<p><strong>ಬೆಂಗಳೂರು: </strong>ರಾಜ್ಯದ 1,120 ಪ್ರಾಥಮಿಕ ಆರೋಗ್ಯ ಕೇಂದ್ರಗಳು ಮತ್ತು 2,032 ಆರೋಗ್ಯ ಮತ್ತು ಸ್ವಾಸ್ಥ್ಯ ಕೇಂದ್ರಗಳಲ್ಲಿ ಟೆಲಿಮೆಡಿಸಿನ್ ಸೌಲಭ್ಯ ಕಲ್ಪಿಸಲು ಸಚಿವ ಸಂಪುಟ ಸಭೆ ಒಪ್ಪಿಗೆ ನೀಡಿದೆ.</p>.<p>ಇದಕ್ಕಾಗಿ ರಾಷ್ಟ್ರೀಯ ಆರೋಗ್ಯ ಮಿಷನ್ನಿಂದ ₹18.96 ಕೋಟಿ ಸಿಗಲಿದ್ದು, ಕೆಟಿಟಿಪಿ ಕಾಯ್ದೆಯಡಿ ಅಗತ್ಯ ಸಾಧನ– ಸಲಕರಣೆಗಳನ್ನು ಖರೀದಿಸಲು ಒಪ್ಪಿಗೆ ನೀಡಲಾಗಿದೆ ಎಂದು ಮೂಲಗಳು ತಿಳಿಸಿವೆ. 2020–21 ನೇ ಸಾಲಿಗೆ 1 ರಿಂದ 10 ನೇ ತರಗತಿವರೆಗಿನ ವಿದ್ಯಾರ್ಥಿಗಳಿಗೆ ಉಚಿತ ಪಠ್ಯ ಪುಸ್ತಕಗಳನ್ನು ವಿತರಿಸಲು ₹153.91 ಕೋಟಿ ಅನುದಾನ ನೀಡಲು ಒಪ್ಪಿಗೆ ನೀಡಲಾಯಿತು. ಎಲ್ಲ ಸರ್ಕಾರಿ ಮತ್ತು ಅನುದಾನಿತ ಶಾಲಾ ವಿದ್ಯಾರ್ಥಿಗಳಿಗೆ ಹಾಗೂ 74 ಆದರ್ಶ ಶಾಲೆಗಳ(6 ನೇ ತರಗತಿಯಿಂದ 10 ನೇ ತರಗತಿ) ವಿದ್ಯಾರ್ಥಿಗಳಿಗೆ ಉಚಿತ ಪಠ್ಯ ಪುಸ್ತಕ ವಿತರಿಸಲಾಗುವುದು.</p>.<p class="Subhead"><strong>ಮಸೂದೆ ಮಂಡನೆಗೆ ಒಪ್ಪಿಗೆ:</strong></p>.<p>* ಕರ್ನಾಟಕ ಸಹಕಾರಿ ಸೊಸೈಟಿಗಳ(ತಿದ್ದುಪಡಿ) ಮಸೂದೆ 2021 ಮತ್ತು ಕರ್ನಾಟಕ ಸೌಹಾರ್ದ ಸಹಕಾರಿ<br />(ತಿದ್ದುಪಡಿ) ಮಸೂದೆ</p>.<p>* ಕರ್ನಾಟಕ ವಿತ್ತೀಯ ಹೊಣೆಗಾರಿಕೆ ತಿದ್ದುಪಡಿ ಮಸೂದೆ 2021</p>.<p>* ಕರ್ನಾಟಕ ಸಾರ್ವಜನಿಕ ಸಂಗ್ರಹಣೆಯಲ್ಲಿ ಪಾರದರ್ಶಕ ತಿದ್ದುಪಡಿ ಮಸೂದೆ 2021</p>.<p>* ಕರ್ನಾಟಕ ರಾಜ್ಯ ಕೈಗಾರಿಕಾ ಭದ್ರತಾಪಡೆ ವೃಂದ ನೇಮಕ ನಿಯಮ 2021</p>.<p>* ಕರ್ನಾಟಕ ಕಾರಾಗೃಹ ಅಭಿವೃದ್ಧಿ ಮಂಡಳಿ ಮಸೂದೆ 2021</p>.<p>* ಕರ್ನಾಟಕ ನಗರ ಮತ್ತು ಪಟ್ಟಣ ಯೋಜನೆ 3ನೇ ತಿದ್ದುಪಡಿ ಮಸೂದೆ</p>.<p><strong>ಪ್ರಮುಖ ನಿರ್ಣಯಗಳು</strong></p>.<p>* ಲೋಕಾಯುಕ್ತಕ್ಕೆ ಗುತ್ತಿಗೆ ಆಧಾರದಲ್ಲಿ 12 ಹಿರಿಯ ಸಹಾಯಕ ಪಬ್ಲಿಕ್ ಪ್ರಾಸಿಕ್ಯೂಟರ್ ನೇಮಕ</p>.<p>* ರಾಣೆಬೆನ್ನೂರಿನಲ್ಲಿ ತಾಲ್ಲೂಕು ಮಟ್ಟದ ಆಸ್ಪತ್ರೆಯನ್ನು 50 ಹಾಸಿಗೆಗಳ ಸಾಮರ್ಥ್ಯದಿಂದ 100 ಹಾಸಿಗೆಗಳ ಸಾಮರ್ಥ್ಯಕ್ಕೆ ಮೇಲ್ದರ್ಜೆಗೇರಿಸಲು ಪರಿಷ್ಕೃತ ಅಂದಾಜು ₹10.84 ಕೋಟಿಗೆ ಅನುಮೋದನೆ.</p>.<p>* ಕಲ್ಯಾಣ ಕರ್ನಾಟಕ ಪ್ರದೇಶದಲ್ಲಿ ವಿಶೇಷ ನೇಮಕಾತಿಗೆ ಸಂಬಂಧಿಸಿದಂತೆ ಕರ್ನಾಟಕ ಆರೋಗ್ಯ ಮತ್ತು ಕುಟುಂಬ ಕಲ್ಯಾಣಗಳ ಸೇವೆಗಳ ನೇಮಕಾತಿ ವಿಶೇಷ ಕಾನೂನು 2020 ಕ್ಕೆ ಅನುಮೋದನೆ</p>.<p>* ಬೆಳಗಾವಿ ಜಿಲ್ಲೆ ಅಥಣಿ ತಾಲ್ಲೂಕಿನ ಸತ್ತಿ ಮತ್ತು ಇತರ ಎಂಟು ಗ್ರಾಮಗಳಿಗೆ ಬಹುಗ್ರಾಮ ಯೋಜನೆ ಜಾರಿಗೆ ₹45.39 ಕೋಟಿ ಅನುಮೋದನೆ. ಇದಕ್ಕೆ ಕೇಂದ್ರದ ಜಲ ಜೀವನ್ ಮಿಷನ್ ಮತ್ತು ನಬಾರ್ಡ್ನಿಂದ ನೆರವು ಸಿಗಲಿದೆ.</p>.<p>* ಬೆಳಗಾವಿ ಮತ್ತು ಮಂಗಳೂರಿನಲ್ಲಿ ₹31.66 ಕೋಟಿ ವೆಚ್ಚದಲ್ಲಿ ಕರ್ನಾಟಕ ಜರ್ಮನ್ ತಂತ್ರಜ್ಞಾನ ತರಬೇತಿ ಸಂಸ್ಥೆ ಕಟ್ಟಡ ನಿರ್ಮಾಣಕ್ಕೆ ಅನುಮೋದನೆ.</p>.<p>* ಮಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ಕದ್ರಿ ಮಾರುಕಟ್ಟೆ ಸಂಕೀರ್ಣ ನಿರ್ಮಾಣಕ್ಕೆ ₹12.30 ಕೋಟಿ ನೀಡಲು ಅನುಮೋದನೆ</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು: </strong>ರಾಜ್ಯದ 1,120 ಪ್ರಾಥಮಿಕ ಆರೋಗ್ಯ ಕೇಂದ್ರಗಳು ಮತ್ತು 2,032 ಆರೋಗ್ಯ ಮತ್ತು ಸ್ವಾಸ್ಥ್ಯ ಕೇಂದ್ರಗಳಲ್ಲಿ ಟೆಲಿಮೆಡಿಸಿನ್ ಸೌಲಭ್ಯ ಕಲ್ಪಿಸಲು ಸಚಿವ ಸಂಪುಟ ಸಭೆ ಒಪ್ಪಿಗೆ ನೀಡಿದೆ.</p>.<p>ಇದಕ್ಕಾಗಿ ರಾಷ್ಟ್ರೀಯ ಆರೋಗ್ಯ ಮಿಷನ್ನಿಂದ ₹18.96 ಕೋಟಿ ಸಿಗಲಿದ್ದು, ಕೆಟಿಟಿಪಿ ಕಾಯ್ದೆಯಡಿ ಅಗತ್ಯ ಸಾಧನ– ಸಲಕರಣೆಗಳನ್ನು ಖರೀದಿಸಲು ಒಪ್ಪಿಗೆ ನೀಡಲಾಗಿದೆ ಎಂದು ಮೂಲಗಳು ತಿಳಿಸಿವೆ. 2020–21 ನೇ ಸಾಲಿಗೆ 1 ರಿಂದ 10 ನೇ ತರಗತಿವರೆಗಿನ ವಿದ್ಯಾರ್ಥಿಗಳಿಗೆ ಉಚಿತ ಪಠ್ಯ ಪುಸ್ತಕಗಳನ್ನು ವಿತರಿಸಲು ₹153.91 ಕೋಟಿ ಅನುದಾನ ನೀಡಲು ಒಪ್ಪಿಗೆ ನೀಡಲಾಯಿತು. ಎಲ್ಲ ಸರ್ಕಾರಿ ಮತ್ತು ಅನುದಾನಿತ ಶಾಲಾ ವಿದ್ಯಾರ್ಥಿಗಳಿಗೆ ಹಾಗೂ 74 ಆದರ್ಶ ಶಾಲೆಗಳ(6 ನೇ ತರಗತಿಯಿಂದ 10 ನೇ ತರಗತಿ) ವಿದ್ಯಾರ್ಥಿಗಳಿಗೆ ಉಚಿತ ಪಠ್ಯ ಪುಸ್ತಕ ವಿತರಿಸಲಾಗುವುದು.</p>.<p class="Subhead"><strong>ಮಸೂದೆ ಮಂಡನೆಗೆ ಒಪ್ಪಿಗೆ:</strong></p>.<p>* ಕರ್ನಾಟಕ ಸಹಕಾರಿ ಸೊಸೈಟಿಗಳ(ತಿದ್ದುಪಡಿ) ಮಸೂದೆ 2021 ಮತ್ತು ಕರ್ನಾಟಕ ಸೌಹಾರ್ದ ಸಹಕಾರಿ<br />(ತಿದ್ದುಪಡಿ) ಮಸೂದೆ</p>.<p>* ಕರ್ನಾಟಕ ವಿತ್ತೀಯ ಹೊಣೆಗಾರಿಕೆ ತಿದ್ದುಪಡಿ ಮಸೂದೆ 2021</p>.<p>* ಕರ್ನಾಟಕ ಸಾರ್ವಜನಿಕ ಸಂಗ್ರಹಣೆಯಲ್ಲಿ ಪಾರದರ್ಶಕ ತಿದ್ದುಪಡಿ ಮಸೂದೆ 2021</p>.<p>* ಕರ್ನಾಟಕ ರಾಜ್ಯ ಕೈಗಾರಿಕಾ ಭದ್ರತಾಪಡೆ ವೃಂದ ನೇಮಕ ನಿಯಮ 2021</p>.<p>* ಕರ್ನಾಟಕ ಕಾರಾಗೃಹ ಅಭಿವೃದ್ಧಿ ಮಂಡಳಿ ಮಸೂದೆ 2021</p>.