<p><strong>ಕಲಬುರಗಿ</strong>: ನಿಯೋಜಿತ ಮುಖ್ಯಮಂತ್ರಿ ಡಿ. ಕೆ. ಶಿವಕುಮಾರ್ ನೇತೃತ್ವದಲ್ಲಿ ಕರ್ನಾಟಕದಲ್ಲಿ ಹೊಸ ಸಚಿವ ಸಂಪುಟ ರಚನೆ ಕುರಿತು ಯಾವುದೇ ಪ್ರಸ್ತಾವನೆ ಈವರೆಗೆ ಕೇಂದ್ರ ನಾಯಕತ್ವದ ಮುಂದೆ ಬಂದಿಲ್ಲ ಎಂದು ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಭಾನುವಾರ ಹೇಳಿದ್ದಾರೆ.</p><p>ಜೂನ್ 3ರಂದು ನಡೆಯಲಿರುವ ಪ್ರಮಾಣವಚನ ಸ್ವೀಕಾರ ಸಮಾರಂಭದ ನಂತರ ಸಮಾಲೋಚನೆ ನಡೆಸಿ, ಸಚಿವರು, ಉಪಮುಖ್ಯಮಂತ್ರಿಗಳು ಮತ್ತು ಪ್ರಮುಖ ನೇಮಕಾತಿಗಳ ಕುರಿತು ನಿರ್ಧಾರ ತೆಗೆದುಕೊಳ್ಳಲಾಗುವುದು ಎಂದು ಅವರು ಹೇಳಿದ್ದಾರೆ.</p><p>ಸರ್ಕಾರ ರಚನೆ ಪ್ರಕ್ರಿಯೆಯ ವಿವಿಧ ಅಂಶಗಳ ಕುರಿತು ಚರ್ಚೆಗಳು ನಡೆಯುತ್ತಿವೆ. ಆದರೆ, ಇಲ್ಲಿಯವರೆಗೆ ಯಾವುದೇ ಅಧಿಕೃತ ಪ್ರಸ್ತಾವನೆ ಪಕ್ಷದ ನಾಯಕತ್ವದ ಮುಂದೆ ಇಡಲಾಗಿಲ್ಲ ಎಂದು ಹೇಳಿದ್ದಾರೆ.</p><p>ಪ್ರಮಾಣವಚನ ಸಮಾರಂಭದ ನಂತರವೇ ಪಕ್ಷಕ್ಕೆ ಸ್ಪಷ್ಟತೆ ಸಿಗಲಿದೆ ಎಂದ ಖರ್ಗೆ, ಈ ಎಲ್ಲಾ ವಿಷಯಗಳು ಚರ್ಚೆಯಲ್ಲಿವೆ. ಜೂನ್ 3ರ ನಂತರ ನಮಗೆ ತಿಳಿಯುತ್ತದೆ ಎಂದು ಸ್ಪಷ್ಟಪಡಿಸಿದ್ದಾರೆ.</p><p>ಸಚಿವ ಸಂಪುಟವನ್ನು ಹಂತ ಹಂತವಾಗಿ ವಿಸ್ತರಿಸುವ ಸಾಧ್ಯತೆಯನ್ನು ಉಲ್ಲೇಖಿಸಿದ ಅವರು, ಮೊದಲು ಒಂದು ಹಂತ ಪೂರ್ಣಗೊಳ್ಳಬಹುದು. ನಂತರ, 15 ದಿನಗಳು ಅಥವಾ ಒಂದು ತಿಂಗಳ ನಂತರ, ಮತ್ತೊಂದು ಹಂತ ನಡೆಯಲಿದೆ ಎಂದು ಹೇಳಿದ್ದಾರೆ.</p><p>ಸಂಪುಟಕ್ಕೆ ಯಾ ರನ್ನು ಸೇರ್ಪಡೆ ಮಾಡಿಕೊಳ್ಳಬೇಕು ಎಂಬ ಬಗ್ಗೆ ಚರ್ಚೆಗಳು ನಡೆಯುತ್ತಿವೆ. ಅಂತಿಮ ನಿರ್ಧಾರ ಇನ್ನೂ ಪಕ್ಷದ ನಾಯಕತ್ವದ ಮುಂದೆ ಬಂದಿಲ್ಲ ಎಂದಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕಲಬುರಗಿ</strong>: ನಿಯೋಜಿತ ಮುಖ್ಯಮಂತ್ರಿ ಡಿ. ಕೆ. ಶಿವಕುಮಾರ್ ನೇತೃತ್ವದಲ್ಲಿ ಕರ್ನಾಟಕದಲ್ಲಿ ಹೊಸ ಸಚಿವ ಸಂಪುಟ ರಚನೆ ಕುರಿತು ಯಾವುದೇ ಪ್ರಸ್ತಾವನೆ ಈವರೆಗೆ ಕೇಂದ್ರ ನಾಯಕತ್ವದ ಮುಂದೆ ಬಂದಿಲ್ಲ ಎಂದು ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಭಾನುವಾರ ಹೇಳಿದ್ದಾರೆ.</p><p>ಜೂನ್ 3ರಂದು ನಡೆಯಲಿರುವ ಪ್ರಮಾಣವಚನ ಸ್ವೀಕಾರ ಸಮಾರಂಭದ ನಂತರ ಸಮಾಲೋಚನೆ ನಡೆಸಿ, ಸಚಿವರು, ಉಪಮುಖ್ಯಮಂತ್ರಿಗಳು ಮತ್ತು ಪ್ರಮುಖ ನೇಮಕಾತಿಗಳ ಕುರಿತು ನಿರ್ಧಾರ ತೆಗೆದುಕೊಳ್ಳಲಾಗುವುದು ಎಂದು ಅವರು ಹೇಳಿದ್ದಾರೆ.</p><p>ಸರ್ಕಾರ ರಚನೆ ಪ್ರಕ್ರಿಯೆಯ ವಿವಿಧ ಅಂಶಗಳ ಕುರಿತು ಚರ್ಚೆಗಳು ನಡೆಯುತ್ತಿವೆ. ಆದರೆ, ಇಲ್ಲಿಯವರೆಗೆ ಯಾವುದೇ ಅಧಿಕೃತ ಪ್ರಸ್ತಾವನೆ ಪಕ್ಷದ ನಾಯಕತ್ವದ ಮುಂದೆ ಇಡಲಾಗಿಲ್ಲ ಎಂದು ಹೇಳಿದ್ದಾರೆ.</p><p>ಪ್ರಮಾಣವಚನ ಸಮಾರಂಭದ ನಂತರವೇ ಪಕ್ಷಕ್ಕೆ ಸ್ಪಷ್ಟತೆ ಸಿಗಲಿದೆ ಎಂದ ಖರ್ಗೆ, ಈ ಎಲ್ಲಾ ವಿಷಯಗಳು ಚರ್ಚೆಯಲ್ಲಿವೆ. ಜೂನ್ 3ರ ನಂತರ ನಮಗೆ ತಿಳಿಯುತ್ತದೆ ಎಂದು ಸ್ಪಷ್ಟಪಡಿಸಿದ್ದಾರೆ.</p><p>ಸಚಿವ ಸಂಪುಟವನ್ನು ಹಂತ ಹಂತವಾಗಿ ವಿಸ್ತರಿಸುವ ಸಾಧ್ಯತೆಯನ್ನು ಉಲ್ಲೇಖಿಸಿದ ಅವರು, ಮೊದಲು ಒಂದು ಹಂತ ಪೂರ್ಣಗೊಳ್ಳಬಹುದು. ನಂತರ, 15 ದಿನಗಳು ಅಥವಾ ಒಂದು ತಿಂಗಳ ನಂತರ, ಮತ್ತೊಂದು ಹಂತ ನಡೆಯಲಿದೆ ಎಂದು ಹೇಳಿದ್ದಾರೆ.</p><p>ಸಂಪುಟಕ್ಕೆ ಯಾ ರನ್ನು ಸೇರ್ಪಡೆ ಮಾಡಿಕೊಳ್ಳಬೇಕು ಎಂಬ ಬಗ್ಗೆ ಚರ್ಚೆಗಳು ನಡೆಯುತ್ತಿವೆ. ಅಂತಿಮ ನಿರ್ಧಾರ ಇನ್ನೂ ಪಕ್ಷದ ನಾಯಕತ್ವದ ಮುಂದೆ ಬಂದಿಲ್ಲ ಎಂದಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>