<p>ರಾಜಕೀಯ ಅಸ್ಥಿರತೆ, ನಾಯಕತ್ವ ಬದಲಾವಣೆ ರಾಜ್ಯ ರಾಜಕೀಯದಲ್ಲಿ ಹೊಸತೇನೂ ಅಲ್ಲ. 1956 ರಿಂದ ಈವರೆಗೆ ಕೇವಲ ಮೂವರು ಮುಖ್ಯಮಂತ್ರಿಗಳು ಮಾತ್ರ ಪೂರ್ಣಾವಧಿಯ ಆಡಳಿತ ನಡೆಸಿದ್ದಾರೆ. ಅವರೆಲ್ಲರೂ ಕಾಂಗ್ರೆಸ್ ಪಕ್ಷದವರು ಎಂಬುವುದು ಉಲ್ಲೇಖನೀಯ. ಬಿಜೆಪಿ ಹಾಗೂ ಜೆಡಿಎಸ್ ಪಾಳಯದ ನಾಯಕರು ರಾಜ್ಯದ ಮುಖ್ಯಮಂತ್ರಿಯಾಗಿದ್ದರೂ, ಅವರ್ಯಾರೂ ಪೂರ್ಣಾವಧಿ ಆಡಳಿತ ನಡೆಸಲು ಸಾಧ್ಯವಾಗಿಲ್ಲ. </p>. <h2>ಪೂರ್ಣಾವಧಿ ಪೂರೈಸಿದ ಮೂವರು ಮುಖ್ಯಮಂತ್ರಿಗಳಿವರು..</h2> <ol><li><p> ಎಸ್. ನಿಜಲಿಂಗಪ್ಪ (1962-68)</p></li><li><p> ಡಿ. ದೇವರಾಜ ಅರಸು (1972-77)</p></li><li><p>ಸಿದ್ದರಾಮಯ್ಯ (2013-2018)</p></li></ol> <ul><li><p><strong>ಎಸ್. ನಿಜಲಿಂಗಪ್ಪ:</strong> 1962 ರಿಂದ 1968ರ ವರೆಗೂ ಮುಖ್ಯಮಂತ್ರಿಯಾಗಿ ಕಾರ್ಯ ನಿರ್ವಹಿಸಿದ್ದಾರೆ.</p></li><li><p><strong>ಡಿ. ದೇವರಾಜ ಅರಸು:</strong> ಹಿಂದುಳಿದ ವರ್ಗಗಳ ಅಭಿವೃದ್ಧಿಯ ಹರಿಕಾರ ಎಂದೇ ಖ್ಯಾತರಾಗಿದ್ದ ಡಿ.ದೇವರಾಜ ಅರಸು ಅವರು 1972ರಿಂದ 1977ರ ವರೆಗೆ ಮುಖ್ಯಮಂತ್ರಿಯಾಗಿ ಕಾರ್ಯ ನಿರ್ವಹಿಸಿದ್ದಾರೆ.</p></li><li><p><strong>ಸಿದ್ದರಾಮಯ್ಯ:</strong> 2013ರಲ್ಲಿ ಅಧಿಕಾರಕ್ಕೆ ಬಂದ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ 2018ರ ವರೆಗೆ ಪೂರ್ಣಾವಧಿಯ ಆಡಳಿತ ನಡೆಸಿದೆ.</p></li></ul><p>ರಾಜ್ಯದಲ್ಲಿ ಬಿಜೆಪಿ ಮತ್ತು ಜೆಡಿಎಸ್ನ ಯಾವುದೇ ನಾಯಕರು ಪೂರ್ಣಾವಧಿ ಆಡಳಿತ ನಡೆಸಲು ಸಾಧ್ಯವಾಗಿಲ್ಲ.</p>.<p>2006ರ ಫೆಬ್ರವರಿಯಿಂದ 2007ರ ಅಕ್ಟೋಬರ್ ವರೆಗೆ ಜೆಡಿಎಸ್ ಹಾಗೂ ಬಿಜೆಪಿ ಮೈತ್ರಿ ರಾಜ್ಯದಲ್ಲಿ ಸರ್ಕಾರ ರಚಿಸಿತ್ತು. ಈ ವೇಳೆ ಕುಮಾರಸ್ವಾಮಿ ಮೊದಲ ಬಾರಿ ಸಿಎಂ ಆಗಿ ಪ್ರಮಾಣವಚನ ಸ್ವೀಕರಿಸಿದ್ದರು. ಆದರೆ ಅಧಿಕಾರ ಹಂಚಿಕೆ ವಿಷಯದಲ್ಲಿ ಭಿನ್ನಾಭಿಪ್ರಾಯ ಉಂಟಾಗಿ ಮೈತ್ರಿ ಸರ್ಕಾರ ಪತನಗೊಂಡಿತ್ತು. </p>.