<p><strong>ಬೆಂಗಳೂರು</strong>: ‘ಸಾಮಾಜಿಕ, ಶೈಕ್ಷಣಿಕ ಸಮೀಕ್ಷೆಯ ವರದಿಯನ್ನು ಸರ್ಕಾರ ಅಂಗೀಕರಿಸಿ, ಶಿಫಾರಸುಗಳನ್ನು ಜಾರಿ ಮಾಡಲೇಬೇಕು’ ಎಂದು ಕಾಂಗ್ರೆಸ್ನ ಹಿಂದುಳಿದ ವರ್ಗದ ನಾಯಕರು ಒಕ್ಕೊರಲಿನಿಂದ ಆಗ್ರಹಿಸಿದರು.</p>.<p>ಸುದ್ದಿಗೋಷ್ಠಿಯಲ್ಲಿ ಬುಧವಾರ ಮಾತನಾಡಿದ ಮಾಜಿ ಸಭಾಪತಿ ವಿ.ಆರ್. ಸುದರ್ಶನ್, ‘ಗ್ಯಾರಂಟಿ’ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷ ಎಚ್.ಎಂ. ರೇವಣ್ಣ, ವಿಧಾನ ಪರಿಷತ್ ಸದಸ್ಯರಾದ ಎಂ.ಆರ್. ಸೀತಾರಾಂ, ಉಮಾಶ್ರೀ, ಎಂ. ನಾಗರಾಜ ಯಾದವ್ ಮತ್ತಿತರರು ‘ವರದಿ ವೈಜ್ಞಾನಿಕವಾಗಿದೆ’ ಎಂದು ಸಮರ್ಥಿಸಿದರು.</p>.<p>ಎಚ್.ಎಂ. ರೇವಣ್ಣ ಮಾತನಾಡಿ, ‘ಇದು ಸರ್ವ ಜನಾಂಗವನ್ನು ಒಳಗೊಂಡಂತೆ ರಾಜ್ಯದಲ್ಲಿ ಮನೆ ಮನೆಗೆ ಭೇಟಿ ನೀಡಿ ಹಿಂದುಳಿದ ವರ್ಗಗಳಿಗೆ ಸಂಬಂಧಪಟ್ಟಂತೆ ಸಾಮಾಜಿಕ, ಶೈಕ್ಷಣಿಕ, ಔದ್ಯೋಗಿಕ, ರಾಜಕೀಯ ಹಾಗೂ ಇತರ ಕ್ಷೇತ್ರಗಳಿಗೆ ಅನ್ವಯಿಸಿ ನಡೆಸಿದ ಸಮೀಕ್ಷೆ. ಈ ಕ್ಷೇತ್ರಗಳಿಗೆ ಮಾಹಿತಿ ಪಡೆಯುವ ಪ್ರಯತ್ನದಲ್ಲಿ ಜಾತಿಯೂ ಒಂದು ಅಂಶ. ಸಮಾನತೆ ಮತ್ತು ಸಾಮಾಜಿಕ ನ್ಯಾಯವನ್ನು ಎಲ್ಲ ವರ್ಗದವರಿಗೆ ಎಲ್ಲ ಕಾಲದಲ್ಲಿಯೂ ನೀಡುವುದು ಕಾಂಗ್ರೆಸ್ ಸರ್ಕಾರದ ಅತಿ ದೊಡ್ಡ ಆಕಾಂಕ್ಷೆಯಾಗಿದೆ’ ಎಂದರು.</p>.<p>‘ವರದಿಯು ಒಂದು ಜನಾಂಗಕ್ಕೆ ಸೀಮಿತವಲ್ಲ. ಎಲ್ಲರ ಅಭ್ಯುದಯಕ್ಕೆ ಮಾಡಿರುವಂಥದ್ದು. ಶೇ 98ರಷ್ಟು ಜನರು ಸಮೀಕ್ಷೆಯಲ್ಲಿ ಮಾಹಿತಿ ನೀಡಿದ್ದಾರೆ. ವರದಿಯನ್ನು ಸಂಪೂರ್ಣವಾಗಿ ನೋಡಿ, ಪರಿಶೀಲಿಸದೆ ಅವೈಜ್ಞಾನಿಕ ಎನ್ನುವುದು ಸರಿಯಲ್ಲ. ಅಲ್ಲದೆ, ಸಣ್ಣಪುಟ್ಟ ತಪ್ಪುಗಳಿದ್ದರೆ ಸರಿಪಡಿಸಲು ಅವಕಾಶವಿದೆ’ ಎಂದರು. </p>.<p>ಎಂ.ಆರ್. ಸೀತಾರಾಂ ಮಾತನಾಡಿ, ‘ಗುರುವಾರ (ಏಪ್ರಿಲ್ 17) ನಡೆಯಲಿರುವ ಸಚಿವ ಸಂಪುಟ ಸಭೆಯ ಮುಂದೆ ಈ ವರದಿ ಚರ್ಚೆಗೆ ಬರಲಿದೆ. ವರದಿಯನ್ನು ಎಲ್ಲರೂ ಒಪ್ಪಿಕೊಳ್ಳಬೇಕು. ಎಲ್ಲ ಸಚಿವರು ಚರ್ಚೆ ಮಾಡಲಿ’ ಎಂದರು.</p>.<p>ಉಮಾಶ್ರೀ ಮಾತನಾಡಿ, ‘ಯೋಜನೆಗಳನ್ನು ರೂಪಿಸಲು ಈ ವರದಿ ಭದ್ರ ಬುನಾದಿ ಆಗಲಿದೆ. ಆ ಮೂಲಕ, ಜನರಿಗೆ ಗುಣಾತ್ಮಕ ಬದುಕು ನೀಡಲು ಸಾಧ್ಯ. ಈ ಬಗ್ಗೆ ಭಾವನಾತ್ಮಕವಾಗಿ ಯಾರೂ ಮಾತನಾಡಿ ಜನರನ್ನು ದಾರಿ ತಪ್ಪಿಸುವುದು ಬೇಡ. ಸಚಿವ ಸಂಪುಟ ಸಭೆ ಈ ವರದಿಯನ್ನು ಒಪ್ಪಲೇಬೇಕು’ ಎಂದರು.</p>.<p>‘ತಪ್ಪಿದ್ದರೆ ಸರಿಪಡಿಸಿಕೊಳ್ಳಬಹುದು. ಬಿಟ್ಟು ಹೋದ ಜಾತಿಗಳನ್ನು ಸೇರಿಸಬೇಕು. ಬಹಳಷ್ಟು ಜನ ಇನ್ನೂ ಬಡವರಾಗಿಯೇ ಇದ್ದಾರೆ. ಅಂಥವರ ಕಡೆಗೆ ಗಮನಹರಿಸಲು ಈ ವರದಿ ಸಹಾಯಕವಾಗಲಿದೆ. ವರದಿಯಲ್ಲಿರುವ ಶಿಫಾರಸುಗಳನ್ನು ಅನುಷ್ಠಾನಕ್ಕೆ ತರಬೇಕು’ ಎಂದು ಆಗ್ರಹಿಸಿದರು. ‘ವರದಿಯನ್ನು ನಾವೆಲ್ಲರೂ ಒಪ್ಪುತ್ತೇವೆ. ಸಚಿವ ಸಂಪುಟ ಸಭೆಯೂ ಒಪ್ಪಬೇಕು’ ಎಂದು ನಾಗರಾಜ ಯಾದವ್ ಹೇಳಿದರು.</p>.<p>ಅಖಿಲ ಕರ್ನಾಟಕ ಗಾಣಿಗ ಸಂಘದ ಅಧ್ಯಕ್ಷ ರಾಜಶೇಖರ್, ಮಾಜಿ ಮೇಯರ್ಗಳಾದ ಪಿ.