<p><strong>ಬೆಂಗಳೂರು:</strong> ವಿಧಾನಸಭೆಯ ಕಲಾಪ ಮಂಗಳವಾರ ಬೆಳಿಗ್ಗೆ ಆರಂಭವಾದ ವೇಳೆಯಲ್ಲಿ ಆಡಳಿತ ಪಕ್ಷದ ಕಡೆ ಮೊದಲ ಸಾಲು ಖಾಲಿ ಇರುವುದನ್ನು ಗಮನಿಸಿದ ಬಿಜೆಪಿ ಮತ್ತು ಜೆಡಿಎಸ್ ಸದಸ್ಯರು ತೀವ್ರ ಆಕ್ರೋಶ ವ್ಯಕ್ತಪಡಿಸಿದರು.</p>.<p>ಸಭಾಧ್ಯಕ್ಷ ಯು.ಟಿ. ಖಾದರ್ ಪ್ರಶ್ನೋತ್ತರ ಆರಂಭಿಸಲು ಮುಂದಾಗುತ್ತಿದ್ದಂತೆ ಆಕ್ಷೇಪ ವ್ಯಕ್ತಪಡಿಸಿದ ವಿರೋಧ ಪಕ್ಷದ ನಾಯಕ ಆರ್. ಅಶೋಕ, ಸದನದಲ್ಲಿ ಕಡ್ಡಾಯವಾಗಿ ಹಾಜರಿರಬೇಕಾದ ಸಚಿವರ ಪಟ್ಟಿ ಓದುವಂತೆ ಪಟ್ಟು ಹಿಡಿದರು.</p>.<p>ಸಭಾಧ್ಯಕ್ಷರು ಒಬ್ಬೊಬ್ಬರೇ ಸಚಿವರ ಹೆಸರು ಹೇಳುತ್ತಿದ್ದಂತೆ, ವಿರೋಧ ಪಕ್ಷದ ಸದಸ್ಯರು ಒಕ್ಕೊರಲಿನಿಂದ ‘ಸಚಿವರು ಇಲ್ಲ... ಇಲ್ಲ...’ ಎಂದು ಜೋರಾಗಿ ಕೂಗಿದರು. ಈ ವೇಳೆ ಮುಜುಗರಕ್ಕೀಡಾದ ಆಡಳಿತ ಪಕ್ಷದ ಸಾಲಿನಲ್ಲಿದ್ದ ಸಚಿವ ಜಿ. ಪರಮೇಶ್ವರ ನಸು ನಕ್ಕರು.</p>.<p>ಸಚಿವರು ಸದನಕ್ಕೆ ಬಾರದಿರುವುದಕ್ಕೆ ಬಿಜೆಪಿಯ ವಿ. ಸುನಿಲ್ ಕುಮಾರ್, ರಾಜ್ಯ ಸರ್ಕಾರವನ್ನು ‘ಇಲ್ಲಗಳ ಸರ್ಕಾರ’ ಎಂದು ಟೀಕಿಸಿದರು.</p>.<p>‘ಈ ಸರ್ಕಾರದಲ್ಲಿ ಯಾವುದೂ ಸರಿ ಇಲ್ಲ. ಅಭಿವೃದ್ಧಿಯೂ ಇಲ್ಲ, ಜನರ ಕೆಲಸಕ್ಕೆ ಹಣವೂ ಇಲ್ಲ, ಹೊಸ ಯೋಜನೆಗಳೂ ಇಲ್ಲ. ಕೊನೆಗೆ ಸದನದಲ್ಲಿ ಉತ್ತರಿಸಲು ಸಚಿವರೂ ಇಲ್ಲ. ಇದೊಂದು ಸಂಪೂರ್ಣ ನಿಷ್ಕ್ರಿಯ ಸರ್ಕಾರ’ ಎಂದು ಟೀಕಿಸಿದರು. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು:</strong> ವಿಧಾನಸಭೆಯ ಕಲಾಪ ಮಂಗಳವಾರ ಬೆಳಿಗ್ಗೆ ಆರಂಭವಾದ ವೇಳೆಯಲ್ಲಿ ಆಡಳಿತ ಪಕ್ಷದ ಕಡೆ ಮೊದಲ ಸಾಲು ಖಾಲಿ ಇರುವುದನ್ನು ಗಮನಿಸಿದ ಬಿಜೆಪಿ ಮತ್ತು ಜೆಡಿಎಸ್ ಸದಸ್ಯರು ತೀವ್ರ ಆಕ್ರೋಶ ವ್ಯಕ್ತಪಡಿಸಿದರು.</p>.<p>ಸಭಾಧ್ಯಕ್ಷ ಯು.ಟಿ. ಖಾದರ್ ಪ್ರಶ್ನೋತ್ತರ ಆರಂಭಿಸಲು ಮುಂದಾಗುತ್ತಿದ್ದಂತೆ ಆಕ್ಷೇಪ ವ್ಯಕ್ತಪಡಿಸಿದ ವಿರೋಧ ಪಕ್ಷದ ನಾಯಕ ಆರ್. ಅಶೋಕ, ಸದನದಲ್ಲಿ ಕಡ್ಡಾಯವಾಗಿ ಹಾಜರಿರಬೇಕಾದ ಸಚಿವರ ಪಟ್ಟಿ ಓದುವಂತೆ ಪಟ್ಟು ಹಿಡಿದರು.</p>.<p>ಸಭಾಧ್ಯಕ್ಷರು ಒಬ್ಬೊಬ್ಬರೇ ಸಚಿವರ ಹೆಸರು ಹೇಳುತ್ತಿದ್ದಂತೆ, ವಿರೋಧ ಪಕ್ಷದ ಸದಸ್ಯರು ಒಕ್ಕೊರಲಿನಿಂದ ‘ಸಚಿವರು ಇಲ್ಲ... ಇಲ್ಲ...’ ಎಂದು ಜೋರಾಗಿ ಕೂಗಿದರು. ಈ ವೇಳೆ ಮುಜುಗರಕ್ಕೀಡಾದ ಆಡಳಿತ ಪಕ್ಷದ ಸಾಲಿನಲ್ಲಿದ್ದ ಸಚಿವ ಜಿ. ಪರಮೇಶ್ವರ ನಸು ನಕ್ಕರು.</p>.<p>ಸಚಿವರು ಸದನಕ್ಕೆ ಬಾರದಿರುವುದಕ್ಕೆ ಬಿಜೆಪಿಯ ವಿ. ಸುನಿಲ್ ಕುಮಾರ್, ರಾಜ್ಯ ಸರ್ಕಾರವನ್ನು ‘ಇಲ್ಲಗಳ ಸರ್ಕಾರ’ ಎಂದು ಟೀಕಿಸಿದರು.</p>.<p>‘ಈ ಸರ್ಕಾರದಲ್ಲಿ ಯಾವುದೂ ಸರಿ ಇಲ್ಲ. ಅಭಿವೃದ್ಧಿಯೂ ಇಲ್ಲ, ಜನರ ಕೆಲಸಕ್ಕೆ ಹಣವೂ ಇಲ್ಲ, ಹೊಸ ಯೋಜನೆಗಳೂ ಇಲ್ಲ. ಕೊನೆಗೆ ಸದನದಲ್ಲಿ ಉತ್ತರಿಸಲು ಸಚಿವರೂ ಇಲ್ಲ. ಇದೊಂದು ಸಂಪೂರ್ಣ ನಿಷ್ಕ್ರಿಯ ಸರ್ಕಾರ’ ಎಂದು ಟೀಕಿಸಿದರು. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>