<p>ಬಳಿಕ 2018ರಲ್ಲಿ ಮತ್ತೆ ಕಾಂಗ್ರೆಸ್-ಜೆಡಿಎಸ್ ಸಮ್ಮಿಶ್ರ ಸರ್ಕಾರ ರಚನೆಯಾಯಿತು. ಕುಮಾರಸ್ವಾಮಿ ಎರಡನೇ ಬಾರಿಗೆ ಮುಖ್ಯಮಂತ್ರಿಯಾದರು. ಆದರೆ 14 ತಿಂಗಳು ಅಧಿಕಾರ ನಡೆಸಿದ ಸರ್ಕಾರ ಬಹುಮತ ಕಳೆದುಕೊಂಡು ಪತನಗೊಂಡಿತ್ತು.</p>.<p>ಇನ್ನು ಬಿಜೆಪಿಯ ವಿಷಯಕ್ಕೆ ಬಂದರೆ, ಬಿ.ಎಸ್. ಯಡಿಯೂರಪ್ಪ ಅವರು 2007ರಲ್ಲಿ ಮೊದಲ ಬಾರಿಗೆ ಮುಖ್ಯಮಂತ್ರಿಯಾದರು. ಆದರೆ ಜೆಡಿಎಸ್ ಬೆಂಬಲ ವಾಪಸ್ ಪಡೆದಿದ್ದರಿಂದ ಕೇವಲ ಏಳು ದಿನಗಳಲ್ಲಿಯೇ ಸರ್ಕಾರ ಪತನಗೊಂಡಿತ್ತು. ಬಳಿಕ ರಾಜ್ಯದಲ್ಲಿ ರಾಷ್ಟ್ರಪತಿ ಆಳ್ವಿಕೆ ಹೇರಲಾಯಿತು.</p>.<p>2008ರಲ್ಲಿ ಯಡಿಯೂರಪ್ಪ ನೇತೃತ್ವದ ಬಿಜೆಪಿ ಐತಿಹಾಸಿಕ ಜಯಗಳಿಸಿತು. ಬಿಎಸ್ವೈ ಅವರು ಎರಡನೇ ಬಾರಿಗೆ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದರು. ಆದರೆ ಭ್ರಷ್ಟಾಚಾರದ ಆರೋಪದ ಮೇಲೆ 2011ರ ಜುಲೈನಲ್ಲಿ ಅವರು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಬೇಕಾಯಿತು. </p>.<p>2018ರಲ್ಲಿ ಅವರು ಮೂರನೇ ಬಾರಿಗೆ ಸಿಎಂ ಆಗಿ ಪ್ರಮಾಣವಚನ ಸ್ವೀಕರಿಸಿದರಾದರೂ ಬಹುಮತ ಸಾಬೀತುಪಡಿಸಲಾಗದೆ ಕೇವಲ ಆರು ದಿನಗಳಲ್ಲಿ (ಮೇ 17 ರಿಂದ ಮೇ 23 ರವರೆಗೆ) ಮುಖ್ಯಮಂತ್ರಿ ಹುದ್ದೆಗೆ ರಾಜೀನಾಮೆ ನೀಡಬೇಕಾಯ್ತು.</p>.<p>1956ರಲ್ಲಿ ಕರ್ನಾಟಕ ರಾಜ್ಯ ರಚನೆಯಾದಾಗಿನಿಂದ ಈವರೆಗೆ ರಾಜ್ಯವು 25 ಮುಖ್ಯಮಂತ್ರಿಗಳನ್ನು ಕಂಡಿದೆ. ಅವರಲ್ಲಿ ಹೆಚ್ಚಿನವರು ಕಾಂಗ್ರೆಸ್ ಪಕ್ಷಕ್ಕೆ ಸೇರಿದವರು.