<p><strong>ಬೆಂಗಳೂರು</strong>: ರಾಜ್ಯ ಸರ್ಕಾರದ ಸಾಮಾಜಿಕ–ಶೈಕ್ಷಣಿಕ ಸಮೀಕ್ಷೆಯಲ್ಲಿ ಭಾಗಿಯಾಗದೇ ಇರುವವರು ಮತ್ತು ಈವರೆಗೆ ಮಾಹಿತಿ ನೀಡಲು ಸಾಧ್ಯವಾಗದೇ ಇರುವವರು ನವೆಂಬರ್ 10ರವೆಗೆ ಆನ್ಲೈನ್ ಮೂಲಕ ವಿವರಗಳನ್ನು ನಮೂದಿಸಬಹುದಾಗಿದೆ.</p>.<p>ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಆಯೋಗವು ನಡೆಸುತ್ತಿರುವ ಸಮೀಕ್ಷೆಯ ಮನೆ–ಮನೆ ಭೇಟಿ ಹಂತವು ಶುಕ್ರವಾರಕ್ಕೆ (ಅಕ್ಟೋಬರ್ 31) ಕೊನೆಗೊಳ್ಳಲಿದೆ. ಆದರೆ, ಆನ್ಲೈನ್ ಮೂಲಕ ಜನರು ಸ್ವಯಂ ಮಾಹಿತಿ ದಾಖಲಿಸುವ ದಿನಾಂಕವನ್ನು ನವೆಂಬರ್ 10ರವರೆಗೆ ವಿಸ್ತರಿಸಿ, ಆಯೋಗವು ಗುರುವಾರ ಆದೇಶಿಸಿದೆ.</p>.<p>https://kscbcselfdeclaration.karnataka.gov.in ಲಿಂಕ್ ಮೂಲಕ ಸಮೀಕ್ಷೆಯಲ್ಲಿ ಭಾಗಿಯಾಗಬಹುದಾಗಿದೆ. ಜನರು ತಮ್ಮ ಮನೆಗೆ ನೀಡಲಾಗಿರುವ ಯುಎಚ್ಐಡಿ ಅಥವಾ ವಿದ್ಯುತ್ ಮೀಟರ್ನ ಆರ್ಆರ್ ಸಂಖ್ಯೆಯನ್ನು ಬಳಸಿಕೊಂಡು ಈ ಪೋರ್ಟಲ್ನಲ್ಲಿ ಮಾಹಿತಿ ತುಂಬಬಹುದಾಗಿದೆ.</p>.<p>ಹೆಚ್ಚಿನ ಮಾಹಿತಿಗೆ 80507 70004 ಸಂಖ್ಯೆಯ ಸಹಾಯವಾಣಿಗೆ ಕರೆ ಮಾಡಬಹುದು ಎಂದು ಆಯೋಗದ ಪ್ರಕಟಣೆ ತಿಳಿಸಿದೆ.</p>
<p><strong>ಬೆಂಗಳೂರು</strong>: ರಾಜ್ಯ ಸರ್ಕಾರದ ಸಾಮಾಜಿಕ–ಶೈಕ್ಷಣಿಕ ಸಮೀಕ್ಷೆಯಲ್ಲಿ ಭಾಗಿಯಾಗದೇ ಇರುವವರು ಮತ್ತು ಈವರೆಗೆ ಮಾಹಿತಿ ನೀಡಲು ಸಾಧ್ಯವಾಗದೇ ಇರುವವರು ನವೆಂಬರ್ 10ರವೆಗೆ ಆನ್ಲೈನ್ ಮೂಲಕ ವಿವರಗಳನ್ನು ನಮೂದಿಸಬಹುದಾಗಿದೆ.</p>.<p>ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಆಯೋಗವು ನಡೆಸುತ್ತಿರುವ ಸಮೀಕ್ಷೆಯ ಮನೆ–ಮನೆ ಭೇಟಿ ಹಂತವು ಶುಕ್ರವಾರಕ್ಕೆ (ಅಕ್ಟೋಬರ್ 31) ಕೊನೆಗೊಳ್ಳಲಿದೆ. ಆದರೆ, ಆನ್ಲೈನ್ ಮೂಲಕ ಜನರು ಸ್ವಯಂ ಮಾಹಿತಿ ದಾಖಲಿಸುವ ದಿನಾಂಕವನ್ನು ನವೆಂಬರ್ 10ರವರೆಗೆ ವಿಸ್ತರಿಸಿ, ಆಯೋಗವು ಗುರುವಾರ ಆದೇಶಿಸಿದೆ.</p>.<p>https://kscbcselfdeclaration.karnataka.gov.in ಲಿಂಕ್ ಮೂಲಕ ಸಮೀಕ್ಷೆಯಲ್ಲಿ ಭಾಗಿಯಾಗಬಹುದಾಗಿದೆ. ಜನರು ತಮ್ಮ ಮನೆಗೆ ನೀಡಲಾಗಿರುವ ಯುಎಚ್ಐಡಿ ಅಥವಾ ವಿದ್ಯುತ್ ಮೀಟರ್ನ ಆರ್ಆರ್ ಸಂಖ್ಯೆಯನ್ನು ಬಳಸಿಕೊಂಡು ಈ ಪೋರ್ಟಲ್ನಲ್ಲಿ ಮಾಹಿತಿ ತುಂಬಬಹುದಾಗಿದೆ.</p>.<p>ಹೆಚ್ಚಿನ ಮಾಹಿತಿಗೆ 80507 70004 ಸಂಖ್ಯೆಯ ಸಹಾಯವಾಣಿಗೆ ಕರೆ ಮಾಡಬಹುದು ಎಂದು ಆಯೋಗದ ಪ್ರಕಟಣೆ ತಿಳಿಸಿದೆ.</p>