<p><strong>ಬೆಂಗಳೂರು</strong>: ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಆಯೋಗವು ಹೊಸದಾಗಿ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆ ಆರಂಭಿಸಿದ್ದು, ದೇಶದಲ್ಲೇ ಮೊದಲ ಬಾರಿ ಮನೆಗಳ ವಿದ್ಯುತ್ ಸಂಪರ್ಕದ ಮಾಹಿತಿಯನ್ನು (ಆರ್ಆರ್ ಸಂಖ್ಯೆ) ಸಮೀಕ್ಷೆಗೆ ಬಳಸಿಕೊಳ್ಳುತ್ತಿದೆ.</p>.<p>ಅತಿ ಹೆಚ್ಚು ಮನೆಗಳಿಗೆ ವಿದ್ಯುತ್ ಸಂಪರ್ಕ ಕಲ್ಪಿಸಿದ ದೇಶದ ಮೊದಲ ರಾಜ್ಯ ಕರ್ನಾಟಕ. ವಿದ್ಯುತ್ ಬಳಕೆಯ ಶುಲ್ಕದ ರಸೀದಿ ನೀಡಲು ಪ್ರತಿ ಮೀಟರ್ಗೂ ಆರ್ಆರ್ ಸಂಖ್ಯೆ ನೀಡಲಾಗಿರುತ್ತದೆ. ಈ ಸಂಖ್ಯೆಯ ಆಧಾರದ ಮೇಲೆ ಪ್ರತಿ ಮನೆಗಳನ್ನೂ ಗುರುತಿಸಿ, ಆ ಮನೆಗಳಲ್ಲಿ ವಾಸಿಸುವ ಕುಟುಂಬದ ವಿವರಗಳನ್ನು ಖಚಿತವಾಗಿ ಸಂಗ್ರಹಿಸಬಹುದು ಎನ್ನುವುದು ಆಯೋಗದ ಲೆಕ್ಕಾಚಾರ.</p>.<p>ಸಮೀಕ್ಷೆಯ ಈ ವಿಶಿಷ್ಟ ವಿನ್ಯಾಸ, ಪ್ರಕ್ರಿಯೆಯನ್ನು ಇ–ಆಡಳಿತ, ಇಂಧನ ಇಲಾಖೆ, ಹಿಂದುಳಿದ ವರ್ಗಗಳ ಆಯೋಗದ ಸಹಯೋಗದಲ್ಲಿ ರೂಪಿಸಲಾಗಿದೆ. ಅದಕ್ಕಾಗಿ ಪ್ರತ್ಯೇಕ ಆ್ಯಪ್ ಸಿದ್ಧಪಡಿಸಲಾಗಿದೆ. ಸಮೀಕ್ಷಾ ಕಾರ್ಯವನ್ನು ತ್ವರಿತವಾಗಿ ಪೂರ್ಣಗೊಳಿಸಲು, ಸಮೀಕ್ಷಾ ವ್ಯಾಪ್ತಿಯಿಂದ ಯಾವುದೇ ಮನೆಗಳು ಬಿಟ್ಟುಹೋಗದಂತೆ ಮುನ್ನೆಚ್ಚರಿಕೆ ವಹಿಸಲು ವಿಧಾನ ಸಹಕಾರಿಯಾಗಿದೆ. </p>.<p>‘ಸೆ. 22ರಿಂದ ಅ.7ರವರೆಗೆ ನಡೆಸುವ ಎರಡನೇ ಹಂತದ ಸಮೀಕ್ಷಾ ಕಾರ್ಯದಲ್ಲಿ ವಿದ್ಯುತ್ ಮೀಟರ್ಗಳ ಮಾಹಿತಿ ಆಧಾರದ ಸಮೀಕ್ಷಾ ಕಾರ್ಯ ನಡೆಯಲಿದೆ. ದಸರಾ ರಜೆಯ ಅವಧಿಯ ಕಾರಣ ಮಕ್ಕಳ ಗಣತಿಗೂ ಅನುಕೂಲವಾಗುತ್ತದೆ’ ಎಂದು ಆಯೋಗದ ಅಧ್ಯಕ್ಷ ಮಧುಸೂದನ್ ಆರ್. ನಾಯ್ಕ್ ಹೇಳಿದ್ದಾರೆ. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು</strong>: ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಆಯೋಗವು ಹೊಸದಾಗಿ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆ ಆರಂಭಿಸಿದ್ದು, ದೇಶದಲ್ಲೇ ಮೊದಲ ಬಾರಿ ಮನೆಗಳ ವಿದ್ಯುತ್ ಸಂಪರ್ಕದ ಮಾಹಿತಿಯನ್ನು (ಆರ್ಆರ್ ಸಂಖ್ಯೆ) ಸಮೀಕ್ಷೆಗೆ ಬಳಸಿಕೊಳ್ಳುತ್ತಿದೆ.</p>.<p>ಅತಿ ಹೆಚ್ಚು ಮನೆಗಳಿಗೆ ವಿದ್ಯುತ್ ಸಂಪರ್ಕ ಕಲ್ಪಿಸಿದ ದೇಶದ ಮೊದಲ ರಾಜ್ಯ ಕರ್ನಾಟಕ. ವಿದ್ಯುತ್ ಬಳಕೆಯ ಶುಲ್ಕದ ರಸೀದಿ ನೀಡಲು ಪ್ರತಿ ಮೀಟರ್ಗೂ ಆರ್ಆರ್ ಸಂಖ್ಯೆ ನೀಡಲಾಗಿರುತ್ತದೆ. ಈ ಸಂಖ್ಯೆಯ ಆಧಾರದ ಮೇಲೆ ಪ್ರತಿ ಮನೆಗಳನ್ನೂ ಗುರುತಿಸಿ, ಆ ಮನೆಗಳಲ್ಲಿ ವಾಸಿಸುವ ಕುಟುಂಬದ ವಿವರಗಳನ್ನು ಖಚಿತವಾಗಿ ಸಂಗ್ರಹಿಸಬಹುದು ಎನ್ನುವುದು ಆಯೋಗದ ಲೆಕ್ಕಾಚಾರ.</p>.<p>ಸಮೀಕ್ಷೆಯ ಈ ವಿಶಿಷ್ಟ ವಿನ್ಯಾಸ, ಪ್ರಕ್ರಿಯೆಯನ್ನು ಇ–ಆಡಳಿತ, ಇಂಧನ ಇಲಾಖೆ, ಹಿಂದುಳಿದ ವರ್ಗಗಳ ಆಯೋಗದ ಸಹಯೋಗದಲ್ಲಿ ರೂಪಿಸಲಾಗಿದೆ. ಅದಕ್ಕಾಗಿ ಪ್ರತ್ಯೇಕ ಆ್ಯಪ್ ಸಿದ್ಧಪಡಿಸಲಾಗಿದೆ. ಸಮೀಕ್ಷಾ ಕಾರ್ಯವನ್ನು ತ್ವರಿತವಾಗಿ ಪೂರ್ಣಗೊಳಿಸಲು, ಸಮೀಕ್ಷಾ ವ್ಯಾಪ್ತಿಯಿಂದ ಯಾವುದೇ ಮನೆಗಳು ಬಿಟ್ಟುಹೋಗದಂತೆ ಮುನ್ನೆಚ್ಚರಿಕೆ ವಹಿಸಲು ವಿಧಾನ ಸಹಕಾರಿಯಾಗಿದೆ. </p>.<p>‘ಸೆ. 22ರಿಂದ ಅ.7ರವರೆಗೆ ನಡೆಸುವ ಎರಡನೇ ಹಂತದ ಸಮೀಕ್ಷಾ ಕಾರ್ಯದಲ್ಲಿ ವಿದ್ಯುತ್ ಮೀಟರ್ಗಳ ಮಾಹಿತಿ ಆಧಾರದ ಸಮೀಕ್ಷಾ ಕಾರ್ಯ ನಡೆಯಲಿದೆ. ದಸರಾ ರಜೆಯ ಅವಧಿಯ ಕಾರಣ ಮಕ್ಕಳ ಗಣತಿಗೂ ಅನುಕೂಲವಾಗುತ್ತದೆ’ ಎಂದು ಆಯೋಗದ ಅಧ್ಯಕ್ಷ ಮಧುಸೂದನ್ ಆರ್. ನಾಯ್ಕ್ ಹೇಳಿದ್ದಾರೆ. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>