<p><strong>ಬೆಂಗಳೂರು:</strong> ಮಾತೃಶ್ರೀ ಯೋಜನೆ ಅಡಿಯಲ್ಲಿ ನೀಡುತ್ತಿದ್ದ ₹ 1000 ಸಹಾಯಧನವನ್ನು ₹ 2000ಕ್ಕೆ ಏರಿಕೆ ಮಾಡಲಾಗಿದ್ದು ಮಹಿಳೆಯರು, ಅಂಗವಿಕಲರು ಮತ್ತು ಸಮಾಜ ಕಲ್ಯಾಣಕ್ಕೆ ಹೆಚ್ಚಿನ ಅನುದಾನ ನೀಡಲಾಗಿದೆ.</p>.<p>ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ವೇತನವನ್ನು ಕ್ರಮವಾಗಿ ₹ 500 ಮತ್ತು 250 ರೂಪಾಯಿಗಳನ್ನು ಹೆಚ್ಚಳ ಮಾಡಲಾಗಿದೆ. ಇದು 2019ರ ನವೆಂಬರ್ ತಿಂಗಳಿಂದ ಜಾರಿಗೆ ಬರಲಿದೆ ಎಂದು ಮುಖ್ಯಮಂತ್ರಿಗಳು ತಿಳಿಸಿದ್ದಾರೆ.</p>.<p>ಕರ್ಮಚಾರಿಗಳಿಗೆ ತರಬೇತಿ ನೀಡುವ ಸಲುವಾಗಿ ಕಲುಬುರ್ಗಿ, ಚಿತ್ರದುರ್ಗ, ಮೈಸೂರು, ಬಳ್ಳಾರಿ ಮತ್ತು ಬೆಳಗಾವಿಯಲ್ಲಿ ತರಬೇತಿ ಕೇಂದ್ರಗಳನ್ನು ಸ್ಥಾಪಿಸಲು ₹ 5 ಕೋಟಿ ತೆಗೆದಿರಿಸಲಾಗಿದೆ. ನಗರ ಪ್ರದೇಶದಲ್ಲಿ 100 ಅಂಗನವಾಡಿ ಕೇಂದ್ರಗಳ ಸ್ಥಾಪನೆ ಹಾಗೂ ರಾಜ್ಯದ ಹಲವೆಡೆ 1000 ಅಂಗನವಾಡಿ ಕೇಂದ್ರಗಳ ಕಟ್ಟಡಗಳನ್ನು ದುರಸ್ತಿ ಮಾಡುವುದಕ್ಕೆ ₹10 ಕೋಟಿ ಮೀಸಲಿರಿಸಲಾಗಿದೆ.</p>.<p>ಚಿಕ್ಕಮಗಳೂರಿನಲ್ಲಿ ಹೊಸ ಬಾಲ ಮಂದಿರ ಸ್ಥಾಪಿಸಲಾಗುವುದು. ರಾಜ್ಯದ 10 ಜಿಲ್ಲೆಗಳಲ್ಲಿ ಮಕ್ಕಳ ಸ್ನೇಹಿ ನ್ಯಾಯಾಲಯ ರೂಪಿಸಲು 3 ಕೋಟಿ ಅನುದಾನ ನೀಡಲಾಗುವುದು ಎಂದು ಬಜೆಟ್ನಲ್ಲಿ ಹೇಳಲಾಗಿದೆ.</p>.<p>ದಮನಿತ ಮಹಿಳೆಯರ ಕಲ್ಯಾಣಕ್ಕಾಗಿ ತರಬೇತಿ ಕೇಂದ್ರಗಳ ಸ್ಥಾಪನೆ ಹಾಗೂ 1000 ಮಹಿಳೆಯರಿಗೆ ಉತ್ಪಾದನಾ ಘಟಕಗಳನ್ನು ಸ್ಥಾಪಿಸಲು ₹ 11 ಕೋಟಿ ವೆಚ್ಚ ಮಾಡಲಾಗುವುದು ಎಂದು ಬಜೆಟ್ನಲ್ಲಿ ಹೇಳಲಾಗಿದೆ.</p>.<p><strong>ಅಂಗವಿಕಲರ ಕಲ್ಯಾಣ...</strong></p>.<p>ಅರ್ಥೋಟಿಕ್ಸ್ ಕೋರ್ಸ್ ಹಾಗೂ ವಿಶೇಷ ಮಕ್ಕಳ ಶಿಕ್ಷಕರತರಬೇತಿ ಕೇಂದ್ರಗಳಲ್ಲಿ ಶ್ರಮಣ ದೋಷಹಾಗೂ ಬುದ್ಧಿಮಾಂದ್ಯಮಕ್ಕಳ ಶಿಕ್ಷಕರ ತರಬೇತಿ ಕಾರ್ಯಕ್ರಮವನ್ನು ಆಯೋಜಿಸುವುದಾಗಿ ಬಜೆಟ್ನಲ್ಲಿ ಹೇಳಲಾಗಿದೆ.</p>.<p>2000 ಅಂಗವಿಕಲರಿಗೆ ಯಂತ್ರ ಚಾಲಿತದ್ವಿಚಕ್ರ ವಾಹನ ನೀಡಲು 15 ಕೋಟಿ ರೂಪಾಯಿ ಮೀಸಲಿರಿಸಲಾಗಿದೆ. ಅಪಘಾತದಿಂದ ಬೆನ್ನುಹುರಿ ತೊಂದರೆ ಅನುಭವಿಸುತ್ತಿರುವವರಪುನರ್ವಸತಿಗಾಗಿ 2 ಕೋಟಿ ಮೀಸಲಿಡಲಾಗಿದೆ.</p>.<p><strong>ಸಮಾಜ ಕಲ್ಯಾಣ</strong></p>.<p>ಪರಿಶಿಷ್ಟಜಾತಿ ಹಾಗೂ ಗಿರಿಜನ ಉಪಯೋಜನೆಗೆ ₹ 30 ಕೋಟಿ ಅನುದಾನ ಮೀಸಲಿಡಲಾಗಿದೆ. ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಹಿಂದುಳಿದ ವರ್ಗ, ಅಲ್ಪ ಸಂಖ್ಯಾತರು ಹಾಗೂ ಸಾಮಾನ್ಯ ವರ್ಗದವರ ಸಂಯುಕ್ತ ವಿದ್ಯಾರ್ಥಿ ನಿಲಯಕ್ಕೆ 100 ಕೋಟಿ ಅನುದಾನ ನೀಡಲಾಗಿದೆ. ಇಂತಹ ವಿದ್ಯಾರ್ಥಿ ನಿಲಯಗಳನ್ನು ಪ್ರತಿ ಜಿಲ್ಲೆಗೊಂದು ಸ್ಥಾಪನೆ ಮಾಡಲಾಗುವುದು.</p>.<p>ಸಂವಿಧಾನ ಕುರಿತಂತೆ ಜನರಲ್ಲಿ ಜಾಗೃತಿ ಮೂಡಿಸಲು ಬೆಂಗಳೂರು ನಗರದಲ್ಲಿ ₹ 30 ಕೋಟಿ ವೆಚ್ಚದಲ್ಲಿ ಮ್ಯೂಸಿಯಂ ಸ್ಥಾಪನೆ ಮಾಡಲಾಗುವುದು.</p>.<p><strong>ಹಿಂದುಳಿದ ವರ್ಗಗಳಕಲ್ಯಾಣ..</strong></p>.<p>ಬಾಡಿಗೆ ಕಟ್ಟಡಗಳಲ್ಲಿರುವ ಹಿಂದುಳಿದ ಕಲ್ಯಾಣ ವರ್ಗಗಳ ವಸತಿನಿಲಯಗಳಿಗೆ ಸ್ವಂತ ಕಟ್ಟಡಕ್ಕಾಗಿ ನೂರು ಕೋಟಿ ಅನುದಾನ ನೀಡಲಾಗಿದೆ, ಅಲೆಮಾರಿ ಜನಾಂಗದ ಸರ್ವತೋಮುಖ ಅಭಿವೃದ್ಧಿಗೆ 25 ಕೋಟಿ ನೀಡಲಾಗಿದೆ.</p>.<p>ವಿಶ್ವಕರ್ಮ ಹಾಗೂ ಧೋಬಿ ಸಮುದಾಯದ ಅಭಿವೃದ್ಧಿ ನಿಗಮಕ್ಕೆ 25 ಕೋಟಿ ಅನುದಾನ, ಸವಿತಾ ಸಮಾಜ ಅಭಿವೃದ್ಧಿನಿಗಮ ಸ್ಥಾಪನೆಗೆ ಸರ್ಕಾರ ನಿರ್ಧಾರ ಮಾಡಿದೆ ಎಂದು ಪ್ರಕಟಿಸಲಾಗಿದೆ. ಸಮಾಜದಲ್ಲಿ ತೀರ ಹಿಂದುಳಿದಿರುವ ಸಮುದಾಯಗಳ ಅಭಿವೃದ್ಧಿಗೆ ಆದ್ಯತೆ ನೀಡಲಾಗುವುದು.