ಕೆಲವು ಶಾಸಕರು ಕ್ಷೇತ್ರದ ಅಭಿವೃದ್ಧಿಗೆ ಅನುದಾನ ನೀಡಬೇಕು. ಗುಂಡಿ ಮುಚ್ಚಲು ಕೂಡಾ ಹಣದ ಕೊರತೆಯಿದೆ ಎಂದಾಗ, ‘ಸರ್ಕಾರ ಬಂದು ಆರು ತಿಂಗಳು ಆಗಿದೆ. ‘ಗ್ಯಾರಂಟಿ’ ಯೋಜನೆಗಳ ಅನುಷ್ಶಾನ ಯಶಸ್ವಿಯಾಗಿದೆ. ಆದರೆ, ವಿರೋಧ ಪಕ್ಷಗಳ ಶಾಸಕರು ಈ ಯೋಜನೆಗಳ ಬಗ್ಗೆ ಆರೋಪ ಮಾಡಬಹುದು. ಈ ಬಗ್ಗೆ ಎಚ್ಚರ ಇರಲಿ’ ಎಂದು ತಿಳಿಸಿದ ಸಿದ್ದರಾಮಯ್ಯ,‘₹ 25 ಕೋಟಿಯಂತೆ ವಿಶೇಷ ಅನುದಾನ ನೀಡುವ ಬಗ್ಗೆ ಭರವಸೆ ನೀಡಿದರು ಎಂದೂ ಮೂಲಗಳು ತಿಳಿಸಿವೆ.