<p><strong>ಬೆಂಗಳೂರು:</strong>ರಾಜ್ಯದ 15 ವಿಧಾನಸಭಾ ಕ್ಷೇತ್ರಗಳಿಗೆ ನಡೆದ ಉಪಚುನಾವಣೆಯ ಮತ ಎಣಿಕೆ ಕಾರ್ಯ ಸೋಮವಾರ ಬೆಳಿಗ್ಗೆ ಬಿಗಿ ಭದ್ರತೆಯೊಂದಿಗೆ ಆರಂಭಗೊಂಡಿದೆ.</p>.<p>ಹುಣಸೂರು ಕ್ಷೇತ್ರದಲ್ಲಿಮತ ಎಣಿಕೆ ನಡೆಯುತ್ತಿರುವ ದೇವರಾಜ ಅರಸು ಪ್ರಥಮ ದರ್ಜೆ ಕಾಲೇಜಿಗೆ ಬಿಗಿ ಭದ್ರತೆ ಒದಗಿಸಲಾಗಿದೆ. ಜಿಲ್ಲಾಧಿಕಾರಿ ಅಭಿರಾಂ ಜಿ. ಶಂಕರ್ ಸಮ್ಮುಖದಲ್ಲಿ ಸ್ಟ್ರಾಂಗ್ ರೂಂ ತೆರೆಯಲಾಗಿದೆ. ಮೊದಲು ಅಂಚೆ ಮತಗಳ ಎಣಿಕೆ ಮಾಡಲಾಗುತ್ತಿದೆ. ಈ ಕ್ಷೇತ್ರದಲ್ಲಿ ಒಟ್ಟು 107 ಅಂಚೆ ಮತಗಳಿವೆ. ಅನರ್ಹ ಶಾಸಕ ಎಚ್.ವಿಶ್ವನಾಥ್ ಅವರ ಸ್ಪರ್ಧೆಯಿಂದ ಈ ಕ್ಷೇತ್ರ ರಾಜ್ಯದ ಗಮನ ಸೆಳೆದಿದೆ. ವಿಶ್ವನಾಥ್ ಬಿಜೆಪಿಯಿಂದ ಕಣಕ್ಕಿಳಿದಿದ್ದಾರೆ. ಕಾಂಗ್ರೆಸ್ನ ಎಚ್.ಪಿ.ಮಂಜುನಾಥ್ ಮತ್ತು ಜೆಡಿಎಸ್ನ ದೇವರಹಳ್ಳಿ ಸೋಮಶೇಖರ್ ಕಣದಲ್ಲಿದ್ದಾರೆ.</p>.<p>ಶಿವಾಜಿನಗರ ಕ್ಷೇತ್ರದ ಮತ ಎಣಿಕೆ ಬೆಂಗಳೂರಿನಮೌಂಟ್ ಕಾರ್ಮೆಲ್ ಕಾಲೇಜು ಆವರಣದಲ್ಲಿ ನಡೆಯುತ್ತಿದೆ</p>.<p>ದೇವನಹಳ್ಳಿ ಆಕಾಶ್ ಶಾಲೆಯಲ್ಲಿ ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿ ಪಿ.ಎನ್.ರವೀಂದ್ರ ಅವರ ಉಪಸ್ಥಿತಿಯಲ್ಲಿ ಭದ್ರತಾ ಕೊಠಡಿ ತೆರೆಯಲಾಗಿದೆ. ಹೊಸಕೋಟೆ ಮತ ಕ್ಷೇತ್ರದ ಮತ ಎಣಿಕೆ ಇಲ್ಲಿ ನಡೆಯುತ್ತಿದೆ.</p>.<p>ಕೆ.ಆರ್.ಪೇಟೆಯಲ್ಲಿ ಜೆಡಿಎಸ್ ಅಭ್ಯರ್ಥಿ ಬಿ.ಎಲ್.ದೇವರಾಜ್, ಬಿಜೆಪಿಯ ನಾರಾಯಣಗೌಡ ಮತ್ತು ಕಾಂಗ್ರೆಸ್ನ ಕೆ.ಬಿ.ಚಂದ್ರಶೇಖರ್ ಸಮಕ್ಷಮ ಸ್ಟ್ರಾಂಗ್ ರೂಂ ತೆರೆದು ಮತ ಎಣಿಕೆಗೆ ಚಾಲನೆ ನೀಡಲಾಗಿದೆ.</p>.<p>ಹಾವೇರಿ ಜಿಲ್ಲೆಯ ರಾಣೆಬೆನ್ನೂರು- ಹಿರೇಕೆರೂರು ವಿಧಾನಸಭಾ ಕ್ಷೇತ್ರಗಳ ಮತ ಎಣಿಕೆದೇವಗಿರಿ ಎಂಜಿನಿಯರಿಂಗ್ ಕಾಲೇಜಿನಲ್ಲಿ ನಡೆಯುತ್ತಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು:</strong>ರಾಜ್ಯದ 15 ವಿಧಾನಸಭಾ ಕ್ಷೇತ್ರಗಳಿಗೆ ನಡೆದ ಉಪಚುನಾವಣೆಯ ಮತ ಎಣಿಕೆ ಕಾರ್ಯ ಸೋಮವಾರ ಬೆಳಿಗ್ಗೆ ಬಿಗಿ ಭದ್ರತೆಯೊಂದಿಗೆ ಆರಂಭಗೊಂಡಿದೆ.</p>.<p>ಹುಣಸೂರು ಕ್ಷೇತ್ರದಲ್ಲಿಮತ ಎಣಿಕೆ ನಡೆಯುತ್ತಿರುವ ದೇವರಾಜ ಅರಸು ಪ್ರಥಮ ದರ್ಜೆ ಕಾಲೇಜಿಗೆ ಬಿಗಿ ಭದ್ರತೆ ಒದಗಿಸಲಾಗಿದೆ. ಜಿಲ್ಲಾಧಿಕಾರಿ ಅಭಿರಾಂ ಜಿ. ಶಂಕರ್ ಸಮ್ಮುಖದಲ್ಲಿ ಸ್ಟ್ರಾಂಗ್ ರೂಂ ತೆರೆಯಲಾಗಿದೆ. ಮೊದಲು ಅಂಚೆ ಮತಗಳ ಎಣಿಕೆ ಮಾಡಲಾಗುತ್ತಿದೆ. ಈ ಕ್ಷೇತ್ರದಲ್ಲಿ ಒಟ್ಟು 107 ಅಂಚೆ ಮತಗಳಿವೆ. ಅನರ್ಹ ಶಾಸಕ ಎಚ್.ವಿಶ್ವನಾಥ್ ಅವರ ಸ್ಪರ್ಧೆಯಿಂದ ಈ ಕ್ಷೇತ್ರ ರಾಜ್ಯದ ಗಮನ ಸೆಳೆದಿದೆ. ವಿಶ್ವನಾಥ್ ಬಿಜೆಪಿಯಿಂದ ಕಣಕ್ಕಿಳಿದಿದ್ದಾರೆ. ಕಾಂಗ್ರೆಸ್ನ ಎಚ್.ಪಿ.ಮಂಜುನಾಥ್ ಮತ್ತು ಜೆಡಿಎಸ್ನ ದೇವರಹಳ್ಳಿ ಸೋಮಶೇಖರ್ ಕಣದಲ್ಲಿದ್ದಾರೆ.</p>.<p>ಶಿವಾಜಿನಗರ ಕ್ಷೇತ್ರದ ಮತ ಎಣಿಕೆ ಬೆಂಗಳೂರಿನಮೌಂಟ್ ಕಾರ್ಮೆಲ್ ಕಾಲೇಜು ಆವರಣದಲ್ಲಿ ನಡೆಯುತ್ತಿದೆ</p>.<p>ದೇವನಹಳ್ಳಿ ಆಕಾಶ್ ಶಾಲೆಯಲ್ಲಿ ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿ ಪಿ.ಎನ್.ರವೀಂದ್ರ ಅವರ ಉಪಸ್ಥಿತಿಯಲ್ಲಿ ಭದ್ರತಾ ಕೊಠಡಿ ತೆರೆಯಲಾಗಿದೆ. ಹೊಸಕೋಟೆ ಮತ ಕ್ಷೇತ್ರದ ಮತ ಎಣಿಕೆ ಇಲ್ಲಿ ನಡೆಯುತ್ತಿದೆ.</p>.<p>ಕೆ.ಆರ್.ಪೇಟೆಯಲ್ಲಿ ಜೆಡಿಎಸ್ ಅಭ್ಯರ್ಥಿ ಬಿ.ಎಲ್.ದೇವರಾಜ್, ಬಿಜೆಪಿಯ ನಾರಾಯಣಗೌಡ ಮತ್ತು ಕಾಂಗ್ರೆಸ್ನ ಕೆ.ಬಿ.ಚಂದ್ರಶೇಖರ್ ಸಮಕ್ಷಮ ಸ್ಟ್ರಾಂಗ್ ರೂಂ ತೆರೆದು ಮತ ಎಣಿಕೆಗೆ ಚಾಲನೆ ನೀಡಲಾಗಿದೆ.</p>.<p>ಹಾವೇರಿ ಜಿಲ್ಲೆಯ ರಾಣೆಬೆನ್ನೂರು- ಹಿರೇಕೆರೂರು ವಿಧಾನಸಭಾ ಕ್ಷೇತ್ರಗಳ ಮತ ಎಣಿಕೆದೇವಗಿರಿ ಎಂಜಿನಿಯರಿಂಗ್ ಕಾಲೇಜಿನಲ್ಲಿ ನಡೆಯುತ್ತಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>