<p><strong>ಬೆಂಗಳೂರು</strong>: ಮುಖ್ಯಮಂತ್ರಿ ಸಿದ್ದರಾಮಯ್ಯ ತಾವು ಮಂಡಿಸಿದ 2026–27ನೇ ಸಾಲಿನ ಬಜೆಟ್ನಲ್ಲಿ ಉಪಚುನಾವಣೆ ನಡೆಯಲಿರುವ ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರ, ಬಾಗಲಕೋಟೆಯ ವಿಧಾನಸಭಾ ಕ್ಷೇತ್ರಗಳಿಗೆ ಭರ್ಜರಿ ಅನುದಾನ ಘೋಷಿಸಿದ್ದಾರೆ.</p><p>ರಾಜ್ಯ ರಾಜಕಾರಣದಲ್ಲಿ ಛಾಪು ಮೂಡಿಸಿದ್ದ ಶಾಮನೂರು ಶಿವಶಂಕರಪ್ಪ ನಿಧನದಿಂದ ದಾವಣಗೆರೆ ಉತ್ತರ ಕ್ಷೇತ್ರ ಮತ್ತು ಎಚ್.ವೈ. ಮೇಟಿ ನಿಧನದಿಂದ ಬಾಗಲಕೋಟೆ ನಗರ ಕ್ಷೇತ್ರ ತೆರವಾಗಿತ್ತು.</p><p><strong>ದಾವಣಗೆರೆ ಜಿಲ್ಲೆಗೆ ಸಿಕ್ಕಿದ್ದು..</strong></p><p>* ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದಲ್ಲಿ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಹಾಗೂ ಅಲ್ಪಸಂಖ್ಯಾತ ಸಮುದಾಯ ಹೆಚ್ಚಾಗಿ ವಾಸಿಸುತ್ತಿರುವ ವಿವಿಧ ಭಾಗಗಳ ಅಭಿವೃದ್ಧಿಗೆ ₹ 100 ಕೋಟಿ ಅನುದಾನ</p><p>* ತೋಟಗಾರಿಕಾ ಉತ್ಪನ್ನಗಳ ಸಂಸ್ಕರಣೆಗಾಗಿ 12,000 ಮೆಟ್ರಿಕ್ ಟನ್ ಸಾಮರ್ಥ್ಯದ ಶೀತಲಗೃಹ ನಿರ್ಮಾಣಕ್ಕೆ ₹64 ಕೋಟಿ ಅನುದಾನ</p><p>* ದಾವಣಗೆರೆ ತಾಲ್ಲೂಕಿನ ಮಾಯಕೊಂಡದ ಪ್ರಾಥಮಿಕ ಆರೋಗ್ಯ ಕೇಂದ್ರ ಸಮುದಾಯ ಆರೋಗ್ಯ ಕೇಂದ್ರವಾಗಿ ಮೇಲ್ದರ್ಜೆಗೆ ಏರಿಕೆ</p><p>* ಮೀನು ಆಹಾರ ಸೇವನೆಯನ್ನು ಉತ್ತೇಜಿಸಲು ಹಾಗೂ ಸಾರ್ವಜನಿಕರಿಗೆ ಸ್ವಚ್ಛ ಹಾಗೂ ಗುಣಮಟ್ಟದ ಮೀನು ಉತ್ಪನ್ನ ಲಭ್ಯವಾಗುವಂತೆ ಮಾಡಲು ದಾವಣಗೆರೆಯಲ್ಲಿ ಮತ್ಸ್ಯದರ್ಶಿನಿ ಸ್ಥಾಪನೆ</p><p>* ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳ ಶೈಕ್ಷಣಿಕ ಅನುಕೂಲಕ್ಕಾಗಿ ದಾವಣಗೆರೆಯಲ್ಲಿ 150 ಸಂಖ್ಯಾಬಲದ ಹಾಸ್ಟೆಲ್ ಸ್ಥಾಪನೆ</p><p>* ದಾವಣಗೆರೆ ತಾಲ್ಲೂಕಿನ ಹೊನ್ನಾಳಿಯಲ್ಲಿ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ (ಕೆಎಸ್ಆರ್ಟಿಸಿ) ನೂತನ ಬಸ್ ನಿಲ್ದಾಣ ಹಾಗೂ ಡೀಪೊ ನಿರ್ಮಾಣ</p><p><strong>ಬಾಗಲಕೋಟೆಗೆ ಸಿಕ್ಕಿದ್ದು..