ಬೆಂಗಳೂರು: ಶಾಸಕರು ಅನರ್ಹವಾಗಿರುವರಾಜ್ಯದ 15 ವಿಧಾನಸಭಾ ಕ್ಷೇತ್ರಗಳಿಗೆ ಡಿಸೆಂಬರ್ 5ರಂದು ಉಪಚುನಾವಣೆ ಘೋಷಣೆ ಮಾಡಲಾಗಿದೆ. ಡಿ.9ರಂದು ಮತ ಎಣಿಕೆ ನಡೆಯಲಿದೆ.
ಶುಕ್ರವಾರ ಚುನಾವಣಾ ಆಯೋಗ ದಿನಾಂಕ ಘೋಷಣೆ ಮಾಡಿದ್ದು,ನವೆಂಬರ್ 11ರಿಂದ ನಾಮಪತ್ರ ಸಲ್ಲಿಕೆ ಪ್ರಕ್ರಿಯೆ ಆರಂಭವಾಗಲಿದೆ.
* ನ. 18ನಾಮಪತ್ರ ಸಲ್ಲಿಕೆಗೆ ಕೊನೆಯ ದಿನ.
* ನ. 19 ನಾಮಪತ್ರ ಪರಿಶೀಲನೆ
* ನ. 21 ನಾಮಪತ್ರ ವಾಪಾಸ್ ಪಡೆಯಲು ಕೊನೆಯ ದಿನ.
* ಡಿ. 5ರಂದು ಮತದಾನ.
* ಡಿ. 9ರಂದು ಮತ ಎಣಿಕೆ.
* ಡಿ. 11ರೊಳಗೆ ಚುನಾವಣಾ ಪ್ರಕ್ರಿಯೆ ಪೂರ್ಣ.
ಈ ಮೊದಲು ಚುನಾವಣಾ ಆಯೋಗ ಅಕ್ಟೋಬರ್ 21ರಂದು 15 ಕ್ಷೇತ್ರಗಳಿಗೆ ಉಪ ಚುನಾವಣೆ ಘೋಷಣೆ ಮಾಡಿತ್ತು. ಅನರ್ಹರ ಅರ್ಜಿ ವಿಚಾರಣೆ ನಡೆಸಿದ್ದಸುಪ್ರೀಂ ಕೋರ್ಟ್,ಉಪಚುನಾವಣೆಯನ್ನು ಮುಂದೂಡಿ ಆದೇಶ ಹೊರಡಿಸಿತ್ತು. ಇದಾದ ಬೆನ್ನಲ್ಲೇ ಮತ್ತೆ ಚುನಾವಣಾ ಆಯೋಗ ದಿನಾಂಕ ಘೋಷಣೆ ಮಾಡಿದೆ.