<p><strong>ಬೆಂಗಳೂರು:</strong> ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ರೈತರ ಮತ್ತು ಕಾರ್ಮಿಕರ ವಿರೋಧಿ ನೀತಿ ಅನುಸರಿಸುತ್ತಿವೆ ಎಂದು ಆರೋಪಿಸಿ ವಿವಿಧ ಸಂಘಟನೆಗಳು ಕರೆ ನೀಡಿರುವ ಸೆ.28ರ ರಾಜ್ಯ ಬಂದ್ಗೆ ಹಲವು ಸಂಘಟನೆಗಳು, ರಾಜಕೀಯ ಪಕ್ಷಗಳು ಬೆಂಬಲ ನೀಡಿವೆ.</p>.<p>‘ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರ ಜತೆಸೆ.25ರಂದು ನಡೆದ ಮಾತುಕತೆ ವಿಫಲವಾಗಿದ್ದು, ಸೆ.28ಕ್ಕೆ ಕರೆ ನೀಡಲಾಗಿರುವ ಬಂದ್ ಮತ್ತಷ್ಟು ತೀವ್ರವಾಗಿ ನಡೆಯಲಿದೆ. ಅಲ್ಲದೆ, ಮುಖ್ಯಮಂತ್ರಿಯವರಿಗೆ ಕಂಡ ಕಂಡಲ್ಲಿ ಘೇರಾವ್ ಹಾಕಲಾಗುವುದು’ ಎಂದು ರೈತ, ದಲಿತ ಹಾಗೂ ಕಾರ್ಮಿಕರ ಐಕ್ಯ ಹೋರಾಟ ಸಮಿತಿ ಹೇಳಿದೆ.</p>.<p>‘ರೈತರು, ಕಾರ್ಮಿಕ, ದಮನಿತ ಹಾಗೂ ಜನಸಾಮಾನ್ಯರ ಐಕ್ಯ ಹೋರಾಟದ ಮೂಲಕ ರೈತ ವಿರೋಧಿ ಸುಗ್ರೀವಾಜ್ಞೆ–ಮಸೂದೆಗಳನ್ನು ಹಿಂಪಡೆಯಲೇಬೇಕು ಎಂಬ ಸಂದರ್ಭವನ್ನು ಸೃಷ್ಟಿ ಮಾಡುತ್ತೇವೆ’ ಎಂದು ಅದು ಹೇಳಿದೆ.</p>.<p>ರಾಜ್ಯದ ರಸ್ತೆ ಸಾರಿಗೆ ನಿಗಮಗಳ ನೌಕರರ ಫೆಡರೇಷನ್ (ಸಿಐಟಿಯು) ಬಂದ್ಗೆ ಸಂಪೂರ್ಣ ಬೆಂಬಲ ಘೋಷಿಸಿದ್ದು, ಮುಷ್ಕರದಲ್ಲಿ ಪಾಲ್ಗೊಳ್ಳುವಂತೆ ತಮ್ಮ ಸದಸ್ಯರಿಗೆ ಕರೆ ನೀಡಿದೆ.</p>.<p>‘ರೈತರ–ಕಾರ್ಮಿಕರ ಹೋರಾಟಕ್ಕೆ ನೈತಿಕ ಬೆಂಬಲ ನೀಡಿದ್ದೇವೆ. ಹೋಟೆಲ್ಗಳು ಎಂದಿನಂತೆ ಕಾರ್ಯನಿರ್ವಹಿಸಲಿವೆ’ ಎಂದು ಹೋಟೆಲ್ ಮಾಲೀಕರ ಸಂಘ ಹೇಳಿದೆ.</p>.<p><strong>ರಾಜ್ಯ ಬಂದ್: ವಿವಿಧ ಪರೀಕ್ಷೆ ಮುಂದೂಡಿಕೆ<br />ಬೆಂಗಳೂರು: </strong>ರೈತ ಮತ್ತು ಕಾರ್ಮಿಕ ಸಂಘಟನೆಗಳು ಬಂದ್ಗೆ ಕರೆ ನೀಡಿದ ಕಾರಣ ಎಸ್ಸೆಸ್ಸೆಲ್ಸಿ ಪೂರಕ ಪರೀಕ್ಷೆ ಸೇರಿದಂತೆ 28ರಂದು ನಡೆಯಬೇಕಿದ್ದ ಎಲ್ಲ ಪರೀಕ್ಷೆಗಳನ್ನುಮುಂದೂಡಲಾಗಿದೆ.</p>.<p>ಎಸ್ಸೆಸ್ಸೆಲ್ಸಿಯ ವಿಜ್ಞಾನ, ರಾಜ್ಯ ಶಾಸ್ತ್ರ, ಕರ್ನಾಟಕ ಸಂಗೀತ, ಹಿಂದೂಸ್ತಾನಿ ಸಂಗೀತ ವಿಷಯಗಳ ಪರೀಕ್ಷೆ ಸೋಮವಾರ ನಡೆಯಬೇಕಿತ್ತು. ಬೆಂಗಳೂರು ವಿಶ್ವವಿದ್ಯಾಲಯ, ವಿಜಯಪುರದ ಮಹಿಳಾ ವಿಶ್ವವಿದ್ಯಾಲಯ ಸೇರಿದಂತೆ ಹಲವು ವಿಶ್ವವಿದ್ಯಾಲಯಗಳಲ್ಲಿ ಪದವಿ ಮತ್ತು ಸ್ನಾತಕೋತ್ತರ ಪದವಿ ಪರೀಕ್ಷೆಗಳು ನಡೆಯಬೇಕಿತ್ತು.</p>.<p>ಪರೀಕ್ಷೆಗೆ ಹಾಜರಾಗಲು ವಿದ್ಯಾರ್ಥಿಗಳಿಗೆ ಅನನುಕೂಲ ಆಗಬಹುದೆಂಬ ಕಾರಣಕ್ಕೆ ಪರೀಕ್ಷೆಯನ್ನು ಮುಂದೂಡಲಾಗಿದೆ ಎಂದು ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿ ಹಾಗೂ ವಿಶ್ವವಿದ್ಯಾಲಯಗಳು ತಿಳಿಸಿವೆ.</p>.<p class="Briefhead"><strong>ಏನೇನಿರುತ್ತದೆ ?</strong></p>.<p>* ಹಾಲು, ತರಕಾರಿ ಹಾಗೂ ದಿನಸಿ ಅಂಗಡಿಗಳು</p>.<p>* ಆಸ್ಪತ್ರೆಗಳು, ಔಷಧ ಅಂಗಡಿಗಳು</p>.<p>* ಹೋಟೆಲ್ಗಳು, ಮೆಟ್ರೊ ರೈಲು, ವಿಮಾನ ಸೇವೆ</p>.<p>**<br /><strong>ಏನಿರುವುದಿಲ್ಲ ? </strong><br />*ಕೆಎಸ್ಆರ್ಟಿಸಿ, ಬಿಎಂಟಿಸಿ ಬಸ್ ಸೇವೆ ಇರಲಿದೆ ಎಂದು ಸರ್ಕಾರ ಹೇಳಿದೆ. ಆದರೆ, ಈ ನಿಗಮಗಳ ನೌಕರರ ಸಂಘ ಬಂದ್ ಬೆಂಬಲ ವ್ಯಕ್ತಪಡಿಸಿರುವುದರಿಂದ ವ್ಯತ್ಯಯವಾಗುವ ಸಾಧ್ಯತೆ ಇದೆ</p>.<p>*ಆಟೊ–ಟ್ಯಾಕ್ಸಿ ಸೇವೆ ಇರುವುದಿಲ್ಲ</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು:</strong> ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ರೈತರ ಮತ್ತು ಕಾರ್ಮಿಕರ ವಿರೋಧಿ ನೀತಿ ಅನುಸರಿಸುತ್ತಿವೆ ಎಂದು ಆರೋಪಿಸಿ ವಿವಿಧ ಸಂಘಟನೆಗಳು ಕರೆ ನೀಡಿರುವ ಸೆ.28ರ ರಾಜ್ಯ ಬಂದ್ಗೆ ಹಲವು ಸಂಘಟನೆಗಳು, ರಾಜಕೀಯ ಪಕ್ಷಗಳು ಬೆಂಬಲ ನೀಡಿವೆ.</p>.<p>‘ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರ ಜತೆಸೆ.25ರಂದು ನಡೆದ ಮಾತುಕತೆ ವಿಫಲವಾಗಿದ್ದು, ಸೆ.28ಕ್ಕೆ ಕರೆ ನೀಡಲಾಗಿರುವ ಬಂದ್ ಮತ್ತಷ್ಟು ತೀವ್ರವಾಗಿ ನಡೆಯಲಿದೆ. ಅಲ್ಲದೆ, ಮುಖ್ಯಮಂತ್ರಿಯವರಿಗೆ ಕಂಡ ಕಂಡಲ್ಲಿ ಘೇರಾವ್ ಹಾಕಲಾಗುವುದು’ ಎಂದು ರೈತ, ದಲಿತ ಹಾಗೂ ಕಾರ್ಮಿಕರ ಐಕ್ಯ ಹೋರಾಟ ಸಮಿತಿ ಹೇಳಿದೆ.</p>.<p>‘ರೈತರು, ಕಾರ್ಮಿಕ, ದಮನಿತ ಹಾಗೂ ಜನಸಾಮಾನ್ಯರ ಐಕ್ಯ ಹೋರಾಟದ ಮೂಲಕ ರೈತ ವಿರೋಧಿ ಸುಗ್ರೀವಾಜ್ಞೆ–ಮಸೂದೆಗಳನ್ನು ಹಿಂಪಡೆಯಲೇಬೇಕು ಎಂಬ ಸಂದರ್ಭವನ್ನು ಸೃಷ್ಟಿ ಮಾಡುತ್ತೇವೆ’ ಎಂದು ಅದು ಹೇಳಿದೆ.</p>.