ಬಿಜೆಪಿಯ ದೊಡ್ಡನಗೌಡ ಮಾತನಾಡಿ, ‘ಕೊಪ್ಪಳ, ರಾಯಚೂರು, ಯಾದಗಿರಿ ಜಿಲ್ಲೆಗಳ ಪಟ್ಟಾ ಭೂಮಿಯಲ್ಲಿ ಗ್ರಾನೈಟ್ ನಿಕ್ಷೇಪ ಇದೆ. ಇವುಗಳ ಗಣಿಗಾರಿಕೆಗೆ ಗುತ್ತಿಗೆ ನೀಡಬೇಕು. ಲೈಸೆನ್ಸ್ಗೆ ಅರ್ಜಿ ಹಾಕಿದರೂ ಗಣಿ ಗುತ್ತಿಗೆ ನೀಡುತ್ತಿಲ್ಲ. ನೆರೆಯ ಆಂಧ್ರದಲ್ಲಿ ಪಟ್ಟಾ ಭೂಮಿಯಲ್ಲಿ ಗಣಿಗಾರಿಕೆಗೆ ಅರ್ಜಿ ಸಲ್ಲಿಸಿದ 90 ದಿನಗಳಲ್ಲಿ ಗುತ್ತಿಗೆ ನೀಡಲಾಗುತ್ತಿದೆ. ನಮ್ಮ ರಾಜ್ಯದಲ್ಲೂ ಅದೇ ಮಾದರಿಯಲ್ಲಿ ಅನುಮತಿ ನೀಡಬೇಕು’ ಎಂದು ಆಗ್ರಹಿಸಿದರು.