</p> <p><strong>ವಿವಿಧ ಮೂಲಗಳನ್ನು ಆಧರಿಸಿ ಬರೆದ ಸುದ್ದಿ</strong></p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ರಾಜಕೀಯ ಅಸ್ಥಿರತೆ, ನಾಯಕತ್ವ ಬದಲಾವಣೆ ರಾಜ್ಯ ರಾಜಕೀಯದಲ್ಲಿ ಹೊಸತೇನೂ ಅಲ್ಲ. 1956 ರಿಂದ ಈವರೆಗೆ ಕೇವಲ ಮೂವರು ಮುಖ್ಯಮಂತ್ರಿಗಳು ಮಾತ್ರ ಪೂರ್ಣಾವಧಿಯ ಆಡಳಿತ ನಡೆಸಿದ್ದಾರೆ. ಅವರೆಲ್ಲರೂ ಕಾಂಗ್ರೆಸ್ ಪಕ್ಷದವರು ಎಂಬುವುದು ಉಲ್ಲೇಖನೀಯ. ಬಿಜೆಪಿ ಹಾಗೂ ಜೆಡಿಎಸ್ ಪಾಳಯದ ನಾಯಕರು ರಾಜ್ಯದ ಮುಖ್ಯಮಂತ್ರಿಯಾಗಿದ್ದರೂ, ಅವರ್ಯಾರೂ ಪೂರ್ಣಾವಧಿ ಆಡಳಿತ ನಡೆಸಲು ಸಾಧ್ಯವಾಗಿಲ್ಲ. </p>. <h2>ಪೂರ್ಣಾವಧಿ ಪೂರೈಸಿದ ಮೂವರು ಮುಖ್ಯಮಂತ್ರಿಗಳಿವರು..</h2> <ol><li><p> ಎಸ್. ನಿಜಲಿಂಗಪ್ಪ (1962-68)</p></li><li><p> ಡಿ. ದೇವರಾಜ ಅರಸು (1972-77)</p></li><li><p>ಸಿದ್ದರಾಮಯ್ಯ (2013-2018)</p></li></ol> <ul><li><p><strong>ಎಸ್. ನಿಜಲಿಂಗಪ್ಪ:</strong> 1962 ರಿಂದ 1968ರ ವರೆಗೂ ಮುಖ್ಯಮಂತ್ರಿಯಾಗಿ ಕಾರ್ಯ ನಿರ್ವಹಿಸಿದ್ದಾರೆ.</p></li><li><p><strong>ಡಿ. ದೇವರಾಜ ಅರಸು:</strong> ಹಿಂದುಳಿದ ವರ್ಗಗಳ ಅಭಿವೃದ್ಧಿಯ ಹರಿಕಾರ ಎಂದೇ ಖ್ಯಾತರಾಗಿದ್ದ ಡಿ.ದೇವರಾಜ ಅರಸು ಅವರು 1972ರಿಂದ 1977ರ ವರೆಗೆ ಮುಖ್ಯಮಂತ್ರಿಯಾಗಿ ಕಾರ್ಯ ನಿರ್ವಹಿಸಿದ್ದಾರೆ.</p></li><li><p><strong>ಸಿದ್ದರಾಮಯ್ಯ:</strong> 2013ರಲ್ಲಿ ಅಧಿಕಾರಕ್ಕೆ ಬಂದ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ 2018ರ ವರೆಗೆ ಪೂರ್ಣಾವಧಿಯ ಆಡಳಿತ ನಡೆಸಿದೆ.</p></li></ul><p>ರಾಜ್ಯದಲ್ಲಿ ಬಿಜೆಪಿ ಮತ್ತು ಜೆಡಿಎಸ್ನ ಯಾವುದೇ ನಾಯಕರು ಪೂರ್ಣಾವಧಿ ಆಡಳಿತ ನಡೆಸಲು ಸಾಧ್ಯವಾಗಿಲ್ಲ.</p>.<p>2006ರ ಫೆಬ್ರವರಿಯಿಂದ 2007ರ ಅಕ್ಟೋಬರ್ ವರೆಗೆ ಜೆಡಿಎಸ್ ಹಾಗೂ ಬಿಜೆಪಿ ಮೈತ್ರಿ ರಾಜ್ಯದಲ್ಲಿ ಸರ್ಕಾರ ರಚಿಸಿತ್ತು. ಈ ವೇಳೆ ಕುಮಾರಸ್ವಾಮಿ ಮೊದಲ ಬಾರಿ ಸಿಎಂ ಆಗಿ ಪ್ರಮಾಣವಚನ ಸ್ವೀಕರಿಸಿದ್ದರು. ಆದರೆ ಅಧಿಕಾರ ಹಂಚಿಕೆ ವಿಷಯದಲ್ಲಿ ಭಿನ್ನಾಭಿಪ್ರಾಯ ಉಂಟಾಗಿ ಮೈತ್ರಿ ಸರ್ಕಾರ ಪತನಗೊಂಡಿತ್ತು. </p>.<p>ಬಳಿಕ 2018ರಲ್ಲಿ ಮತ್ತೆ ಕಾಂಗ್ರೆಸ್-ಜೆಡಿಎಸ್ ಸಮ್ಮಿಶ್ರ ಸರ್ಕಾರ ರಚನೆಯಾಯಿತು. ಕುಮಾರಸ್ವಾಮಿ ಎರಡನೇ ಬಾರಿಗೆ ಮುಖ್ಯಮಂತ್ರಿಯಾದರು. ಆದರೆ 14 ತಿಂಗಳು ಅಧಿಕಾರ ನಡೆಸಿದ ಸರ್ಕಾರ ಬಹುಮತ ಕಳೆದುಕೊಂಡು ಪತನಗೊಂಡಿತ್ತು.</p>.<p>ಇನ್ನು ಬಿಜೆಪಿಯ ವಿಷಯಕ್ಕೆ ಬಂದರೆ, ಬಿ.ಎಸ್. ಯಡಿಯೂರಪ್ಪ ಅವರು 2007ರಲ್ಲಿ ಮೊದಲ ಬಾರಿಗೆ ಮುಖ್ಯಮಂತ್ರಿಯಾದರು. ಆದರೆ ಜೆಡಿಎಸ್ ಬೆಂಬಲ ವಾಪಸ್ ಪಡೆದಿದ್ದರಿಂದ ಕೇವಲ ಏಳು ದಿನಗಳಲ್ಲಿಯೇ ಸರ್ಕಾರ ಪತನಗೊಂಡಿತ್ತು. ಬಳಿಕ ರಾಜ್ಯದಲ್ಲಿ ರಾಷ್ಟ್ರಪತಿ ಆಳ್ವಿಕೆ ಹೇರಲಾಯಿತು.</p>.<p>2008ರಲ್ಲಿ ಯಡಿಯೂರಪ್ಪ ನೇತೃತ್ವದ ಬಿಜೆಪಿ ಐತಿಹಾಸಿಕ ಜಯಗಳಿಸಿತು. ಬಿಎಸ್ವೈ ಅವರು ಎರಡನೇ ಬಾರಿಗೆ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದರು. ಆದರೆ ಭ್ರಷ್ಟಾಚಾರದ ಆರೋಪದ ಮೇಲೆ 2011ರ ಜುಲೈನಲ್ಲಿ ಅವರು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಬೇಕಾಯಿತು. </p>.<p>2018ರಲ್ಲಿ ಅವರು ಮೂರನೇ ಬಾರಿಗೆ ಸಿಎಂ ಆಗಿ ಪ್ರಮಾಣವಚನ ಸ್ವೀಕರಿಸಿದರಾದರೂ ಬಹುಮತ ಸಾಬೀತುಪಡಿಸಲಾಗದೆ ಕೇವಲ ಆರು ದಿನಗಳಲ್ಲಿ (ಮೇ 17 ರಿಂದ ಮೇ 23 ರವರೆಗೆ) ಮುಖ್ಯಮಂತ್ರಿ ಹುದ್ದೆಗೆ ರಾಜೀನಾಮೆ ನೀಡಬೇಕಾಯ್ತು.</p>.<p>1956ರಲ್ಲಿ ಕರ್ನಾಟಕ ರಾಜ್ಯ ರಚನೆಯಾದಾಗಿನಿಂದ ಈವರೆಗೆ ರಾಜ್ಯವು 25 ಮುಖ್ಯಮಂತ್ರಿಗಳನ್ನು ಕಂಡಿದೆ. ಅವರಲ್ಲಿ ಹೆಚ್ಚಿನವರು ಕಾಂಗ್ರೆಸ್ ಪಕ್ಷಕ್ಕೆ ಸೇರಿದವರು.</p> <p><strong>ವಿವಿಧ ಮೂಲಗಳನ್ನು ಆಧರಿಸಿ ಬರೆದ ಸುದ್ದಿ</strong></p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>