<p>ಬೆನ್ನಿಗೆ ನಿಂತ ಸಮುದಾಯ ‘ಅಹಿಂದ’ವನ್ನು (ಅಲ್ಪಸಂಖ್ಯಾತ, ಹಿಂದುಳಿದ, ದಲಿತ) ಮುಖ್ಯಮಂತ್ರಿ ಸಿದ್ದರಾಮಯ್ಯ ಈ ಬಾರಿಯೂ ‘ಕೈ’ಬಿಟ್ಟಿಲ್ಲ. ಸಾಕಷ್ಟು ಯೋಜನೆ, ಭರಪೂರ ಕೊಡುಗೆಗಳ ಮೂಲಕ ದಲಿತ, ಶೋಷಿತ ಪರ ಬದ್ಧತೆ ಮುಂದುವರಿಸಿದ್ದಾರೆ. ಮುಂಬರುವ ಸ್ಥಳೀಯ ಸಂಸ್ಥೆಗಳ ಚುನಾವಣೆಗೆ ಮತ ಬ್ಯಾಂಕ್ ಭದ್ರಪಡಿಸಿಕೊಳ್ಳುವ ತಂತ್ರಗಾರಿಕೆಯೂ ಈ ‘ಹಂಚಿಕೆ’ ಸೂತ್ರದಲ್ಲಿ ಇದ್ದಂತಿದೆ.</p><p>ಎರಡನೇ ಬಾರಿಗೆ ಆಡಳಿತ ಚುಕ್ಕಾಣಿ ಹಿಡಿದು ಸಾಗಿದ ಮೂರು ವರ್ಷಗಳಲ್ಲಿ ಎಸ್ಸಿ, ಎಸ್ಟಿ, ಹಿಂದುಳಿದ ವರ್ಗ, ಅಲ್ಪಸಂಖ್ಯಾತರ ಕಲ್ಯಾಣದ ಗುರಿ ನೆಟ್ಟು ಶಿಕ್ಷಣ, ಮಾನವ ಸಂಪನ್ಮೂಲ, ಕೌಶಲ, ಜೀವನೋಪಾಯ, ಮೂಲಸೌಕರ್ಯ ಹೀಗೆ ನಾನಾ ವಲಯಗಳಲ್ಲಿ ಹಲವು ಕಾರ್ಯಕ್ರಮಗಳನ್ನು ಜಾರಿಗೆ ತಂದಿದ್ದರು. ಆ ಪಥದಲ್ಲಿಯೇ ಸಾಗಿದ್ದಾರೆ. </p><p>ಪರಿಶಿಷ್ಟ ಜಾತಿ ಉಪಯೋಜನೆ (ಎಸ್ಸಿಎಸ್ಪಿ) ಮತ್ತು ಬುಡಕಟ್ಟು ಉಪಯೋಜನೆ (ಟಿಎಸ್ಪಿ) ಅಡಿ 2025–26ನೇ ಸಾಲಿನಲ್ಲಿ ₹ 42,018 ಕೋಟಿ ಮೀಸಲಿಟ್ಟಿದ್ದ ಮುಖ್ಯಮಂತ್ರಿ, ಈ ಬಾರಿ ಮೊತ್ತವನ್ನು ₹ 44,632 ಕೋಟಿಗೆ ಹಿಗ್ಗಿಸಿದ್ದಾರೆ. </p><p>ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮದಿಂದ 2013–14ರಿಂದ 2018–19ರ ಅವಧಿಯಲ್ಲಿ ನೀಡಲಾದ ಸಾಲಗಳ ಮೇಲಿನ ಬಡ್ಡಿ ಮನ್ನಾಗೆ ಒಟಿಸ್ ಯೋಜನೆಗೆ ಸಚಿವ ಸಂಪುಟ ಇತ್ತೀಚೆಗೆ ಅನುಮೋದನೆ ನೀಡಿತ್ತು. ಅಲ್ಪಸಂಖ್ಯಾತರ ಬಡ್ಡಿ ಮನ್ನಾ ಮಾಡಿ ಸರ್ಕಾರ ತುಷ್ಠೀಕರಣದ ರಾಜಕಾರಣ ನಡೆಸುತ್ತಿದೆ ಎಂದು ವಿರೋಧ ಪಕ್ಷಗಳು ಕಿಡಿಕಾರಿದ್ದವು. ಈ ಆರೋಪಕ್ಕೆ ಉತ್ತರ ನೀಡಿರುವ ಸಿದ್ದರಾಮಯ್ಯ, ಸಮಾಜ ಕಲ್ಯಾಣ, ಪರಿಶಿಷ್ಟ ಪಂಗಡಗಳ ಕಲ್ಯಾಣ, ಹಿಂದುಳಿದ ವರ್ಗಗಳ ಕಲ್ಯಾಣ ಹಾಗೂ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಗಳಡಿ ಇರುವ ನಿಗಮಗಳಿಂದ 2021ರ ಮಾರ್ಚ್ 31ರವರೆಗೆ ಪಡೆದ ಸಾಲದ ಅಸಲು ಪಾವತಿ ಮಾಡುವವರಿಗೆ ಬಡ್ಡಿ ಮನ್ನಾ ಮಾಡಿ ಒಟಿಎಸ್ ಜಾರಿಗೆ ತರುವುದಾಗಿ ಪ್ರಕಟಿಸಿದ್ದಾರೆ. ಈ ನಿಗಮಗಳಲ್ಲಿ ಮೈಕ್ರೊ ಕ್ರೆಡಿಟ್ ಪ್ರೇರಣಾ ಯೋಜನೆಯಡಿ ಸಾಲ ಮತ್ತು ಸಹಾಯಧನ ಪಡೆದ ಮಹಿಳಾ ಸ್ವ-ಸಹಾಯ ಸಂಘಗಳು ಸಾಲವನ್ನು ಸಕಾಲದಲ್ಲಿ ಮರುಪಾವತಿಸಿದ ಸಂಘಗಳಿಗೆ ಎರಡನೇ ಬಾರಿಗೆ ಸಾಲ ಮತ್ತು ಸಹಾಯಧನ ಮಂಜೂರು ಮಾಡುವುದಾಗಿ ಹೇಳಿದ್ದಾರೆ.</p><p>ಪರಿಶಿಷ್ಟ ಜಾತಿಯಲ್ಲಿ ಒಳ ಮೀಸಲಾತಿ ಹಂಚಿಕೆಯಲ್ಲಿ ಅಲೆಮಾರಿಗಳು, ಸೂಕ್ಷ್ಮ ಮತ್ತು ಅತಿ ಸೂಕ್ಷ್ಮ ಜಾತಿಗಳಿಗೆ ಅನ್ಯಾಯವಾಗಿದೆ ಎಂಬ ಕೂಗಿಗೆ ಸ್ಪಂದಿಸಿರುವ ಸಿದ್ದರಾಮಯ್ಯ, ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ವರ್ಗದ ಅಲೆಮಾರಿ, ಅರೆ ಅಲೆಮಾರಿ ಅಭಿವೃದ್ಧಿ ನಿಗಮಕ್ಕೆ ₹ 100 ಕೋಟಿ ನೀಡುವುದಾಗಿ ಹೇಳಿದ್ದಾರೆ. ಈ ಸಮುದಾಯದ ವಿದ್ಯಾರ್ಥಿಗಳ ಶೈಕ್ಷಣಿಕ ಅಭಿವೃದ್ಧಿಗಾಗಿ ಪ್ರತಿ ಕಂದಾಯ ವಿಭಾಗಕ್ಕೆ ಒಂದರಂತೆ ನಾಲ್ಕು ವಿಶೇಷ ವಸತಿ ಶಾಲೆ ಆರಂಭಿಸಲಾಗುವುದು ಎಂದಿದ್ದಾರೆ.</p><p>‘ಅಹಿಂದ’ ವರ್ಗದ ವಿದ್ಯಾರ್ಥಿಗಳ ಶೈಕ್ಷಣಿಕ ಪ್ರಗತಿಗಾಗಿ ಆಯಾ ಇಲಾಖೆಗಳಡಿ ಹಲವು ಕಾರ್ಯಕ್ರಮಗಳನ್ನು ಘೋಷಿಸಲಾಗಿದೆ. ವಸತಿ ಶಾಲೆಗಳಿಲ್ಲದ ಹೋಬಳಿಗಳಲ್ಲಿ ಹೊಸ ವಸತಿ ಶಾಲೆ, ಕ್ರೈಸ್ ವಸತಿ ಶಾಲೆಗಳಿಗೆ ಮೂಲಸೌಕರ್ಯ, ಸ್ವಂತ ಕಟ್ಟಡ, ವಿದ್ಯಾರ್ಥಿನಿಲಯಗಳ ನಿರ್ವಹಣಾ ವೆಚ್ಚದ ದರ ಪರಿಷ್ಕರಣೆಗೆ ಹೆಚ್ಚುವರಿಯಾಗಿ ಹಣ, ಆರ್ಟಿಇ ಅಡಿ ಪ್ರವೇಶ ಪಡೆದ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ವಿದ್ಯಾರ್ಥಿಗಳು ಪ್ರವೇಶ ಪಡೆದ ಶಾಲೆಗಳಲ್ಲಿಯೇ 9 ಮತ್ತು 10ನೇ ತರಗತಿಗಳಲ್ಲಿ ವ್ಯಾಸಂಗ ಮುಂದುವರೆಸಲು ಅವಕಾಶ ಕಲ್ಪಿಸಲು ಅನುದಾನ ಒದಗಿಸುವುದಾಗಿ ತಿಳಿಸಿದ್ದಾರೆ.