<p><strong>ಬೆಂಗಳೂರು:</strong> ರಾಜ್ಯದಲ್ಲಿ ಮಲ್ಟಿಫ್ಲೆಕ್ಸ್ಗಳೂ ಸೇರಿ ಎಲ್ಲ ಚಿತ್ರ ಮಂದಿರಗಳಲ್ಲಿ ಚಲನಚಿತ್ರಗಳ ಟಿಕೆಟ್ ದರವನ್ನು (ತೆರಿಗೆ ಬಿಟ್ಟು) ಗರಿಷ್ಠ ₹200ಕ್ಕೆ ನಿಗದಿಪಡಿಸಿ ಗೃಹ ಇಲಾಖೆ ಅಧಿಸೂಚನೆ ಹೊರಡಿಸಿದೆ.</p>.<p>ಈ ನಿಯಮ ಶುಕ್ರವಾರದಿಂದಲೇ ಜಾರಿಗೆ ಬಂದಿದ್ದು, ಕನ್ನಡ ಸೇರಿ ಎಲ್ಲ ಭಾಷೆಗಳ ಚಲನಚಿತ್ರಗಳಿಗೂ ಈ ಆದೇಶ ಅನ್ವಯವಾಗಲಿದೆ. ಆದರೆ, 75 ಅಥವಾ ಅದಕ್ಕಿಂತ ಕಡಿಮೆ ಆಸನಗಳನ್ನು ಹೊಂದಿರುವ ಪ್ರೀಮಿಯಂ ಸೌಲಭ್ಯಗಳನ್ನು ಒಳಗೊಂಡ ಮಲ್ಟಿಫ್ಲೆಕ್ಸ್ಗಳಿಗೆ ಈ ನಿಯಮದಿಂದ ವಿನಾಯ್ತಿ ನೀಡಲಾಗಿದೆ.</p>.<p>ಯಾವುದೇ ಭಾಷೆಯ ಚಿತ್ರವಾದರೂ ಸರಿ ಗರಿಷ್ಠ ದರ ₹200 ದಾಟುವಂತಿಲ್ಲ. ಟಿಕೆಟ್ ಮೇಲೆ ಶೇ 18ರಷ್ಟು ತೆರಿಗೆ ಇರುತ್ತದೆ. ಚಿತ್ರಮಂದಿರದಲ್ಲಿ ಎರಡು ಅಥವಾ ಮೂರು ಕ್ಲಾಸ್ಗಳ ಆಸನ ವ್ಯವಸ್ಥೆ ಇದ್ದರೆ ಅವುಗಳ ಬೆಲೆಯೂ ₹150 ಕ್ಕಿಂತ ಕಡಿಮೆ ಆಗಲಿದೆ.</p>.<p>ಮಲ್ಟಿಫ್ಲೆಕ್ಸ್ಗಳಲ್ಲಿ ಪರಭಾಷಾ ಚಿತ್ರಗಳ ಟಿಕೆಟ್ ದರದ ಮೇಲೆ ಯಾವುದೇ ನಿಯಂತ್ರಣವಿರಲಿಲ್ಲ. ಕೆಲವು ಚಿತ್ರಗಳ ಟಿಕೆಟ್ ದರ ₹2,000–₹3000 ದಾಟುತ್ತಿತ್ತು. ತಮಿಳುನಾಡು ಮಾದರಿಯಲ್ಲೇ ಕರ್ನಾಟಕದಲ್ಲೂ ಟಿಕೆಟ್ ದರವನ್ನು ನಿಗದಿ ಮಾಡಬೇಕು ಎಂಬುದು ಕನ್ನಡ ಚಲನಚಿತ್ರ ರಂಗದ ಬಹುದಿನಗಳ ಬೇಡಿಕೆಯಾಗಿತ್ತು. ರಾಜೇಂದ್ರ ಸಿಂಗ್ ಬಾಬು ಅವರು ಕರ್ನಾಟಕ ಚಲನಚಿತ್ರ ಅಕಾಡೆಮಿ ಅಧ್ಯಕ್ಷರಾಗಿದ್ದಾಗ, ಸರ್ಕಾರಕ್ಕೆ ಈ ಸಂಬಂಧ ಪ್ರಸ್ತಾವನೆ ಸಲ್ಲಿಸಿದ್ದರು. ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿಯ ಅಂದಿನ ಅಧ್ಯಕ್ಷ ಸಾ.ರಾ.ಗೋವಿಂದು ಅವರು ಕೈಜೋಡಿಸಿದ್ದರು.</p>.<p><strong>‘ಏಳು ವರ್ಷಗಳ ಹೋರಾಟದ ಫಲ’: ರಾಜೇಂದ್ರ ಸಿಂಗ್ ಬಾಬು</strong></p><p>‘ಏಳು ವರ್ಷಗಳ ನಮ್ಮ ಹೋರಾಟ ಈಗ ಫಲ ನೀಡಿದೆ’ ಎಂದು ರಾಜೇಂದ್ರ ಸಿಂಗ್ ಬಾಬು ಪ್ರತಿಕ್ರಿಯಿಸಿದರು.</p><p>ಈ ಕುರಿತು ‘ಪ್ರಜಾವಾಣಿ’ ಜತೆ ಮಾತನಾಡಿದ ರಾಜೇಂದ್ರಸಿಂಗ್ ಬಾಬು ಅವರು, ಈ ಹಿಂದೆಯೇ ಆದೇಶ ಆಗಿತ್ತು. ಆದರೆ, ಆಗ ಸರ್ಕಾರದಲ್ಲಿ ಕೆಲವರು ಅದಕ್ಕೆ ಹಿನ್ನಡೆ ಉಂಟು ಮಾಡಿದರು. ಅದರ ಪರಿಣಾಮ, ಆ ಆದೇಶದ ವಿರುದ್ಧ ನ್ಯಾಯಾಲಯದಿಂದ ತಡೆ ತರಲಾಯಿತು. ಕೋಟಿಗಟ್ಟಲೆ ಹಣ ಕೊಟ್ಟು ಪರ ಭಾಷಾ ಚಿತ್ರಗಳನ್ನು ಇಲ್ಲಿಗೆ ತಂದು ಕನ್ನಡಿಗರ ಹಣ ಲೂಟಿ ಮಾಡುತ್ತಿದ್ದರು. ಈಗ ಅದಕ್ಕೆ ಕಡಿವಾಣ ಬೀಳಲಿದೆ. ಮಲ್ಟಿಫ್ಲೆಕ್ಸ್ಗಳಲ್ಲಿ ಸಾಮಾನ್ಯ ಜನರೂ ಚಲನಚಿತ್ರಗಳನ್ನು ನೋಡಬಹುದಾಗಿದೆ’ ಎಂದರು.</p><p>‘ತಮಿಳುನಾಡು, ಆಂಧ್ರದಲ್ಲೂ ಟಿಕೆಟ್ ದರ ಕಡಿಮೆ ಇದೆ. ಅಲ್ಲಿ ತೆರಿಗೆಯೂ ಸೇರಿ ಟಿಕೆಟ್ ದರ ₹150ರಿಂದ ₹200ರ ಒಳಗೆ ಇದೆ. ಕರ್ನಾಟಕದಲ್ಲಿ ಮಾತ್ರ ಅತ್ಯಂತ ದುಬಾರಿ ಆಗಿತ್ತು. ಇದರಿಂದ ಕನ್ನಡ ಚಿತ್ರಗಳ ಮೇಲೂ ಪರಿಣಾಮ ಬೀರಿತ್ತು. ಹೊಸ ಅಧಿಸೂಚನೆ ಮೂಲಕ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಉತ್ತಮ ನಿರ್ಧಾರ ತೆಗೆದುಕೊಂಡಿದ್ದಾರೆ’ ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು:</strong> ರಾಜ್ಯದಲ್ಲಿ ಮಲ್ಟಿಫ್ಲೆಕ್ಸ್ಗಳೂ ಸೇರಿ ಎಲ್ಲ ಚಿತ್ರ ಮಂದಿರಗಳಲ್ಲಿ ಚಲನಚಿತ್ರಗಳ ಟಿಕೆಟ್ ದರವನ್ನು (ತೆರಿಗೆ ಬಿಟ್ಟು) ಗರಿಷ್ಠ ₹200ಕ್ಕೆ ನಿಗದಿಪಡಿಸಿ ಗೃಹ ಇಲಾಖೆ ಅಧಿಸೂಚನೆ ಹೊರಡಿಸಿದೆ.</p>.<p>ಈ ನಿಯಮ ಶುಕ್ರವಾರದಿಂದಲೇ ಜಾರಿಗೆ ಬಂದಿದ್ದು, ಕನ್ನಡ ಸೇರಿ ಎಲ್ಲ ಭಾಷೆಗಳ ಚಲನಚಿತ್ರಗಳಿಗೂ ಈ ಆದೇಶ ಅನ್ವಯವಾಗಲಿದೆ. ಆದರೆ, 75 ಅಥವಾ ಅದಕ್ಕಿಂತ ಕಡಿಮೆ ಆಸನಗಳನ್ನು ಹೊಂದಿರುವ ಪ್ರೀಮಿಯಂ ಸೌಲಭ್ಯಗಳನ್ನು ಒಳಗೊಂಡ ಮಲ್ಟಿಫ್ಲೆಕ್ಸ್ಗಳಿಗೆ ಈ ನಿಯಮದಿಂದ ವಿನಾಯ್ತಿ ನೀಡಲಾಗಿದೆ.</p>.<p>ಯಾವುದೇ ಭಾಷೆಯ ಚಿತ್ರವಾದರೂ ಸರಿ ಗರಿಷ್ಠ ದರ ₹200 ದಾಟುವಂತಿಲ್ಲ. ಟಿಕೆಟ್ ಮೇಲೆ ಶೇ 18ರಷ್ಟು ತೆರಿಗೆ ಇರುತ್ತದೆ. ಚಿತ್ರಮಂದಿರದಲ್ಲಿ ಎರಡು ಅಥವಾ ಮೂರು ಕ್ಲಾಸ್ಗಳ ಆಸನ ವ್ಯವಸ್ಥೆ ಇದ್ದರೆ ಅವುಗಳ ಬೆಲೆಯೂ ₹150 ಕ್ಕಿಂತ ಕಡಿಮೆ ಆಗಲಿದೆ.</p>.<p>ಮಲ್ಟಿಫ್ಲೆಕ್ಸ್ಗಳಲ್ಲಿ ಪರಭಾಷಾ ಚಿತ್ರಗಳ ಟಿಕೆಟ್ ದರದ ಮೇಲೆ ಯಾವುದೇ ನಿಯಂತ್ರಣವಿರಲಿಲ್ಲ. ಕೆಲವು ಚಿತ್ರಗಳ ಟಿಕೆಟ್ ದರ ₹2,000–₹3000 ದಾಟುತ್ತಿತ್ತು. ತಮಿಳುನಾಡು ಮಾದರಿಯಲ್ಲೇ ಕರ್ನಾಟಕದಲ್ಲೂ ಟಿಕೆಟ್ ದರವನ್ನು ನಿಗದಿ ಮಾಡಬೇಕು ಎಂಬುದು ಕನ್ನಡ ಚಲನಚಿತ್ರ ರಂಗದ ಬಹುದಿನಗಳ ಬೇಡಿಕೆಯಾಗಿತ್ತು. ರಾಜೇಂದ್ರ ಸಿಂಗ್ ಬಾಬು ಅವರು ಕರ್ನಾಟಕ ಚಲನಚಿತ್ರ ಅಕಾಡೆಮಿ ಅಧ್ಯಕ್ಷರಾಗಿದ್ದಾಗ, ಸರ್ಕಾರಕ್ಕೆ ಈ ಸಂಬಂಧ ಪ್ರಸ್ತಾವನೆ ಸಲ್ಲಿಸಿದ್ದರು. ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿಯ ಅಂದಿನ ಅಧ್ಯಕ್ಷ ಸಾ.ರಾ.ಗೋವಿಂದು ಅವರು ಕೈಜೋಡಿಸಿದ್ದರು.</p>.<p><strong>‘ಏಳು ವರ್ಷಗಳ ಹೋರಾಟದ ಫಲ’: ರಾಜೇಂದ್ರ ಸಿಂಗ್ ಬಾಬು</strong></p><p>‘ಏಳು ವರ್ಷಗಳ ನಮ್ಮ ಹೋರಾಟ ಈಗ ಫಲ ನೀಡಿದೆ’ ಎಂದು ರಾಜೇಂದ್ರ ಸಿಂಗ್ ಬಾಬು ಪ್ರತಿಕ್ರಿಯಿಸಿದರು.</p><p>ಈ ಕುರಿತು ‘ಪ್ರಜಾವಾಣಿ’ ಜತೆ ಮಾತನಾಡಿದ ರಾಜೇಂದ್ರಸಿಂಗ್ ಬಾಬು ಅವರು, ಈ ಹಿಂದೆಯೇ ಆದೇಶ ಆಗಿತ್ತು. ಆದರೆ, ಆಗ ಸರ್ಕಾರದಲ್ಲಿ ಕೆಲವರು ಅದಕ್ಕೆ ಹಿನ್ನಡೆ ಉಂಟು ಮಾಡಿದರು. ಅದರ ಪರಿಣಾಮ, ಆ ಆದೇಶದ ವಿರುದ್ಧ ನ್ಯಾಯಾಲಯದಿಂದ ತಡೆ ತರಲಾಯಿತು. ಕೋಟಿಗಟ್ಟಲೆ ಹಣ ಕೊಟ್ಟು ಪರ ಭಾಷಾ ಚಿತ್ರಗಳನ್ನು ಇಲ್ಲಿಗೆ ತಂದು ಕನ್ನಡಿಗರ ಹಣ ಲೂಟಿ ಮಾಡುತ್ತಿದ್ದರು. ಈಗ ಅದಕ್ಕೆ ಕಡಿವಾಣ ಬೀಳಲಿದೆ. ಮಲ್ಟಿಫ್ಲೆಕ್ಸ್ಗಳಲ್ಲಿ ಸಾಮಾನ್ಯ ಜನರೂ ಚಲನಚಿತ್ರಗಳನ್ನು ನೋಡಬಹುದಾಗಿದೆ’ ಎಂದರು.</p><p>‘ತಮಿಳುನಾಡು, ಆಂಧ್ರದಲ್ಲೂ ಟಿಕೆಟ್ ದರ ಕಡಿಮೆ ಇದೆ. ಅಲ್ಲಿ ತೆರಿಗೆಯೂ ಸೇರಿ ಟಿಕೆಟ್ ದರ ₹150ರಿಂದ ₹200ರ ಒಳಗೆ ಇದೆ. ಕರ್ನಾಟಕದಲ್ಲಿ ಮಾತ್ರ ಅತ್ಯಂತ ದುಬಾರಿ ಆಗಿತ್ತು. ಇದರಿಂದ ಕನ್ನಡ ಚಿತ್ರಗಳ ಮೇಲೂ ಪರಿಣಾಮ ಬೀರಿತ್ತು. ಹೊಸ ಅಧಿಸೂಚನೆ ಮೂಲಕ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಉತ್ತಮ ನಿರ್ಧಾರ ತೆಗೆದುಕೊಂಡಿದ್ದಾರೆ’ ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>