ಗುರುವಾರ, 2 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಅನ್ನ ಭಾಗ್ಯ ಯೋಜನೆ ಗ್ಯಾರಂಟಿ ಕುರಿತು ಪೂರ್ಣ ಮಾಹಿತಿ ಇಲ್ಲಿದೆ

Published 2 ಜೂನ್ 2023, 15:22 IST
Last Updated 2 ಜೂನ್ 2023, 15:22 IST
ಅಕ್ಷರ ಗಾತ್ರ

ಬೆಂಗಳೂರು: ಗ್ಯಾರಂಟಿಗಳನ್ನು ಜಾರಿಗೊಳಿಸಿ ಸತತ ಸಭೆಗಳ ನಂತರ ಕೊನೆಗೂ ಕಾಂಗ್ರೆಸ್ ಸರ್ಕಾರ ಗ್ಯಾರಂಟಿ ಯೋಜನೆಗಳನ್ನು ಘೋಷಿಸಿದೆ. ಸಿಎಂ ಸಿದ್ದರಾಮಯ್ಯ ಸುದ್ದಿಗೋಷ್ಟಿ ನಡೆಸುವ ಮೂಲಕ 5 ಗ್ಯಾರಂಟಿಗಳ ಮಾಹಿತಿ ನೀಡಿದ್ದು ಈ ವರ್ಷವೇ ಎಲ್ಲಾ ಯೋಜನೆ ಜಾರಿ ತರುತ್ತೇವೆ ಎಂದು ತಿಳಿಸಿದ್ದಾರೆ.

ಅನ್ನ ಭಾಗ್ಯ ಯೋಜನೆ: ಹಿಂದಿನ ತಮ್ಮ ಸರ್ಕಾರದ ಅವಧಿಯಲ್ಲಿ ನೀಡಲಾಗುತ್ತಿದ್ದ 7 ಕೆಜಿ ಆಹಾರ ಧಾನ್ಯವನ್ನು ಬಿಜೆಪಿ ಸರ್ಕಾರವು 5 ಕೆಜಿಗೆ ಇಳಿಸಿದೆ. ಇದೀಗ ಆಹಾರಧಾನ್ಯದ ಪ್ರಮಾಣವನ್ನು 10 ಕೆಜಿಗೆ ಹೆಚ್ಚಿಸಲಾಗುವುದು. ಜೂನ್‌ ತಿಂಗಳ ಪಡಿತರ ವಿತರಣೆ ಪ್ರಕ್ರಿಯೆ ಪ್ರಾರಂಭವಾಗಿರುವುದರಿಂದ ಹಾಗೂ ಆಹಾರ ಧಾನ್ಯ ಖರೀದಿಸಬೇಕಾಗಿರುವುದರಿಂದ ಜುಲೈ 1ರಿಂದ ಈ ಯೋಜನೆಯನ್ನು ಜಾರಿಗೊಳಿಸಲಾಗುವುದು. ಅಂತ್ಯೋದಯ ಕಾರ್ಡುದಾರರು ಹಾಗೂ ಬಿಪಿಎಲ್‌ ಕಾರ್ಡುದಾರರಿಗೆ ಈ ಯೋಜನೆ ಸೌಲಭ್ಯ ದೊರೆಯಲಿದೆ.

ಇದನ್ನೂ ಓದಿ... ಕಾಂಗ್ರೆಸ್ ಪಕ್ಷ ನುಡಿದಂತೆ ನಡೆಯುವ ಪಕ್ಷ ಎಂಬುದನ್ನು ಮತ್ತೊಮ್ಮೆ ಸಾಬೀತುಪಡಿಸಿದ್ದೇವೆ: ಸಿದ್ದರಾಮಯ್ಯ

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT