ಬೆಂಗಳೂರು: ಮಾಜಿ ಮುಖ್ಯಮಂತ್ರಿ ಹಾಗೂ ವಿರೋಧ ಪಕ್ಷದ ನಾಯಕಸಿದ್ದರಾಮಯ್ಯ ಅವರು, 'ಪ್ರಳಯ ಆದರೂ ಪಕ್ಷ ಬಿಟ್ಟು ಹೋದವರನ್ನು ಮತ್ತೆ ಸೇರಿಸಿಕೊಳ್ಳುವುದಿಲ್ಲ' ಎಂದು ಹೇಳುತ್ತಾರೆ. ಆದರೆ, ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರು, 'ನಾನು ಅಧ್ಯಕ್ಷನಾಗಿ ಹೇಳುತ್ತಿದ್ದೇನೆ, ಪಕ್ಷ ಸೇರುವವರು ಅರ್ಜಿ ಸಲ್ಲಿಸಿ' ಎನ್ನುತ್ತಾರೆ. ಎತ್ತು ಏರಿಗೆ, ಕೋಣ ನೀರಿಗೆ, ಕಾಂಗ್ರೆಸ್ ಬೀದಿಗೆ ಬಿದ್ದಿದೆ ಎಂದು ಬಿಜೆಪಿ ವ್ಯಂಗ್ಯವಾಡಿದೆ.