ಮಂಗಳವಾರ, 3 ಮಾರ್ಚ್ 2026
×
ADVERTISEMENT

Karnataka Caste Census | ಇದೇ 17ಕ್ಕೆ ಜಾತಿಗಣತಿ ಭವಿಷ್ಯ?

ಸಂಪುಟ ಸಭೆಯಲ್ಲಿ ಸಾಮಾಜಿಕ–ಶೈಕ್ಷಣಿಕ ಸಮೀಕ್ಷೆ ಮಂಡನೆ
Published : 11 ಏಪ್ರಿಲ್ 2025, 23:30 IST
Last Updated : 11 ಏಪ್ರಿಲ್ 2025, 23:30 IST
ADVERTISEMENT
ಫಾಲೋ ಮಾಡಿ
Comments
ವರದಿ ಮಂಡನೆಯಾಗಿದೆ. ಎಲ್ಲ ಸಚಿವರಿಗೂ ಪ್ರತಿ ನೀಡಲಾಗಿದೆ. ಅದರಲ್ಲಿನ ಮಾಹಿತಿ ತಿಳಿದುಕೊಳ್ಳಲಾಗುವುದು, ಸಂಪುಟ ಸಭೆಯಲ್ಲಿ ವಿಸ್ತೃತ ಚರ್ಚೆ ನಡೆಸಲಾಗುವುದು
ಡಿ.ಕೆ. ಶಿವಕುಮಾರ್, ಉಪಮುಖ್ಯಮಂತ್ರಿ
ಎಲ್ಲರ ಮನೆಗೂ ಭೇಟಿ ನೀಡಿ ವರದಿ ಸಿದ್ಧಪಡಿಸಿಲ್ಲ. ಯಾರಿಗೋ ಅನುಕೂಲ ಮಾಡಿಕೊಡಲು, ಜಾತಿಜಾತಿಗಳ ನಡುವೆ ವಿಷಬೀಜ ಬಿತ್ತಲು ಸಿದ್ದರಾಮಯ್ಯ ಹೇಳಿ ಮಾಡಿಸಿರುವ ವರದಿ
ಆರ್‌. ಅಶೋಕ, ವಿಧಾನಸಭೆ ವಿರೋಧ ಪಕ್ಷದ ನಾಯಕ
ವರದಿ ಪರಿಶೀಲನೆ ನಡೆಸದೆ ಊಹೆಯ ಆಧಾರದ ಮೇಲೆ ಪರ–ವಿರೋಧ ಚರ್ಚೆ ನಡೆಸುವುದು ಸರಿಯಲ್ಲ. ಅದಕ್ಕಾಗಿಯೇ ಮುಖ್ಯಮಂತ್ರಿ ವಿಶೇಷ ಸಂಪಟ ಸಭೆ ಕರೆದಿದ್ದಾರೆ
–ಕೆ.ಎನ್‌. ರಾಜಣ್ಣ, ಸಹಕಾರ ಸಚಿವ
ವರದಿ ಜಾರಿಗೆ ಕೊನೆಗೂ ಮುಹೂರ್ತ ನಿಗದಿಯಾಗಿದೆ. ಎಲ್ಲರೂ ಒಟ್ಟಾಗಿ ನಿರ್ಧಾರ ತೆಗೆದುಕೊಳ್ಳುತ್ತೇವೆ. ವರದಿ ಜಾರಿ ಬಳಿಕ ಏನಾಗುತ್ತದೆಯೋ ನೋಡೋಣ
–ಸತೀಶ ಜಾರಕಿಹೊಳಿ, ಲೋಕೋಪಯೋಗಿ ಸಚಿವ
ವರದಿಯನ್ನು ಸಂಪಟ ಸಭೆಯಲ್ಲಿ ಚರ್ಚಿಸಿದ ನಂತರ ಸಾರ್ವಜನಿಕ ಚರ್ಚೆಗೆ ಬಿಡಬೇಕಾ? ಒಳ ಮೀಸಲಾತಿ ಸಮೀಕ್ಷೆಯ ಜತೆಗೆ ಇದನ್ನು ಪರಿಗಣಿಸಬೇಕಾ ಎನ್ನುವ ಕುರಿತು ನಿರ್ಧಾರಕ್ಕೆ ಬರಬೇಕಿದೆ.
–ಪ್ರಿಯಾಂಕ್‌ ಖರ್ಗೆ, ಗ್ರಾಮೀಣಾಭಿವೃದ್ಧಿ ಸಚಿವ
ಈ ಜಾತಿ ಜನಗಣತಿ ವೈಜ್ಞಾನಿಕವಾಗಿ ನಡೆದಿಲ್ಲ. ನಮ್ಮ ಮನೆಗಾಗಲಿ, ನಮ್ಮ ಅಜ್ಜ ದೇವೇಗೌಡರ ಮನೆಗಾಗಲಿ ಯಾರೂ ಬಂದು ಗಣತಿ ಮಾಡಿಲ್ಲ.
–ನಿಖಿಲ್‌ ಕುಮಾರಸ್ವಾಮಿ, ಜೆಡಿಎಸ್‌ ಯುವ ಘಟಕದ ಅಧ್ಯಕ್ಷ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT