<p><strong>ಬೆಂಗಳೂರು:</strong> ಬಿಜೆಪಿ ರಾಜ್ಯ ಘಟಕದ ನೂತನ ಪದಾಧಿಕಾರಿಗಳ ಪಟ್ಟಿ ಶುಕ್ರವಾರ ಬಿಡುಗಡೆ ಆಗಿದ್ದು, ಪಕ್ಷದ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಬಿ.ಎಲ್.ಸಂತೋಷ್ ಅವರ ಆಪ್ತರಿಗೇ ಸಿಂಹ ಪಾಲು ಲಭಿಸಿದೆ.</p>.<p>ಈ ಹಿಂದೆ ಬಿ.ಎಸ್.ಯಡಿಯೂರಪ್ಪ ಪಕ್ಷದ ಅಧ್ಯಕ್ಷರಾಗಿದ್ದಾಗ ವಿವಿಧ ಕಾರಣಗಳಿಗೆ ಮೂಲೆ ಗುಂಪಾಗಿದ್ದವರಿಗೆ ಈ ಬಾರಿ ಪ್ರಮುಖ ಸ್ಥಾನಗಳನ್ನು ನೀಡಲಾಗಿದೆ. ಯಡಿಯೂರಪ್ಪ ಪುತ್ರ ಬಿ.ವೈ. ವಿಜಯೇಂದ್ರ ಪಕ್ಷದ ಪ್ರಧಾನ ಕಾರ್ಯದರ್ಶಿಯಂತಹ ಪ್ರಮುಖ ಹುದ್ದೆಯ ನಿರೀಕ್ಷೆಯಲ್ಲಿದ್ದರು. ಯುವ ಮೋರ್ಚಾ ಪ್ರಧಾನ ಕಾರ್ಯದರ್ಶಿಯಾಗಿದ್ದ ಅವರಿಗೆ ರಾಜ್ಯಘಟಕದ ಉಪಾಧ್ಯಕ್ಷ ಹುದ್ದೆಗೆ ‘ಬಡ್ತಿ’ ನೀಡಿ, ಅವರ ಆಕಾಂಕ್ಷೆಗೆ ಕತ್ತರಿ ಹಾಕಲಾಗಿದೆ.</p>.<p>ಪಕ್ಷದಲ್ಲಿ ಹೆಚ್ಚು ಅಧಿಕಾರವನ್ನು ಹೊಂದಿರುವ ಪ್ರಧಾನ ಕಾರ್ಯದರ್ಶಿ ಸ್ಥಾನಗಳಿಗೆ ಎಚ್ಚರಿಕೆಯಿಂದ ಆಯ್ಕೆ ಮಾಡಲಾಗಿದೆ. ಇಲ್ಲಿಯೂ ಸಂತೋಷ್ ಪರ ಗುರುತಿಸಿಕೊಂಡವರಿಗೆ ಹೆಚ್ಚಿನ ಆದ್ಯತೆ ಸಿಕ್ಕಿದೆ. ಇದರಿಂದ ಪಕ್ಷದ ಮೇಲೆ ಸಂಪೂರ್ಣ ನಿಯಂತ್ರಣ ಹೊಂದುವುದು ಸಂತೋಷ್ ಲೆಕ್ಕಾಚಾರ ಎಂಬ ವ್ಯಾಖ್ಯಾನ ಪಕ್ಷದಲ್ಲಿ ನಡೆದಿದೆ.</p>.<p>ಶಾಸಕ ಅರವಿಂದ ಲಿಂಬಾವಳಿ, ಸಂಸದರಾದ ಶೋಭಾ ಕರಂದ್ಲಾಜೆ, ಪ್ರತಾಪ ಸಿಂಹ, ದಿವಂಗತ ಅನಂತಕುಮಾರ್ ಪತ್ನಿ ತೇಜಸ್ವಿನಿ ಸೇರಿ 10 ಜನರನ್ನು ಉಪಾಧ್ಯಕ್ಷರನ್ನಾಗಿ ನೇಮಕ ಮಾಡಲಾಗಿದೆ. ಇದೊಂದು ಗೌರವದ ಹುದ್ದೆಯಾಗಿದ್ದು, ಹೆಚ್ಚಿನ ಅಧಿಕಾರ ಇರುವುದಿಲ್ಲ ಎಂಬ ವಿಶ್ಲೇಷಣೆಯೂ ನಡೆದಿದೆ.