<p><strong>ಬೆಳಗಾವಿ:</strong> ‘2011ನೇ ಸಾಲಿನ 362 ಗೆಜೆಟೆಡ್ ಪ್ರೊಬೇಷನರಿ ಹುದ್ದೆಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಆಗಿರುವ ಅನ್ಯಾಯವನ್ನು ಸರಿಪಡಿಸಲು ರಾಜ್ಯ ಸರ್ಕಾರ ಬದ್ಧವಾಗಿದೆ. ಈ ವಿಷಯದಲ್ಲಿ ಮುಖ್ಯಮಂತ್ರಿ ಕೂಡಾ ಸಕಾರಾತ್ಮಕ ನಿಲುವು ಹೊಂದಿದ್ದಾರೆ’ ಎಂದು ಕಾನೂನು ಸಚಿವ ಜೆ.ಸಿ. ಮಾಧುಸ್ವಾಮಿ ಹೇಳಿದರು.</p>.<p>ವಿಧಾನ ಪರಿಷತ್ನಲ್ಲಿ ಕಾಂಗ್ರೆಸ್ಸಿನ ಪಿ.ಆರ್. ರಮೇಶ್ ಅವರು ನಿಯಮ 330ರ ಅಡಿ ಪ್ರಸ್ತಾಪಿಸಿದ ವಿಷಯಕ್ಕೆ ಉತ್ತರಿಸಿದ ಸಚಿವರು, ‘ಈ ಸಾಲಿನಲ್ಲಿ ಆಯ್ಕೆಯಾಗಿ ಹುದ್ದೆ ವಂಚಿತರಾದ ಅಭ್ಯರ್ಥಿಗಳ ಬಗ್ಗೆ ಸರ್ಕಾರಕ್ಕೆ ಕಾಳಜಿ ಇದೆ. ಈಗಾಗಲೇ ಈ ಬಗ್ಗೆ ಚರ್ಚೆ ನಡೆಸಿದ್ದೇವೆ. ಆದರೆ, ಕಾನೂನಾತ್ಮಕವಾಗಿ ಸಂಕೀರ್ಣವಾದ ವಿಷಯ. ಹೀಗಾಗಿ, ಅಂತಿಮ ತೀರ್ಮಾನಕ್ಕೆ ಬರಲು ಕಾಲಾವಕಾಶ ಅಗತ್ಯವಿದೆ’ ಎಂದರು.</p>.<p>‘ನೇಮಕಾತಿಯಲ್ಲಿ ಅಕ್ರಮ ಎಸಗಿದ ಆರೋಪ ಎದುರಿಸುತ್ತಿರುವ ಕೆಪಿಎಸ್ಸಿ ಅಧ್ಯಕ್ಷರು ಮತ್ತು ಸದಸ್ಯರ ವಿರುದ್ಧ ಭ್ರಷ್ಟಾಚಾರ ತಡೆ ಕಾಯ್ದೆಯಡಿ ವಿಚಾರಣೆ ಕೈ ಬಿಡಲು ಸರ್ಕಾರ ಈಗಾಗಲೇ ತೀರ್ಮಾನ ತೆಗೆದುಕೊಂಡಿದೆ. ಈ ಕುರಿತ ಮಾಹಿತಿಯನ್ನು ರಾಷ್ಟ್ರಪತಿಗೆ ಕಳುಹಿಸಬೇಕಿದ್ದು, ಆ ಪ್ರಕ್ರಿಯೆ ಇನ್ನೂ ಪೂರ್ಣ ಆಗಿಲ್ಲ. ಅಲ್ಲದೆ, ಅಭ್ಯರ್ಥಿಗಳಿಗೆ ಹುದ್ದೆ ನೀಡುವ ವಿಷಯದಲ್ಲಿ ಈ ಅಧಿವೇಶನದಲ್ಲಿಯೇ ಏನಾದರೂ ಮಾಡಬೇಕು ಎಂದು ತೀರ್ಮಾನಿಸಿದ್ದೆವು. ಮುಖ್ಯಮಂತ್ರಿ ಕೂಡಾ ಈ ಬಗ್ಗೆ ಒಲವು ವ್ಯಕ್ತಪಡಿಸಿದ್ದರು’ ಎಂದೂ ಅವರು ಹೇಳಿದರು.</p>.<p><strong>ಇದನ್ನೂ ಓದಿ...<a href="https://www.prajavani.net/karnataka-news/siddaganga-shree-letter-to-chief-minister-basavaraj-bommai-on-kpsc-recruitment-893924.html" target="_blank"> ಕೆಪಿಎಸ್ಸಿ: ಬೊಮ್ಮಾಯಿಗೆ ಸಿದ್ಧಗಂಗಾಶ್ರೀ ಪತ್ರ</a></strong></p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಳಗಾವಿ:</strong> ‘2011ನೇ ಸಾಲಿನ 362 ಗೆಜೆಟೆಡ್ ಪ್ರೊಬೇಷನರಿ ಹುದ್ದೆಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಆಗಿರುವ ಅನ್ಯಾಯವನ್ನು ಸರಿಪಡಿಸಲು ರಾಜ್ಯ ಸರ್ಕಾರ ಬದ್ಧವಾಗಿದೆ. ಈ ವಿಷಯದಲ್ಲಿ ಮುಖ್ಯಮಂತ್ರಿ ಕೂಡಾ ಸಕಾರಾತ್ಮಕ ನಿಲುವು ಹೊಂದಿದ್ದಾರೆ’ ಎಂದು ಕಾನೂನು ಸಚಿವ ಜೆ.ಸಿ. ಮಾಧುಸ್ವಾಮಿ ಹೇಳಿದರು.</p>.<p>ವಿಧಾನ ಪರಿಷತ್ನಲ್ಲಿ ಕಾಂಗ್ರೆಸ್ಸಿನ ಪಿ.ಆರ್. ರಮೇಶ್ ಅವರು ನಿಯಮ 330ರ ಅಡಿ ಪ್ರಸ್ತಾಪಿಸಿದ ವಿಷಯಕ್ಕೆ ಉತ್ತರಿಸಿದ ಸಚಿವರು, ‘ಈ ಸಾಲಿನಲ್ಲಿ ಆಯ್ಕೆಯಾಗಿ ಹುದ್ದೆ ವಂಚಿತರಾದ ಅಭ್ಯರ್ಥಿಗಳ ಬಗ್ಗೆ ಸರ್ಕಾರಕ್ಕೆ ಕಾಳಜಿ ಇದೆ. ಈಗಾಗಲೇ ಈ ಬಗ್ಗೆ ಚರ್ಚೆ ನಡೆಸಿದ್ದೇವೆ. ಆದರೆ, ಕಾನೂನಾತ್ಮಕವಾಗಿ ಸಂಕೀರ್ಣವಾದ ವಿಷಯ. ಹೀಗಾಗಿ, ಅಂತಿಮ ತೀರ್ಮಾನಕ್ಕೆ ಬರಲು ಕಾಲಾವಕಾಶ ಅಗತ್ಯವಿದೆ’ ಎಂದರು.</p>.<p>‘ನೇಮಕಾತಿಯಲ್ಲಿ ಅಕ್ರಮ ಎಸಗಿದ ಆರೋಪ ಎದುರಿಸುತ್ತಿರುವ ಕೆಪಿಎಸ್ಸಿ ಅಧ್ಯಕ್ಷರು ಮತ್ತು ಸದಸ್ಯರ ವಿರುದ್ಧ ಭ್ರಷ್ಟಾಚಾರ ತಡೆ ಕಾಯ್ದೆಯಡಿ ವಿಚಾರಣೆ ಕೈ ಬಿಡಲು ಸರ್ಕಾರ ಈಗಾಗಲೇ ತೀರ್ಮಾನ ತೆಗೆದುಕೊಂಡಿದೆ. ಈ ಕುರಿತ ಮಾಹಿತಿಯನ್ನು ರಾಷ್ಟ್ರಪತಿಗೆ ಕಳುಹಿಸಬೇಕಿದ್ದು, ಆ ಪ್ರಕ್ರಿಯೆ ಇನ್ನೂ ಪೂರ್ಣ ಆಗಿಲ್ಲ. ಅಲ್ಲದೆ, ಅಭ್ಯರ್ಥಿಗಳಿಗೆ ಹುದ್ದೆ ನೀಡುವ ವಿಷಯದಲ್ಲಿ ಈ ಅಧಿವೇಶನದಲ್ಲಿಯೇ ಏನಾದರೂ ಮಾಡಬೇಕು ಎಂದು ತೀರ್ಮಾನಿಸಿದ್ದೆವು. ಮುಖ್ಯಮಂತ್ರಿ ಕೂಡಾ ಈ ಬಗ್ಗೆ ಒಲವು ವ್ಯಕ್ತಪಡಿಸಿದ್ದರು’ ಎಂದೂ ಅವರು ಹೇಳಿದರು.</p>.<p><strong>ಇದನ್ನೂ ಓದಿ...<a href="https://www.prajavani.net/karnataka-news/siddaganga-shree-letter-to-chief-minister-basavaraj-bommai-on-kpsc-recruitment-893924.html" target="_blank"> ಕೆಪಿಎಸ್ಸಿ: ಬೊಮ್ಮಾಯಿಗೆ ಸಿದ್ಧಗಂಗಾಶ್ರೀ ಪತ್ರ</a></strong></p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>