<p><strong>ಬೆಂಗಳೂರು:</strong> ಎಸ್ಸೆಸ್ಸೆಲ್ಸಿ ಪರೀಕ್ಷಾ ಕಾರ್ಯದಿಂದ ಪ್ರೌಢಶಾಲಾ ಸಹ ಶಿಕ್ಷಕರನ್ನು ಹೊರಗಿಟ್ಟಿರುವ ಶಿಕ್ಷಣ ಇಲಾಖೆಯ ಕ್ರಮಕ್ಕೆ ತೀವ್ರ ಆಕ್ರೋಶ ವ್ಯಕ್ತಪಡಿಸಿದ ಬಿಜೆಪಿಯ ವೈ.ಎ. ನಾರಾಯಣಸ್ವಾಮಿ ಮತ್ತು ಜೆಡಿಎಸ್ನ ಮರಿತಿಬ್ಬೇಗೌಡ, ಸರ್ಕಾರಕ್ಕೆ ಧಿಕ್ಕಾರ ಕೂಗಿ ಸಭಾತ್ಯಾಗ ಮಾಡಿದ ಪ್ರಸಂಗ ವಿಧಾನ ಪರಿಷತ್ನಲ್ಲಿ ಶುಕ್ರವಾರ ನಡೆಯಿತು.</p>.<p>ಶೂನ್ಯವೇಳೆಯಲ್ಲಿ ಈ ವಿಷಯ ಪ್ರಸ್ತಾಪಿಸಿದ ಈ ಇಬ್ಬರು ಮತ್ತು ಬಿಜೆಪಿಯ ಅ. ದೇವೇಗೌಡ, ಎಂ. ಚಿದಾನಂದಗೌಡ, ‘ಇಲಾಖೆಯ ಈ ನಡೆಯಿಂದ ಪ್ರೌಢ ಶಾಲಾ ಶಿಕ್ಷಕರಿಗೆ ಅವಮಾನ ಆಗಿದೆ. ಅವರ ಮೇಲೆ ಅನುಮಾನ ಪಡುವಂತಾಗಿದೆ’ ಎಂದರು.</p>.<p>‘ಪಾಠ ಮಾಡಲು ಮತ್ತು ಮೌಲ್ಯಮಾಪನಕ್ಕೆ ಪ್ರೌಢ ಸಹ ಶಾಲಾ ಶಿಕ್ಷಕರನ್ನು ಬಳಸಿಕೊಂಡು, ಪರೀಕ್ಷಾ ಕಾರ್ಯದಿಂದ ಹೊರಗಿಡುವುದು ಎಷ್ಟು ಸರಿ. ಅವರು ಏನು ತಪ್ಪು ಮಾಡಿದ್ದಾರೆ? ಹೊರಗಿಡಲು ಕಾರಣವೇನು’ ಎಂದು ಪ್ರಶ್ನಿಸಿದರು. ಬಿಜೆಪಿ ಎಸ್.ವಿ. ಸಂಕನೂರು ಮತ್ತು ಕಾಂಗ್ರೆಸ್ನ ಪುಟ್ಟಣ್ಣ ಕೂಡಾ ದನಿಗೂಡಿಸಿದರು.</p>.<p>ಉತ್ತರ ನೀಡಿದ ಶಾಲಾ ಶಿಕ್ಷಣ ಸಚಿವ ಮಧು ಬಂಗಾರಪ್ಪ, ‘ಒತ್ತಡ ರಹಿತ, ಫಲಿತಾಂಶ ಉನ್ನತೀಕರಿಸಲು ಇಲಾಖೆಯ ಎಲ್ಲ ಅಧಿಕಾರಿಗಳ ಜೊತೆ ಚರ್ಚಿಸಿ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ. ಶಿಕ್ಷಕರನ್ನು ಅವಮಾನಿಸುವ ಉದ್ದೇಶ ನಮಗಿಲ್ಲ’ ಎಂದರು.</p>.<p>ಸಚಿವರ ಉತ್ತರಕ್ಕೆ ಕೆರಳಿದ ವೈ.ಎ. ನಾರಾಯಣಸ್ವಾಮಿ ಮತ್ತು ಮರಿತಿಬ್ಬೇಗೌಡ ಆಕ್ರೋಶ ವ್ಯಕ್ತಪಡಿಸುತ್ತಲೇ ಸಭಾಪತಿ ಪೀಠದ ಎದುರು ಪ್ರತಿಭಟನೆ ನಡೆಸಿದರು. ಸಭಾಪತಿ ಪೀಠದಲ್ಲಿದ್ದ ಉಪ ಸಭಾಪತಿ ಎಂ.ಕೆ. ಪ್ರಾಣೇಶ್, ‘ಶೂನ್ಯ ವೇಳೆಯಲ್ಲಿ ಮಾಡಿದ ಪ್ರಸ್ತಾವದಲ್ಲಿ ಚರ್ಚೆಗೆ ಅವಕಾಶ ಇಲ್ಲ’ ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು:</strong> ಎಸ್ಸೆಸ್ಸೆಲ್ಸಿ ಪರೀಕ್ಷಾ ಕಾರ್ಯದಿಂದ ಪ್ರೌಢಶಾಲಾ ಸಹ ಶಿಕ್ಷಕರನ್ನು ಹೊರಗಿಟ್ಟಿರುವ ಶಿಕ್ಷಣ ಇಲಾಖೆಯ ಕ್ರಮಕ್ಕೆ ತೀವ್ರ ಆಕ್ರೋಶ ವ್ಯಕ್ತಪಡಿಸಿದ ಬಿಜೆಪಿಯ ವೈ.ಎ. ನಾರಾಯಣಸ್ವಾಮಿ ಮತ್ತು ಜೆಡಿಎಸ್ನ ಮರಿತಿಬ್ಬೇಗೌಡ, ಸರ್ಕಾರಕ್ಕೆ ಧಿಕ್ಕಾರ ಕೂಗಿ ಸಭಾತ್ಯಾಗ ಮಾಡಿದ ಪ್ರಸಂಗ ವಿಧಾನ ಪರಿಷತ್ನಲ್ಲಿ ಶುಕ್ರವಾರ ನಡೆಯಿತು.</p>.<p>ಶೂನ್ಯವೇಳೆಯಲ್ಲಿ ಈ ವಿಷಯ ಪ್ರಸ್ತಾಪಿಸಿದ ಈ ಇಬ್ಬರು ಮತ್ತು ಬಿಜೆಪಿಯ ಅ. ದೇವೇಗೌಡ, ಎಂ. ಚಿದಾನಂದಗೌಡ, ‘ಇಲಾಖೆಯ ಈ ನಡೆಯಿಂದ ಪ್ರೌಢ ಶಾಲಾ ಶಿಕ್ಷಕರಿಗೆ ಅವಮಾನ ಆಗಿದೆ. ಅವರ ಮೇಲೆ ಅನುಮಾನ ಪಡುವಂತಾಗಿದೆ’ ಎಂದರು.</p>.<p>‘ಪಾಠ ಮಾಡಲು ಮತ್ತು ಮೌಲ್ಯಮಾಪನಕ್ಕೆ ಪ್ರೌಢ ಸಹ ಶಾಲಾ ಶಿಕ್ಷಕರನ್ನು ಬಳಸಿಕೊಂಡು, ಪರೀಕ್ಷಾ ಕಾರ್ಯದಿಂದ ಹೊರಗಿಡುವುದು ಎಷ್ಟು ಸರಿ. ಅವರು ಏನು ತಪ್ಪು ಮಾಡಿದ್ದಾರೆ? ಹೊರಗಿಡಲು ಕಾರಣವೇನು’ ಎಂದು ಪ್ರಶ್ನಿಸಿದರು. ಬಿಜೆಪಿ ಎಸ್.ವಿ. ಸಂಕನೂರು ಮತ್ತು ಕಾಂಗ್ರೆಸ್ನ ಪುಟ್ಟಣ್ಣ ಕೂಡಾ ದನಿಗೂಡಿಸಿದರು.</p>.<p>ಉತ್ತರ ನೀಡಿದ ಶಾಲಾ ಶಿಕ್ಷಣ ಸಚಿವ ಮಧು ಬಂಗಾರಪ್ಪ, ‘ಒತ್ತಡ ರಹಿತ, ಫಲಿತಾಂಶ ಉನ್ನತೀಕರಿಸಲು ಇಲಾಖೆಯ ಎಲ್ಲ ಅಧಿಕಾರಿಗಳ ಜೊತೆ ಚರ್ಚಿಸಿ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ. ಶಿಕ್ಷಕರನ್ನು ಅವಮಾನಿಸುವ ಉದ್ದೇಶ ನಮಗಿಲ್ಲ’ ಎಂದರು.</p>.<p>ಸಚಿವರ ಉತ್ತರಕ್ಕೆ ಕೆರಳಿದ ವೈ.ಎ. ನಾರಾಯಣಸ್ವಾಮಿ ಮತ್ತು ಮರಿತಿಬ್ಬೇಗೌಡ ಆಕ್ರೋಶ ವ್ಯಕ್ತಪಡಿಸುತ್ತಲೇ ಸಭಾಪತಿ ಪೀಠದ ಎದುರು ಪ್ರತಿಭಟನೆ ನಡೆಸಿದರು. ಸಭಾಪತಿ ಪೀಠದಲ್ಲಿದ್ದ ಉಪ ಸಭಾಪತಿ ಎಂ.ಕೆ. ಪ್ರಾಣೇಶ್, ‘ಶೂನ್ಯ ವೇಳೆಯಲ್ಲಿ ಮಾಡಿದ ಪ್ರಸ್ತಾವದಲ್ಲಿ ಚರ್ಚೆಗೆ ಅವಕಾಶ ಇಲ್ಲ’ ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>