ರಾಜ್ಯಪಾಲ ಥಾವರಚಂದ್ ಗೆಹಲೋತ್ ಅವರು ಬೆಳಿಗ್ಗೆ 11ಕ್ಕೆ ಸರಿಯಾಗಿ ವಿಧಾನಸಭೆ ಆಗಮಿಸಿದರು. ವಿಧಾನಸಭೆ ಅಧ್ಯಕ್ಷ ಯು.ಟಿ. ಖಾದರ್, ವಿಧಾನ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ, ಮುಖ್ಯಮಂತ್ರಿ ಸಿದ್ದರಾಮಯ್ಯ, ಕಾನೂನು ಸಚಿವ ಎಚ್.ಕೆ. ಪಾಟೀಲ ಮತ್ತಿತರರು ರಾಜ್ಯಪಾಲರನ್ನು ಸ್ವಾಗತಿಸಿದರು. ವಿಧಾನಸಭೆ ಮತ್ತು ವಿಧಾನ ಪರಿಷತ್ ಸದಸ್ಯರನ್ನು ಒಳಗೊಂಡ ಜಂಟಿ ಅಧಿವೇಶನ ಉದ್ದೇಶಿಸಿ ರಾಜ್ಯಪಾಲರು ಮಾತನಾಡುತ್ತಿದ್ದಾರೆ.
ಬಿಜೆಪಿಯ ಹಲವು ಸದಸ್ಯರು ಕೊರಳಿಗೆ ಕೇಸರಿ ಶಾಲು ಧರಿಸಿ ಸದನಕ್ಕೆ ಬಂದಿದ್ದರು. ಉಳಿದವರಿಗೆ ಸದನ ಪ್ರವೇಶಿಸುವ ಮೊದಲು ಬಿಜೆಪಿ ಶಾಸಕಾಂಗ ಪಕ್ಷದ ಕಚೇರಿ ಸಿಬ್ಬಂದಿ ಕೇಸರಿ ಶಾಲುಗಳನ್ನು ವಿತರಿಸಿದರು. ಅವುಗಳನ್ನು ಧರಿಸಿ ಬಿಜೆಪಿ ಶಾಸಕರು ವಿಧಾನಸಭೆ ಪ್ರವೇಶಿಸಿದರು.