<p>* ಕರ್ನಾಟಕ ನಗರ ಮತ್ತು ಪಟ್ಟಣ ಯೋಜನೆ 3ನೇ ತಿದ್ದುಪಡಿ ಮಸೂದೆ</p>.<p><strong>ಪ್ರಮುಖ ನಿರ್ಣಯಗಳು</strong></p>.<p>* ಲೋಕಾಯುಕ್ತಕ್ಕೆ ಗುತ್ತಿಗೆ ಆಧಾರದಲ್ಲಿ 12 ಹಿರಿಯ ಸಹಾಯಕ ಪಬ್ಲಿಕ್ ಪ್ರಾಸಿಕ್ಯೂಟರ್ ನೇಮಕ</p>.<p>* ರಾಣೆಬೆನ್ನೂರಿನಲ್ಲಿ ತಾಲ್ಲೂಕು ಮಟ್ಟದ ಆಸ್ಪತ್ರೆಯನ್ನು 50 ಹಾಸಿಗೆಗಳ ಸಾಮರ್ಥ್ಯದಿಂದ 100 ಹಾಸಿಗೆಗಳ ಸಾಮರ್ಥ್ಯಕ್ಕೆ ಮೇಲ್ದರ್ಜೆಗೇರಿಸಲು ಪರಿಷ್ಕೃತ ಅಂದಾಜು ₹10.84 ಕೋಟಿಗೆ ಅನುಮೋದನೆ.</p>.<p>* ಕಲ್ಯಾಣ ಕರ್ನಾಟಕ ಪ್ರದೇಶದಲ್ಲಿ ವಿಶೇಷ ನೇಮಕಾತಿಗೆ ಸಂಬಂಧಿಸಿದಂತೆ ಕರ್ನಾಟಕ ಆರೋಗ್ಯ ಮತ್ತು ಕುಟುಂಬ ಕಲ್ಯಾಣಗಳ ಸೇವೆಗಳ ನೇಮಕಾತಿ ವಿಶೇಷ ಕಾನೂನು 2020 ಕ್ಕೆ ಅನುಮೋದನೆ</p>.<p>* ಬೆಳಗಾವಿ ಜಿಲ್ಲೆ ಅಥಣಿ ತಾಲ್ಲೂಕಿನ ಸತ್ತಿ ಮತ್ತು ಇತರ ಎಂಟು ಗ್ರಾಮಗಳಿಗೆ ಬಹುಗ್ರಾಮ ಯೋಜನೆ ಜಾರಿಗೆ ₹45.39 ಕೋಟಿ ಅನುಮೋದನೆ. ಇದಕ್ಕೆ ಕೇಂದ್ರದ ಜಲ ಜೀವನ್ ಮಿಷನ್ ಮತ್ತು ನಬಾರ್ಡ್ನಿಂದ ನೆರವು ಸಿಗಲಿದೆ.</p>.<p>* ಬೆಳಗಾವಿ ಮತ್ತು ಮಂಗಳೂರಿನಲ್ಲಿ ₹31.66 ಕೋಟಿ ವೆಚ್ಚದಲ್ಲಿ ಕರ್ನಾಟಕ ಜರ್ಮನ್ ತಂತ್ರಜ್ಞಾನ ತರಬೇತಿ ಸಂಸ್ಥೆ ಕಟ್ಟಡ ನಿರ್ಮಾಣಕ್ಕೆ ಅನುಮೋದನೆ.</p>.<p>* ಮಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ಕದ್ರಿ ಮಾರುಕಟ್ಟೆ ಸಂಕೀರ್ಣ ನಿರ್ಮಾಣಕ್ಕೆ ₹12.30 ಕೋಟಿ ನೀಡಲು ಅನುಮೋದನೆ</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>