<p>ರಾಜ್ಯದ ರಸ್ತೆ ಸಾರಿಗೆ ನಿಗಮಗಳ ನೌಕರರ ಫೆಡರೇಷನ್ (ಸಿಐಟಿಯು) ಬಂದ್ಗೆ ಸಂಪೂರ್ಣ ಬೆಂಬಲ ಘೋಷಿಸಿದ್ದು, ಮುಷ್ಕರದಲ್ಲಿ ಪಾಲ್ಗೊಳ್ಳುವಂತೆ ತಮ್ಮ ಸದಸ್ಯರಿಗೆ ಕರೆ ನೀಡಿದೆ.</p>.<p>‘ರೈತರ–ಕಾರ್ಮಿಕರ ಹೋರಾಟಕ್ಕೆ ನೈತಿಕ ಬೆಂಬಲ ನೀಡಿದ್ದೇವೆ. ಹೋಟೆಲ್ಗಳು ಎಂದಿನಂತೆ ಕಾರ್ಯನಿರ್ವಹಿಸಲಿವೆ’ ಎಂದು ಹೋಟೆಲ್ ಮಾಲೀಕರ ಸಂಘ ಹೇಳಿದೆ.</p>.<p><strong>ರಾಜ್ಯ ಬಂದ್: ವಿವಿಧ ಪರೀಕ್ಷೆ ಮುಂದೂಡಿಕೆ<br />ಬೆಂಗಳೂರು: </strong>ರೈತ ಮತ್ತು ಕಾರ್ಮಿಕ ಸಂಘಟನೆಗಳು ಬಂದ್ಗೆ ಕರೆ ನೀಡಿದ ಕಾರಣ ಎಸ್ಸೆಸ್ಸೆಲ್ಸಿ ಪೂರಕ ಪರೀಕ್ಷೆ ಸೇರಿದಂತೆ 28ರಂದು ನಡೆಯಬೇಕಿದ್ದ ಎಲ್ಲ ಪರೀಕ್ಷೆಗಳನ್ನುಮುಂದೂಡಲಾಗಿದೆ.</p>.<p>ಎಸ್ಸೆಸ್ಸೆಲ್ಸಿಯ ವಿಜ್ಞಾನ, ರಾಜ್ಯ ಶಾಸ್ತ್ರ, ಕರ್ನಾಟಕ ಸಂಗೀತ, ಹಿಂದೂಸ್ತಾನಿ ಸಂಗೀತ ವಿಷಯಗಳ ಪರೀಕ್ಷೆ ಸೋಮವಾರ ನಡೆಯಬೇಕಿತ್ತು. ಬೆಂಗಳೂರು ವಿಶ್ವವಿದ್ಯಾಲಯ, ವಿಜಯಪುರದ ಮಹಿಳಾ ವಿಶ್ವವಿದ್ಯಾಲಯ ಸೇರಿದಂತೆ ಹಲವು ವಿಶ್ವವಿದ್ಯಾಲಯಗಳಲ್ಲಿ ಪದವಿ ಮತ್ತು ಸ್ನಾತಕೋತ್ತರ ಪದವಿ ಪರೀಕ್ಷೆಗಳು ನಡೆಯಬೇಕಿತ್ತು.</p>.<p>ಪರೀಕ್ಷೆಗೆ ಹಾಜರಾಗಲು ವಿದ್ಯಾರ್ಥಿಗಳಿಗೆ ಅನನುಕೂಲ ಆಗಬಹುದೆಂಬ ಕಾರಣಕ್ಕೆ ಪರೀಕ್ಷೆಯನ್ನು ಮುಂದೂಡಲಾಗಿದೆ ಎಂದು ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿ ಹಾಗೂ ವಿಶ್ವವಿದ್ಯಾಲಯಗಳು ತಿಳಿಸಿವೆ.</p>.<p class="Briefhead"><strong>ಏನೇನಿರುತ್ತದೆ ?</strong></p>.<p>* ಹಾಲು, ತರಕಾರಿ ಹಾಗೂ ದಿನಸಿ ಅಂಗಡಿಗಳು</p>.<p>* ಆಸ್ಪತ್ರೆಗಳು, ಔಷಧ ಅಂಗಡಿಗಳು</p>.<p>* ಹೋಟೆಲ್ಗಳು, ಮೆಟ್ರೊ ರೈಲು, ವಿಮಾನ ಸೇವೆ</p>.<p>**<br /><strong>ಏನಿರುವುದಿಲ್ಲ ? </strong><br />*ಕೆಎಸ್ಆರ್ಟಿಸಿ, ಬಿಎಂಟಿಸಿ ಬಸ್ ಸೇವೆ ಇರಲಿದೆ ಎಂದು ಸರ್ಕಾರ ಹೇಳಿದೆ. ಆದರೆ, ಈ ನಿಗಮಗಳ ನೌಕರರ ಸಂಘ ಬಂದ್ ಬೆಂಬಲ ವ್ಯಕ್ತಪಡಿಸಿರುವುದರಿಂದ ವ್ಯತ್ಯಯವಾಗುವ ಸಾಧ್ಯತೆ ಇದೆ</p>.<p>*ಆಟೊ–ಟ್ಯಾಕ್ಸಿ ಸೇವೆ ಇರುವುದಿಲ್ಲ</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>