<p>ರಾಜ್ಯದಲ್ಲಿ ಯಾವುದೇ ಪಕ್ಷ ಅಧಿಕಾರದಲ್ಲಿದ್ದರೂ ಪ್ರಬಲ ಜಾತಿಗಳಾದ ಒಕ್ಕಲಿಗರು ಮತ್ತು ಲಿಂಗಾಯತರು ಸರ್ಕಾರದಲ್ಲಿ ತಮಗೆ ಹೆಚ್ಚಿನ ಪಾಲು ಪಡೆಯುತ್ತಾ ಬಂದಿದ್ದಾರೆ. ಈ ನಿಟ್ಟಿನಲ್ಲಿ, ಈ ಜಾತಿವಾರು ಸಮೀಕ್ಷೆಯ ನಂತರ ಪರಿಶಿಷ್ಟ ಜಾತಿ ಮತ್ತು ಪಂಗಡದವರು, ಮುಸ್ಲಿಮರು ಹಾಗೂ ಹಿಂದುಳಿದವರು ಹೆಚ್ಚಿನ ಸಂಖ್ಯೆಯಲ್ಲಿದ್ದಾರೆ ಎನ್ನುವುದು ಮತ್ತೊಮ್ಮೆ ದೃಢಪಟ್ಟರೆ ತಮ್ಮ ಅಸ್ತಿತ್ವಕ್ಕೆ ಧಕ್ಕೆ ಬರಬಹುದೇನೋ ಎಂಬ ಆತಂಕದಿಂದ ಬಿಜೆಪಿ ಮತ್ತು ಜೆಡಿಎಸ್ನ ಈ ಪ್ರಬಲ ಸಮುದಾಯದ ನಾಯಕರು ವಿರೋಧ ವ್ಯಕ್ತಪಡಿಸುತ್ತಿದ್ದಾರೆ. ಇನ್ನೊಂದೆಡೆ, ನವೆಂಬರ್ ನಂತರ ರಾಜ್ಯದಲ್ಲಿ ನಾಯಕತ್ವ ಬದಲಾವಣೆ ಆಗಲಿದೆ ಎಂಬ ಚರ್ಚೆ ಕಾಂಗ್ರೆಸ್ ಪಡಸಾಲೆಯಲ್ಲಿ ಕೇಳಿಬರುತ್ತಿದೆ. ಈ ಕುರಿತು ಚರ್ಚೆ ಮತ್ತು ವಿಶ್ಲೇಷಣೆ ಈ ವಿಡಿಯೊದಲ್ಲಿ. <br></p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>