<p><strong>ನವದೆಹಲಿ:</strong> ರಾಜ್ಯದಮೂರು ಲೋಕಸಭೆ ಹಾಗೂ ಎರಡು ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆ ನವೆಂಬರ್ 3ರಂದು ನಡೆಯಲಿದೆ ಎಂದು ಚುನಾವಣಾ ಆಯೋಗ ತಿಳಿಸಿದೆ.</p>.<p>ಭಾರತೀಯ ಚುನಾವಣಾ ಆಯೋಗದ ಮುಖ್ಯ ಚುನಾವಣಾ ಆಯುಕ್ತ ಓ.ಪಿ.ರಾವತ್ ಶನಿವಾರ ಮತದಾನದ ದಿನಾಂಕವನ್ನು ಪ್ರಕಟಿಸಿದರು.<span style="font-family: sans-serif, Arial, Verdana, "Trebuchet MS";">ಇಂದಿನಿಂದಲೇ ಚುನಾವಣಾ ನೀತಿ ಸಂಹಿತೆ ಜಾರಿಗೆ ಬರಲಿದೆ ಎಂದು ಅವರು ತಿಳಿಸಿದರು.</span></p>.<p><strong>ಶಿವಮೊಗ್ಗ, ಬಳ್ಳಾರಿ, ಮಂಡ್ಯ</strong></p>.<p>ಸಂಸದರ ರಾಜೀನಾಮೆಯಿಂದ ತೆರವಾಗಿದ್ದ ಕರ್ನಾಟಕದ ಶಿವಮೊಗ್ಗ, ಬಳ್ಳಾರಿ ಮತ್ತು ಮಂಡ್ಯ ಲೋಕಸಭಾ ಕ್ಷೇತ್ರಗಳಿಗೆ ನವೆಂಬರ್ 3ರಂದು ಉಪ ಚುನಾವಣೆ ನಡೆಯಲಿವೆ.</p>.<p>ರಾಮನಗರ ಮತ್ತು ಜಮಖಂಡಿ ವಿಧಾನಸಭಾ ಕ್ಷೇತ್ರಗಳ ಉಪ ಚುನಾವಣೆ ಕೂಡ ಇದೇ ದಿನ ನಡೆಯಲಿವೆ. ಎಲ್ಲ ಫಲಿತಾಂಶಗಳು ನವೆಂಬರ್ 6ರಂದು ಪ್ರಕಟವಾಗಲಿವೆ.</p>.<p>ಶಿವಮೊಗ್ಗ ಸಂಸದ ಬಿ.ಎಸ್. ಯಡಿಯೂರಪ್ಪ, ಬಳ್ಳಾರಿ ಸಂಸದ ಬಿ.ಶ್ರೀರಾಮುಲು ಮತ್ತು ಮಂಡ್ಯ ಸಂಸದ ಸಿ. ಎಸ್. ಪುಟ್ಟರಾಜು ಅವರ ರಾಜೀನಾಮೆನಿಂದ ಈ ಮೂರು ಕ್ಷೇತ್ರಗಳು ತೆರವಾಗಿದ್ದವು.</p>.<p>ಇದೇ ಏಪ್ರಿಲ್–ಮೇನಲ್ಲಿ ನಡೆದ ಕರ್ನಾಟಕ ವಿಧಾನಸಭಾ ಚುನಾವಣೆಗೆ ಸ್ಪರ್ಧಿಸಿದ್ದ ಈ ಮೂವರು ಶಾಸಕರಾಗಿ ಆಯ್ಕೆಯಾಗಿದ್ದಾರೆ.</p>.<p><strong>ರಾಮನಗರ, ಜಮಖಂಡಿ</strong></p>.<p>ಚನ್ನಪಟ್ಟಣ ಮತ್ತು ರಾಮನಗರ ಈ ಎರಡೂ ವಿಧಾನಸಭಾ ಕ್ಷೇತ್ರಗಳಿಂದ ಆಯ್ಕೆಯಾಗಿದ್ದ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಅವರು ಚನ್ನಪಟ್ಟಣ ಕ್ಷೇತ್ರವನ್ನು ಉಳಿಸಿಕೊಂಡಿದ್ದರು. ಇದರಿಂದಾಗಿ ರಾಮನಗರ ವಿಧಾನಸಭಾ ಸ್ಥಾನ ತೆರವಾಗಿತ್ತು.</p>.<p>ಇನ್ನು ಕಾಂಗ್ರೆಸ್ ಶಾಸಕ ಸಿದ್ದು ನ್ಯಾಮಗೌಡ ಅವರು ರಸ್ತೆ ಅಪಘಾತದಲ್ಲಿ ಸಾವನ್ನಪ್ಪಿದ ಕಾರಣ ಜಮಖಂಡಿ ವಿಧಾನಸಭಾ ಕ್ಷೇತ್ರಕ್ಕೆ ಉಪ ಚುನಾವಣೆ ನಡೆಯುತ್ತಿದೆ.