<p><strong>ಬೆಂಗಳೂರು</strong>: ಡಿ.ಕೆ. ಶಿವಕುಮಾರ್ ನೇತೃತ್ವದ ನೂತನ ಕಾಂಗ್ರೆಸ್ ಸರ್ಕಾರದಲ್ಲಿ 60ರ ವಯಸ್ಸಿನ ಒಳಗಿನ ಪಕ್ಷ ನಿಷ್ಠರಿಗೆ ಹೆಚ್ಚಿನ ಅವಕಾಶ ಸಿಗುವ ಸಂಭವ ಇದೆ.</p><p>ಮುಂದಿನ ಎರಡು ವರ್ಷ ರಾಜ್ಯ ಸರ್ಕಾರದ ಚುಕ್ಕಾಣಿ ಹಿಡಿಯಲಿರುವ ಶಿವಕುಮಾರ್, ಲೋಕಭವನದಲ್ಲಿ ಜೂನ್ 3ರಂದು ನೂತನ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಲಿದ್ದಾರೆ. ಅವರ ಜೊತೆಗೆ 8 ರಿಂದ 10 ಶಾಸಕರು ಸಚಿವರಾಗಿ ಪ್ರಮಾಣವಚನ ತೆಗೆದುಕೊಳ್ಳುವ ಸಾಧ್ಯತೆಯಿದೆ. ಈಗ ಮತ್ತು ಮುಂದಿನ ದಿನಗಳಲ್ಲಿ ನಡೆಯುವ ವಿಸ್ತರಣೆಯೂ ಸೇರಿ, ಸಿದ್ದರಾಮಯ್ಯ ಸಂಪುಟದಲ್ಲಿದ್ದ ಸುಮಾರು 13-14 ಸಚಿವರು ಹೊಸ ಸಂಪುಟದಲ್ಲಿ ಸ್ಥಾನ ಪಡೆಯಬಹುದು. ಈ ಪೈಕಿ, ಕೆಲವರು ಸಿದ್ದರಾಮಯ್ಯ ಕೋಟಾದಡಿ, ಇನ್ನೂ ಕೆಲವರು ಹೈಕಮಾಂಡ್ ಕೋಟಾದಡಿ ಮರಳಿ ಸಂಪುಟ ಸೇರಬಹುದು ಎಂದು ಹೇಳಲಾಗುತ್ತಿದೆ. ಉಳಿದಂತೆ, ನಿಗದಿಪಡಿಸಿದ ಮಾನದಂಡಗಳನ್ನು ಪರಿಗಣಿಸಿ ಹೊಸ ಮುಖಗಳಿಗೆ ಹೈಕಮಾಂಡ್ ಮಣೆ ಹಾಕಬಹುದೆಂಬ ಚರ್ಚೆ ನಡೆಯುತ್ತಿದೆ.</p><p>ಎರಡಕ್ಕೂ ಹೆಚ್ಚು ಬಾರಿ ಆಯ್ಕೆಯಾದ, 60ರ ವಯಸ್ಸಿನ ಒಳಗಿನ, ಪಕ್ಷ ನಿಷ್ಠ ಹಾಗೂ 2028ರ ಚುನಾವಣೆಗೆ ಸಂಘಟನೆಯನ್ನು ಹುರಿಗೊಳಿಸಬಲ್ಲ ಹೊಸಬರಿಗೆ ನೂತನ ಸಂಪುಟದಲ್ಲಿ ಅವಕಾಶ ತೆರೆದುಕೊಳ್ಳುವ ಸಂಭವ ಇದೆ. </p><p>ಆಕಾಂಕ್ಷಿ ಹೊಸಬರ ಪಟ್ಟಿ ದೊಡ್ಡದಿದ್ದು, ತೀವ್ರ ಪೈಪೋಟಿ ಏರ್ಪಟ್ಟಿದೆ. ಚರ್ಚೆಯಲ್ಲಿರುವ ಹೊಸ ಮುಖಗಳಲ್ಲಿ ಹೆಚ್ಚಿನವರು ಶಿವಕುಮಾರ್ ಬಣದವರು ಎಂದು ಹೇಳಲಾಗುತ್ತಿದೆ. ಕೆಲವರು ಹೈಕಮಾಂಡ್ ಮಟ್ಟದಲ್ಲಿ, ಮತ್ತೆ ಕೆಲವರು ಸಿದ್ದರಾಮಯ್ಯ ಮಟ್ಟದಲ್ಲಿ ಲಾಬಿ ನಡೆಸುತ್ತಿದ್ದಾರೆ.ಆದರೆ, ಸಿದ್ದರಾಮಯ್ಯ ಸಂಪುಟದಲ್ಲಿ ಕಳಪೆ ಸಾಧನೆ ತೋರಿಸಿದ ಸಚಿವರಿಗೆ ಸ್ಥಾನ ಕೈ ತಪ್ಪುವುದು ಬಹುತೇಕ ಖಚಿತ ಎಂಬ ಮಾತು ಕಾಂಗ್ರೆಸ್ ಪಾಳಯದಲ್ಲಿ ಇದೆ. ಉತ್ತಮ ಸಾಧನೆ, ಜಾತಿವಾರು, ಪ್ರದೇಶವಾರು ಅಂಶಗಳನ್ನು ಪರಿಗಣಿಸಿ ಕೆಲವು ಮಾಜಿಗಳಿಗೆ ಮತ್ತೆ ಸ್ಥಾನ ಸಿಗಬಹುದು ಎನ್ನಲಾಗಿದೆ.</p><p>ಜಿ. ಪರಮೇಶ್ವರ, ಎಂ.ಬಿ. ಪಾಟೀಲ, ಜಮೀರ್ ಅಹಮದ್ ಖಾನ್, ಕೃಷ್ಣ ಬೈರೇಗೌಡ, ಈಶ್ವರ ಖಂಡ್ರೆ, ಪ್ರಿಯಾಂಕ್ ಖರ್ಗೆ, ಎಚ್.ಕೆ. ಪಾಟೀಲ, ಸತೀಶ ಜಾರಕಿಹೊಳಿ, ಶಿವರಾಜ್ ತಂಗಡಗಿ, ರಾಮಲಿಂಗಾ ರೆಡ್ಡಿ, ದಿನೇಶ್ ಗುಂಡೂರಾವ್, ಸಂತೋಷ್ ಲಾಡ್, ಎಂ. ಸಿ. ಸುಧಾಕರ್, ಬೈರತಿ ಸುರೇಶ್ ಈ ಪೈಕಿ ಕೆಲವರಿಗೆ ಶಿವಕುಮಾರ್ ಸಂಪುಟದಲ್ಲಿ ಸ್ಥಾನ ಸಿಗುವುದು ಬಹುತೇಕ ಖಚಿತ. </p><p>ಹೊಸಬರ ಪೈಕಿ ವಿಧಾನ ಪರಿಷತ್ ಸದಸ್ಯರಾದ ಯತೀಂದ್ರ ಸಿದ್ದರಾಮಯ್ಯ ಸಂಪುಟ ಸೇರುವುದು ಬಹುತೇಕ ನಿರ್ಧರಿತ. ಉಳಿದಂತೆ, ಪರಿಷತ್ನಿಂದ ಸಲೀಂ ಅಹಮದ್, ಶಾಸಕರಾದ ಟಿ.ಬಿ. ಜಯಚಂದ್ರ, ಯು.ಟಿ. ಖಾದರ್, ಲಕ್ಷ್ಮಣ್ ಸವದಿ, ಎನ್.ಎ. ಹ್ಯಾರಿಸ್, ಮಾಗಡಿ ಬಾಲಕೃಷ್ಣ, ಕೆ. ಷಡಕ್ಷರಿ, ಗುಬ್ಬಿ ಶ್ರೀನಿವಾಸ್, ರಾಘವೇಂದ್ರ ಹಿಟ್ನಾಳ್, ಅಶೋಕ್ ಪಟ್ಟಣ, ತನ್ವೀರ್ ಸೇಠ್, ಪಿ.ಎಂ. ನರೇಂದ್ರ ಸ್ವಾಮಿ, ರೂಪಾ ಶಶಿಧರ್, ಬೇಳೂರು ಗೋಪಾಲಕೃಷ್ಣ ಪೈಕಿ ಕೆಲವು ಹೊಸ ಮುಖಗಳು ಸಂಪುಟದಲ್ಲಿ ಸ್ಥಾನ ಪಡೆಯುವ ಸಾಧ್ಯತೆ ಹೆಚ್ಚಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು</strong>: ಡಿ.