<p><strong>ಬೆಂಗಳೂರು:</strong> ರೈತ ಶಕ್ತಿ ಯೋಜನೆಯಡಿ ಕೃಷಿ ಬಳಕೆಗಾಗಿ ನೀಡುವ ಡೀಸಲ್ ಸಹಾಯ ಧನವನ್ನು ಪ್ರತಿ ಎಕರೆಗೆ ₹ 250ರಿಂದ ₹ 500ಕ್ಕೆ ಹೆಚ್ಚಳ ಮಾಡುವ ಕುರಿತು ಪರಿಶೀಲಿಸಲಾಗುವುದು ಎಂದು ಕೃಷಿ ಸಚಿವ ಎನ್. ಚಲುವರಾಯ ಸ್ವಾಮಿ ಹೇಳಿದರು.</p>.<p>ವಿಧಾನ ಪರಿಷತ್ನಲ್ಲಿ ಶುಕ್ರವಾರ ಕಾಂಗ್ರೆಸ್ನ ಎಂ.ನಾಗರಾಜು ಅವರ ಪ್ರಶ್ನೆಗೆ ಉತ್ತರಿಸಿದ ಅವರು, ಕೃಷಿಯಲ್ಲಿ ಯಂತ್ರೋಪಕರಣಗಳ ಬಳಕೆ ಉತ್ತೇಜಿಸಲು ಹಾಗೂ ಇಂಧನ ವೆಚ್ಚದ ಭಾರ ತಗ್ಗಿಸಲು ಪ್ರತಿ ಎಕರೆಗೆ ₹ 250ರಂತೆ, ಗರಿಷ್ಠ ಐದು ಎಕರೆಗೆ ಸಬ್ಸಿಡಿ ಸಹಾಯಧನ ನೀಡಲಾಗುತ್ತಿದೆ. 2022–23ನೇ ಸಾಲಿನಲ್ಲಿ 55 ಲಕ್ಷ ರೈತರಿಗೆ ₹ 412 ಕೋಟಿ ನೀಡಲಾಗಿದೆ ಎಂದು ಮಾಹಿತಿ ನೀಡಿದರು.</p>.<p>ಕಳಪೆ ಬಿತ್ತನೆ ಬೀಜ ಮತ್ತು ರಸಗೊಬ್ಬರ ಮಾರಾಟ ಮಾಡಿದ ಆರೋಪದ ಮೇಲೆ 61 ಪ್ರಕರಣ ದಾಖಲಿಸಲಾಗಿದೆ. ₹ 19.49 ಕೋಟಿ ಮೌಲ್ಯದ ದಾಸ್ತಾನು ವಶಕ್ಕೆ ಪಡೆಯಲಾಗಿದೆ. ಕಳಪೆ ಬಿತ್ತನೆ ಬೀಜ ಮಾರಾಟ ಮಾಡುವವರ ವಿರುದ್ಧ ಇನ್ನಷ್ಟು ಕ್ರಮ ಕೈಗೊಳ್ಳಲಾಗುವುದು ಎಂದು ಕಾಂಗ್ರೆಸ್ನ ಅಬ್ದುಲ್ ಜಬ್ಬಾರ್ ಪ್ರಶ್ನೆಗೆ ಉತ್ತರಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು:</strong> ರೈತ ಶಕ್ತಿ ಯೋಜನೆಯಡಿ ಕೃಷಿ ಬಳಕೆಗಾಗಿ ನೀಡುವ ಡೀಸಲ್ ಸಹಾಯ ಧನವನ್ನು ಪ್ರತಿ ಎಕರೆಗೆ ₹ 250ರಿಂದ ₹ 500ಕ್ಕೆ ಹೆಚ್ಚಳ ಮಾಡುವ ಕುರಿತು ಪರಿಶೀಲಿಸಲಾಗುವುದು ಎಂದು ಕೃಷಿ ಸಚಿವ ಎನ್. ಚಲುವರಾಯ ಸ್ವಾಮಿ ಹೇಳಿದರು.</p>.<p>ವಿಧಾನ ಪರಿಷತ್ನಲ್ಲಿ ಶುಕ್ರವಾರ ಕಾಂಗ್ರೆಸ್ನ ಎಂ.ನಾಗರಾಜು ಅವರ ಪ್ರಶ್ನೆಗೆ ಉತ್ತರಿಸಿದ ಅವರು, ಕೃಷಿಯಲ್ಲಿ ಯಂತ್ರೋಪಕರಣಗಳ ಬಳಕೆ ಉತ್ತೇಜಿಸಲು ಹಾಗೂ ಇಂಧನ ವೆಚ್ಚದ ಭಾರ ತಗ್ಗಿಸಲು ಪ್ರತಿ ಎಕರೆಗೆ ₹ 250ರಂತೆ, ಗರಿಷ್ಠ ಐದು ಎಕರೆಗೆ ಸಬ್ಸಿಡಿ ಸಹಾಯಧನ ನೀಡಲಾಗುತ್ತಿದೆ. 2022–23ನೇ ಸಾಲಿನಲ್ಲಿ 55 ಲಕ್ಷ ರೈತರಿಗೆ ₹ 412 ಕೋಟಿ ನೀಡಲಾಗಿದೆ ಎಂದು ಮಾಹಿತಿ ನೀಡಿದರು.</p>.<p>ಕಳಪೆ ಬಿತ್ತನೆ ಬೀಜ ಮತ್ತು ರಸಗೊಬ್ಬರ ಮಾರಾಟ ಮಾಡಿದ ಆರೋಪದ ಮೇಲೆ 61 ಪ್ರಕರಣ ದಾಖಲಿಸಲಾಗಿದೆ. ₹ 19.49 ಕೋಟಿ ಮೌಲ್ಯದ ದಾಸ್ತಾನು ವಶಕ್ಕೆ ಪಡೆಯಲಾಗಿದೆ. ಕಳಪೆ ಬಿತ್ತನೆ ಬೀಜ ಮಾರಾಟ ಮಾಡುವವರ ವಿರುದ್ಧ ಇನ್ನಷ್ಟು ಕ್ರಮ ಕೈಗೊಳ್ಳಲಾಗುವುದು ಎಂದು ಕಾಂಗ್ರೆಸ್ನ ಅಬ್ದುಲ್ ಜಬ್ಬಾರ್ ಪ್ರಶ್ನೆಗೆ ಉತ್ತರಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>