</p>.<p>ಉಪಚುನಾವಣೆಯ ಫಲಿತಾಂಶ ನವೆಂಬರ್ 6ರಂದು ಪ್ರಕಟವಾಗಲಿದೆ.</p>.<p>ಬಿಜೆಪಿಯ ಬಿ.ಎಸ್.ಯಡಿಯೂರಪ್ಪ (ಶಿವಮೊಗ್ಗ), ಶ್ರೀರಾಮುಲು (ಬಳ್ಳಾರಿ) ಹಾಗೂ ಜಾತ್ಯತೀತ ಜನತಾದಳದ ಸಿ.ಎಸ್.ಪುಟ್ಟರಾಜು (ಮಂಡ್ಯ) ಅವರು ಲೋಕಸಭಾ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ್ದರು. ಇವರು ಕಳೆದ ವಿಧಾನಸಭೆ ಚುನಾವಣೆಗೆ ಸ್ಪರ್ಧಿಸಿ ಗೆಲುವು ದಾಖಲಿಸಿದ್ದರು. </p>.<p><em><strong>ಇದನ್ನೂ ಓದಿ:</strong></em><a href="https://www.prajavani.net/stories/national/ec%E2%80%89-announce-poll-dates-madhya-579030.html"><span style="font-family:arial,helvetica,sans-serif;">ನ.12ರಿಂದ ಡಿ.7: ಪಂಚರಾಜ್ಯ ವಿಧಾನಸಭಾ ಚುನಾವಣೆ; ಡಿ.11ಕ್ಕೆ ಮತ ಎಣಿಕೆ</span></a></p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ:</strong> ರಾಜ್ಯದಮೂರು ಲೋಕಸಭೆ ಹಾಗೂ ಎರಡು ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆ ನವೆಂಬರ್ 3ರಂದು ನಡೆಯಲಿದೆ ಎಂದು ಚುನಾವಣಾ ಆಯೋಗ ತಿಳಿಸಿದೆ.</p>.<p>ಭಾರತೀಯ ಚುನಾವಣಾ ಆಯೋಗದ ಮುಖ್ಯ ಚುನಾವಣಾ ಆಯುಕ್ತ ಓ.ಪಿ.ರಾವತ್ ಶನಿವಾರ ಮತದಾನದ ದಿನಾಂಕವನ್ನು ಪ್ರಕಟಿಸಿದರು.<span style="font-family: sans-serif, Arial, Verdana, "Trebuchet MS";">ಇಂದಿನಿಂದಲೇ ಚುನಾವಣಾ ನೀತಿ ಸಂಹಿತೆ ಜಾರಿಗೆ ಬರಲಿದೆ ಎಂದು ಅವರು ತಿಳಿಸಿದರು.</span></p>.<p><strong>ಶಿವಮೊಗ್ಗ, ಬಳ್ಳಾರಿ, ಮಂಡ್ಯ</strong></p>.<p>ಸಂಸದರ ರಾಜೀನಾಮೆಯಿಂದ ತೆರವಾಗಿದ್ದ ಕರ್ನಾಟಕದ ಶಿವಮೊಗ್ಗ, ಬಳ್ಳಾರಿ ಮತ್ತು ಮಂಡ್ಯ ಲೋಕಸಭಾ ಕ್ಷೇತ್ರಗಳಿಗೆ ನವೆಂಬರ್ 3ರಂದು ಉಪ ಚುನಾವಣೆ ನಡೆಯಲಿವೆ.</p>.<p>ರಾಮನಗರ ಮತ್ತು ಜಮಖಂಡಿ ವಿಧಾನಸಭಾ ಕ್ಷೇತ್ರಗಳ ಉಪ ಚುನಾವಣೆ ಕೂಡ ಇದೇ ದಿನ ನಡೆಯಲಿವೆ. ಎಲ್ಲ ಫಲಿತಾಂಶಗಳು ನವೆಂಬರ್ 6ರಂದು ಪ್ರಕಟವಾಗಲಿವೆ.