</p><p>ಸಮಾಜ ಕಲ್ಯಾಣ ಇಲಾಖೆ ಮತ್ತು ಪರಿಶಿಷ್ಟ ಪಂಗಡಗಳ ಇಲಾಖೆಗಳ ಅಡಿಯಲ್ಲಿ ಬರುವ ನಿಗಮಗಳು ಗಂಗಾ ಕಲ್ಯಾಣ ಯೋಜನೆಯಡಿ ಪ್ರತಿ ಕೊಳವೆ ಬಾವಿಗಳ ವಿದ್ಯುದೀಕರಣಕ್ಕಾಗಿ ಪಾವತಿಸುವ ಮೊತ್ತವನ್ನು ₹75 ಸಾವಿರದಿಂದ 1.50 ಲಕ್ಷಕ್ಕೆ ಹೆಚ್ಚಿಸುವುದು, ಕೆ–ಸೆಟ್, ಜೆಇಇ, ನೀಟ್ ಪರೀಕ್ಷೆಗಳಿಗೆ ಗುಣಮಟ್ಟದ ತರಬೇತಿ ನೀಡಲು ನಾಲ್ಕು ಕ್ರೈಸ್ ವಸತಿ ಶಾಲೆಗಳನ್ನು ಸೆಂಟರ್ ಫಾರ್ ಎಕ್ಸಲೆನ್ಸ್ಗಳಾಗಿ ಉನ್ನತೀಕರಿಸುವುದು, ವಸತಿ ನಿಲಯ ಮತ್ತು ವಸತಿ ಶಾಲೆಗಳಲ್ಲಿ ಗುಣಮಟ್ಟದ ಆಹಾರ ಪೂರೈಕೆಗೆ ಮೆಸ್ ಸಮಿತಿ ರಚನೆ, ಜೊತೆಗೆ, ನಿರ್ವಹಣೆಯಲ್ಲಿ ಸುಧಾರಣೆ ತರಲು ಉನ್ನತ ಮಟ್ಟದ ಸಮಿತಿ ರಚಿಸಲಾಗುವುದು ಎಂದೂ ಪ್ರಕಟಿಸಿದ್ದಾರೆ.</p><p>ಅರಣ್ಯದಂಚಿನಲ್ಲಿರುವ ಇರುಳ, ಸೋಲಿಗ, ಜೇನುಕುರುಬ, ಕಾಡುಕುರುಬ, ಕುಡಿಯ, ಸಿದ್ದಿ ಮತ್ತು ಇತರೆ ಸೂಕ್ಷ್ಮ ಮತ್ತು ಅತಿ ಸೂಕ್ಷ್ಮ ಪರಿಶಿಷ್ಟ ಪಂಗಡದವರಿಗಾಗಿ (ಪಿವಿಟಿಜಿ) ಕರ್ನಾಟಕ ಆದಿವಾಸಿ ಅಭಿವೃದ್ಧಿ ನಿಗಮ, ಬೌದ್ಧ ಸಮುದಾಯಕ್ಕೆ ‘ಬೌದ್ಧ ಅಭಿವೃದ್ಧಿ ನಿಗಮ’, ಪರಿಶಿಷ್ಟ ಪಂಗಡದವರ ಹಕ್ಕುಗಳನ್ನು ಸಂರಕ್ಷಿಸಲು ‘ಪರಿಶಿಷ್ಟ ಪಂಗಡಗಳ ಆಯೋಗ’, ಅಲ್ಪಸಂಖ್ಯಾತ ಸಮುದಾಯದ ಮಹಿಳಾ ಸ್ವ-ಸಹಾಯ ಗುಂಪುಗಳಿಗೆ ಸ್ವಯಂ ಉದ್ಯೋಗಕ್ಕಾಗಿ ಪ್ರೋತ್ಸಾಹಿಸಲು ಅಲ್ಪಸಂಖ್ಯಾತರ ಮಹಿಳಾ ಕೋ-ಆಪರೇಟಿವ್ ಸೊಸೈಟಿ ಘೋಷಿಸಲಾಗಿದೆ. ಹಿಂದುಳಿದ ವರ್ಗಗಳ ಕಾರ್ಯಕ್ರಮಗಳ ಅನುಷ್ಠಾನ, ಉದ್ಯೋಗ ಮತ್ತು ಶಿಕ್ಷಣ ಮೀಸಲಾತಿ, ಬ್ಯಾಕ್ಲಾಗ್ ಹುದ್ದೆಗಳ ಭರ್ತಿ ಕುರಿತಂತೆ ಕ್ರಮ ಕೈಗೊಳ್ಳಲು ಮುಖ್ಯಮಂತ್ರಿಯ ಅಧ್ಯಕ್ಷತೆಯಲ್ಲಿ ಉನ್ನತ ಮಟ್ಟದ ಸಮಿತಿ ರಚಿಸಲಾಗುವುದು ಎಂದೂ ಮುಖ್ಯಮಂತ್ರಿ ಪ್ರಕಟಿಸಿದ್ದಾರೆ.</p><p>ಅಲ್ಪಸಂಖ್ಯಾತ ಉದ್ಯೋಗಸ್ಥ ಮಹಿಳೆಯರ ವಸತಿ ನಿಲಯಗಳಿಗೆ ಹೆಚ್ಚಿನ ಬೇಡಿಕೆ ಇರುವ ಕಾರಣ ಬೆಂಗಳೂರಿನಲ್ಲಿ 100 ಸಂಖ್ಯಾಬಲದ ನಾಲ್ಕು ವಸತಿ ನಿಲಯಗಳು, ಈ ಸಮುದಾಯದ ನಿರ್ಗತಿಕ ಜನರಿಗೆ 100 ಸಂಖ್ಯಾಬಲದ ಎರಡು ಮಹಿಳಾ ವೃದ್ಧಾಶ್ರಮ, ಹಜ್ ಯಾತ್ರಿಕರು ಹಾಗೂ ಅವರ ಸಂಬಂಧಿಕರಿಗೆ ಅಗತ್ಯ ಸೌಲಭ್ಯ ಮತ್ತು ಸೌಕರ್ಯಗಳನ್ನು ಒದಗಿಸಲು