ಆರ್.ಟಿ. ನಗರದಲ್ಲಿರುವ ತಮ್ಮ ನಿವಾಸದಲ್ಲಿ ಸುದ್ದಿಗಾರರ ಜೊತೆ ಭಾನುವಾರ ಸಂಜೆ ಮಾತನಾಡಿದ ಅವರು, ‘ಸಂಜೆ 5.40ರ ವಿಮಾನದಲ್ಲಿ ದೆಹಲಿಗೆ ಹೋಗುತ್ತಿದ್ದೇನೆ. ನಾಳೆ ( ಸೋಮವಾರ) ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾ ಅವರನ್ನು ಭೇಟಿ ಮಾಡುತ್ತೇನೆ. ಸಚಿವ ಸಂಪುಟ ಸೇರುವವರ ಪಟ್ಟಿಯನ್ನು ಅಂತಿಮಗೊಳಿಸಿ ಮರಳುತ್ತೇನೆ’ ಎಂದಿದ್ದಾರೆ.