<p><strong>ಸುವರ್ಣ ವಿಧಾನಸೌಧ (ಬೆಳಗಾವಿ):</strong> ‘ಯಾವುದೇ ಕಲಾವಿದರ ಬಗ್ಗೆ ಅವಹೇಳನಕಾರಿಯಾಗಿ ಮಾತನಾಡಿದರೆ ಕ್ರಮ ಕೈಗೊಳ್ಳಲಾಗುವುದು’ ಎಂದು ಕನ್ನಡ ಮತ್ತು ಸಂಸ್ಕೃತಿ ಸಚಿವ ಶಿವರಾಜ್ ತಂಗಡಗಿ ಹೇಳಿದರು.</p><p>ಯಕ್ಷಗಾನ ಕಲಾವಿದರ ಬಗ್ಗೆ ಆಕ್ಷೇಪಾರ್ಹ ಹೇಳಿಕೆ ನೀಡಿದ್ದ ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರ ವಿರುದ್ಧ ಕ್ರಮಕೈಗೊಳ್ಳಬೇಕೆಂದು ವಿಧಾನಸಭೆಯಲ್ಲಿ ಬಿಜೆಪಿಯ ಸುನಿಲ್ ಕುಮಾರ್ ಪ್ರಸ್ತಾಪಿಸಿದರು.</p><p>‘ಯಕ್ಷಗಾನಕ್ಕೆ ಧಾರ್ಮಿಕ ಸ್ಪರ್ಶ ಇದೆ. ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರು ಕಲಾವಿದರಿಗೆ ಅವಮಾನ ಮಾಡಿದ್ದಾರೆ. ಅವರಿಗೆ ನೋಟಿಸ್ ನೀಡಿ ಸ್ಪಷ್ಟನೆ ಕೇಳಬೇಕು’ ಎಂದು ಆಗ್ರಹಿಸಿದರು. ಬಿಜೆಪಿಯ ವೇದವ್ಯಾಸ ಕಾಮತ್, ಹರೀಶ್ ಪೂಂಜಾ ಅವರೂ ದನಿಗೂಡಿಸಿದರು.</p><p>ಅದಕ್ಕೆ ಪ್ರತಿಕ್ರಿಯಿಸಿದ ತಂಗಡಗಿ, ‘ಅಧ್ಯಕ್ಷರನ್ನು ಕರೆಯಿಸಿ ಮಾತನಾಡಿದ್ದೇನೆ. ತಮ್ಮ ಹೇಳಿಕೆ ಬಗ್ಗೆ ಅವರು ವಿಷಾದ ವ್ಯಕ್ತಪಡಿಸಿದ್ದಾರೆ. ತಮ್ಮ ಹೇಳಿಕೆಗೆ ವಿಷಾದ ವ್ಯಕ್ತಪಡಿಸಿ ಅವರು ಪತ್ರಿಕೆಗಳಲ್ಲಿಯೂ ಮರು ಹೇಳಿಕೆ ನೀಡಿದ್ದಾರೆ. ಯಕ್ಷಗಾನದ ಬಗ್ಗೆ ನಮಗೂ ಗೌರವವಿದೆ. ಈ ರೀತಿಯ ಹೇಳಿಕೆಗಳ ಬಗ್ಗೆ ಮುಂದಿನ ದಿನಗಳಲ್ಲಿ ಗಮನ ಹರಿಸಲಾಗುವುದು’ ಎಂದರು.</p><p><strong>ಸ್ಥಳಾಂತರಗೊಂಡ ಕುಟುಂಬಗಳಿಗೆ ಸೂಕ್ತ ಪರಿಹಾರ</strong></p><p><strong>ಬೆಳಗಾವಿ (ಸುವರ್ಣ ವಿಧಾನಸೌಧ):</strong> ‘ಕುದುರೆಮುಖ ರಾಷ್ಟ್ರೀಯ ಉದ್ಯಾನವನದಿಂದ ಸ್ಥಳಾಂತರಗೊಂಡಿರುವ ಕುಟುಂಬಗಳಿಗೆ ಪ್ರಸ್ತುತ ಮಾರುಕಟ್ಟೆ ದರದಲ್ಲೇ ಪರಿಹಾರ ನೀಡಲಾಗುವುದು’ ಎಂದು ಅರಣ್ಯ ಸಚಿವ ಈಶ್ವರ ಖಂಡ್ರೆ ತಿಳಿಸಿದರು.</p><p>ವಿಧಾನಸಭೆಯಲ್ಲಿ ಬಿಜೆಪಿಯ ಆರಗ ಜ್ಞಾನೇಂದ್ರ ಮತ್ತು ಕಾಂಗ್ರೆಸ್ನ ಟಿ.ಡಿ. ರಾಜೇಗೌಡ ಅವರ ಗಮನಸೆಳೆವ ಸೂಚನೆಗೆ ಉತ್ತರಿಸಿದ ಸಚಿವರು, ‘1,382 ಕುಟುಂಬಗಳಿಗೆ 2025ರಲ್ಲಿ ಪ್ಯಾಕೇಜ್ ಘೋಷಣೆ ಮಾಡಲಾಗಿದ್ದು, 670 ಕುಟುಂಬಗಳು ಸ್ಥಳಾಂತರಗೊಂಡಿವೆ. 356 ಕುಟುಂಬಗಳಿಗೆ ₹ 142 ಕೋಟಿ ಪರಿಹಾರ ನೀಡಲಾಗಿದೆ. 314 ಕುಟುಂಬಗಳಿಗೆ ಸ್ಥಳೀಯ ಮಟ್ಟದಲ್ಲಿ ಸಮಿತಿ ರಚಿಸಿ ಮನೆ ಜಮೀನಿನ ಮೌಲ್ಯಮಾಪನ ಮಾಡಿ 2025ರ ಮಾರುಕಟ್ಟೆ ದರದಲ್ಲೇ ಪರಿಹಾರ ನೀಡಲಾಗುವುದು’ ಎಂದರು.</p><p>‘82 ಕುಟುಂಬಗಳಿಗೆ 2013ರ ಕಾಯ್ದೆ ಅನ್ವಯ ಪರಿಹಾರ ನೀಡಬೇಕೆಂದರೆ ₹ 1 ಸಾವಿರ ಕೋಟಿ ಬೇಕಾಗುತ್ತದೆ. ಇದಕ್ಕೆ ಒಪ್ಪಿದರೆ 670 ಕುಟುಂಬಗಳು ಇದೇ ಪರಿಹಾರ ಕೇಳಬಹುದು. ಇಷ್ಟು ಮೊತ್ತಕ್ಕೆ ಕೇಂದ್ರ ಸರ್ಕಾರದ ಅನುಮೋದನೆ ಬೇಕಾಗುತ್ತದೆ’ ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಸುವರ್ಣ ವಿಧಾನಸೌಧ (ಬೆಳಗಾವಿ):</strong> ‘ಯಾವುದೇ ಕಲಾವಿದರ ಬಗ್ಗೆ ಅವಹೇಳನಕಾರಿಯಾಗಿ ಮಾತನಾಡಿದರೆ ಕ್ರಮ ಕೈಗೊಳ್ಳಲಾಗುವುದು’ ಎಂದು ಕನ್ನಡ ಮತ್ತು ಸಂಸ್ಕೃತಿ ಸಚಿವ ಶಿವರಾಜ್ ತಂಗಡಗಿ ಹೇಳಿದರು.</p><p>ಯಕ್ಷಗಾನ ಕಲಾವಿದರ ಬಗ್ಗೆ ಆಕ್ಷೇಪಾರ್ಹ ಹೇಳಿಕೆ ನೀಡಿದ್ದ ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರ ವಿರುದ್ಧ ಕ್ರಮಕೈಗೊಳ್ಳಬೇಕೆಂದು ವಿಧಾನಸಭೆಯಲ್ಲಿ ಬಿಜೆಪಿಯ ಸುನಿಲ್ ಕುಮಾರ್ ಪ್ರಸ್ತಾಪಿಸಿದರು.</p><p>‘ಯಕ್ಷಗಾನಕ್ಕೆ ಧಾರ್ಮಿಕ ಸ್ಪರ್ಶ ಇದೆ. ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರು ಕಲಾವಿದರಿಗೆ ಅವಮಾನ ಮಾಡಿದ್ದಾರೆ. ಅವರಿಗೆ ನೋಟಿಸ್ ನೀಡಿ ಸ್ಪಷ್ಟನೆ ಕೇಳಬೇಕು’ ಎಂದು ಆಗ್ರಹಿಸಿದರು. ಬಿಜೆಪಿಯ ವೇದವ್ಯಾಸ ಕಾಮತ್, ಹರೀಶ್ ಪೂಂಜಾ ಅವರೂ ದನಿಗೂಡಿಸಿದರು.