ಹುಬ್ಬಳ್ಳಿ ಮತ್ತು ಕಲಬುರಗಿಯಲ್ಲಿ ಹಜ್ ಭವನ ನಿರ್ಮಾಣ, ಬೆಂಗಳೂರಿನ ಕೆಂಗೇರಿಯಲ್ಲಿ ಆಸಿರ್ವನಂ ಬೆನಿಡಿಕ್ಟಿನ್ ಮೊನಾಸ್ಟರಿಯ ಎರಡು ಎಕರೆ ಜಾಗದಲ್ಲಿ ಅಲ್ಪಸಂಖ್ಯಾತರ ಅಭಿವೃದ್ಧಿ ಮತ್ತು ತರಬೇತಿ ಕೇಂದ್ರ ಸ್ಥಾಪನೆ, ಸಂವಿಧಾನ ಶಿಲ್ಪಿ ಬಾಬಾಸಾಹೇಬ್ ಅಂಬೇಡ್ಕರ್ ಹಾಗೂ ಇತರ ಸಮಾಜ ಸುಧಾರಕರ ಪುಸ್ತಕಗಳನ್ನು ಉರ್ದು ಭಾಷೆಗೆ ಅನುವಾದ, ವಕ್ಫ್ ಸಂಸ್ಥೆಗಳಲ್ಲಿನ 31 ಮಹಿಳಾ ಪಿಯು ಕಾಲೇಜುಗಳನ್ನು ಪದವಿ ಕಾಲೇಜುಗಳಾಗಿ ಉನ್ನತೀಕರಣ ಮಾಡಲಾಗುವುದು. ವಾಣಿಜ್ಯ ಉದ್ದೇಶಕ್ಕೆ ಅತಿ ಹೆಚ್ಚು ಬೇಡಿಕೆಯಿರುವ ಪ್ರದೇಶಗಳಲ್ಲಿ ವಕ್ಫ್ ಆಸ್ತಿಗಳನ್ನು ಸಾರ್ವಜನಿಕ ಖಾಸಗಿ ಸಹಭಾಗಿತ್ವದಲ್ಲಿ ಸಮಗ್ರವಾಗಿ ಅಭಿವೃದ್ಧಿಪಡಿಸಲಾಗುವುದು ಎಂದೂ ಘೋಷಿಸಿದ್ದಾರೆ.</p>.<ul><li><p>ಸಂತ ಶಿಶುನಾಳ ಶರೀಫರ ಹೆಸರಿನಲ್ಲಿ 35 ಹೊಸ ವಸತಿ ಶಾಲೆ (10 ಸಿಬಿಎಸ್ಇ ಪಠ್ಯಕ್ರಮ, 25 ರಾಜ್ಯ ಪಠ್ಯಕ್ರಮ)</p></li><li><p>100 ಮೌಲಾನಾ ಆಜಾದ್ ಮಾದರಿ ಶಾಲೆಗಳು ಹಾಗೂ ಉರ್ದು ಶಾಲೆಗಳನ್ನು ಕೆಪಿಎಸ್ ಮಾದರಿಯಲ್ಲಿ ₹400 ಕೋಟಿ ವೆಚ್ಚದಲ್ಲಿ ಉನ್ನತೀಕರಣ</p></li><li><p>ಬೌದ್ಧ ಧರ್ಮದ ಧಮ್ಮಾಚಾರಿಗಳಿಗೆ ₹6 ಸಾವಿರ ಮಾಸಿಕ ಗೌರವಧನ</p></li><li><p>ಅಲ್ಪಸಂಖ್ಯಾತರ ವಿದ್ಯಾರ್ಥಿಗಳಲ್ಲಿ ಡಿಜಿಟಲ್ ಶಿಕ್ಷಣ ಪ್ರೋತ್ಸಾಹಿಸಲು 5 ಸಾವಿರ ವಿದ್ಯಾರ್ಥಿಗಳಿಗೆ ಲ್ಯಾಪ್ಟಾಪ್ ಖರೀದಿಗೆ ತಲಾ ₹50 ಸಾವಿರ</p></li><li><p>ಕ್ರೈಸ್ ವಸತಿ ಶಾಲೆಗಳಿಗೆ ಮೂಲಸೌಕರ್ಯ ಒದಗಿಸಲು ₹ 50 ಕೋಟಿ</p></li><li><p>30 ಕ್ರೈಸ್ ವಸತಿ ಶಾಲೆಗಳಿಗೆ ₹ 660 ಕೋಟಿ ವೆಚ್ಚದಲ್ಲಿ ಸ್ವಂತ ಕಟ್ಟಡಗಳ ನಿರ್ಮಾಣ</p></li><li><p>ಸಲೂನ್ಗಳನ್ನು ತೆರೆಯಲು ಸವಿತಾ ಸಮಾಜದವರಿಗೆ ಶೇ 4 ರಷ್ಟು ಬಡ್ಡಿದರದಲ್ಲಿ ₹10 ಲಕ್ಷವರೆಗೆ ಸಾಲ ಮತ್ತು ಸಹಾಯಧನ</p></li></ul>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಬೆನ್ನಿಗೆ ನಿಂತ ಸಮುದಾಯ ‘ಅಹಿಂದ’ವನ್ನು (ಅಲ್ಪಸಂಖ್ಯಾತ, ಹಿಂದುಳಿದ, ದಲಿತ) ಮುಖ್ಯಮಂತ್ರಿ ಸಿದ್ದರಾಮಯ್ಯ ಈ ಬಾರಿಯೂ ‘ಕೈ’ಬಿಟ್ಟಿಲ್ಲ. ಸಾಕಷ್ಟು ಯೋಜನೆ, ಭರಪೂರ ಕೊಡುಗೆಗಳ ಮೂಲಕ ದಲಿತ, ಶೋಷಿತ ಪರ ಬದ್ಧತೆ ಮುಂದುವರಿಸಿದ್ದಾರೆ. ಮುಂಬರುವ ಸ್ಥಳೀಯ ಸಂಸ್ಥೆಗಳ ಚುನಾವಣೆಗೆ ಮತ ಬ್ಯಾಂಕ್ ಭದ್ರಪಡಿಸಿಕೊಳ್ಳುವ ತಂತ್ರಗಾರಿಕೆಯೂ ಈ ‘ಹಂಚಿಕೆ’ ಸೂತ್ರದಲ್ಲಿ ಇದ್ದಂತಿದೆ.</p><p>ಎರಡನೇ ಬಾರಿಗೆ ಆಡಳಿತ ಚುಕ್ಕಾಣಿ ಹಿಡಿದು ಸಾಗಿದ ಮೂರು ವರ್ಷಗಳಲ್ಲಿ ಎಸ್ಸಿ, ಎಸ್ಟಿ, ಹಿಂದುಳಿದ ವರ್ಗ, ಅಲ್ಪಸಂಖ್ಯಾತರ ಕಲ್ಯಾಣದ ಗುರಿ ನೆಟ್ಟು ಶಿಕ್ಷಣ, ಮಾನವ ಸಂಪನ್ಮೂಲ, ಕೌಶಲ, ಜೀವನೋಪಾಯ, ಮೂಲಸೌಕರ್ಯ ಹೀಗೆ ನಾನಾ ವಲಯಗಳಲ್ಲಿ ಹಲವು ಕಾರ್ಯಕ್ರಮಗಳನ್ನು ಜಾರಿಗೆ ತಂದಿದ್ದರು. ಆ ಪಥದಲ್ಲಿಯೇ ಸಾಗಿದ್ದಾರೆ. </p><p>ಪರಿಶಿಷ್ಟ ಜಾತಿ ಉಪಯೋಜನೆ (ಎಸ್ಸಿಎಸ್ಪಿ) ಮತ್ತು ಬುಡಕಟ್ಟು ಉಪಯೋಜನೆ (ಟಿಎಸ್ಪಿ) ಅಡಿ 2025–26ನೇ ಸಾಲಿನಲ್ಲಿ ₹ 42,018 ಕೋಟಿ ಮೀಸಲಿಟ್ಟಿದ್ದ ಮುಖ್ಯಮಂತ್ರಿ, ಈ ಬಾರಿ ಮೊತ್ತವನ್ನು ₹ 44,632 ಕೋಟಿಗೆ ಹಿಗ್ಗಿಸಿದ್ದಾರೆ. </p><p>ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮದಿಂದ 2013–14ರಿಂದ 2018–19ರ ಅವಧಿಯಲ್ಲಿ ನೀಡಲಾದ ಸಾಲಗಳ ಮೇಲಿನ ಬಡ್ಡಿ ಮನ್ನಾಗೆ ಒಟಿಸ್ ಯೋಜನೆಗೆ ಸಚಿವ ಸಂಪುಟ ಇತ್ತೀಚೆಗೆ ಅನುಮೋದನೆ ನೀಡಿತ್ತು. ಅಲ್ಪಸಂಖ್ಯಾತರ ಬಡ್ಡಿ ಮನ್ನಾ ಮಾಡಿ ಸರ್ಕಾರ ತುಷ್ಠೀಕರಣದ ರಾಜಕಾರಣ ನಡೆಸುತ್ತಿದೆ ಎಂದು ವಿರೋಧ ಪಕ್ಷಗಳು ಕಿಡಿಕಾರಿದ್ದವು. ಈ ಆರೋಪಕ್ಕೆ ಉತ್ತರ ನೀಡಿರುವ ಸಿದ್ದರಾಮಯ್ಯ, ಸಮಾಜ ಕಲ್ಯಾಣ, ಪರಿಶಿಷ್ಟ ಪಂಗಡಗಳ ಕಲ್ಯಾಣ, ಹಿಂದುಳಿದ ವರ್ಗಗಳ ಕಲ್ಯಾಣ ಹಾಗೂ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಗಳಡಿ ಇರುವ ನಿಗಮಗಳಿಂದ 2021ರ ಮಾರ್ಚ್ 31ರವರೆಗೆ ಪಡೆದ ಸಾಲದ ಅಸಲು ಪಾವತಿ ಮಾಡುವವರಿಗೆ ಬಡ್ಡಿ ಮನ್ನಾ ಮಾಡಿ ಒಟಿಎಸ್ ಜಾರಿಗೆ ತರುವುದಾಗಿ ಪ್ರಕಟಿಸಿದ್ದಾರೆ. ಈ ನಿಗಮಗಳಲ್ಲಿ ಮೈಕ್ರೊ ಕ್ರೆಡಿಟ್ ಪ್ರೇರಣಾ ಯೋಜನೆಯಡಿ ಸಾಲ ಮತ್ತು ಸಹಾಯಧನ ಪಡೆದ ಮಹಿಳಾ ಸ್ವ-ಸಹಾಯ ಸಂಘಗಳು ಸಾಲವನ್ನು ಸಕಾಲದಲ್ಲಿ ಮರುಪಾವತಿಸಿದ ಸಂಘಗಳಿಗೆ ಎರಡನೇ ಬಾರಿಗೆ ಸಾಲ ಮತ್ತು ಸಹಾಯಧನ ಮಂಜೂರು ಮಾಡುವುದಾಗಿ ಹೇಳಿದ್ದಾರೆ.</p><p>ಪರಿಶಿಷ್ಟ ಜಾತಿಯಲ್ಲಿ ಒಳ ಮೀಸಲಾತಿ ಹಂಚಿಕೆಯಲ್ಲಿ ಅಲೆಮಾರಿಗಳು, ಸೂಕ್ಷ್ಮ ಮತ್ತು ಅತಿ ಸೂಕ್ಷ್ಮ ಜಾತಿಗಳಿಗೆ ಅನ್ಯಾಯವಾಗಿದೆ ಎಂಬ ಕೂಗಿಗೆ ಸ್ಪಂದಿಸಿರುವ ಸಿದ್ದರಾಮಯ್ಯ, ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ವರ್ಗದ ಅಲೆಮಾರಿ, ಅರೆ ಅಲೆಮಾರಿ ಅಭಿವೃದ್ಧಿ ನಿಗಮಕ್ಕೆ ₹ 100 ಕೋಟಿ ನೀಡುವುದಾಗಿ ಹೇಳಿದ್ದಾರೆ. ಈ ಸಮುದಾಯದ ವಿದ್ಯಾರ್ಥಿಗಳ ಶೈಕ್ಷಣಿಕ ಅಭಿವೃದ್ಧಿಗಾಗಿ ಪ್ರತಿ ಕಂದಾಯ ವಿಭಾಗಕ್ಕೆ ಒಂದರಂತೆ ನಾಲ್ಕು ವಿಶೇಷ ವಸತಿ ಶಾಲೆ ಆರಂಭಿಸಲಾಗುವುದು ಎಂದಿದ್ದಾರೆ.</p><p>‘ಅಹಿಂದ’ ವರ್ಗದ ವಿದ್ಯಾರ್ಥಿಗಳ ಶೈಕ್ಷಣಿಕ ಪ್ರಗತಿಗಾಗಿ ಆಯಾ ಇಲಾಖೆಗಳಡಿ ಹಲವು ಕಾರ್ಯಕ್ರಮಗಳನ್ನು ಘೋಷಿಸಲಾಗಿದೆ. ವಸತಿ ಶಾಲೆಗಳಿಲ್ಲದ ಹೋಬಳಿಗಳಲ್ಲಿ ಹೊಸ ವಸತಿ ಶಾಲೆ, ಕ್ರೈಸ್ ವಸತಿ ಶಾಲೆಗಳಿಗೆ ಮೂಲಸೌಕರ್ಯ, ಸ್ವಂತ ಕಟ್ಟಡ, ವಿದ್ಯಾರ್ಥಿನಿಲಯಗಳ ನಿರ್ವಹಣಾ ವೆಚ್ಚದ ದರ ಪರಿಷ್ಕರಣೆಗೆ ಹೆಚ್ಚುವರಿಯಾಗಿ ಹಣ, ಆರ್ಟಿಇ ಅಡಿ ಪ್ರವೇಶ ಪಡೆದ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ವಿದ್ಯಾರ್ಥಿಗಳು ಪ್ರವೇಶ ಪಡೆದ ಶಾಲೆಗಳಲ್ಲಿಯೇ 9 ಮತ್ತು 10ನೇ ತರಗತಿಗಳಲ್ಲಿ ವ್ಯಾಸಂಗ ಮುಂದುವರೆಸಲು ಅವಕಾಶ ಕಲ್ಪಿಸಲು ಅನುದಾನ ಒದಗಿಸುವುದಾಗಿ ತಿಳಿಸಿದ್ದಾರೆ.</p><p>ಸಮಾಜ ಕಲ್ಯಾಣ ಇಲಾಖೆ ಮತ್ತು ಪರಿಶಿಷ್ಟ ಪಂಗಡಗಳ ಇಲಾಖೆಗಳ ಅಡಿಯಲ್ಲಿ ಬರುವ ನಿಗಮಗಳು ಗಂಗಾ ಕಲ್ಯಾಣ ಯೋಜನೆಯಡಿ ಪ್ರತಿ ಕೊಳವೆ ಬಾವಿಗಳ ವಿದ್ಯುದೀಕರಣಕ್ಕಾಗಿ ಪಾವತಿಸುವ ಮೊತ್ತವನ್ನು ₹75 ಸಾವಿರದಿಂದ 1.50 ಲಕ್ಷಕ್ಕೆ ಹೆಚ್ಚಿಸುವುದು, ಕೆ–ಸೆಟ್, ಜೆಇಇ, ನೀಟ್ ಪರೀಕ್ಷೆಗಳಿಗೆ ಗುಣಮಟ್ಟದ ತರಬೇತಿ ನೀಡಲು ನಾಲ್ಕು ಕ್ರೈಸ್ ವಸತಿ ಶಾಲೆಗಳನ್ನು ಸೆಂಟರ್ ಫಾರ್ ಎಕ್ಸಲೆನ್ಸ್ಗಳಾಗಿ ಉನ್ನತೀಕರಿಸುವುದು, ವಸತಿ ನಿಲಯ ಮತ್ತು ವಸತಿ ಶಾಲೆಗಳಲ್ಲಿ ಗುಣಮಟ್ಟದ ಆಹಾರ ಪೂರೈಕೆಗೆ ಮೆಸ್ ಸಮಿತಿ ರಚನೆ, ಜೊತೆಗೆ, ನಿರ್ವಹಣೆಯಲ್ಲಿ ಸುಧಾರಣೆ ತರಲು ಉನ್ನತ ಮಟ್ಟದ ಸಮಿತಿ ರಚಿಸಲಾಗುವುದು ಎಂದೂ ಪ್ರಕಟಿಸಿದ್ದಾರೆ.</p><p>ಅರಣ್ಯದಂಚಿನಲ್ಲಿರುವ ಇರುಳ, ಸೋಲಿಗ, ಜೇನುಕುರುಬ, ಕಾಡುಕುರುಬ, ಕುಡಿಯ, ಸಿದ್ದಿ ಮತ್ತು ಇತರೆ ಸೂಕ್ಷ್ಮ ಮತ್ತು ಅತಿ ಸೂಕ್ಷ್ಮ ಪರಿಶಿಷ್ಟ ಪಂಗಡದವರಿಗಾಗಿ (ಪಿವಿಟಿಜಿ) ಕರ್ನಾಟಕ ಆದಿವಾಸಿ ಅಭಿವೃದ್ಧಿ ನಿಗಮ, ಬೌದ್ಧ ಸಮುದಾಯಕ್ಕೆ ‘ಬೌದ್ಧ ಅಭಿವೃದ್ಧಿ ನಿಗಮ’, ಪರಿಶಿಷ್ಟ ಪಂಗಡದವರ ಹಕ್ಕುಗಳನ್ನು ಸಂರಕ್ಷಿಸಲು ‘ಪರಿಶಿಷ್ಟ ಪಂಗಡಗಳ ಆಯೋಗ’, ಅಲ್ಪಸಂಖ್ಯಾತ ಸಮುದಾಯದ ಮಹಿಳಾ ಸ್ವ-ಸಹಾಯ ಗುಂಪುಗಳಿಗೆ ಸ್ವಯಂ ಉದ್ಯೋಗಕ್ಕಾಗಿ ಪ್ರೋತ್ಸಾಹಿಸಲು ಅಲ್ಪಸಂಖ್ಯಾತರ ಮಹಿಳಾ ಕೋ-ಆಪರೇಟಿವ್ ಸೊಸೈಟಿ ಘೋಷಿಸಲಾಗಿದೆ. ಹಿಂದುಳಿದ ವರ್ಗಗಳ ಕಾರ್ಯಕ್ರಮಗಳ ಅನುಷ್ಠಾನ, ಉದ್ಯೋಗ ಮತ್ತು ಶಿಕ್ಷಣ ಮೀಸಲಾತಿ, ಬ್ಯಾಕ್ಲಾಗ್ ಹುದ್ದೆಗಳ ಭರ್ತಿ ಕುರಿತಂತೆ ಕ್ರಮ ಕೈಗೊಳ್ಳಲು ಮುಖ್ಯಮಂತ್ರಿಯ ಅಧ್ಯಕ್ಷತೆಯಲ್ಲಿ ಉನ್ನತ ಮಟ್ಟದ ಸಮಿತಿ ರಚಿಸಲಾಗುವುದು ಎಂದೂ ಮುಖ್ಯಮಂತ್ರಿ ಪ್ರಕಟಿಸಿದ್ದಾರೆ.</p><p>ಅಲ್ಪಸಂಖ್ಯಾತ ಉದ್ಯೋಗಸ್ಥ ಮಹಿಳೆಯರ ವಸತಿ ನಿಲಯಗಳಿಗೆ ಹೆಚ್ಚಿನ ಬೇಡಿಕೆ ಇರುವ ಕಾರಣ ಬೆಂಗಳೂರಿನಲ್ಲಿ 100 ಸಂಖ್ಯಾಬಲದ ನಾಲ್ಕು ವಸತಿ ನಿಲಯಗಳು, ಈ ಸಮುದಾಯದ ನಿರ್ಗತಿಕ ಜನರಿಗೆ 100 ಸಂಖ್ಯಾಬಲದ ಎರಡು ಮಹಿಳಾ ವೃದ್ಧಾಶ್ರಮ, ಹಜ್ ಯಾತ್ರಿಕರು ಹಾಗೂ ಅವರ ಸಂಬಂಧಿಕರಿಗೆ ಅಗತ್ಯ ಸೌಲಭ್ಯ ಮತ್ತು ಸೌಕರ್ಯಗಳನ್ನು ಒದಗಿಸಲು