</p>.<p><strong>ಅಲ್ಪಸಂಖ್ಯಾತರ ಕಲ್ಯಾಣ...</strong></p>.<p>ಅಲ್ಪಸಂಖ್ಯಾತರು ವಾಸ ಮಾಡುವ ಪ್ರದೇಶಗಳನ್ನು ₹400 ಕೋಟಿ ವೆಚ್ಚದಲ್ಲಿ ಅಭಿವೃದ್ಧಿಪಡಿಸಲಾಗುವುದುಎಂದು ಬಜೆಟ್ನಲ್ಲಿ ಹೇಳಲಾಗಿದೆ.</p>.<p>ಮೌಲಾನಾ ಆಜಾದ್ ಟ್ರಸ್ಟ್ ಸ್ಥಾಪನೆಗೆ ₹ 25 ಕೋಟಿ ಅನುದಾನ, ದಾವಣಗೆರೆ, ತುಮಕೂರು, ಗದಗ, ಕಲುಬುರ್ಗಿಯಲ್ಲಿ ಮೊರಾರ್ಜಿ ಮುಸ್ಲಿಂ ಹೆಣ್ಣು ಮಕ್ಕಳ ವಸತಿ ಶಾಲೆ ಸ್ಥಾಪನೆ ಮಾಡಲಾಗುವುದು.</p>.<p>ಬೀದರ್ ಮತ್ತು ಬೆಂಗಳೂರಿನ ಗುರುದ್ವಾರಕ್ಕೆ 35 ಕೋಟಿ ಅನುದಾನ ಹಾಗೂ ಕ್ರೈಸ್ತರ ಅಭಿವೃದ್ಧಿಗಾಗಿ 200 ಕೋಟಿ ಮೀಸಲಿಡಲಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು:</strong> ಮಾತೃಶ್ರೀ ಯೋಜನೆ ಅಡಿಯಲ್ಲಿ ನೀಡುತ್ತಿದ್ದ ₹ 1000 ಸಹಾಯಧನವನ್ನು ₹ 2000ಕ್ಕೆ ಏರಿಕೆ ಮಾಡಲಾಗಿದ್ದು ಮಹಿಳೆಯರು, ಅಂಗವಿಕಲರು ಮತ್ತು ಸಮಾಜ ಕಲ್ಯಾಣಕ್ಕೆ ಹೆಚ್ಚಿನ ಅನುದಾನ ನೀಡಲಾಗಿದೆ.</p>.<p>ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ವೇತನವನ್ನು ಕ್ರಮವಾಗಿ ₹ 500 ಮತ್ತು 250 ರೂಪಾಯಿಗಳನ್ನು ಹೆಚ್ಚಳ ಮಾಡಲಾಗಿದೆ. ಇದು 2019ರ ನವೆಂಬರ್ ತಿಂಗಳಿಂದ ಜಾರಿಗೆ ಬರಲಿದೆ ಎಂದು ಮುಖ್ಯಮಂತ್ರಿಗಳು ತಿಳಿಸಿದ್ದಾರೆ.</p>.<p>ಕರ್ಮಚಾರಿಗಳಿಗೆ ತರಬೇತಿ ನೀಡುವ ಸಲುವಾಗಿ ಕಲುಬುರ್ಗಿ, ಚಿತ್ರದುರ್ಗ, ಮೈಸೂರು, ಬಳ್ಳಾರಿ ಮತ್ತು ಬೆಳಗಾವಿಯಲ್ಲಿ ತರಬೇತಿ ಕೇಂದ್ರಗಳನ್ನು ಸ್ಥಾಪಿಸಲು ₹ 5 ಕೋಟಿ ತೆಗೆದಿರಿಸಲಾಗಿದೆ. ನಗರ ಪ್ರದೇಶದಲ್ಲಿ 100 ಅಂಗನವಾಡಿ ಕೇಂದ್ರಗಳ ಸ್ಥಾಪನೆ ಹಾಗೂ ರಾಜ್ಯದ ಹಲವೆಡೆ 1000 ಅಂಗನವಾಡಿ ಕೇಂದ್ರಗಳ ಕಟ್ಟಡಗಳನ್ನು ದುರಸ್ತಿ ಮಾಡುವುದಕ್ಕೆ ₹10 ಕೋಟಿ ಮೀಸಲಿರಿಸಲಾಗಿದೆ.</p>.<p>ಚಿಕ್ಕಮಗಳೂರಿನಲ್ಲಿ ಹೊಸ ಬಾಲ ಮಂದಿರ ಸ್ಥಾಪಿಸಲಾಗುವುದು. ರಾಜ್ಯದ 10 ಜಿಲ್ಲೆಗಳಲ್ಲಿ ಮಕ್ಕಳ ಸ್ನೇಹಿ ನ್ಯಾಯಾಲಯ ರೂಪಿಸಲು 3 ಕೋಟಿ ಅನುದಾನ ನೀಡಲಾಗುವುದು ಎಂದು ಬಜೆಟ್ನಲ್ಲಿ ಹೇಳಲಾಗಿದೆ.</p>.<p>ದಮನಿತ ಮಹಿಳೆಯರ ಕಲ್ಯಾಣಕ್ಕಾಗಿ ತರಬೇತಿ ಕೇಂದ್ರಗಳ ಸ್ಥಾಪನೆ ಹಾಗೂ 1000 ಮಹಿಳೆಯರಿಗೆ ಉತ್ಪಾದನಾ ಘಟಕಗಳನ್ನು ಸ್ಥಾಪಿಸಲು ₹ 11 ಕೋಟಿ ವೆಚ್ಚ ಮಾಡಲಾಗುವುದು ಎಂದು ಬಜೆಟ್ನಲ್ಲಿ ಹೇಳಲಾಗಿದೆ.</p>.<p><strong>ಅಂಗವಿಕಲರ ಕಲ್ಯಾಣ...</strong></p>.<p>ಅರ್ಥೋಟಿಕ್ಸ್ ಕೋರ್ಸ್ ಹಾಗೂ ವಿಶೇಷ ಮಕ್ಕಳ ಶಿಕ್ಷಕರತರಬೇತಿ ಕೇಂದ್ರಗಳಲ್ಲಿ ಶ್ರಮಣ ದೋಷಹಾಗೂ ಬುದ್ಧಿಮಾಂದ್ಯಮಕ್ಕಳ ಶಿಕ್ಷಕರ ತರಬೇತಿ ಕಾರ್ಯಕ್ರಮವನ್ನು ಆಯೋಜಿಸುವುದಾಗಿ ಬಜೆಟ್ನಲ್ಲಿ ಹೇಳಲಾಗಿದೆ.</p>.<p>2000 ಅಂಗವಿಕಲರಿಗೆ ಯಂತ್ರ ಚಾಲಿತದ್ವಿಚಕ್ರ ವಾಹನ ನೀಡಲು 15 ಕೋಟಿ ರೂಪಾಯಿ ಮೀಸಲಿರಿಸಲಾಗಿದೆ. ಅಪಘಾತದಿಂದ ಬೆನ್ನುಹುರಿ ತೊಂದರೆ ಅನುಭವಿಸುತ್ತಿರುವವರಪುನರ್ವಸತಿಗಾಗಿ 2 ಕೋಟಿ ಮೀಸಲಿಡಲಾಗಿದೆ.</p>.<p><strong>ಸಮಾಜ ಕಲ್ಯಾಣ</strong></p>.<p>ಪರಿಶಿಷ್ಟಜಾತಿ ಹಾಗೂ ಗಿರಿಜನ ಉಪಯೋಜನೆಗೆ ₹ 30 ಕೋಟಿ ಅನುದಾನ ಮೀಸಲಿಡಲಾಗಿದೆ. ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಹಿಂದುಳಿದ ವರ್ಗ, ಅಲ್ಪ ಸಂಖ್ಯಾತರು ಹಾಗೂ ಸಾಮಾನ್ಯ ವರ್ಗದವರ ಸಂಯುಕ್ತ ವಿದ್ಯಾರ್ಥಿ ನಿಲಯಕ್ಕೆ 100 ಕೋಟಿ ಅನುದಾನ ನೀಡಲಾಗಿದೆ. ಇಂತಹ ವಿದ್ಯಾರ್ಥಿ ನಿಲಯಗಳನ್ನು ಪ್ರತಿ ಜಿಲ್ಲೆಗೊಂದು ಸ್ಥಾಪನೆ ಮಾಡಲಾಗುವುದು.