ಭಾನುವಾರ, 19 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ವಿಧಾನ ಪರಿಷತ್‌: ಸಾಲ ಮನ್ನಾ, ಬರ ಪರಿಹಾರ ನೀಡಲು ಬಿಜೆಪಿ ಸದಸ್ಯರ ಆಗ್ರಹ

Published 11 ಡಿಸೆಂಬರ್ 2023, 15:38 IST
Last Updated 11 ಡಿಸೆಂಬರ್ 2023, 15:38 IST
ಅಕ್ಷರ ಗಾತ್ರ

ವಿಧಾನ ಪರಿಷತ್‌: ಬರ ಪರಿಸ್ಥಿತಿ ಎದುರಿಸುತ್ತಿರುವ ಪ್ರದೇಶದ ರೈತರ ಸಾಲ ಮನ್ನಾ ಮಾಡಬೇಕು. ತಕ್ಷಣದ ಪರಿಹಾರವಾಗಿ ₹10 ಸಾವಿರ ಕೋಟಿ ನೆರವು ಘೋಷಿಸಬೇಕು ಎಂದು ಜೆಡಿಎಸ್‌–ಬಿಜೆಪಿ ಸದಸ್ಯರು ಆಗ್ರಹಿಸಿದರು.

ರಾಜ್ಯದ ಬರ ಪರಿಸ್ಥಿತಿ ಕುರಿತು ನಡೆದ ಚರ್ಚೆಯಲ್ಲಿ ವಿಷಯ ಪ್ರಸ್ತಾಪಿಸಿದ ಬಿಜೆಪಿಯ ಛಲವಾದಿ ನಾರಾಯಣ ಸ್ವಾಮಿ, ‘ಕೇಂದ್ರ ಸರ್ಕಾರ ಬರ ಪರಿಹಾರ ಮೊತ್ತ ಬಿಡುಗಡೆ ಮಾಡಿಲ್ಲ ಎಂದು ಆರೋಪ ಮಾಡುವ ಬದಲು ರಾಜ್ಯ ಸರ್ಕಾರ ತನ್ನ ಬಳಿ ಇರುವ ಹಣವನ್ನು ಬಿಡುಗಡೆ ಮಾಡಿ ರೈತರ ಸಂಕಷ್ಟಗಳಿಗೆ ಸ್ಪಂದಿಸಬೇಕು’ ಎಂದರು. 

‘ಹಗಲು ವೇಳೆ ಎಂಟು ಗಂಟೆ ತ್ರಿಫೇಸ್‌ ವಿದ್ಯುತ್‌ ನೀಡಬೇಕು. ವಿದ್ಯುತ್‌ ಪರಿವರ್ತಕಗಳ ಅಳವಡಿಕೆಗೆ ರೈತರಿಂದ ಹಣ ಪಡೆಯಬಾರದು, ಕಂದಾಯ ಬಾಕಿ ಮನ್ನಾ ಮಾಡಬೇಕು. ಸಾಲ ವಸೂಲಾತಿ ಮುಂದೂಡಬೇಕು. ಬರದ ಕಾರಣಕ್ಕೆ ಗುಳೆ ಹೋಗುವುದನ್ನು ತಡೆಯಲು ಆಯಾ ಗ್ರಾಮಗಳಲ್ಲೇ ಕೂಲಿ ಸಿಗುವಂತೆ ಮಾಡಬೇಕು. ಅದಕ್ಕೆ ತಗಲುವ ವೆಚ್ಚ ತಕ್ಷಣ ಬಿಡುಗಡೆ ಮಾಡಬೇಕು’ ಎಂದು ಬಹುತೇಕ ಸದಸ್ಯರು ಒತ್ತಾಯಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT