದ ಮೂಲಕ ಗುರುತಿಸಿ ಶ್ಲಾಘಿಸಿದ ಮತ್ತು ತಮ್ಮ ಸರ್ಕಾರದ ಸಾಧನೆಯ ಬಗ್ಗೆ ಹೇಳಿಕೊಳ್ಳಲು ಏನೂ ಇಲ್ಲ ಎಂದು ಪ್ರಾಮಾಣಿಕವಾಗಿ ಒಪ್ಪಿಕೊಂಡ ಬಿಜೆಪಿ ಸರ್ಕಾರಕ್ಕೆ ಧನ್ಯವಾದ’ ಎಂದು ವಿಧಾನಸಭೆ ವಿರೋಧ ಪಕ್ಷದ ನಾಯಕಪ್ರತಿಕ್ರಿಯಿಸಿದರು.</p>.<p>‘ನೆರೆ ಹಾವಳಿಯಿಂದ ಸಂಕಷ್ಟಕ್ಕೆ ಸಿಲುಕಿದ ರಾಜ್ಯದ ಹಲವು ಸಮಸ್ಯೆಗಳಿಗೆ ರಾಜ್ಯಪಾಲರು ಸ್ಪಂದಿಸಬಹುದು ಎಂಬ ನಿರೀಕ್ಷೆ ಹುಸಿಯಾಗಿದೆ. ಆರು ತಿಂಗಳು ಸರ್ಕಾರವನ್ನು ಭದ್ರಪಡಿಸುವುದರಲ್ಲೇ ಸಮಯ ಕಳೆದುಹೋಗಿದೆ, ಜನರ ಕಷ್ಟಗಳಿಗೆ ಸ್ಪಂದಿಸುವುದಕ್ಕೆ ಇವರಿಗೆ ಸಾಧ್ಯವಾಗಿಲ್ಲ’ ಎಂದು ಅವರು ಸೋಮವಾರ ಸುದ್ದಿಗಾರರಿಗೆ ತಿಳಿಸಿದರು.</p>.<p>‘ಭಾಷಣ ತೀರಾ ಸಪ್ಪೆಯಾಗಿದ್ದು, ಇದರ ಬಗ್ಗೆ ಹೇಳಿಕೊಳ್ಳುವುದಕ್ಕೆ ಏನೂ ಉಳಿದಿಲ್ಲ’ ಎಂದು ಅವರು ಹೇಳಿದರು.</p>.<p><strong>ಕೇಂದ್ರದಿಂದಲೇ ಈ ಸ್ಥಿತಿ:</strong> ‘ರಾಜ್ಯಪಾಲರ ಭಾಷಣ ಯಾವುದೇ ಹೊಸ ವಿಷಯ ಒಳಗೊಂಡಿಲ್ಲ. ಜಿಎಸ್ಟಿ, ನರೇಗಾ ಸೇರಿದಂತೆ ಕೇಂದ್ರದ ಹಲವು ಯೋಜನೆಗಳ ಹಣ ಬಂದಿಲ್ಲ. ಕೇಂದ್ರದಿಂದಾಗಿಯೇ ರಾಜ್ಯಕ್ಕೆ ಈ ಸ್ಥಿತಿ ಬಂದಿದೆ’ ಎಂದು ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕ ಎಚ್.ಡಿ.ಕುಮಾರಸ್ವಾಮಿ ಹೇಳಿದರು.</p>.<p>‘ನನ್ನ ಕಾಲದಲ್ಲಿ ರೈತರ ಸಾಲ ಮನ್ನಾ ಜೊತೆಗೆ ಹೊಸ ಯೋಜನೆಗೂ ಚಾಲನೆ ನೀಡಿದ್ದೆ. ಕಳೆದ 6-7 ತಿಂಗಳುಗಳಲ್ಲಿನ ಈ ಸರ್ಕಾರದ ಸಾಧನೆ ಎಂದರೆ ಅವರ ವೈಫಲ್ಯ ಮುಚ್ಚಿಕೊಳ್ಳುವುದಷ್ಟೇ. ನಾನು ಇಲಾಖಾವಾರು ಹಣ ಕಡಿತ ಮಾಡಿರಲಿಲ್ಲ’ ಎಂದು ಅವರು ಸುದ್ದಿಗಾರರಿಗೆ ತಿಳಿಸಿದರು.</p>.<p>*<br />ಭಾಷಣದ ಉದ್ದಕ್ಕೂ ಸುಳ್ಳು ಹೇಳಿದ್ದಾರೆ. ಕೃಷ್ಣಾ, ಮಹದಾಯಿ ವಿಚಾರದಲ್ಲಿ ಪರಿಹಾರಗಳನ್ನು ಪ್ರಸ್ತಾಪಿಸದೆ ಜನರಿಗೆ ಅನ್ಯಾಯ ಮಾಡಲಾಗಿದೆ<br /><em><strong>–ಎಸ್.ಆರ್.ಪಾಟೀಲ ವಿಧಾನ ಪರಿಷತ್ ವಿರೋಧ ಪಕ್ಷದ ನಾಯಕ</strong></em></p>.<p><em><strong>*</strong></em><br />ಜನಪರ ಕಾರ್ಯಕ್ರಮಗಳಿಗೆ ಅವಕಾಶವನ್ನೇ ನೀಡಿಲ್ಲ. ಅಧಿಕಾರಕ್ಕೆ ಬಂದು ಆರು ತಿಂಗಳಾದರೂ ಇನ್ನೂ ಏನೂ ಮಾಡಿಲ್ಲ ಬಸವರಾಜ<strong> </strong><br /><em><strong>–ಹೊರಟ್ಟಿ ವಿಧಾನ ಪರಿಷತ್ ಜೆಡಿಎಸ್ ಸದಸ್ಯ</strong></em></p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>