<p><strong>ಬೆಂಗಳೂರು:</strong> ರಾಜ್ಯದಲ್ಲಿರುವ ಎಲ್ಲ ಹಂತಗಳ ನ್ಯಾಯಾಲಯಗಳಲ್ಲಿ ಮೂಲಸೌಕರ್ಯದ ಸ್ಥಿತಿಗತಿ ಅರಿತು ವರದಿ ಪಡೆಯಲು ಸದನ ಸಮಿತಿ ರಚಿಸಲಾಗುವುದು ಎಂದು ಕಾನೂನು ಮತ್ತು ಸಂಸದೀಯ ಸಚಿವ ಜೆ.ಸಿ.ಮಾಧುಸ್ವಾಮಿ ತಿಳಿಸಿದರು.</p>.<p>ಕಾಂಗ್ರೆಸ್ನ ಹಿರಿಯ ಸದಸ್ಯ ಎಚ್.ಕೆ.ಪಾಟೀಲ ವಿಧಾನಸಭೆಯಲ್ಲಿ ರಾಜ್ಯಪಾಲರ ಭಾಷಣದ ಮೇಲಿನ ವಂದನಾ ನಿರ್ಣಯದ ಮೇಲೆ ಮಾತನಾಡಿ, ನ್ಯಾಯಾಲಯಗಳ ಮೂಲ ಸೌಕರ್ಯದ ಸ್ಥಿತಿಗತಿ ಅರಿತು, ಅವುಗಳನ್ನು ಕಲ್ಪಿಸಲು ಸದನ ಸಮಿತಿ ರಚಿಸಬೇಕು ಎಂಬ ಒತ್ತಾಯಕ್ಕೆ ಪ್ರತಿಕ್ರಿಯಿಸಿದ ಸಚಿವರು ಭರವಸೆ ನೀಡಿದರು.</p>.<p>ಇದಕ್ಕೆ ಧ್ವನಿಗೂಡಿಸಿದ ಸಭಾಧ್ಯಕ್ಷ ವಿಶ್ವೇಶ್ವರ ಹೆಗಡೆ ಕಾಗೇರಿ, ‘ಸದನ ಸಮಿತಿಯ ಅಗತ್ಯವಿದೆ, ಈ ಸಂಬಂಧ ಸಚಿವರು ಹೇಳಿಕೆ ನೀಡಬೇಕು’ ಎಂದರು. ಮಾಧುಸ್ವಾಮಿ ಸದನ ಸಮಿತಿ ರಚಿಸಲು ಒಪ್ಪಿಗೆ ಸೂಚಿಸಿದರು.</p>.<p><strong>ಗಡಿ ವಿಚಾರದಲ್ಲಿ ಕಠಿಣ ನಿರ್ಧಾರ ಬೇಕು:</strong> ‘ಬೆಳಗಾವಿ ವಿಚಾರದಲ್ಲಿ ಮಹಾರಾಷ್ಟ್ರ ಪದೇ ಪದೇ ರಾಜ್ಯವನ್ನು ಕೆಣಕುತ್ತಿದೆ. ಗ್ರಾಮವೊಂದರಲ್ಲಿ ಶಿವಾಜಿ ಪ್ರತಿಮೆ ಸ್ಥಾಪನೆಗೆ ಸರ್ಕಾರ ಹಣ ನೀಡಿದೆ. ಆದರೆ, ಗ್ರಾಮ ಪಂಚಾಯಿತಿ ಸಮಾರಂಭದಲ್ಲಿ ಕನ್ನಡ ಬಾವುಟ ಹಾಕಿಲ್ಲ, ಕನ್ನಡ ಭಾಷೆಯಲ್ಲಿ ಮಾತನಾಡಿಲ್ಲ’ ಎಂದು ಎಚ್.ಕೆ. ಪಾಟೀಲ ಹೇಳಿದರು.</p>.<p>‘ವಿವಿಧ ಇಲಾಖೆಗಳಲ್ಲಿ 1.7 ಲಕ್ಷ ಕಡತಗಳು ವಿಲೇವಾರಿ ಆಗದೇ ಬಾಕಿ ಉಳಿದಿವೆ. ಇವುಗಳನ್ನು ವಿಲೇವಾರಿ ಮಾಡಲು 5 ವರ್ಷಗಳು ಬೇಕಾಗುತ್ತವೆ. ಇವುಗಳ ವಿಲೇವಾರಿಗೆ ಕಡತ ಯಜ್ಞ ಮಾಡಬೇಕು’ ಎಂದು ಸಲಹೆ ನೀಡಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು:</strong> ರಾಜ್ಯದಲ್ಲಿರುವ ಎಲ್ಲ ಹಂತಗಳ ನ್ಯಾಯಾಲಯಗಳಲ್ಲಿ ಮೂಲಸೌಕರ್ಯದ ಸ್ಥಿತಿಗತಿ ಅರಿತು ವರದಿ ಪಡೆಯಲು ಸದನ ಸಮಿತಿ ರಚಿಸಲಾಗುವುದು ಎಂದು ಕಾನೂನು ಮತ್ತು ಸಂಸದೀಯ ಸಚಿವ ಜೆ.