ಆರ್. ರಮೇಶ್, ಡಿ. ವೆಂಕಟೇಶ್ ಮೂರ್ತಿ ಮತ್ತಿತರರು ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು</strong>: ‘ಸಾಮಾಜಿಕ, ಶೈಕ್ಷಣಿಕ ಸಮೀಕ್ಷೆಯ ವರದಿಯನ್ನು ಸರ್ಕಾರ ಅಂಗೀಕರಿಸಿ, ಶಿಫಾರಸುಗಳನ್ನು ಜಾರಿ ಮಾಡಲೇಬೇಕು’ ಎಂದು ಕಾಂಗ್ರೆಸ್ನ ಹಿಂದುಳಿದ ವರ್ಗದ ನಾಯಕರು ಒಕ್ಕೊರಲಿನಿಂದ ಆಗ್ರಹಿಸಿದರು.</p>.<p>ಸುದ್ದಿಗೋಷ್ಠಿಯಲ್ಲಿ ಬುಧವಾರ ಮಾತನಾಡಿದ ಮಾಜಿ ಸಭಾಪತಿ ವಿ.ಆರ್. ಸುದರ್ಶನ್, ‘ಗ್ಯಾರಂಟಿ’ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷ ಎಚ್.ಎಂ. ರೇವಣ್ಣ, ವಿಧಾನ ಪರಿಷತ್ ಸದಸ್ಯರಾದ ಎಂ.ಆರ್. ಸೀತಾರಾಂ, ಉಮಾಶ್ರೀ, ಎಂ. ನಾಗರಾಜ ಯಾದವ್ ಮತ್ತಿತರರು ‘ವರದಿ ವೈಜ್ಞಾನಿಕವಾಗಿದೆ’ ಎಂದು ಸಮರ್ಥಿಸಿದರು.</p>.<p>ಎಚ್.ಎಂ. ರೇವಣ್ಣ ಮಾತನಾಡಿ, ‘ಇದು ಸರ್ವ ಜನಾಂಗವನ್ನು ಒಳಗೊಂಡಂತೆ ರಾಜ್ಯದಲ್ಲಿ ಮನೆ ಮನೆಗೆ ಭೇಟಿ ನೀಡಿ ಹಿಂದುಳಿದ ವರ್ಗಗಳಿಗೆ ಸಂಬಂಧಪಟ್ಟಂತೆ ಸಾಮಾಜಿಕ, ಶೈಕ್ಷಣಿಕ, ಔದ್ಯೋಗಿಕ, ರಾಜಕೀಯ ಹಾಗೂ ಇತರ ಕ್ಷೇತ್ರಗಳಿಗೆ ಅನ್ವಯಿಸಿ ನಡೆಸಿದ ಸಮೀಕ್ಷೆ. ಈ ಕ್ಷೇತ್ರಗಳಿಗೆ ಮಾಹಿತಿ ಪಡೆಯುವ ಪ್ರಯತ್ನದಲ್ಲಿ ಜಾತಿಯೂ ಒಂದು ಅಂಶ. ಸಮಾನತೆ ಮತ್ತು ಸಾಮಾಜಿಕ ನ್ಯಾಯವನ್ನು ಎಲ್ಲ ವರ್ಗದವರಿಗೆ ಎಲ್ಲ ಕಾಲದಲ್ಲಿಯೂ ನೀಡುವುದು ಕಾಂಗ್ರೆಸ್ ಸರ್ಕಾರದ ಅತಿ ದೊಡ್ಡ ಆಕಾಂಕ್ಷೆಯಾಗಿದೆ’ ಎಂದರು.</p>.<p>‘ವರದಿಯು ಒಂದು ಜನಾಂಗಕ್ಕೆ ಸೀಮಿತವಲ್ಲ. ಎಲ್ಲರ ಅಭ್ಯುದಯಕ್ಕೆ ಮಾಡಿರುವಂಥದ್ದು. ಶೇ 98ರಷ್ಟು ಜನರು ಸಮೀಕ್ಷೆಯಲ್ಲಿ ಮಾಹಿತಿ ನೀಡಿದ್ದಾರೆ. ವರದಿಯನ್ನು ಸಂಪೂರ್ಣವಾಗಿ ನೋಡಿ, ಪರಿಶೀಲಿಸದೆ ಅವೈಜ್ಞಾನಿಕ ಎನ್ನುವುದು ಸರಿಯಲ್ಲ. ಅಲ್ಲದೆ, ಸಣ್ಣಪುಟ್ಟ ತಪ್ಪುಗಳಿದ್ದರೆ ಸರಿಪಡಿಸಲು ಅವಕಾಶವಿದೆ’ ಎಂದರು. </p>.<p>ಎಂ.ಆರ್. ಸೀತಾರಾಂ ಮಾತನಾಡಿ, ‘ಗುರುವಾರ (ಏಪ್ರಿಲ್ 17) ನಡೆಯಲಿರುವ ಸಚಿವ ಸಂಪುಟ ಸಭೆಯ ಮುಂದೆ ಈ ವರದಿ ಚರ್ಚೆಗೆ ಬರಲಿದೆ. ವರದಿಯನ್ನು ಎಲ್ಲರೂ ಒಪ್ಪಿಕೊಳ್ಳಬೇಕು. ಎಲ್ಲ ಸಚಿವರು ಚರ್ಚೆ ಮಾಡಲಿ’ ಎಂದರು.</p>.<p>ಉಮಾಶ್ರೀ ಮಾತನಾಡಿ, ‘ಯೋಜನೆಗಳನ್ನು ರೂಪಿಸಲು ಈ ವರದಿ ಭದ್ರ ಬುನಾದಿ ಆಗಲಿದೆ. ಆ ಮೂಲಕ, ಜನರಿಗೆ ಗುಣಾತ್ಮಕ ಬದುಕು ನೀಡಲು ಸಾಧ್ಯ. ಈ ಬಗ್ಗೆ ಭಾವನಾತ್ಮಕವಾಗಿ ಯಾರೂ ಮಾತನಾಡಿ ಜನರನ್ನು ದಾರಿ ತಪ್ಪಿಸುವುದು ಬೇಡ. ಸಚಿವ ಸಂಪುಟ ಸಭೆ ಈ ವರದಿಯನ್ನು ಒಪ್ಪಲೇಬೇಕು’ ಎಂದರು.</p>.<p>‘ತಪ್ಪಿದ್ದರೆ ಸರಿಪಡಿಸಿಕೊಳ್ಳಬಹುದು. ಬಿಟ್ಟು ಹೋದ ಜಾತಿಗಳನ್ನು ಸೇರಿಸಬೇಕು. ಬಹಳಷ್ಟು ಜನ ಇನ್ನೂ ಬಡವರಾಗಿಯೇ ಇದ್ದಾರೆ. ಅಂಥವರ ಕಡೆಗೆ ಗಮನಹರಿಸಲು ಈ ವರದಿ ಸಹಾಯಕವಾಗಲಿದೆ. ವರದಿಯಲ್ಲಿರುವ ಶಿಫಾರಸುಗಳನ್ನು ಅನುಷ್ಠಾನಕ್ಕೆ ತರಬೇಕು’ ಎಂದು ಆಗ್ರಹಿಸಿದರು. ‘ವರದಿಯನ್ನು ನಾವೆಲ್ಲರೂ ಒಪ್ಪುತ್ತೇವೆ. ಸಚಿವ ಸಂಪುಟ ಸಭೆಯೂ ಒಪ್ಪಬೇಕು’ ಎಂದು ನಾಗರಾಜ ಯಾದವ್ ಹೇಳಿದರು.</p>.<p>ಅಖಿಲ ಕರ್ನಾಟಕ ಗಾಣಿಗ ಸಂಘದ ಅಧ್ಯಕ್ಷ ರಾಜಶೇಖರ್, ಮಾಜಿ ಮೇಯರ್ಗಳಾದ ಪಿ.ಆರ್. ರಮೇಶ್, ಡಿ. ವೆಂಕಟೇಶ್ ಮೂರ್ತಿ ಮತ್ತಿತರರು ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>