ಹುಬ್ಬಳ್ಳಿ ಮತ್ತು ಕಲಬುರಗಿಯಲ್ಲಿ ಹಜ್ ಭವನ ನಿರ್ಮಾಣ, ಬೆಂಗಳೂರಿನ ಕೆಂಗೇರಿಯಲ್ಲಿ ಆಸಿರ್ವನಂ ಬೆನಿಡಿಕ್ಟಿನ್ ಮೊನಾಸ್ಟರಿಯ ಎರಡು ಎಕರೆ ಜಾಗದಲ್ಲಿ ಅಲ್ಪಸಂಖ್ಯಾತರ ಅಭಿವೃದ್ಧಿ ಮತ್ತು ತರಬೇತಿ ಕೇಂದ್ರ ಸ್ಥಾಪನೆ, ಸಂವಿಧಾನ ಶಿಲ್ಪಿ ಬಾಬಾಸಾಹೇಬ್ ಅಂಬೇಡ್ಕರ್ ಹಾಗೂ ಇತರ ಸಮಾಜ ಸುಧಾರಕರ ಪುಸ್ತಕಗಳನ್ನು ಉರ್ದು ಭಾಷೆಗೆ ಅನುವಾದ, ವಕ್ಫ್ ಸಂಸ್ಥೆಗಳಲ್ಲಿನ 31 ಮಹಿಳಾ ಪಿಯು ಕಾಲೇಜುಗಳನ್ನು ಪದವಿ ಕಾಲೇಜುಗಳಾಗಿ ಉನ್ನತೀಕರಣ ಮಾಡಲಾಗುವುದು. ವಾಣಿಜ್ಯ ಉದ್ದೇಶಕ್ಕೆ ಅತಿ ಹೆಚ್ಚು ಬೇಡಿಕೆಯಿರುವ ಪ್ರದೇಶಗಳಲ್ಲಿ ವಕ್ಫ್ ಆಸ್ತಿಗಳನ್ನು ಸಾರ್ವಜನಿಕ ಖಾಸಗಿ ಸಹಭಾಗಿತ್ವದಲ್ಲಿ ಸಮಗ್ರವಾಗಿ ಅಭಿವೃದ್ಧಿಪಡಿಸಲಾಗುವುದು ಎಂದೂ ಘೋಷಿಸಿದ್ದಾರೆ.</p>.<ul><li><p>ಸಂತ ಶಿಶುನಾಳ ಶರೀಫರ ಹೆಸರಿನಲ್ಲಿ 35 ಹೊಸ ವಸತಿ ಶಾಲೆ (10 ಸಿಬಿಎಸ್ಇ ಪಠ್ಯಕ್ರಮ, 25 ರಾಜ್ಯ ಪಠ್ಯಕ್ರಮ)</p></li><li><p>100 ಮೌಲಾನಾ ಆಜಾದ್ ಮಾದರಿ ಶಾಲೆಗಳು ಹಾಗೂ ಉರ್ದು ಶಾಲೆಗಳನ್ನು ಕೆಪಿಎಸ್ ಮಾದರಿಯಲ್ಲಿ ₹400 ಕೋಟಿ ವೆಚ್ಚದಲ್ಲಿ ಉನ್ನತೀಕರಣ</p></li><li><p>ಬೌದ್ಧ ಧರ್ಮದ ಧಮ್ಮಾಚಾರಿಗಳಿಗೆ ₹6 ಸಾವಿರ ಮಾಸಿಕ ಗೌರವಧನ</p></li><li><p>ಅಲ್ಪಸಂಖ್ಯಾತರ ವಿದ್ಯಾರ್ಥಿಗಳಲ್ಲಿ ಡಿಜಿಟಲ್ ಶಿಕ್ಷಣ ಪ್ರೋತ್ಸಾಹಿಸಲು 5 ಸಾವಿರ ವಿದ್ಯಾರ್ಥಿಗಳಿಗೆ ಲ್ಯಾಪ್ಟಾಪ್ ಖರೀದಿಗೆ ತಲಾ ₹50 ಸಾವಿರ</p></li><li><p>ಕ್ರೈಸ್ ವಸತಿ ಶಾಲೆಗಳಿಗೆ ಮೂಲಸೌಕರ್ಯ ಒದಗಿಸಲು ₹ 50 ಕೋಟಿ</p></li><li><p>30 ಕ್ರೈಸ್ ವಸತಿ ಶಾಲೆಗಳಿಗೆ ₹ 660 ಕೋಟಿ ವೆಚ್ಚದಲ್ಲಿ ಸ್ವಂತ ಕಟ್ಟಡಗಳ ನಿರ್ಮಾಣ</p></li><li><p>ಸಲೂನ್ಗಳನ್ನು ತೆರೆಯಲು ಸವಿತಾ ಸಮಾಜದವರಿಗೆ ಶೇ 4 ರಷ್ಟು ಬಡ್ಡಿದರದಲ್ಲಿ ₹10 ಲಕ್ಷವರೆಗೆ ಸಾಲ ಮತ್ತು ಸಹಾಯಧನ</p></li></ul>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>