ಸಿ.ಮಾಧುಸ್ವಾಮಿ ತಿಳಿಸಿದರು.</p>.<p>ಕಾಂಗ್ರೆಸ್ನ ಹಿರಿಯ ಸದಸ್ಯ ಎಚ್.ಕೆ.ಪಾಟೀಲ ವಿಧಾನಸಭೆಯಲ್ಲಿ ರಾಜ್ಯಪಾಲರ ಭಾಷಣದ ಮೇಲಿನ ವಂದನಾ ನಿರ್ಣಯದ ಮೇಲೆ ಮಾತನಾಡಿ, ನ್ಯಾಯಾಲಯಗಳ ಮೂಲ ಸೌಕರ್ಯದ ಸ್ಥಿತಿಗತಿ ಅರಿತು, ಅವುಗಳನ್ನು ಕಲ್ಪಿಸಲು ಸದನ ಸಮಿತಿ ರಚಿಸಬೇಕು ಎಂಬ ಒತ್ತಾಯಕ್ಕೆ ಪ್ರತಿಕ್ರಿಯಿಸಿದ ಸಚಿವರು ಭರವಸೆ ನೀಡಿದರು.</p>.<p>ಇದಕ್ಕೆ ಧ್ವನಿಗೂಡಿಸಿದ ಸಭಾಧ್ಯಕ್ಷ ವಿಶ್ವೇಶ್ವರ ಹೆಗಡೆ ಕಾಗೇರಿ, ‘ಸದನ ಸಮಿತಿಯ ಅಗತ್ಯವಿದೆ, ಈ ಸಂಬಂಧ ಸಚಿವರು ಹೇಳಿಕೆ ನೀಡಬೇಕು’ ಎಂದರು. ಮಾಧುಸ್ವಾಮಿ ಸದನ ಸಮಿತಿ ರಚಿಸಲು ಒಪ್ಪಿಗೆ ಸೂಚಿಸಿದರು.</p>.<p><strong>ಗಡಿ ವಿಚಾರದಲ್ಲಿ ಕಠಿಣ ನಿರ್ಧಾರ ಬೇಕು:</strong> ‘ಬೆಳಗಾವಿ ವಿಚಾರದಲ್ಲಿ ಮಹಾರಾಷ್ಟ್ರ ಪದೇ ಪದೇ ರಾಜ್ಯವನ್ನು ಕೆಣಕುತ್ತಿದೆ. ಗ್ರಾಮವೊಂದರಲ್ಲಿ ಶಿವಾಜಿ ಪ್ರತಿಮೆ ಸ್ಥಾಪನೆಗೆ ಸರ್ಕಾರ ಹಣ ನೀಡಿದೆ. ಆದರೆ, ಗ್ರಾಮ ಪಂಚಾಯಿತಿ ಸಮಾರಂಭದಲ್ಲಿ ಕನ್ನಡ ಬಾವುಟ ಹಾಕಿಲ್ಲ, ಕನ್ನಡ ಭಾಷೆಯಲ್ಲಿ ಮಾತನಾಡಿಲ್ಲ’ ಎಂದು ಎಚ್.ಕೆ. ಪಾಟೀಲ ಹೇಳಿದರು.</p>.<p>‘ವಿವಿಧ ಇಲಾಖೆಗಳಲ್ಲಿ 1.7 ಲಕ್ಷ ಕಡತಗಳು ವಿಲೇವಾರಿ ಆಗದೇ ಬಾಕಿ ಉಳಿದಿವೆ. ಇವುಗಳನ್ನು ವಿಲೇವಾರಿ ಮಾಡಲು 5 ವರ್ಷಗಳು ಬೇಕಾಗುತ್ತವೆ. ಇವುಗಳ ವಿಲೇವಾರಿಗೆ ಕಡತ ಯಜ್ಞ ಮಾಡಬೇಕು’ ಎಂದು ಸಲಹೆ ನೀಡಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>