</p><p>ಅದಕ್ಕೆ ಪ್ರತಿಕ್ರಿಯಿಸಿದ ತಂಗಡಗಿ, ‘ಅಧ್ಯಕ್ಷರನ್ನು ಕರೆಯಿಸಿ ಮಾತನಾಡಿದ್ದೇನೆ. ತಮ್ಮ ಹೇಳಿಕೆ ಬಗ್ಗೆ ಅವರು ವಿಷಾದ ವ್ಯಕ್ತಪಡಿಸಿದ್ದಾರೆ. ತಮ್ಮ ಹೇಳಿಕೆಗೆ ವಿಷಾದ ವ್ಯಕ್ತಪಡಿಸಿ ಅವರು ಪತ್ರಿಕೆಗಳಲ್ಲಿಯೂ ಮರು ಹೇಳಿಕೆ ನೀಡಿದ್ದಾರೆ. ಯಕ್ಷಗಾನದ ಬಗ್ಗೆ ನಮಗೂ ಗೌರವವಿದೆ. ಈ ರೀತಿಯ ಹೇಳಿಕೆಗಳ ಬಗ್ಗೆ ಮುಂದಿನ ದಿನಗಳಲ್ಲಿ ಗಮನ ಹರಿಸಲಾಗುವುದು’ ಎಂದರು.</p><p><strong>ಸ್ಥಳಾಂತರಗೊಂಡ ಕುಟುಂಬಗಳಿಗೆ ಸೂಕ್ತ ಪರಿಹಾರ</strong></p><p><strong>ಬೆಳಗಾವಿ (ಸುವರ್ಣ ವಿಧಾನಸೌಧ):</strong> ‘ಕುದುರೆಮುಖ ರಾಷ್ಟ್ರೀಯ ಉದ್ಯಾನವನದಿಂದ ಸ್ಥಳಾಂತರಗೊಂಡಿರುವ ಕುಟುಂಬಗಳಿಗೆ ಪ್ರಸ್ತುತ ಮಾರುಕಟ್ಟೆ ದರದಲ್ಲೇ ಪರಿಹಾರ ನೀಡಲಾಗುವುದು’ ಎಂದು ಅರಣ್ಯ ಸಚಿವ ಈಶ್ವರ ಖಂಡ್ರೆ ತಿಳಿಸಿದರು.</p><p>ವಿಧಾನಸಭೆಯಲ್ಲಿ ಬಿಜೆಪಿಯ ಆರಗ ಜ್ಞಾನೇಂದ್ರ ಮತ್ತು ಕಾಂಗ್ರೆಸ್ನ ಟಿ.ಡಿ. ರಾಜೇಗೌಡ ಅವರ ಗಮನಸೆಳೆವ ಸೂಚನೆಗೆ ಉತ್ತರಿಸಿದ ಸಚಿವರು, ‘1,382 ಕುಟುಂಬಗಳಿಗೆ 2025ರಲ್ಲಿ ಪ್ಯಾಕೇಜ್ ಘೋಷಣೆ ಮಾಡಲಾಗಿದ್ದು, 670 ಕುಟುಂಬಗಳು ಸ್ಥಳಾಂತರಗೊಂಡಿವೆ. 356 ಕುಟುಂಬಗಳಿಗೆ ₹ 142 ಕೋಟಿ ಪರಿಹಾರ ನೀಡಲಾಗಿದೆ. 314 ಕುಟುಂಬಗಳಿಗೆ ಸ್ಥಳೀಯ ಮಟ್ಟದಲ್ಲಿ ಸಮಿತಿ ರಚಿಸಿ ಮನೆ ಜಮೀನಿನ ಮೌಲ್ಯಮಾಪನ ಮಾಡಿ 2025ರ ಮಾರುಕಟ್ಟೆ ದರದಲ್ಲೇ ಪರಿಹಾರ ನೀಡಲಾಗುವುದು’ ಎಂದರು.</p><p>‘82 ಕುಟುಂಬಗಳಿಗೆ 2013ರ ಕಾಯ್ದೆ ಅನ್ವಯ ಪರಿಹಾರ ನೀಡಬೇಕೆಂದರೆ ₹ 1 ಸಾವಿರ ಕೋಟಿ ಬೇಕಾಗುತ್ತದೆ. ಇದಕ್ಕೆ ಒಪ್ಪಿದರೆ 670 ಕುಟುಂಬಗಳು ಇದೇ ಪರಿಹಾರ ಕೇಳಬಹುದು. ಇಷ್ಟು ಮೊತ್ತಕ್ಕೆ ಕೇಂದ್ರ ಸರ್ಕಾರದ ಅನುಮೋದನೆ ಬೇಕಾಗುತ್ತದೆ’ ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>