ಬೆಂಗಳೂರು:ಪ್ರಾಥಮಿಕ, ಪ್ರೌಢ ಶಾಲೆಗಳು, ಪದವಿ ಪೂರ್ವ ಕಾಲೇಜುಗಳ ಕಟ್ಟಡ ದುರಸ್ತಿಗೆ ₹ 150 ಕೋಟಿ ಮೀಸಲಿಟ್ಟು, ಅಂಗನವಾಡಿ ಕೇಂದ್ರಗಳನ್ನು ಪ್ರಾಥಮಿಕ ಶಾಲಾ ಆವರಣಕ್ಕೆ ಸ್ಥಳಾಂತರಿಸಿ ‘ಬಾಲಸ್ನೇಹಿ ಕೇಂದ್ರ’ಗಳನ್ನಾಗಿ ಬಲವರ್ಧಿಸಲು ಚಿಂತನೆ ನಡೆಸಿರುವುದಾಗಿ ಹೇಳಿರುವ ರಾಜ್ಯ ಸರ್ಕಾರ, 28,847 ಸರ್ಕಾರಿ ಮತ್ತು ಅನುದಾನಿತ ಶಾಲೆಗಳಿಗೆ ಬೀಗ ಹಾಕುವ ಸೂಚನೆಯನ್ನೂ ಬಜೆಟ್ನಲ್ಲಿ ನೀಡಿದೆ!