ಶುಕ್ರವಾರ, 3 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

Karnataka Assembly Session | ಎಚ್‌ಡಿಕೆಗೆ ವಿಪಕ್ಷ ಸ್ಥಾನ ‘ಎರವಲು ಸೇವೆ’: ಸವದಿ

Published 12 ಜುಲೈ 2023, 15:46 IST
Last Updated 12 ಜುಲೈ 2023, 15:46 IST
ಅಕ್ಷರ ಗಾತ್ರ

ಬೆಂಗಳೂರು: ವಿರೋಧಪಕ್ಷದ ಸ್ಥಾನವನ್ನು ಬಿಜೆಪಿಯವರು ಜೆಡಿಎಸ್‌ ನಾಯಕ ಎಚ್‌.ಡಿ.ಕುಮಾರಸ್ವಾಮಿ ಅವರಿಗೆ ಎರವಲು ಸೇವೆಯ ಮೇಲೆ ಬಿಟ್ಟುಕೊಡಲಿದ್ದಾರೆ ಎಂದು ಕಾಂಗ್ರೆಸ್‌ನ ಲಕ್ಷ್ಮಣ ಸವದಿ ಲೇವಡಿ ಮಾಡಿದರು.

ವಿಧಾನಸಭೆಯಲ್ಲಿ ಬುಧವಾರ ರಾಜ್ಯಪಾಲರ ಭಾಷಣದ ವಂದನಾ ನಿರ್ಣಯದ ಮೇಲೆ ಜೆಡಿಎಸ್‌ನ ಜಿ.ಟಿ.ದೇವೇಗೌಡ ಮಾತನಾಡುವಾಗ ಮಧ್ಯ ಪ್ರವೇಶಿಸಿದ ಸವದಿ, ಹೀಗೆ ಹೇಳುವ ಮೂಲಕ ಬಿಜೆಪಿ ನಾಯಕರ ಕಾಲೆಳೆದರು.

‘ಬಿಜೆಪಿಯವರು ಏಕಾಏಕಿ ಬಿ.ಎಸ್‌.ಯಡಿಯೂರಪ್ಪ ಅವರನ್ನು ಮುಖ್ಯಮಂತ್ರಿ ಸ್ಥಾನದಿಂದ ಏಕೆ ಇಳಿಸಿದರು ಎಂಬುದು ಗೊತ್ತಾಗಿಲ್ಲ. ನಿಮಗೇನಾದರೂ ಗೊತ್ತಿದ್ದರೆ ತಿಳಿಸಿ’ ಎಂದು ಜಿ.ಟಿ.ದೇವೇಗೌಡ ಅವರು ಸವದಿಯವರನ್ನೇ ಪ್ರಶ್ನಿಸಿದರು.

‘ಈ ವಿಚಾರದ ಬಗ್ಗೆ ನಿಮಗೆ ಮಾಹಿತಿ ಇದೆ. ಅವರೇ ಅದನ್ನು ಹೇಳಬಹುದು’ ಎಂದು ಸವದಿ ಪ್ರತಿಕ್ರಿಯಿಸಿದರು.

‘ಕುಮಾರಸ್ವಾಮಿ ಅವರೇ ಆರಂಭದಲ್ಲಿ ನೀವು ವಿರೋಧಪಕ್ಷದ ನಾಯಕರಾಗಿ ಸಮರ್ಥವಾಗಿ ಕೆಲಸ ಮಾಡಿ. ವಿರೋಧ ಪಕ್ಷದ ನಾಯಕನ ಸ್ಥಾನ ಕುಮಾರಸ್ವಾಮಿ ಅವರ ಮನೆ ಬಾಗಿಲಿಗೆ ಬರುತ್ತದೆ. ಹೀಗಾಗಿ ವಿರೋಧ ಪಕ್ಷದ ಸ್ಥಾನದಲ್ಲಿ ಬಿಜೆಪಿಯ ಯಾವುದೇ ನಾಯಕ ಕೂರುತ್ತಿಲ್ಲ. ಆ ಸ್ಥಾನಕ್ಕಾಗಿ ಪರಸ್ಪರ ಕಚ್ಚಾಡುತ್ತಿದ್ದಾರೆ‘ ಎಂದೂ ಕುಟುಕಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT