<p><strong>ಬೆಳಗಾವಿ</strong>: ಬಿಜೆಪಿ– ಜೆಡಿಎಸ್ ಜಂಟಿಯಾಗಿ ಹೋರಾಟ ನಡೆಸಲು ಮುಂದಾಗಿದ್ದು, ಅದಕ್ಕೆ ತಕ್ಕ ತಿರುಗೇಟು ನೀಡಬೇಕು ಎಂದು ಸ್ವಪಕ್ಷೀಯ ಶಾಸಕರಿಗೆ ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕ ಸಿದ್ದರಾಮಯ್ಯ ತಿಳಿಸಿದರು.</p>.<p>ಬುಧವಾರ ರಾತ್ರಿ ಇಲ್ಲಿ ನಡೆದ ಕಾಂಗ್ರೆಸ್ ಶಾಸಕಾಂಗದ ಪಕ್ಷದ (ಸಿಎಲ್ಪಿ) ಸಭೆಯಲ್ಲಿ ಮಾತನಾಡಿದ ಅವರು, ತೆಲಂಗಾಣ ಚುನಾವಣಾ ಪ್ರಚಾರ ವೇಳೆ ಸ್ಪೀಕರ್ ವಿಷಯದಲ್ಲಿ ಸಚಿವ ಜಮೀರ್ ಅಹಮದ್ ಖಾನ್ ಮಾತನಾಡಿರುವುದನ್ನು ವಿರೋಧ ಪಕ್ಷಗಳು ದೊಡ್ಡದಾಗಿ ಬಿಂಬಿಸಬಹುದು. ಈ ವಿಷಯ ಪ್ರಸ್ತಾಪವಾದಾಗ ಎಲ್ಲರೂ ಸಮರ್ಥನೆಗೆ ನಿಲ್ಲುವಂತೆ ಸಲಹೆ ನೀಡಿದರು ಎಂದು ಕಾಂಗ್ರೆಸ್ ಮೂಲಗಳು ತಿಳಿಸಿವೆ. </p>.<p>ವಿಧಾನ ಮಂಡಲದ ಅಧಿವೇಶನದಲ್ಲಿ ಮಾತನಾಡುವ ವೇಳೆಯಲ್ಲಿ ಬಿಜೆಪಿ, ಜೆಡಿಎಸ್ ಶಾಸಕರು ಕೆರಳಿಸಬಹುದು. ಆದರೆ, ನಾವು ಅವರ ಮಾತುಗಳಿಗೆ ಕೆರಳಿ ಪ್ರತಿಕ್ರಿಯಿಸುವ ಅಗತ್ಯ ಇಲ್ಲ ಎಂದು ಶಾಸಕರಿಗೆ ತಿಳಿ ಹೇಳಿದರು ಎಂದೂ ಮೂಲಗಳು ಹೇಳಿವೆ. </p>.<p>ರಾಜ್ಯ ಎದುರಿಸುತ್ತಿರುವ ಬರ ವಿಷಯದಲ್ಲಿಯೂ ಬಿಜೆಪಿ, ಜೆಡಿಎಸ್ ಸದಸ್ಯರು ಸರ್ಕಾರದ ವಿರುದ್ಧ ಮಾತನಾಡಬಹುದು. ಈ ವೇಳೆಯಲ್ಲಿ ಸಮರ್ಪಕವಾಗಿ ಉತ್ತರಿಸಲು ಪೂರ್ವ ತಯಾರಿ ಮಾಡಿಕೊಳ್ಳಬೇಕು ಎಂದು ಸಲಹೆ ನೀಡಿದ್ದಾರೆ. </p>.<p>ಕೆಲವು ಶಾಸಕರು ಕ್ಷೇತ್ರದ ಅಭಿವೃದ್ಧಿಗೆ ಅನುದಾನ ನೀಡಬೇಕು. ಗುಂಡಿ ಮುಚ್ಚಲು ಕೂಡಾ ಹಣದ ಕೊರತೆಯಿದೆ ಎಂದಾಗ, ‘ಸರ್ಕಾರ ಬಂದು ಆರು ತಿಂಗಳು ಆಗಿದೆ. ‘ಗ್ಯಾರಂಟಿ’ ಯೋಜನೆಗಳ ಅನುಷ್ಶಾನ ಯಶಸ್ವಿಯಾಗಿದೆ. ಆದರೆ, ವಿರೋಧ ಪಕ್ಷಗಳ ಶಾಸಕರು ಈ ಯೋಜನೆಗಳ ಬಗ್ಗೆ ಆರೋಪ ಮಾಡಬಹುದು. ಈ ಬಗ್ಗೆ ಎಚ್ಚರ ಇರಲಿ’ ಎಂದು ತಿಳಿಸಿದ ಸಿದ್ದರಾಮಯ್ಯ,‘₹ 25 ಕೋಟಿಯಂತೆ ವಿಶೇಷ ಅನುದಾನ ನೀಡುವ ಬಗ್ಗೆ ಭರವಸೆ ನೀಡಿದರು ಎಂದೂ ಮೂಲಗಳು ತಿಳಿಸಿವೆ.</p>.<p>ನಿಗಮ ಮಂಡಳಿ ನೇಮಕ ಪಟ್ಟಿ ಅಂತಿಮವಾಗಿದೆ. ಪಟ್ಟಿಯನ್ನು ವರಿಷ್ಠರಿಗೆ ಕಳುಹಿಸಲಾಗಿದೆ. ಅಲ್ಲಿಂದ ಒಪ್ಪಿಗೆ ಸಿಕ್ಕಿದ ತಕ್ಷಣ ಪ್ರಕಟಿಸಲಾಗುವುದು ಎಂದೂ ಮುಖ್ಯಮಂತ್ರಿ ತಿಳಿಸಿದ್ದಾರೆ ಎಂದೂ ಗೊತ್ತಾಗಿದೆ.</p>.<p><strong>ಡಿಕೆಶಿ ಗೈರು:</strong> ಶಾಸಕಾಂಗ ಪಕ್ಷದ ಸಭೆಗೆ ಕೆಪಿಸಿಸಿ ಅಧ್ಯಕ್ಷರೂ ಆಗಿರುವ ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಗೈರಾದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಳಗಾವಿ</strong>: ಬಿಜೆಪಿ– ಜೆಡಿಎಸ್ ಜಂಟಿಯಾಗಿ ಹೋರಾಟ ನಡೆಸಲು ಮುಂದಾಗಿದ್ದು, ಅದಕ್ಕೆ ತಕ್ಕ ತಿರುಗೇಟು ನೀಡಬೇಕು ಎಂದು ಸ್ವಪಕ್ಷೀಯ ಶಾಸಕರಿಗೆ ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕ ಸಿದ್ದರಾಮಯ್ಯ ತಿಳಿಸಿದರು.</p>.<p>ಬುಧವಾರ ರಾತ್ರಿ ಇಲ್ಲಿ ನಡೆದ ಕಾಂಗ್ರೆಸ್ ಶಾಸಕಾಂಗದ ಪಕ್ಷದ (ಸಿಎಲ್ಪಿ) ಸಭೆಯಲ್ಲಿ ಮಾತನಾಡಿದ ಅವರು, ತೆಲಂಗಾಣ ಚುನಾವಣಾ ಪ್ರಚಾರ ವೇಳೆ ಸ್ಪೀಕರ್ ವಿಷಯದಲ್ಲಿ ಸಚಿವ ಜಮೀರ್ ಅಹಮದ್ ಖಾನ್ ಮಾತನಾಡಿರುವುದನ್ನು ವಿರೋಧ ಪಕ್ಷಗಳು ದೊಡ್ಡದಾಗಿ ಬಿಂಬಿಸಬಹುದು. ಈ ವಿಷಯ ಪ್ರಸ್ತಾಪವಾದಾಗ ಎಲ್ಲರೂ ಸಮರ್ಥನೆಗೆ ನಿಲ್ಲುವಂತೆ ಸಲಹೆ ನೀಡಿದರು ಎಂದು ಕಾಂಗ್ರೆಸ್ ಮೂಲಗಳು ತಿಳಿಸಿವೆ. </p>.<p>ವಿಧಾನ ಮಂಡಲದ ಅಧಿವೇಶನದಲ್ಲಿ ಮಾತನಾಡುವ ವೇಳೆಯಲ್ಲಿ ಬಿಜೆಪಿ, ಜೆಡಿಎಸ್ ಶಾಸಕರು ಕೆರಳಿಸಬಹುದು. ಆದರೆ, ನಾವು ಅವರ ಮಾತುಗಳಿಗೆ ಕೆರಳಿ ಪ್ರತಿಕ್ರಿಯಿಸುವ ಅಗತ್ಯ ಇಲ್ಲ ಎಂದು ಶಾಸಕರಿಗೆ ತಿಳಿ ಹೇಳಿದರು ಎಂದೂ ಮೂಲಗಳು ಹೇಳಿವೆ. </p>.<p>ರಾಜ್ಯ ಎದುರಿಸುತ್ತಿರುವ ಬರ ವಿಷಯದಲ್ಲಿಯೂ ಬಿಜೆಪಿ, ಜೆಡಿಎಸ್ ಸದಸ್ಯರು ಸರ್ಕಾರದ ವಿರುದ್ಧ ಮಾತನಾಡಬಹುದು. ಈ ವೇಳೆಯಲ್ಲಿ ಸಮರ್ಪಕವಾಗಿ ಉತ್ತರಿಸಲು ಪೂರ್ವ ತಯಾರಿ ಮಾಡಿಕೊಳ್ಳಬೇಕು ಎಂದು ಸಲಹೆ ನೀಡಿದ್ದಾರೆ. </p>.<p>ಕೆಲವು ಶಾಸಕರು ಕ್ಷೇತ್ರದ ಅಭಿವೃದ್ಧಿಗೆ ಅನುದಾನ ನೀಡಬೇಕು. ಗುಂಡಿ ಮುಚ್ಚಲು ಕೂಡಾ ಹಣದ ಕೊರತೆಯಿದೆ ಎಂದಾಗ, ‘ಸರ್ಕಾರ ಬಂದು ಆರು ತಿಂಗಳು ಆಗಿದೆ. ‘ಗ್ಯಾರಂಟಿ’ ಯೋಜನೆಗಳ ಅನುಷ್ಶಾನ ಯಶಸ್ವಿಯಾಗಿದೆ. ಆದರೆ, ವಿರೋಧ ಪಕ್ಷಗಳ ಶಾಸಕರು ಈ ಯೋಜನೆಗಳ ಬಗ್ಗೆ ಆರೋಪ ಮಾಡಬಹುದು. ಈ ಬಗ್ಗೆ ಎಚ್ಚರ ಇರಲಿ’ ಎಂದು ತಿಳಿಸಿದ ಸಿದ್ದರಾಮಯ್ಯ,‘₹ 25 ಕೋಟಿಯಂತೆ ವಿಶೇಷ ಅನುದಾನ ನೀಡುವ ಬಗ್ಗೆ ಭರವಸೆ ನೀಡಿದರು ಎಂದೂ ಮೂಲಗಳು ತಿಳಿಸಿವೆ.</p>.<p>ನಿಗಮ ಮಂಡಳಿ ನೇಮಕ ಪಟ್ಟಿ ಅಂತಿಮವಾಗಿದೆ. ಪಟ್ಟಿಯನ್ನು ವರಿಷ್ಠರಿಗೆ ಕಳುಹಿಸಲಾಗಿದೆ. ಅಲ್ಲಿಂದ ಒಪ್ಪಿಗೆ ಸಿಕ್ಕಿದ ತಕ್ಷಣ ಪ್ರಕಟಿಸಲಾಗುವುದು ಎಂದೂ ಮುಖ್ಯಮಂತ್ರಿ ತಿಳಿಸಿದ್ದಾರೆ ಎಂದೂ ಗೊತ್ತಾಗಿದೆ.</p>.<p><strong>ಡಿಕೆಶಿ ಗೈರು:</strong> ಶಾಸಕಾಂಗ ಪಕ್ಷದ ಸಭೆಗೆ ಕೆಪಿಸಿಸಿ ಅಧ್ಯಕ್ಷರೂ ಆಗಿರುವ ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಗೈರಾದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>