ಮಾರ್ಚ್ 29ರಂದು ರಾಜ್ಯ ವಿಧಾನಸಭಾ ಚುನಾವಣೆಗೆ ಚುನಾವಣಾ ವೇಳಾಪಟ್ಟಿಯನ್ನು ಪ್ರಕಟಿಸಿದ ಚುನಾವಣಾ ಆಯೋಗ ಮಾದರಿ ನೀತಿ ಸಂಹಿತೆಯನ್ನು ಘೋಷಿಸಿದೆ. ಚುನಾವಣಾ ಮಾದರಿ ಸಂಹಿತೆ ಘೋಷಣೆಯಾಗುತ್ತಿದ್ದಂತೆ ವಿಶೇಷ ರೈಲುಗಳ ಕಾರ್ಯಾಚರಣೆಗಳ ಬಗ್ಗೆ ಹಲವು ಅನುಮಾನಗಳು ಹುಟ್ಟಿಕೊಂಡಿದ್ದವು. ಹಿಂದೂ ಧಾರ್ಮಿಕ ಹಾಗೂ ಧರ್ಮಾದಾಯ ದತ್ತಿಗಳ ಇಲಾಖೆ ಚುನಾವಣಾ ಆಯೋಗವನ್ನು ಸಂಪರ್ಕಿಸಿದ್ದು, ‘ಬುಂಕಿಂಗ್ ಅನ್ನು ತಕ್ಷಣ ನಿಲ್ಲಿಸಿ , ಕಾಶಿ ದರ್ಶನ್ ವಿಶೇಷ ರೈಲು ಸೇವೆಯನ್ನು ರದ್ದುಪಡಿಸುವಂತೆ‘ ತಿಳಿಸಿದೆ.