ಶನಿವಾರ, 18 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

Karnataka Bjp | ಯಡಿಯೂರಪ್ಪ ನನ್ನ ಪರ ಲಾಬಿ ಮಾಡುತ್ತಿಲ್ಲ: ವಿಜಯೇಂದ್ರ

Published 25 ಅಕ್ಟೋಬರ್ 2023, 13:42 IST
Last Updated 25 ಅಕ್ಟೋಬರ್ 2023, 13:42 IST
ಅಕ್ಷರ ಗಾತ್ರ

ಮೈಸೂರು: ‘ತಂದೆ ಬಿ.ಎಸ್. ಯಡಿಯೂರಪ್ಪ ಅವರು ನನ್ನನ್ನು ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷರನ್ನಾಗಿ ಮಾಡಲು ಲಾಬಿ ನಡೆಸುತ್ತಿದ್ದಾರೆ ಎನ್ನುವುದೆಲ್ಲವೂ ಸುಳ್ಳು’ ಎಂದು ಆ ಪಕ್ಷದ ರಾಜ್ಯ ಘಟಕದ ಉಪಾಧ್ಯಕ್ಷ ಬಿ.ವೈ. ವಿಜಯೇಂದ್ರ ಹೇಳಿದರು.

ಇಲ್ಲಿನ ಸುತ್ತೂರು ಮಠಕ್ಕೆ ಬುಧವಾರ ಭೇಟಿ ನೀಡಿದ್ದ ವೇಳೆ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ‘ಒಂದು ವೇಳೆ ನನ್ನನ್ನು ಅಧ್ಯಕ್ಷರನ್ನಾಗಿ ನೇಮಿಸಿದರೆ ಅದು ಯಡಿಯೂರಪ್ಪನವರ ಮಗ ಎಂಬ ಕಾರಣಕ್ಕಲ್ಲ. ಎಲ್ಲವನ್ನೂ ಹೈಕಮಾಂಡ್ ನಿರ್ಧರಿಸುತ್ತದೆ’ ಎಂದರು.

‘ಶೋಭಾ ಕರಂದ್ಲಾಜೆ ಅವರನ್ನು ರಾಜ್ಯ ಘಟಕದ ಅಧ್ಯಕ್ಷೆಯನ್ನಾಗಿ ಮಾಡಿದರೆ, ಬಸನಗೌಡ ಪಾಟೀಲ ಯತ್ನಾಳ ಅವರನ್ನು ವಿಧಾನಸಭೆ ವಿರೋಧ ಪಕ್ಷದ ನಾಯಕರನ್ನಾಗಿ ನೇಮಿಸಿದರೆ ಅದಕ್ಕೆ ಯಡಿಯೂರಪ್ಪ ಅವರ ವಿರೋಧವಿದೆ ಎಂಬುದು ಊಹಾಪೋಹ. ಇಂತಹ ಯಾವ ಬೆಳವಣಿಗೆಯಲ್ಲೂ ಅವರು ಭಾಗವಹಿಸಿಲ್ಲ. ಯಾರನ್ನೇ ನೇಮಿಸಿದರೂ ಅದನ್ನು ಎಲ್ಲರೂ ಒಪ್ಪಿಕೊಂಡೇ ಕೆಲಸ ಮಾಡುತ್ತಾರೆ’ ಎಂದು ಹೇಳಿದರು.

‘ನಾನು ಸುತ್ತೂರು ಮಠಕ್ಕೆ ಭೇಟಿ ನೀಡಿರುವುದಕ್ಕೂ, ರಾಜ್ಯ ಘಟಕದ ಅಧ್ಯಕ್ಷರ ನೇಮಕದ ವಿಷಯಕ್ಕೂ ಸಂಬಂಧವಿಲ್ಲ’ ಎಂದು ಸ್ಪಷ್ಟಪಡಿಸಿದರು.

‘ಡಿ.ಕೆ. ಶಿವಕುಮಾರ್‌ ಅವರ ರಿಯಲ್‌ ಎಸ್ಟೇಟ್ ಉದ್ಯಮ ವಿಸ್ತರಣೆಯಾಗಬೇಕು. ಅದಕ್ಕಾಗಿ ರಾಮನಗರವನ್ನು ಬದಲಾಯಿಸುತ್ತಿದ್ದಾರೆ. ಅದಕ್ಕೆ ಏಕೆ ವಿರೋಧ’ ಎಂದು ವ್ಯಂಗ್ಯವಾಗಿ ಪ್ರತಿಕ್ರಿಯಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT