‘ರೆಡ್ಡಿ ಅವರ ಮನೆ ಸುತ್ತಮುತ್ತ ಸೋಮವಾರ ಬಿಗಿ ಭದ್ರತೆ ಕೈಗೊಳ್ಳ ಲಾಗುವುದು. ಜಮೀರ್ ಅವರು ಬಳ್ಳಾರಿಗೆ ಬರಲು ನಮ್ಮ ಅಡ್ಡಿಇಲ್ಲ. ಆದರೆ, ಅನುಮತಿ ಪಡೆಯದೇ ಧರಣಿ, ಪ್ರತಿಭಟನೆ ನಡೆಸಿದರೆ ಕ್ರಮ ಕೈಗೊಳ್ಳಲಾಗುವುದು. ಸಾರ್ವಜನಿಕ ಸ್ಥಳದಲ್ಲಿ ಮಾತ್ರ ಧರಣಿ ನಡೆಸಲು ಅವಕಾಶವಿದೆ. ಶಾಸಕರು ಖುದ್ದಾಗಿ ಬಂದು ಮನವಿ ಸಲ್ಲಿಸಿದರೆ ಅನುಮತಿ ನೀಡುವ ಕುರಿತು ಪರಿಶೀಲಿಸಲಾಗುವುದು’ ಎಂದೂ ಅವರು ಹೇಳಿದರು.