</p>.<p>ಯಡಿಯೂರಪ್ಪ ವಿರೋಧಿ ಬಣದ ಗುರುತಿಸಿಕೊಂಡ ಕಾರಣಕ್ಕೆ ಹಿಂದೆ ಪಕ್ಷದ ಪ್ರಮುಖ ಹುದ್ದೆಗಳನ್ನು ಕಳೆದುಕೊಂಡಿದ್ದ ಹಲವರಿಗೆ ಆಯಕಟ್ಟಿನ ಹುದ್ದೆ ಸಿಕ್ಕಿದೆ. ಈ ಪೈಕಿ ಎಂ.ಬಿ. ಭಾನುಪ್ರಕಾಶ್, ಎ.ಎಚ್. ಶಿವಯೋಗಿ ಸ್ವಾಮಿ ಅವರಿಗೆ ಪ್ರಕೋಷ್ಠಗಳ ಸಂಯೋಜಕ ಹುದ್ದೆ ನೀಡಲಾಗಿದೆ. ನಿರ್ಮಲ್ ಕುಮಾರ್ ಸುರಾನಾ, ಎಂ.ಬಿ.ನಂದೀಶ್, ಸಿದ್ದರಾಜು, ಮಹೇಶ್ ಟೆಂಗಿನಕಾಯಿ, ತುಳಸಿ ಮುನಿರಾಜುಗೌಡ, ಕೇಶವಪ್ರಸಾದ್ ಇವರಿಗೆ ಈಗ ಅವಕಾಶ ಸಿಕ್ಕಿದ್ದು, ಈ ಎಲ್ಲರೂ ಸಂತೋಷ್ ಜತೆ ಗುರುತಿಸಿಕೊಂಡಿರುವ ಪ್ರಮುಖರು ಎಂದು ಪಕ್ಷದ ಮೂಲಗಳು ಹೇಳಿವೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು:</strong> ಬಿಜೆಪಿ ರಾಜ್ಯ ಘಟಕದ ನೂತನ ಪದಾಧಿಕಾರಿಗಳ ಪಟ್ಟಿ ಶುಕ್ರವಾರ ಬಿಡುಗಡೆ ಆಗಿದ್ದು, ಪಕ್ಷದ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಬಿ.ಎಲ್.ಸಂತೋಷ್ ಅವರ ಆಪ್ತರಿಗೇ ಸಿಂಹ ಪಾಲು ಲಭಿಸಿದೆ.</p>.<p>ಈ ಹಿಂದೆ ಬಿ.ಎಸ್.ಯಡಿಯೂರಪ್ಪ ಪಕ್ಷದ ಅಧ್ಯಕ್ಷರಾಗಿದ್ದಾಗ ವಿವಿಧ ಕಾರಣಗಳಿಗೆ ಮೂಲೆ ಗುಂಪಾಗಿದ್ದವರಿಗೆ ಈ ಬಾರಿ ಪ್ರಮುಖ ಸ್ಥಾನಗಳನ್ನು ನೀಡಲಾಗಿದೆ. ಯಡಿಯೂರಪ್ಪ ಪುತ್ರ ಬಿ.ವೈ. ವಿಜಯೇಂದ್ರ ಪಕ್ಷದ ಪ್ರಧಾನ ಕಾರ್ಯದರ್ಶಿಯಂತಹ ಪ್ರಮುಖ ಹುದ್ದೆಯ ನಿರೀಕ್ಷೆಯಲ್ಲಿದ್ದರು. ಯುವ ಮೋರ್ಚಾ ಪ್ರಧಾನ ಕಾರ್ಯದರ್ಶಿಯಾಗಿದ್ದ ಅವರಿಗೆ ರಾಜ್ಯಘಟಕದ ಉಪಾಧ್ಯಕ್ಷ ಹುದ್ದೆಗೆ ‘ಬಡ್ತಿ’ ನೀಡಿ, ಅವರ ಆಕಾಂಕ್ಷೆಗೆ ಕತ್ತರಿ ಹಾಕಲಾಗಿದೆ.</p>.<p>ಪಕ್ಷದಲ್ಲಿ ಹೆಚ್ಚು ಅಧಿಕಾರವನ್ನು ಹೊಂದಿರುವ ಪ್ರಧಾನ ಕಾರ್ಯದರ್ಶಿ ಸ್ಥಾನಗಳಿಗೆ ಎಚ್ಚರಿಕೆಯಿಂದ ಆಯ್ಕೆ ಮಾಡಲಾಗಿದೆ. ಇಲ್ಲಿಯೂ ಸಂತೋಷ್ ಪರ ಗುರುತಿಸಿಕೊಂಡವರಿಗೆ ಹೆಚ್ಚಿನ ಆದ್ಯತೆ ಸಿಕ್ಕಿದೆ. ಇದರಿಂದ ಪಕ್ಷದ ಮೇಲೆ ಸಂಪೂರ್ಣ ನಿಯಂತ್ರಣ ಹೊಂದುವುದು ಸಂತೋಷ್ ಲೆಕ್ಕಾಚಾರ ಎಂಬ ವ್ಯಾಖ್ಯಾನ ಪಕ್ಷದಲ್ಲಿ ನಡೆದಿದೆ.</p>.<p>ಶಾಸಕ ಅರವಿಂದ ಲಿಂಬಾವಳಿ, ಸಂಸದರಾದ ಶೋಭಾ ಕರಂದ್ಲಾಜೆ, ಪ್ರತಾಪ ಸಿಂಹ, ದಿವಂಗತ ಅನಂತಕುಮಾರ್ ಪತ್ನಿ ತೇಜಸ್ವಿನಿ ಸೇರಿ 10 ಜನರನ್ನು ಉಪಾಧ್ಯಕ್ಷರನ್ನಾಗಿ ನೇಮಕ ಮಾಡಲಾಗಿದೆ. ಇದೊಂದು ಗೌರವದ ಹುದ್ದೆಯಾಗಿದ್ದು, ಹೆಚ್ಚಿನ ಅಧಿಕಾರ ಇರುವುದಿಲ್ಲ ಎಂಬ ವಿಶ್ಲೇಷಣೆಯೂ ನಡೆದಿದೆ.</p>.<p>ಯಡಿಯೂರಪ್ಪ ವಿರೋಧಿ ಬಣದ ಗುರುತಿಸಿಕೊಂಡ ಕಾರಣಕ್ಕೆ ಹಿಂದೆ ಪಕ್ಷದ ಪ್ರಮುಖ ಹುದ್ದೆಗಳನ್ನು ಕಳೆದುಕೊಂಡಿದ್ದ ಹಲವರಿಗೆ ಆಯಕಟ್ಟಿನ ಹುದ್ದೆ ಸಿಕ್ಕಿದೆ. ಈ ಪೈಕಿ ಎಂ.ಬಿ. ಭಾನುಪ್ರಕಾಶ್, ಎ.ಎಚ್. ಶಿವಯೋಗಿ ಸ್ವಾಮಿ ಅವರಿಗೆ ಪ್ರಕೋಷ್ಠಗಳ ಸಂಯೋಜಕ ಹುದ್ದೆ ನೀಡಲಾಗಿದೆ. ನಿರ್ಮಲ್ ಕುಮಾರ್ ಸುರಾನಾ, ಎಂ.ಬಿ.ನಂದೀಶ್, ಸಿದ್ದರಾಜು, ಮಹೇಶ್ ಟೆಂಗಿನಕಾಯಿ, ತುಳಸಿ ಮುನಿರಾಜುಗೌಡ, ಕೇಶವಪ್ರಸಾದ್ ಇವರಿಗೆ ಈಗ ಅವಕಾಶ ಸಿಕ್ಕಿದ್ದು, ಈ ಎಲ್ಲರೂ ಸಂತೋಷ್ ಜತೆ ಗುರುತಿಸಿಕೊಂಡಿರುವ ಪ್ರಮುಖರು ಎಂದು ಪಕ್ಷದ ಮೂಲಗಳು ಹೇಳಿವೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>