<p><strong>ಬೆಂಗಳೂರು:</strong> ಶಿಗ್ಗಾವಿ, ಸಂಡೂರು ಮತ್ತು ಚನ್ನಪಟ್ಟಣ ಉಪ ಚುನಾವಣೆಯನ್ನು ಗಂಭೀರವಾಗಿ ಪರಿಗಣಿಸಿರುವ ಕಾಂಗ್ರೆಸ್ ಕ್ಷೇತ್ರಗಳಿಗೆ ಪ್ರಚಾರ ಉಸ್ತುವಾರಿಗಳನ್ನು ನೇಮಕಗೊಳಿಸಿದೆ. ಸಚಿವರು ಮತ್ತು ಶಾಸಕರ ನೇತೃತ್ವದಲ್ಲಿ ತಂಡಗಳನ್ನು ರಚಿಸಿದೆ.</p>.<p>ಶಿಗ್ಗಾವಿ ಕ್ಷೇತ್ರಕ್ಕೆ ಸಚಿವರಾದ ಈಶ್ವರ್ ಖಂಡ್ರೆ, ಎಚ್.ಕೆ ಪಾಟೀಲ್, ಜಮೀರ್ ಅಹಮ್ಮದ್ ಖಾನ್, ಲಕ್ಷ್ಮಿ ಹೆಬ್ಬಾಳಕರ, ತಿಮ್ಮಾಪುರ, ಎಸ್. ಎಸ್ ಮಲ್ಲಿಕಾರ್ಜುನ, ಬೈರತಿ ಸುರೇಶ್ ಮತ್ತು ಶಿವರಾಜ್ ತಂಗಡಗಿ ಅವರನ್ನೊಳಗೊಂಡ ತಂಡವನ್ನು ಪಕ್ಷ ನೇಮಿಸಿದೆ.</p><p>ಸಂಡೂರು ಕ್ಷೇತ್ರಕ್ಕೆ ಸಚಿವರಾದ ಎಚ್. ಮುನಿಯಪ್ಪ, ಕೆ.ಜೆ ಜಾರ್ಜ್, ಸಂತೋಷ್ ಲಾಡ್, ನಾಗೇಂದ್ರ, ಜಮೀರ್ ಅಹಮ್ಮದ್ ಖಾನ್, ಪ್ರಿಯಾಂಕ್ ಖರ್ಗೆ ಸೇರಿ ಶಾಸಕರ ತಂಡವನ್ನು ರಚಿಸಲಾಗಿದೆ.</p><p>ಸಚಿವ ರಾಮಲಿಂಗ ರೆಡ್ಡಿ, ಎನ್. ಚಲುವರಾಯಸ್ವಾಮಿ ನೇತೃತ್ವದಲ್ಲಿ ಶಾಸಕರು ಮತ್ತು ಸಂಸದರನ್ನೊಳಗೊಂಡ ತಂಡವನ್ನು ಚನ್ನಪಟ್ಟಣ ಕ್ಷೇತ್ರಕ್ಕೆ ನೇಮಕ ಮಾಡಲಾಗಿದೆ.</p><p>ಸಚಿವರು, ಸಂಸದರು ಮತ್ತು ಶಾಸಕರು ಸೇರಿದಂತೆ 26 ಸದಸ್ಯರ ತಂಡವನ್ನು ಪಕ್ಷ ರಚಿಸಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು:</strong> ಶಿಗ್ಗಾವಿ, ಸಂಡೂರು ಮತ್ತು ಚನ್ನಪಟ್ಟಣ ಉಪ ಚುನಾವಣೆಯನ್ನು ಗಂಭೀರವಾಗಿ ಪರಿಗಣಿಸಿರುವ ಕಾಂಗ್ರೆಸ್ ಕ್ಷೇತ್ರಗಳಿಗೆ ಪ್ರಚಾರ ಉಸ್ತುವಾರಿಗಳನ್ನು ನೇಮಕಗೊಳಿಸಿದೆ. ಸಚಿವರು ಮತ್ತು ಶಾಸಕರ ನೇತೃತ್ವದಲ್ಲಿ ತಂಡಗಳನ್ನು ರಚಿಸಿದೆ.</p>.<p>ಶಿಗ್ಗಾವಿ ಕ್ಷೇತ್ರಕ್ಕೆ ಸಚಿವರಾದ ಈಶ್ವರ್ ಖಂಡ್ರೆ, ಎಚ್.ಕೆ ಪಾಟೀಲ್, ಜಮೀರ್ ಅಹಮ್ಮದ್ ಖಾನ್, ಲಕ್ಷ್ಮಿ ಹೆಬ್ಬಾಳಕರ, ತಿಮ್ಮಾಪುರ, ಎಸ್. ಎಸ್ ಮಲ್ಲಿಕಾರ್ಜುನ, ಬೈರತಿ ಸುರೇಶ್ ಮತ್ತು ಶಿವರಾಜ್ ತಂಗಡಗಿ ಅವರನ್ನೊಳಗೊಂಡ ತಂಡವನ್ನು ಪಕ್ಷ ನೇಮಿಸಿದೆ.</p><p>ಸಂಡೂರು ಕ್ಷೇತ್ರಕ್ಕೆ ಸಚಿವರಾದ ಎಚ್. ಮುನಿಯಪ್ಪ, ಕೆ.ಜೆ ಜಾರ್ಜ್, ಸಂತೋಷ್ ಲಾಡ್, ನಾಗೇಂದ್ರ, ಜಮೀರ್ ಅಹಮ್ಮದ್ ಖಾನ್, ಪ್ರಿಯಾಂಕ್ ಖರ್ಗೆ ಸೇರಿ ಶಾಸಕರ ತಂಡವನ್ನು ರಚಿಸಲಾಗಿದೆ.</p><p>ಸಚಿವ ರಾಮಲಿಂಗ ರೆಡ್ಡಿ, ಎನ್. ಚಲುವರಾಯಸ್ವಾಮಿ ನೇತೃತ್ವದಲ್ಲಿ ಶಾಸಕರು ಮತ್ತು ಸಂಸದರನ್ನೊಳಗೊಂಡ ತಂಡವನ್ನು ಚನ್ನಪಟ್ಟಣ ಕ್ಷೇತ್ರಕ್ಕೆ ನೇಮಕ ಮಾಡಲಾಗಿದೆ.</p><p>ಸಚಿವರು, ಸಂಸದರು ಮತ್ತು ಶಾಸಕರು ಸೇರಿದಂತೆ 26 ಸದಸ್ಯರ ತಂಡವನ್ನು ಪಕ್ಷ ರಚಿಸಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>