<p><strong>ಕೆ.ಆರ್. ಪೇಟೆ:</strong> ಕ್ಷೇತ್ರದ ಮತದಾರರು ಪಕ್ಷಾತೀತವಾಗಿ, ಜಾತ್ಯತೀತವಾಗಿ ನಾರಾಯಣಗೌಡರನ್ನು ಬೆಂಬಲಿಸಿದ್ದಾರೆ. ನಮಗೆ ಸಂತೋಷವಾಗಿದೆ. ನಾವು ಕ್ಷೇತ್ರದ ಸರ್ವಾಂಗೀಣ ಅಭಿವೃದ್ಧಿಗೆ ಬದ್ಧರಾಗಿದ್ದೇವೆ ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರ ಮಗ ಮತ್ತು ಕೆ.ಆರ್.ಪೇಟೆ ಕ್ಷೇತ್ರದ ಉಸ್ತುವಾರಿ ಹೊತ್ತಿದ್ದ ಬಿ.ವೈ.ವಿಜಯೇಂದ್ರ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದರು.</p>.<p>‘ಇದು ನನ್ನೊಬ್ಬನ ಸಾಧನೆ ಅಲ್ಲ. ಸಾಮೂಹಿಕ ನಾಯಕತ್ವ ಮತ್ತು ನಮ್ಮೆಲ್ಲರ ಒಗ್ಗಟ್ಟಿನಿಂದ ಗೆಲುವು ಸಾಧ್ಯವಾಯಿತು. ನಾರಾಯಣಗೌಡರನ್ನು ಬೆಂಬಲಿಸಿದ ಜನರಿಗೆ ನಾವು ಕೃತಜ್ಞತೆ ಅರ್ಪಿಸುತ್ತೇವೆ’ ಎಂದು ಅವರು ಹೇಳಿದರು.</p>.<p><strong>ಇದನ್ನೂ ಓದಿ:<a href="https://www.prajavani.net/stories/stateregional/we-have-accepted-defeat-d-k-shivakumar-688800.html" target="_blank">ಸೋಲೊಪ್ಪಿಕೊಂಡಿದ್ದೇವೆ: ಕಾಂಗ್ರೆಸ್ ನಾಯಕ ಡಿ.ಕೆ. ಶಿವಕುಮಾರ್</a></strong></p>.<p>ಕೆ.ಆರ್.ಪೇಟೆ ತಾಲ್ಲೂಕಿನ ಮಗ ಈ ರಾಜ್ಯದ ಮುಖ್ಯಮಂತ್ರಿಯಾಗಿದ್ದಾನೆ. ಅದನ್ನು ಜನರು ಒಪ್ಪಿಕೊಂಡಿದ್ದಾರೆ. ಅಭಿವೃದ್ಧಿ ಒಂದನ್ನೇ ಮತದಾರರು ಅಪೇಕ್ಷಿಸುವುದು. ಅದರ ಮುಂದೆ ಯಾವುದೇ ಜಾತಿ ಬರುವುದಿಲ್ಲ. ನಾವು 10 ಸಾವಿರ ಲೀಡ್ ತಗೊಂಡಿದ್ದೇವೆ. ಈ ಹಿಂದೆ ಠೇವಣಿ ಸಹ ಬರುತ್ತಿರಲಿಲ್ಲ. ನಮಗೆ ಖುಷಿಯಾಗಿದೆ ಎಂದು ವಿಜಯೇಂದ್ರ ಹೇಳಿದರು.</p>.<p>ಎಲ್ಲ ಜಾತಿ, ಸಮಾಜಗಳಿಗೂ ನಾವು ಅಭಿವೃದ್ಧಿಯ ವಿಚಾರವನ್ನು ಮನಗಾಣಿಸಿದೆವು. ಇದೊಂದು ಬಾರಿ ಪಕ್ಷ–ಜಾತಿ ಮರೆತು ಬಿಜೆಪಿ ಬೆಂಬಲಿಸಲು ಮನವಿ ಮಾಡಿದ್ದೆವು. ಅದರಂತೆ ನಮಗೆ ಜನರು ಬೆಂಬಲಿಸಿದ್ದಾರೆ. ನಾವು ಕ್ಷೇತ್ರವನ್ನೇ ದೃಷ್ಟಿಯಲ್ಲಿರಿಸಿಕೊಂಡು ಪ್ರಣಾಳಿಕೆಯನ್ನೂ ಬಿಡುಗಡೆ ಮಾಡಿದ್ದೆವು ಎಂದು ವಿಜಯೇಂದ್ರ ನೆನಪಿಸಿಕೊಂಡರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕೆ.ಆರ್. ಪೇಟೆ:</strong> ಕ್ಷೇತ್ರದ ಮತದಾರರು ಪಕ್ಷಾತೀತವಾಗಿ, ಜಾತ್ಯತೀತವಾಗಿ ನಾರಾಯಣಗೌಡರನ್ನು ಬೆಂಬಲಿಸಿದ್ದಾರೆ. ನಮಗೆ ಸಂತೋಷವಾಗಿದೆ. ನಾವು ಕ್ಷೇತ್ರದ ಸರ್ವಾಂಗೀಣ ಅಭಿವೃದ್ಧಿಗೆ ಬದ್ಧರಾಗಿದ್ದೇವೆ ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರ ಮಗ ಮತ್ತು ಕೆ.ಆರ್.ಪೇಟೆ ಕ್ಷೇತ್ರದ ಉಸ್ತುವಾರಿ ಹೊತ್ತಿದ್ದ ಬಿ.ವೈ.ವಿಜಯೇಂದ್ರ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದರು.</p>.<p>‘ಇದು ನನ್ನೊಬ್ಬನ ಸಾಧನೆ ಅಲ್ಲ. ಸಾಮೂಹಿಕ ನಾಯಕತ್ವ ಮತ್ತು ನಮ್ಮೆಲ್ಲರ ಒಗ್ಗಟ್ಟಿನಿಂದ ಗೆಲುವು ಸಾಧ್ಯವಾಯಿತು. ನಾರಾಯಣಗೌಡರನ್ನು ಬೆಂಬಲಿಸಿದ ಜನರಿಗೆ ನಾವು ಕೃತಜ್ಞತೆ ಅರ್ಪಿಸುತ್ತೇವೆ’ ಎಂದು ಅವರು ಹೇಳಿದರು.</p>.<p><strong>ಇದನ್ನೂ ಓದಿ:<a href="https://www.prajavani.net/stories/stateregional/we-have-accepted-defeat-d-k-shivakumar-688800.html" target="_blank">ಸೋಲೊಪ್ಪಿಕೊಂಡಿದ್ದೇವೆ: ಕಾಂಗ್ರೆಸ್ ನಾಯಕ ಡಿ.ಕೆ. ಶಿವಕುಮಾರ್</a></strong></p>.<p>ಕೆ.ಆರ್.ಪೇಟೆ ತಾಲ್ಲೂಕಿನ ಮಗ ಈ ರಾಜ್ಯದ ಮುಖ್ಯಮಂತ್ರಿಯಾಗಿದ್ದಾನೆ. ಅದನ್ನು ಜನರು ಒಪ್ಪಿಕೊಂಡಿದ್ದಾರೆ. ಅಭಿವೃದ್ಧಿ ಒಂದನ್ನೇ ಮತದಾರರು ಅಪೇಕ್ಷಿಸುವುದು. ಅದರ ಮುಂದೆ ಯಾವುದೇ ಜಾತಿ ಬರುವುದಿಲ್ಲ. ನಾವು 10 ಸಾವಿರ ಲೀಡ್ ತಗೊಂಡಿದ್ದೇವೆ. ಈ ಹಿಂದೆ ಠೇವಣಿ ಸಹ ಬರುತ್ತಿರಲಿಲ್ಲ. ನಮಗೆ ಖುಷಿಯಾಗಿದೆ ಎಂದು ವಿಜಯೇಂದ್ರ ಹೇಳಿದರು.</p>.<p>ಎಲ್ಲ ಜಾತಿ, ಸಮಾಜಗಳಿಗೂ ನಾವು ಅಭಿವೃದ್ಧಿಯ ವಿಚಾರವನ್ನು ಮನಗಾಣಿಸಿದೆವು. ಇದೊಂದು ಬಾರಿ ಪಕ್ಷ–ಜಾತಿ ಮರೆತು ಬಿಜೆಪಿ ಬೆಂಬಲಿಸಲು ಮನವಿ ಮಾಡಿದ್ದೆವು. ಅದರಂತೆ ನಮಗೆ ಜನರು ಬೆಂಬಲಿಸಿದ್ದಾರೆ. ನಾವು ಕ್ಷೇತ್ರವನ್ನೇ ದೃಷ್ಟಿಯಲ್ಲಿರಿಸಿಕೊಂಡು ಪ್ರಣಾಳಿಕೆಯನ್ನೂ ಬಿಡುಗಡೆ ಮಾಡಿದ್ದೆವು ಎಂದು ವಿಜಯೇಂದ್ರ ನೆನಪಿಸಿಕೊಂಡರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>