</strong></p><p>* ಕೃಷ್ಣಾ ಮೇಲ್ದಂಡೆ ಯೋಜನೆಗೆ ಬೇಕಾದ ಭೂಮಿ ಸ್ವಾಧೀನ ಆರಂಭಿಸಲಾಗುವುದು ಎಂದು ಹೇಳಲಾಗಿದೆ. ಆದರೆ, ಅನುದಾನದ ಮೊತ್ತ ತಿಳಿಸಿಲ್ಲ</p><p>* ಬಾಗಲಕೋಟೆಯಲ್ಲಿ ಸರ್ಕಾರಿ ವೈದ್ಯಕೀಯ ಕಾಲೇಜು ಆರಂಭಕ್ಕೆ ಸೂಕ್ತ ಕ್ರಮ</p><p>* ಕೆರೂರು ಏತ ನೀರಾವರಿ ಪೂರ್ಣ, ಬಾದಾಮಿ ತಾಲ್ಲೂಕಿನಲ್ಲಿ ಮಲಪ್ರಭಾ ಎಡದಂಡೆ ಕಾಲುವೆ ಆಧುನೀಕರಣ</p><p>* ಬಾಗಲಕೋಟೆ, ಬಾದಾಮಿ, ಹುನಗುಂದ, ಮುಧೋಳದಲ್ಲಿ ಶ್ರಮಿಕ ವಸತಿ ಶಾಲೆ</p> .ಬಾಗಲಕೋಟೆ, ದಾವಣಗೆರೆ ದಕ್ಷಿಣ: ಉಪಚುನಾವಣೆಗೆ ಪ್ರಕ್ರಿಯೆ ಆರಂಭಿಸಿದ ಆಯೋಗ.ಮಡಿವಾಳ ಸಮುದಾಯವನ್ನು ಪರಿಶಿಷ್ಟ ಜಾತಿಗೆ ಸೇರಿಸಲು ಮಡಿವಾಳರ ಅಹೋರಾತ್ರಿ ಧರಣಿ.ಕರ್ನಾಟಕ ಬಜೆಟ್ 2026: ಜನಪ್ರಿಯತೆ – ಆರ್ಥಿಕ ಶಿಸ್ತಿನ ನಡುವಿನ ಹಗ್ಗದ ನಡಿಗೆ.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು</strong>: ಮುಖ್ಯಮಂತ್ರಿ ಸಿದ್ದರಾಮಯ್ಯ ತಾವು ಮಂಡಿಸಿದ 2026–27ನೇ ಸಾಲಿನ ಬಜೆಟ್ನಲ್ಲಿ ಉಪಚುನಾವಣೆ ನಡೆಯಲಿರುವ ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರ, ಬಾಗಲಕೋಟೆಯ ವಿಧಾನಸಭಾ ಕ್ಷೇತ್ರಗಳಿಗೆ ಭರ್ಜರಿ ಅನುದಾನ ಘೋಷಿಸಿದ್ದಾರೆ.</p><p>ರಾಜ್ಯ ರಾಜಕಾರಣದಲ್ಲಿ ಛಾಪು ಮೂಡಿಸಿದ್ದ ಶಾಮನೂರು ಶಿವಶಂಕರಪ್ಪ ನಿಧನದಿಂದ ದಾವಣಗೆರೆ ಉತ್ತರ ಕ್ಷೇತ್ರ ಮತ್ತು ಎಚ್.ವೈ. ಮೇಟಿ ನಿಧನದಿಂದ ಬಾಗಲಕೋಟೆ ನಗರ ಕ್ಷೇತ್ರ ತೆರವಾಗಿತ್ತು.</p><p><strong>ದಾವಣಗೆರೆ ಜಿಲ್ಲೆಗೆ ಸಿಕ್ಕಿದ್ದು..</strong></p><p>* ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದಲ್ಲಿ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಹಾಗೂ ಅಲ್ಪಸಂಖ್ಯಾತ ಸಮುದಾಯ ಹೆಚ್ಚಾಗಿ ವಾಸಿಸುತ್ತಿರುವ ವಿವಿಧ ಭಾಗಗಳ ಅಭಿವೃದ್ಧಿಗೆ ₹ 100 ಕೋಟಿ ಅನುದಾನ</p><p>* ತೋಟಗಾರಿಕಾ ಉತ್ಪನ್ನಗಳ ಸಂಸ್ಕರಣೆಗಾಗಿ 12,000 ಮೆಟ್ರಿಕ್ ಟನ್ ಸಾಮರ್ಥ್ಯದ ಶೀತಲಗೃಹ ನಿರ್ಮಾಣಕ್ಕೆ ₹64 ಕೋಟಿ ಅನುದಾನ</p><p>* ದಾವಣಗೆರೆ ತಾಲ್ಲೂಕಿನ ಮಾಯಕೊಂಡದ ಪ್ರಾಥಮಿಕ ಆರೋಗ್ಯ ಕೇಂದ್ರ ಸಮುದಾಯ ಆರೋಗ್ಯ ಕೇಂದ್ರವಾಗಿ ಮೇಲ್ದರ್ಜೆಗೆ ಏರಿಕೆ</p><p>* ಮೀನು ಆಹಾರ ಸೇವನೆಯನ್ನು ಉತ್ತೇಜಿಸಲು ಹಾಗೂ ಸಾರ್ವಜನಿಕರಿಗೆ ಸ್ವಚ್ಛ ಹಾಗೂ ಗುಣಮಟ್ಟದ ಮೀನು ಉತ್ಪನ್ನ ಲಭ್ಯವಾಗುವಂತೆ ಮಾಡಲು ದಾವಣಗೆರೆಯಲ್ಲಿ ಮತ್ಸ್ಯದರ್ಶಿನಿ ಸ್ಥಾಪನೆ</p><p>* ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳ ಶೈಕ್ಷಣಿಕ ಅನುಕೂಲಕ್ಕಾಗಿ ದಾವಣಗೆರೆಯಲ್ಲಿ 150 ಸಂಖ್ಯಾಬಲದ ಹಾಸ್ಟೆಲ್ ಸ್ಥಾಪನೆ</p><p>* ದಾವಣಗೆರೆ ತಾಲ್ಲೂಕಿನ ಹೊನ್ನಾಳಿಯಲ್ಲಿ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ (ಕೆಎಸ್ಆರ್ಟಿಸಿ) ನೂತನ ಬಸ್ ನಿಲ್ದಾಣ ಹಾಗೂ ಡೀಪೊ ನಿರ್ಮಾಣ</p><p><strong>ಬಾಗಲಕೋಟೆಗೆ ಸಿಕ್ಕಿದ್ದು..</strong></p><p>* ಕೃಷ್ಣಾ ಮೇಲ್ದಂಡೆ ಯೋಜನೆಗೆ ಬೇಕಾದ ಭೂಮಿ ಸ್ವಾಧೀನ ಆರಂಭಿಸಲಾಗುವುದು ಎಂದು ಹೇಳಲಾಗಿದೆ. ಆದರೆ, ಅನುದಾನದ ಮೊತ್ತ ತಿಳಿಸಿಲ್ಲ</p><p>* ಬಾಗಲಕೋಟೆಯಲ್ಲಿ ಸರ್ಕಾರಿ ವೈದ್ಯಕೀಯ ಕಾಲೇಜು ಆರಂಭಕ್ಕೆ ಸೂಕ್ತ ಕ್ರಮ</p><p>* ಕೆರೂರು ಏತ ನೀರಾವರಿ ಪೂರ್ಣ, ಬಾದಾಮಿ ತಾಲ್ಲೂಕಿನಲ್ಲಿ ಮಲಪ್ರಭಾ ಎಡದಂಡೆ ಕಾಲುವೆ ಆಧುನೀಕರಣ</p><p>* ಬಾಗಲಕೋಟೆ, ಬಾದಾಮಿ, ಹುನಗುಂದ, ಮುಧೋಳದಲ್ಲಿ ಶ್ರಮಿಕ ವಸತಿ ಶಾಲೆ</p> .ಬಾಗಲಕೋಟೆ, ದಾವಣಗೆರೆ ದಕ್ಷಿಣ: ಉಪಚುನಾವಣೆಗೆ ಪ್ರಕ್ರಿಯೆ ಆರಂಭಿಸಿದ ಆಯೋಗ.ಮಡಿವಾಳ ಸಮುದಾಯವನ್ನು ಪರಿಶಿಷ್ಟ ಜಾತಿಗೆ ಸೇರಿಸಲು ಮಡಿವಾಳರ ಅಹೋರಾತ್ರಿ ಧರಣಿ.ಕರ್ನಾಟಕ ಬಜೆಟ್ 2026: ಜನಪ್ರಿಯತೆ – ಆರ್ಥಿಕ ಶಿಸ್ತಿನ ನಡುವಿನ ಹಗ್ಗದ ನಡಿಗೆ.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>