</p>.<p>ಶಿವಮೊಗ್ಗ ಸಂಸದ ಬಿ.ಎಸ್. ಯಡಿಯೂರಪ್ಪ, ಬಳ್ಳಾರಿ ಸಂಸದ ಬಿ.ಶ್ರೀರಾಮುಲು ಮತ್ತು ಮಂಡ್ಯ ಸಂಸದ ಸಿ. ಎಸ್. ಪುಟ್ಟರಾಜು ಅವರ ರಾಜೀನಾಮೆನಿಂದ ಈ ಮೂರು ಕ್ಷೇತ್ರಗಳು ತೆರವಾಗಿದ್ದವು.</p>.<p>ಇದೇ ಏಪ್ರಿಲ್–ಮೇನಲ್ಲಿ ನಡೆದ ಕರ್ನಾಟಕ ವಿಧಾನಸಭಾ ಚುನಾವಣೆಗೆ ಸ್ಪರ್ಧಿಸಿದ್ದ ಈ ಮೂವರು ಶಾಸಕರಾಗಿ ಆಯ್ಕೆಯಾಗಿದ್ದಾರೆ.</p>.<p><strong>ರಾಮನಗರ, ಜಮಖಂಡಿ</strong></p>.<p>ಚನ್ನಪಟ್ಟಣ ಮತ್ತು ರಾಮನಗರ ಈ ಎರಡೂ ವಿಧಾನಸಭಾ ಕ್ಷೇತ್ರಗಳಿಂದ ಆಯ್ಕೆಯಾಗಿದ್ದ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಅವರು ಚನ್ನಪಟ್ಟಣ ಕ್ಷೇತ್ರವನ್ನು ಉಳಿಸಿಕೊಂಡಿದ್ದರು. ಇದರಿಂದಾಗಿ ರಾಮನಗರ ವಿಧಾನಸಭಾ ಸ್ಥಾನ ತೆರವಾಗಿತ್ತು.</p>.<p>ಇನ್ನು ಕಾಂಗ್ರೆಸ್ ಶಾಸಕ ಸಿದ್ದು ನ್ಯಾಮಗೌಡ ಅವರು ರಸ್ತೆ ಅಪಘಾತದಲ್ಲಿ ಸಾವನ್ನಪ್ಪಿದ ಕಾರಣ ಜಮಖಂಡಿ ವಿಧಾನಸಭಾ ಕ್ಷೇತ್ರಕ್ಕೆ ಉಪ ಚುನಾವಣೆ ನಡೆಯುತ್ತಿದೆ.</p>.<p>ಉಪಚುನಾವಣೆಯ ಫಲಿತಾಂಶ ನವೆಂಬರ್ 6ರಂದು ಪ್ರಕಟವಾಗಲಿದೆ.</p>.<p>ಬಿಜೆಪಿಯ ಬಿ.ಎಸ್.ಯಡಿಯೂರಪ್ಪ (ಶಿವಮೊಗ್ಗ), ಶ್ರೀರಾಮುಲು (ಬಳ್ಳಾರಿ) ಹಾಗೂ ಜಾತ್ಯತೀತ ಜನತಾದಳದ ಸಿ.ಎಸ್.ಪುಟ್ಟರಾಜು (ಮಂಡ್ಯ) ಅವರು ಲೋಕಸಭಾ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ್ದರು. ಇವರು ಕಳೆದ ವಿಧಾನಸಭೆ ಚುನಾವಣೆಗೆ ಸ್ಪರ್ಧಿಸಿ ಗೆಲುವು ದಾಖಲಿಸಿದ್ದರು. </p>.<p><em><strong>ಇದನ್ನೂ ಓದಿ:</strong></em><a href="https://www.prajavani.net/stories/national/ec%E2%80%89-announce-poll-dates-madhya-579030.html"><span style="font-family:arial,helvetica,sans-serif;">ನ.12ರಿಂದ ಡಿ.7: ಪಂಚರಾಜ್ಯ ವಿಧಾನಸಭಾ ಚುನಾವಣೆ; ಡಿ.11ಕ್ಕೆ ಮತ ಎಣಿಕೆ</span></a></p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>