<p><strong>ಬೆಂಗಳೂರು:</strong> ಹಿಂದುಳಿದ ವರ್ಗಗಳಿಗೆ 2026-27ನೇ ಸಾಲಿನ ಬಜೆಟ್ನಲ್ಲಿ ₹10 ಸಾವಿರ ಕೋಟಿ ಮೀಸಲಿಡಬೇಕು ಎಂದು ಕರ್ನಾಟಕ ಹಿಂದುಳಿದ ಜಾತಿಗಳ ಒಕ್ಕೂಟ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಮನವಿ ಸಲ್ಲಿಸಿದೆ.</p>.<p>ಬಜೆಟ್ ಪೂರ್ವಸಿದ್ಧತಾ ಸಭೆಯಲ್ಲಿ ಭಾಗವಹಿಸಿದ್ದ ಒಕ್ಕೂಟದ ಅಧ್ಯಕ್ಷ ಕೆ.ಎಂ.ರಾಮಚಂದ್ರಪ್ಪ, ಪ್ರಧಾನ ಕಾರ್ಯದರ್ಶಿ ಎಣ್ಣೆಗೆರೆ ಆರ್. ವೆಂಕಟರಾಮಯ್ಯ ಅವರು, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಗೆ 2025-26ನೇ ಸಾಲಿನಲ್ಲಿ ₹3,514.08 ಕೋಟಿ ಒದಗಿಸಲಾಗಿತ್ತು. ರಾಜ್ಯದ ಒಟ್ಟು ಜನಸಂಖ್ಯೆಯ ಶೇ 70ರಷ್ಟು ಇರುವ ವರ್ಗಗಳಿಗೆ ನೀಡಿದ ಅನುದಾನ ಕಡಿಮೆಯಾಗಿತ್ತು. ಮಧುಸೂದನ ನಾಯ್ಕ್ ಅವರ ಅಧ್ಯಕ್ಷತೆಯ ಹಿಂದುಳಿದ ವರ್ಗಗಳ ಆಯೋಗದ ಸಮೀಕ್ಷಾ ವರದಿ ಅನ್ವಯ ಎಲ್ಲಾ ವರ್ಗಗಳಿಗೂ ಸಾಮಾಜಿಕ ನ್ಯಾಯ ಒದಗಿಸಬೇಕು ಎಂದು ಬೇಡಿಕೆ ಮಂಡಿಸಿದರು.</p>.<p>ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮಕ್ಕೆ ₹1,000 ಕೋಟಿ ಮತ್ತು ಇತರೆ ನಿಗಮಗಳಿಗೆ ತಲಾ ₹500 ಕೋಟಿ ನೀಡಬೇಕು. ಹೊಸದಾಗಿ 25 ಮೊರಾರ್ಜಿ ವಸತಿ ಶಾಲೆಗಳನ್ನು ಮಂಜೂರು ಮಾಡಬೇಕು. ಅಭಿವೃದ್ಧಿ ನಿಗಮಗಳಿಂದ ಪಡೆದ ಸಾಲದ ಬಡ್ಡಿ ಮನ್ನಾ ಮಾಡಬೇಕು. 5ರಿಂದ 10ನೇ ತರಗತಿ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿವೇತನ ನೀಡಬೇಕು. ವಸತಿ ನಿಲಯಗಳ ಭೋಜನಾ ವೆಚ್ಚವನ್ನು ಪ್ರತಿ ವಿದ್ಯಾರ್ಥಿಗೆ ತಿಂಗಳಿಗೆ ₹500 ನಿಗದಿ ಮಾಡಬೇಕು. ಮೀಸಲಾತಿ ಅನ್ವಯವೇ ಪ್ರವೇಶ ನೀಡಬೇಕು. ಕಟ್ಟಡಗಳಿಗೆ ₹700 ಕೋಟಿ ಅನುದಾನ ಮೀಸಲಿಡಬೇಕು ಎಂದು ಹೇಳಿದರು.</p>.<p>2025-26ನೇ ಸಾಲಿನಲ್ಲಿ ಪ್ರವರ್ಗ-1 ಮತ್ತು ಪ್ರವರ್ಗ-2ಎಗೆ ಸಿವಿಲ್ ಕಾಮಗಾರಿಗಳಲ್ಲಿ ಹಾಗೂ ಸರಕು, ಸಾಮಗ್ರಿ ಸರಬರಾಜುಗಳಲ್ಲಿ ಗುತ್ತಿಗೆ ಮೀಸಲಾತಿಯನ್ನು ₹2 ಕೋಟಿಯವರೆಗೆ ಘೋಷಿಸಲಾಗಿತ್ತು. ಈ ಸಂಬಂಧ ಆದೇಶ ಹೊರಡಿಸಬೇಕು. ಒಕ್ಕೂಟದ ಕಾರ್ಯ ಚಟುವಟಿಕೆಗಳಿಗೆ ₹5 ಕೋಟಿ ನೀಡಬೇಕು. ಬೆಂಗಳೂರು ನಗರದಲ್ಲಿ ಸ್ವಂತ ಕಟ್ಟಡ ಕಟ್ಟಲು 50X80 ಅಡಿಗಳ ನಿವೇಶನವನ್ನು ಉಚಿತವಾಗಿ ಮಂಜೂರು ಮಾಡಬೇಕು ಎಂದು ಕೋರಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು:</strong> ಹಿಂದುಳಿದ ವರ್ಗಗಳಿಗೆ 2026-27ನೇ ಸಾಲಿನ ಬಜೆಟ್ನಲ್ಲಿ ₹10 ಸಾವಿರ ಕೋಟಿ ಮೀಸಲಿಡಬೇಕು ಎಂದು ಕರ್ನಾಟಕ ಹಿಂದುಳಿದ ಜಾತಿಗಳ ಒಕ್ಕೂಟ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಮನವಿ ಸಲ್ಲಿಸಿದೆ.</p>.<p>ಬಜೆಟ್ ಪೂರ್ವಸಿದ್ಧತಾ ಸಭೆಯಲ್ಲಿ ಭಾಗವಹಿಸಿದ್ದ ಒಕ್ಕೂಟದ ಅಧ್ಯಕ್ಷ ಕೆ.ಎಂ.ರಾಮಚಂದ್ರಪ್ಪ, ಪ್ರಧಾನ ಕಾರ್ಯದರ್ಶಿ ಎಣ್ಣೆಗೆರೆ ಆರ್. ವೆಂಕಟರಾಮಯ್ಯ ಅವರು, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಗೆ 2025-26ನೇ ಸಾಲಿನಲ್ಲಿ ₹3,514.08 ಕೋಟಿ ಒದಗಿಸಲಾಗಿತ್ತು. ರಾಜ್ಯದ ಒಟ್ಟು ಜನಸಂಖ್ಯೆಯ ಶೇ 70ರಷ್ಟು ಇರುವ ವರ್ಗಗಳಿಗೆ ನೀಡಿದ ಅನುದಾನ ಕಡಿಮೆಯಾಗಿತ್ತು. ಮಧುಸೂದನ ನಾಯ್ಕ್ ಅವರ ಅಧ್ಯಕ್ಷತೆಯ ಹಿಂದುಳಿದ ವರ್ಗಗಳ ಆಯೋಗದ ಸಮೀಕ್ಷಾ ವರದಿ ಅನ್ವಯ ಎಲ್ಲಾ ವರ್ಗಗಳಿಗೂ ಸಾಮಾಜಿಕ ನ್ಯಾಯ ಒದಗಿಸಬೇಕು ಎಂದು ಬೇಡಿಕೆ ಮಂಡಿಸಿದರು.</p>.<p>ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮಕ್ಕೆ ₹1,000 ಕೋಟಿ ಮತ್ತು ಇತರೆ ನಿಗಮಗಳಿಗೆ ತಲಾ ₹500 ಕೋಟಿ ನೀಡಬೇಕು. ಹೊಸದಾಗಿ 25 ಮೊರಾರ್ಜಿ ವಸತಿ ಶಾಲೆಗಳನ್ನು ಮಂಜೂರು ಮಾಡಬೇಕು. ಅಭಿವೃದ್ಧಿ ನಿಗಮಗಳಿಂದ ಪಡೆದ ಸಾಲದ ಬಡ್ಡಿ ಮನ್ನಾ ಮಾಡಬೇಕು. 5ರಿಂದ 10ನೇ ತರಗತಿ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿವೇತನ ನೀಡಬೇಕು. ವಸತಿ ನಿಲಯಗಳ ಭೋಜನಾ ವೆಚ್ಚವನ್ನು ಪ್ರತಿ ವಿದ್ಯಾರ್ಥಿಗೆ ತಿಂಗಳಿಗೆ ₹500 ನಿಗದಿ ಮಾಡಬೇಕು. ಮೀಸಲಾತಿ ಅನ್ವಯವೇ ಪ್ರವೇಶ ನೀಡಬೇಕು. ಕಟ್ಟಡಗಳಿಗೆ ₹700 ಕೋಟಿ ಅನುದಾನ ಮೀಸಲಿಡಬೇಕು ಎಂದು ಹೇಳಿದರು.</p>.<p>2025-26ನೇ ಸಾಲಿನಲ್ಲಿ ಪ್ರವರ್ಗ-1 ಮತ್ತು ಪ್ರವರ್ಗ-2ಎಗೆ ಸಿವಿಲ್ ಕಾಮಗಾರಿಗಳಲ್ಲಿ ಹಾಗೂ ಸರಕು, ಸಾಮಗ್ರಿ ಸರಬರಾಜುಗಳಲ್ಲಿ ಗುತ್ತಿಗೆ ಮೀಸಲಾತಿಯನ್ನು ₹2 ಕೋಟಿಯವರೆಗೆ ಘೋಷಿಸಲಾಗಿತ್ತು. ಈ ಸಂಬಂಧ ಆದೇಶ ಹೊರಡಿಸಬೇಕು. ಒಕ್ಕೂಟದ ಕಾರ್ಯ ಚಟುವಟಿಕೆಗಳಿಗೆ ₹5 ಕೋಟಿ ನೀಡಬೇಕು. ಬೆಂಗಳೂರು ನಗರದಲ್ಲಿ ಸ್ವಂತ ಕಟ್ಟಡ ಕಟ್ಟಲು 50X80 ಅಡಿಗಳ ನಿವೇಶನವನ್ನು ಉಚಿತವಾಗಿ ಮಂಜೂರು ಮಾಡಬೇಕು ಎಂದು ಕೋರಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>