ಕೆ. ಶಿವಕುಮಾರ್ ನೇತೃತ್ವದ ನೂತನ ಕಾಂಗ್ರೆಸ್ ಸರ್ಕಾರದಲ್ಲಿ 60ರ ವಯಸ್ಸಿನ ಒಳಗಿನ ಪಕ್ಷ ನಿಷ್ಠರಿಗೆ ಹೆಚ್ಚಿನ ಅವಕಾಶ ಸಿಗುವ ಸಂಭವ ಇದೆ.</p><p>ಮುಂದಿನ ಎರಡು ವರ್ಷ ರಾಜ್ಯ ಸರ್ಕಾರದ ಚುಕ್ಕಾಣಿ ಹಿಡಿಯಲಿರುವ ಶಿವಕುಮಾರ್, ಲೋಕಭವನದಲ್ಲಿ ಜೂನ್ 3ರಂದು ನೂತನ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಲಿದ್ದಾರೆ. ಅವರ ಜೊತೆಗೆ 8 ರಿಂದ 10 ಶಾಸಕರು ಸಚಿವರಾಗಿ ಪ್ರಮಾಣವಚನ ತೆಗೆದುಕೊಳ್ಳುವ ಸಾಧ್ಯತೆಯಿದೆ. ಈಗ ಮತ್ತು ಮುಂದಿನ ದಿನಗಳಲ್ಲಿ ನಡೆಯುವ ವಿಸ್ತರಣೆಯೂ ಸೇರಿ, ಸಿದ್ದರಾಮಯ್ಯ ಸಂಪುಟದಲ್ಲಿದ್ದ ಸುಮಾರು 13-14 ಸಚಿವರು ಹೊಸ ಸಂಪುಟದಲ್ಲಿ ಸ್ಥಾನ ಪಡೆಯಬಹುದು. ಈ ಪೈಕಿ, ಕೆಲವರು ಸಿದ್ದರಾಮಯ್ಯ ಕೋಟಾದಡಿ, ಇನ್ನೂ ಕೆಲವರು ಹೈಕಮಾಂಡ್ ಕೋಟಾದಡಿ ಮರಳಿ ಸಂಪುಟ ಸೇರಬಹುದು ಎಂದು ಹೇಳಲಾಗುತ್ತಿದೆ. ಉಳಿದಂತೆ, ನಿಗದಿಪಡಿಸಿದ ಮಾನದಂಡಗಳನ್ನು ಪರಿಗಣಿಸಿ ಹೊಸ ಮುಖಗಳಿಗೆ ಹೈಕಮಾಂಡ್ ಮಣೆ ಹಾಕಬಹುದೆಂಬ ಚರ್ಚೆ ನಡೆಯುತ್ತಿದೆ.</p><p>ಎರಡಕ್ಕೂ ಹೆಚ್ಚು ಬಾರಿ ಆಯ್ಕೆಯಾದ, 60ರ ವಯಸ್ಸಿನ ಒಳಗಿನ, ಪಕ್ಷ ನಿಷ್ಠ ಹಾಗೂ 2028ರ ಚುನಾವಣೆಗೆ ಸಂಘಟನೆಯನ್ನು ಹುರಿಗೊಳಿಸಬಲ್ಲ ಹೊಸಬರಿಗೆ ನೂತನ ಸಂಪುಟದಲ್ಲಿ ಅವಕಾಶ ತೆರೆದುಕೊಳ್ಳುವ ಸಂಭವ ಇದೆ. </p><p>ಆಕಾಂಕ್ಷಿ ಹೊಸಬರ ಪಟ್ಟಿ ದೊಡ್ಡದಿದ್ದು, ತೀವ್ರ ಪೈಪೋಟಿ ಏರ್ಪಟ್ಟಿದೆ. ಚರ್ಚೆಯಲ್ಲಿರುವ ಹೊಸ ಮುಖಗಳಲ್ಲಿ ಹೆಚ್ಚಿನವರು ಶಿವಕುಮಾರ್ ಬಣದವರು ಎಂದು ಹೇಳಲಾಗುತ್ತಿದೆ. ಕೆಲವರು ಹೈಕಮಾಂಡ್ ಮಟ್ಟದಲ್ಲಿ, ಮತ್ತೆ ಕೆಲವರು ಸಿದ್ದರಾಮಯ್ಯ ಮಟ್ಟದಲ್ಲಿ ಲಾಬಿ ನಡೆಸುತ್ತಿದ್ದಾರೆ.ಆದರೆ, ಸಿದ್ದರಾಮಯ್ಯ ಸಂಪುಟದಲ್ಲಿ ಕಳಪೆ ಸಾಧನೆ ತೋರಿಸಿದ ಸಚಿವರಿಗೆ ಸ್ಥಾನ ಕೈ ತಪ್ಪುವುದು ಬಹುತೇಕ ಖಚಿತ ಎಂಬ ಮಾತು ಕಾಂಗ್ರೆಸ್ ಪಾಳಯದಲ್ಲಿ ಇದೆ. ಉತ್ತಮ ಸಾಧನೆ, ಜಾತಿವಾರು, ಪ್ರದೇಶವಾರು ಅಂಶಗಳನ್ನು ಪರಿಗಣಿಸಿ ಕೆಲವು ಮಾಜಿಗಳಿಗೆ ಮತ್ತೆ ಸ್ಥಾನ ಸಿಗಬಹುದು ಎನ್ನಲಾಗಿದೆ.</p><p>ಜಿ. ಪರಮೇಶ್ವರ, ಎಂ.ಬಿ. ಪಾಟೀಲ, ಜಮೀರ್ ಅಹಮದ್ ಖಾನ್, ಕೃಷ್ಣ ಬೈರೇಗೌಡ, ಈಶ್ವರ ಖಂಡ್ರೆ, ಪ್ರಿಯಾಂಕ್ ಖರ್ಗೆ, ಎಚ್.ಕೆ. ಪಾಟೀಲ, ಸತೀಶ ಜಾರಕಿಹೊಳಿ, ಶಿವರಾಜ್ ತಂಗಡಗಿ, ರಾಮಲಿಂಗಾ ರೆಡ್ಡಿ, ದಿನೇಶ್ ಗುಂಡೂರಾವ್, ಸಂತೋಷ್ ಲಾಡ್, ಎಂ. ಸಿ. ಸುಧಾಕರ್, ಬೈರತಿ ಸುರೇಶ್ ಈ ಪೈಕಿ ಕೆಲವರಿಗೆ ಶಿವಕುಮಾರ್ ಸಂಪುಟದಲ್ಲಿ ಸ್ಥಾನ ಸಿಗುವುದು ಬಹುತೇಕ ಖಚಿತ. </p><p>ಹೊಸಬರ ಪೈಕಿ ವಿಧಾನ ಪರಿಷತ್ ಸದಸ್ಯರಾದ ಯತೀಂದ್ರ ಸಿದ್ದರಾಮಯ್ಯ ಸಂಪುಟ ಸೇರುವುದು ಬಹುತೇಕ ನಿರ್ಧರಿತ. ಉಳಿದಂತೆ, ಪರಿಷತ್ನಿಂದ ಸಲೀಂ ಅಹಮದ್, ಶಾಸಕರಾದ ಟಿ.ಬಿ. ಜಯಚಂದ್ರ, ಯು.ಟಿ. ಖಾದರ್, ಲಕ್ಷ್ಮಣ್ ಸವದಿ, ಎನ್.ಎ. ಹ್ಯಾರಿಸ್, ಮಾಗಡಿ ಬಾಲಕೃಷ್ಣ, ಕೆ. ಷಡಕ್ಷರಿ, ಗುಬ್ಬಿ ಶ್ರೀನಿವಾಸ್, ರಾಘವೇಂದ್ರ ಹಿಟ್ನಾಳ್, ಅಶೋಕ್ ಪಟ್ಟಣ, ತನ್ವೀರ್ ಸೇಠ್, ಪಿ.ಎಂ. ನರೇಂದ್ರ ಸ್ವಾಮಿ, ರೂಪಾ ಶಶಿಧರ್, ಬೇಳೂರು ಗೋಪಾಲಕೃಷ್ಣ ಪೈಕಿ ಕೆಲವು ಹೊಸ ಮುಖಗಳು ಸಂಪುಟದಲ್ಲಿ ಸ್ಥಾನ ಪಡೆಯುವ ಸಾಧ್ಯತೆ ಹೆಚ್ಚಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>