</p>.<p>ಸಂವಿಧಾನ ಕುರಿತಂತೆ ಜನರಲ್ಲಿ ಜಾಗೃತಿ ಮೂಡಿಸಲು ಬೆಂಗಳೂರು ನಗರದಲ್ಲಿ ₹ 30 ಕೋಟಿ ವೆಚ್ಚದಲ್ಲಿ ಮ್ಯೂಸಿಯಂ ಸ್ಥಾಪನೆ ಮಾಡಲಾಗುವುದು.</p>.<p><strong>ಹಿಂದುಳಿದ ವರ್ಗಗಳಕಲ್ಯಾಣ..</strong></p>.<p>ಬಾಡಿಗೆ ಕಟ್ಟಡಗಳಲ್ಲಿರುವ ಹಿಂದುಳಿದ ಕಲ್ಯಾಣ ವರ್ಗಗಳ ವಸತಿನಿಲಯಗಳಿಗೆ ಸ್ವಂತ ಕಟ್ಟಡಕ್ಕಾಗಿ ನೂರು ಕೋಟಿ ಅನುದಾನ ನೀಡಲಾಗಿದೆ, ಅಲೆಮಾರಿ ಜನಾಂಗದ ಸರ್ವತೋಮುಖ ಅಭಿವೃದ್ಧಿಗೆ 25 ಕೋಟಿ ನೀಡಲಾಗಿದೆ.</p>.<p>ವಿಶ್ವಕರ್ಮ ಹಾಗೂ ಧೋಬಿ ಸಮುದಾಯದ ಅಭಿವೃದ್ಧಿ ನಿಗಮಕ್ಕೆ 25 ಕೋಟಿ ಅನುದಾನ, ಸವಿತಾ ಸಮಾಜ ಅಭಿವೃದ್ಧಿನಿಗಮ ಸ್ಥಾಪನೆಗೆ ಸರ್ಕಾರ ನಿರ್ಧಾರ ಮಾಡಿದೆ ಎಂದು ಪ್ರಕಟಿಸಲಾಗಿದೆ. ಸಮಾಜದಲ್ಲಿ ತೀರ ಹಿಂದುಳಿದಿರುವ ಸಮುದಾಯಗಳ ಅಭಿವೃದ್ಧಿಗೆ ಆದ್ಯತೆ ನೀಡಲಾಗುವುದು.</p>.<p><strong>ಅಲ್ಪಸಂಖ್ಯಾತರ ಕಲ್ಯಾಣ...</strong></p>.<p>ಅಲ್ಪಸಂಖ್ಯಾತರು ವಾಸ ಮಾಡುವ ಪ್ರದೇಶಗಳನ್ನು ₹400 ಕೋಟಿ ವೆಚ್ಚದಲ್ಲಿ ಅಭಿವೃದ್ಧಿಪಡಿಸಲಾಗುವುದುಎಂದು ಬಜೆಟ್ನಲ್ಲಿ ಹೇಳಲಾಗಿದೆ.</p>.<p>ಮೌಲಾನಾ ಆಜಾದ್ ಟ್ರಸ್ಟ್ ಸ್ಥಾಪನೆಗೆ ₹ 25 ಕೋಟಿ ಅನುದಾನ, ದಾವಣಗೆರೆ, ತುಮಕೂರು, ಗದಗ, ಕಲುಬುರ್ಗಿಯಲ್ಲಿ ಮೊರಾರ್ಜಿ ಮುಸ್ಲಿಂ ಹೆಣ್ಣು ಮಕ್ಕಳ ವಸತಿ ಶಾಲೆ ಸ್ಥಾಪನೆ ಮಾಡಲಾಗುವುದು.</p>.<p>ಬೀದರ್ ಮತ್ತು ಬೆಂಗಳೂರಿನ ಗುರುದ್ವಾರಕ್ಕೆ 35 ಕೋಟಿ ಅನುದಾನ ಹಾಗೂ ಕ್ರೈಸ್ತರ ಅಭಿವೃದ್ಧಿಗಾಗಿ 200 ಕೋಟಿ ಮೀಸಲಿಡಲಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>