<p><strong>ಬೆಂಗಳೂರು</strong>: ‘ಬೆಂಗಳೂರು ಕೇಂದ್ರ ಲೋಕಸಭಾ ಕ್ಷೇತ್ರದ ಮಹದೇವಪುರದಲ್ಲಿ ಮತ ಕಳವು ನಡೆದಿರುವುದನ್ನು ನಮ್ಮ ನಾಯಕ ರಾಹುಲ್ ಗಾಂಧಿ ಅವರು ಪುರಾವೆಗಳ ಸಮೇತ ಸಾಬೀತುಪಡಿಸಿದ್ದಾರೆ. ಪಕ್ಷದ ನಾಯಕರು ಮಾಡಿರುವ ಆರೋಪಗಳಿಗೆ ಚುನಾವಣಾ ಆಯೋಗ ಉತ್ತರ ನೀಡಬೇಕು’ ಎಂದು ಗ್ರಾಮೀಣಾಭಿವೃದ್ಧಿ ಸಚಿವ ಪ್ರಿಯಾಂಕ್ ಖರ್ಗೆ ಆಗ್ರಹಿಸಿದರು.</p>.<p>ಮಹದೇವಪುರದಲ್ಲಿ ಮತ ಕಳವು ನಡೆದಿರುವ ಬಗ್ಗೆ ಸುದ್ದಿಗೋಷ್ಠಿಯಲ್ಲಿ ಪ್ರಾತ್ಯಕ್ಷಿಕೆ ಸಹಿತ ವಿವರಿಸಿದ ಪ್ರಿಯಾಂಕ್, ‘ಈ ಪ್ರಕರಣದಲ್ಲಿ ಕಾನೂನು ಹೋರಾಟಕ್ಕೆ ತೀರ್ಮಾನಿಸಿದ್ದೇವೆ’ ಎಂದರು. </p>.<p>‘ಚುನಾವಣಾ ಆಯೋಗದ ನಿಯಮ ಮೀರಿ ಮತದಾರರ ಸಂಖ್ಯೆ ಹೆಚ್ಚಳವಾಗಿದೆ. ಶೇಕಡಾ 4ರಷ್ಟು ಮತದಾರರ ಸಂಖ್ಯೆ ಹೆಚ್ಚಾಗಿದೆ. ಹಾಗಾದರೆ, ಚುನಾವಣಾ ಆಯೋಗ ನಿಯಮ ಮೀರಿ ಕೆಲಸ ಮಾಡುತ್ತಿದೆಯೇ’ ಎಂದೂ ಅವರು ಪ್ರಶ್ನಿಸಿದರು.</p>.<p>ಮುಖ್ಯಮಂತ್ರಿಯ ಕಾನೂನು ಸಲಹೆಗಾರ ಎ.ಎಸ್. ಪೊನ್ನಣ್ಣ ಮಾತನಾಡಿ, ‘ಚುನಾವಣಾ ಆಯೋಗದವರು ಈ ಅಕ್ರಮವನ್ನು ತನಿಖೆ ಮಾಡಲು ಏಕೆ ಹಿಂದೇಟು ಹಾಕುತ್ತಿದ್ದಾರೆ. ಅಕ್ರಮಗಳನ್ನು ಮುಚ್ಚಿ ಹಾಕುವ ಪ್ರಯತ್ನ ಮಾಡಲಾಗುತ್ತಿದೆ. ಯಾವುದೇ ಪ್ರಕ್ರಿಯೆಗಳನ್ನು ಚುನಾವಣಾ ಆಯೋಗ ಪೂರ್ಣಗೊಳಿಸಿಲ್ಲ. ಆಯೋಗವು ಸಂವಿಧಾನಿಕವಾಗಿ ನಡೆದುಕೊಳ್ಳುತ್ತಿಲ್ಲ’ ಎಂದರು.</p>.<p>‘ಮತದಾರನನ್ನು ಹೇಗೆ ಪಟ್ಟಿಗೆ ಸೇರಿಸಬೇಕು, ಪಟ್ಟಿಯಿಂದ ಕೈ ಬಿಡಬೇಕು ಎನ್ನುವ ನಿಯಮಗಳನ್ನೇ ಪಾಲನೆ ಮಾಡಿಲ್ಲ. ದಾರಿ ತಪ್ಪಿಸಲು ಆಯೋಗವು ಕೆಲಸ ಮಾಡುತ್ತಿದೆ. ಇದರಿಂದ ಆಯೋಗದ ಮೇಲೆ ಸಂಶಯ ಉಂಟಾಗುತ್ತಿದೆ’ ಎಂದೂ ಹೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು</strong>: ‘ಬೆಂಗಳೂರು ಕೇಂದ್ರ ಲೋಕಸಭಾ ಕ್ಷೇತ್ರದ ಮಹದೇವಪುರದಲ್ಲಿ ಮತ ಕಳವು ನಡೆದಿರುವುದನ್ನು ನಮ್ಮ ನಾಯಕ ರಾಹುಲ್ ಗಾಂಧಿ ಅವರು ಪುರಾವೆಗಳ ಸಮೇತ ಸಾಬೀತುಪಡಿಸಿದ್ದಾರೆ. ಪಕ್ಷದ ನಾಯಕರು ಮಾಡಿರುವ ಆರೋಪಗಳಿಗೆ ಚುನಾವಣಾ ಆಯೋಗ ಉತ್ತರ ನೀಡಬೇಕು’ ಎಂದು ಗ್ರಾಮೀಣಾಭಿವೃದ್ಧಿ ಸಚಿವ ಪ್ರಿಯಾಂಕ್ ಖರ್ಗೆ ಆಗ್ರಹಿಸಿದರು.</p>.<p>ಮಹದೇವಪುರದಲ್ಲಿ ಮತ ಕಳವು ನಡೆದಿರುವ ಬಗ್ಗೆ ಸುದ್ದಿಗೋಷ್ಠಿಯಲ್ಲಿ ಪ್ರಾತ್ಯಕ್ಷಿಕೆ ಸಹಿತ ವಿವರಿಸಿದ ಪ್ರಿಯಾಂಕ್, ‘ಈ ಪ್ರಕರಣದಲ್ಲಿ ಕಾನೂನು ಹೋರಾಟಕ್ಕೆ ತೀರ್ಮಾನಿಸಿದ್ದೇವೆ’ ಎಂದರು. </p>.<p>‘ಚುನಾವಣಾ ಆಯೋಗದ ನಿಯಮ ಮೀರಿ ಮತದಾರರ ಸಂಖ್ಯೆ ಹೆಚ್ಚಳವಾಗಿದೆ. ಶೇಕಡಾ 4ರಷ್ಟು ಮತದಾರರ ಸಂಖ್ಯೆ ಹೆಚ್ಚಾಗಿದೆ. ಹಾಗಾದರೆ, ಚುನಾವಣಾ ಆಯೋಗ ನಿಯಮ ಮೀರಿ ಕೆಲಸ ಮಾಡುತ್ತಿದೆಯೇ’ ಎಂದೂ ಅವರು ಪ್ರಶ್ನಿಸಿದರು.</p>.<p>ಮುಖ್ಯಮಂತ್ರಿಯ ಕಾನೂನು ಸಲಹೆಗಾರ ಎ.ಎಸ್. ಪೊನ್ನಣ್ಣ ಮಾತನಾಡಿ, ‘ಚುನಾವಣಾ ಆಯೋಗದವರು ಈ ಅಕ್ರಮವನ್ನು ತನಿಖೆ ಮಾಡಲು ಏಕೆ ಹಿಂದೇಟು ಹಾಕುತ್ತಿದ್ದಾರೆ. ಅಕ್ರಮಗಳನ್ನು ಮುಚ್ಚಿ ಹಾಕುವ ಪ್ರಯತ್ನ ಮಾಡಲಾಗುತ್ತಿದೆ. ಯಾವುದೇ ಪ್ರಕ್ರಿಯೆಗಳನ್ನು ಚುನಾವಣಾ ಆಯೋಗ ಪೂರ್ಣಗೊಳಿಸಿಲ್ಲ. ಆಯೋಗವು ಸಂವಿಧಾನಿಕವಾಗಿ ನಡೆದುಕೊಳ್ಳುತ್ತಿಲ್ಲ’ ಎಂದರು.</p>.<p>‘ಮತದಾರನನ್ನು ಹೇಗೆ ಪಟ್ಟಿಗೆ ಸೇರಿಸಬೇಕು, ಪಟ್ಟಿಯಿಂದ ಕೈ ಬಿಡಬೇಕು ಎನ್ನುವ ನಿಯಮಗಳನ್ನೇ ಪಾಲನೆ ಮಾಡಿಲ್ಲ. ದಾರಿ ತಪ್ಪಿಸಲು ಆಯೋಗವು ಕೆಲಸ ಮಾಡುತ್ತಿದೆ. ಇದರಿಂದ ಆಯೋಗದ ಮೇಲೆ ಸಂಶಯ ಉಂಟಾಗುತ್ತಿದೆ’ ಎಂದೂ ಹೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>