<p>ಬೆಂಗಳೂರು: ‘ಕನ್ನಡಿಗರ ಹಕ್ಕು ಮತ್ತು ಹಿತಾಸಕ್ತಿಗಳ ವಿಷಯದಲ್ಲಿ ಕೇಂದ್ರದ ಮೋದಿ ಸರ್ಕಾರದ ತಾರತಮ್ಯ ಧೋರಣೆಯನ್ನು ಪ್ರಶ್ನಿಸದ ಬಿಜೆಪಿ ನಾಯಕರು ಕರ್ನಾಟಕಕ್ಕೆ ದ್ರೋಹ ಮಾಡುತ್ತಿದ್ದಾರೆ’ ಎಂದು ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲಾ ಟೀಕಿಸಿದರು.</p>.<p>ಸುದ್ದಿಗಾರರ ಜೊತೆ ಭಾನುವಾರ ಮಾತನಾಡಿದ ಅವರು, ‘ಕರ್ನಾಟಕಕ್ಕೆ ಬಿಜೆಪಿ ಹಾನಿಕಾರಕ. ಆ ಪಕ್ಷದವರಿಗೆ ಕನ್ನಡಿಗರ ಮತ ಪಡೆಯುವ ಅರ್ಹತೆ ಇಲ್ಲ’ ಎಂದು ವಾಗ್ದಾಳಿ ನಡೆಸಿದರು.</p>.<p>‘14ನೇ ಮತ್ತು 15ನೇ ಹಣಕಾಸು ಆಯೋಗದಲ್ಲಿ ಕರ್ನಾಟಕಕ್ಕೆ ಬರಬೇಕಿದ್ದ ₹ 79,770 ಕೋಟಿಯನ್ನು ಕೇಂದ್ರ ನೀಡಿಲ್ಲ. ಜಿಎಸ್ಟಿ ಅವೈಜ್ಞಾನಿಕ ಜಾರಿಯಿಂದ ₹59,274, ಹೊಸ ಜಿಎಸ್ಟಿ ಪರಿಷ್ಕರಣೆಯಿಂದ ₹9 ಸಾವಿರ ಕೋಟಿ ಕರ್ನಾಟಕಕ್ಕೆ ನಷ್ಟವಾಗಿದೆ. ಜಲಜೀವನ್ ಮಿಷನ್ ಅಡಿಯಲ್ಲಿ ₹10,889 ಕೋಟಿ ಅನುದಾನವನ್ನು ಬಿಡುಗಡೆ ಮಾಡಿಲ್ಲ’ ಎಂದೂ ಆರೋಪಿಸಿದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260406-51-1562070760</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಬೆಂಗಳೂರು: ‘ಕನ್ನಡಿಗರ ಹಕ್ಕು ಮತ್ತು ಹಿತಾಸಕ್ತಿಗಳ ವಿಷಯದಲ್ಲಿ ಕೇಂದ್ರದ ಮೋದಿ ಸರ್ಕಾರದ ತಾರತಮ್ಯ ಧೋರಣೆಯನ್ನು ಪ್ರಶ್ನಿಸದ ಬಿಜೆಪಿ ನಾಯಕರು ಕರ್ನಾಟಕಕ್ಕೆ ದ್ರೋಹ ಮಾಡುತ್ತಿದ್ದಾರೆ’ ಎಂದು ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲಾ ಟೀಕಿಸಿದರು.</p>.<p>ಸುದ್ದಿಗಾರರ ಜೊತೆ ಭಾನುವಾರ ಮಾತನಾಡಿದ ಅವರು, ‘ಕರ್ನಾಟಕಕ್ಕೆ ಬಿಜೆಪಿ ಹಾನಿಕಾರಕ. ಆ ಪಕ್ಷದವರಿಗೆ ಕನ್ನಡಿಗರ ಮತ ಪಡೆಯುವ ಅರ್ಹತೆ ಇಲ್ಲ’ ಎಂದು ವಾಗ್ದಾಳಿ ನಡೆಸಿದರು.</p>.<p>‘14ನೇ ಮತ್ತು 15ನೇ ಹಣಕಾಸು ಆಯೋಗದಲ್ಲಿ ಕರ್ನಾಟಕಕ್ಕೆ ಬರಬೇಕಿದ್ದ ₹ 79,770 ಕೋಟಿಯನ್ನು ಕೇಂದ್ರ ನೀಡಿಲ್ಲ. ಜಿಎಸ್ಟಿ ಅವೈಜ್ಞಾನಿಕ ಜಾರಿಯಿಂದ ₹59,274, ಹೊಸ ಜಿಎಸ್ಟಿ ಪರಿಷ್ಕರಣೆಯಿಂದ ₹9 ಸಾವಿರ ಕೋಟಿ ಕರ್ನಾಟಕಕ್ಕೆ ನಷ್ಟವಾಗಿದೆ. ಜಲಜೀವನ್ ಮಿಷನ್ ಅಡಿಯಲ್ಲಿ ₹10,889 ಕೋಟಿ ಅನುದಾನವನ್ನು ಬಿಡುಗಡೆ ಮಾಡಿಲ್ಲ’ ಎಂದೂ ಆರೋಪಿಸಿದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260406-51-1562070760</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>