<p><strong>ಬೆಂಗಳೂರು:</strong>ರಾಜ್ಯದಲ್ಲಿ 15 ವಿಧಾನಸಭಾ ಕ್ಷೇತ್ರಗಳಲ್ಲಿ ನಡೆದ ಉಪ ಚುನಾವಣೆಯಲ್ಲಿ ಬಿಜೆಪಿ ಅತಿ ಹೆಚ್ಚಿನ ಕ್ಷೇತ್ರಗಳಲ್ಲಿ ಭಾರಿ ಬಹುಮತಗಳ ಅಂತರದಿಂದ ಜಯಭೇರಿ ಬಾರಿಸಿರುವುದು ನನಗೆ ಅತ್ಯಂತ ಸಂತೋಷ ತಂದಿದೆ ಎಂದು ಉಪಮುಖ್ಯಮಂತ್ರಿ ಲಕ್ಷ್ಮಣ ಸವದಿ ತಿಳಿಸಿದ್ದಾರೆ.</p>.<p>ಈ ಚುನಾವಣೆಯಲ್ಲಿ ಅಥಣಿ ಮತ್ತು ಕಾಗವಾಡ ಕ್ಷೇತ್ರಗಳನ್ನು ಗೆಲ್ಲಿಸಿಕೊಂಡು ಬರುವಂತಹ ಜವಾಬ್ದಾರಿಯನ್ನು ವಹಿಸಲಾಗಿತ್ತು. ಇದನ್ನು ಅತ್ಯಂತ ಯಶಸ್ವಿಯಾಗಿ ನಿಭಾಯಿಸುವಲ್ಲಿ ಹಾಗೂ ಈ ಎರಡು ಕ್ಷೇತ್ರಗಳಲ್ಲೂ ಪಕ್ಷದ ಅಭ್ಯರ್ಥಿಗಳನ್ನು ಪ್ರಚಂಡ ಬಹುಮತದೊಂದಿಗೆ ಗೆಲ್ಲಿಸಿಕೊಂಡು ಬರುವಲ್ಲಿ ನನಗೆ ಸಹಕಾರ ನೀಡಿದ ಎಲ್ಲಾ ಮತ ಬಾಂಧವರಿಗೂ, ಬಿಜೆಪಿಯ ಎಲ್ಲಾ ಮುಖಂಡರಿಗೂ ಹಾಗೂ ಆತ್ಮೀಯ ಕಾರ್ಯಕರ್ತರಿಗೂ ಈ ಸಂದರ್ಭದಲ್ಲಿ ಧನ್ಯವಾದಗಳನ್ನು ಅರ್ಪಿಸ ಬಯಸುತ್ತೇನೆ ಎಂದು ಸವದಿ ಹೇಳಿದ್ದಾರೆ.</p>.<p>ಅದೇ ರೀತಿ ಇಡೀ ರಾಜ್ಯದಲ್ಲಿ ಬಿಜೆಪಿಯ ಪರ ಇರುವಂತಹ ಅಲೆ ಮತ್ತೊಮ್ಮೆ ಸಾಬೀತಾಗಿದೆ ಎಂದರು.</p>.<p>ಮುಂದೆಯೂ ತಮ್ಮೆಲ್ಲರ ಪ್ರೀತಿ, ವಿಶ್ವಾಸ ಮತ್ತು ಮಾರ್ಗದರ್ಶನಗಳೊಂದಿಗೆ ಉತ್ತಮ ಆಡಳಿತ ನೀಡುವುದಕ್ಕೆ ನಾವೆಲ್ಲರೂ ಶ್ರಮಿಸುತ್ತೇವೆ ಎಂದು ತಿಳಿಸುತ್ತಾ, ಗೆಲುವು ಸಾಧಿಸಿರುವ ಬಿಜೆಪಿ ಅಭ್ಯರ್ಥಿಗಳಿಗೆ ನನ್ನ ಹೃತ್ಪೂರ್ವಕ ಅಭಿನಂದನೆಗಳನ್ನು ಸಲ್ಲಿಸುತ್ತೇನೆ ಎಂದು ಅವರು ಹೇಳಿದ್ದಾರೆ.</p>.<p>ವಾಮಮಾರ್ಗದಿಂದ ಬಿಜೆಪಿಯನ್ನು ಸೋಲಿಸಬೇಕೆಂಬ ವಿರೋಧಪಕ್ಷದವರ ಷಡ್ಯಂತ್ರಕ್ಕೆ ಜನತಾ ಜನಾರ್ಧನರು ತಕ್ಕ ಪಾಠ ಕಲಿಸಿದ್ದಾರೆ ಎಂಬುದು ಈ ಫಲಿತಾಂಶದಿಂದ ಮತ್ತೊಮ್ಮೆ ಸಾಬೀತಾಗಿದೆ. ಅಷ್ಟೇ ಅಲ್ಲ ಕೇಂದ್ರ ಮತ್ತು ರಾಜ್ಯಗಳಲ್ಲಿ ಸ್ಥಿರ ಸರ್ಕಾರ ಮತ್ತು ಜನಪರ ಆಡಳಿತ ನೀಡುವುದಕ್ಕೆ ಜನರು ಒಪ್ಪಿಗೆ ಸೂಚಿಸಿದ್ದಾರೆ ಎಂದು ಸವದಿ ಪ್ರತಿಕ್ರಿಯೆ ನೀಡಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು:</strong>ರಾಜ್ಯದಲ್ಲಿ 15 ವಿಧಾನಸಭಾ ಕ್ಷೇತ್ರಗಳಲ್ಲಿ ನಡೆದ ಉಪ ಚುನಾವಣೆಯಲ್ಲಿ ಬಿಜೆಪಿ ಅತಿ ಹೆಚ್ಚಿನ ಕ್ಷೇತ್ರಗಳಲ್ಲಿ ಭಾರಿ ಬಹುಮತಗಳ ಅಂತರದಿಂದ ಜಯಭೇರಿ ಬಾರಿಸಿರುವುದು ನನಗೆ ಅತ್ಯಂತ ಸಂತೋಷ ತಂದಿದೆ ಎಂದು ಉಪಮುಖ್ಯಮಂತ್ರಿ ಲಕ್ಷ್ಮಣ ಸವದಿ ತಿಳಿಸಿದ್ದಾರೆ.</p>.<p>ಈ ಚುನಾವಣೆಯಲ್ಲಿ ಅಥಣಿ ಮತ್ತು ಕಾಗವಾಡ ಕ್ಷೇತ್ರಗಳನ್ನು ಗೆಲ್ಲಿಸಿಕೊಂಡು ಬರುವಂತಹ ಜವಾಬ್ದಾರಿಯನ್ನು ವಹಿಸಲಾಗಿತ್ತು. ಇದನ್ನು ಅತ್ಯಂತ ಯಶಸ್ವಿಯಾಗಿ ನಿಭಾಯಿಸುವಲ್ಲಿ ಹಾಗೂ ಈ ಎರಡು ಕ್ಷೇತ್ರಗಳಲ್ಲೂ ಪಕ್ಷದ ಅಭ್ಯರ್ಥಿಗಳನ್ನು ಪ್ರಚಂಡ ಬಹುಮತದೊಂದಿಗೆ ಗೆಲ್ಲಿಸಿಕೊಂಡು ಬರುವಲ್ಲಿ ನನಗೆ ಸಹಕಾರ ನೀಡಿದ ಎಲ್ಲಾ ಮತ ಬಾಂಧವರಿಗೂ, ಬಿಜೆಪಿಯ ಎಲ್ಲಾ ಮುಖಂಡರಿಗೂ ಹಾಗೂ ಆತ್ಮೀಯ ಕಾರ್ಯಕರ್ತರಿಗೂ ಈ ಸಂದರ್ಭದಲ್ಲಿ ಧನ್ಯವಾದಗಳನ್ನು ಅರ್ಪಿಸ ಬಯಸುತ್ತೇನೆ ಎಂದು ಸವದಿ ಹೇಳಿದ್ದಾರೆ.</p>.<p>ಅದೇ ರೀತಿ ಇಡೀ ರಾಜ್ಯದಲ್ಲಿ ಬಿಜೆಪಿಯ ಪರ ಇರುವಂತಹ ಅಲೆ ಮತ್ತೊಮ್ಮೆ ಸಾಬೀತಾಗಿದೆ ಎಂದರು.</p>.<p>ಮುಂದೆಯೂ ತಮ್ಮೆಲ್ಲರ ಪ್ರೀತಿ, ವಿಶ್ವಾಸ ಮತ್ತು ಮಾರ್ಗದರ್ಶನಗಳೊಂದಿಗೆ ಉತ್ತಮ ಆಡಳಿತ ನೀಡುವುದಕ್ಕೆ ನಾವೆಲ್ಲರೂ ಶ್ರಮಿಸುತ್ತೇವೆ ಎಂದು ತಿಳಿಸುತ್ತಾ, ಗೆಲುವು ಸಾಧಿಸಿರುವ ಬಿಜೆಪಿ ಅಭ್ಯರ್ಥಿಗಳಿಗೆ ನನ್ನ ಹೃತ್ಪೂರ್ವಕ ಅಭಿನಂದನೆಗಳನ್ನು ಸಲ್ಲಿಸುತ್ತೇನೆ ಎಂದು ಅವರು ಹೇಳಿದ್ದಾರೆ.</p>.<p>ವಾಮಮಾರ್ಗದಿಂದ ಬಿಜೆಪಿಯನ್ನು ಸೋಲಿಸಬೇಕೆಂಬ ವಿರೋಧಪಕ್ಷದವರ ಷಡ್ಯಂತ್ರಕ್ಕೆ ಜನತಾ ಜನಾರ್ಧನರು ತಕ್ಕ ಪಾಠ ಕಲಿಸಿದ್ದಾರೆ ಎಂಬುದು ಈ ಫಲಿತಾಂಶದಿಂದ ಮತ್ತೊಮ್ಮೆ ಸಾಬೀತಾಗಿದೆ. ಅಷ್ಟೇ ಅಲ್ಲ ಕೇಂದ್ರ ಮತ್ತು ರಾಜ್ಯಗಳಲ್ಲಿ ಸ್ಥಿರ ಸರ್ಕಾರ ಮತ್ತು ಜನಪರ ಆಡಳಿತ ನೀಡುವುದಕ್ಕೆ ಜನರು ಒಪ್ಪಿಗೆ ಸೂಚಿಸಿದ್ದಾರೆ ಎಂದು ಸವದಿ ಪ್ರತಿಕ್ರಿಯೆ ನೀಡಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>