<p><strong>ಬೆಂಗಳೂರು:</strong> ವಸತಿ, ಆರೋಗ್ಯ ಸೇರಿದಂತೆ ಹಲವು ಇಲಾಖೆಗಳಲ್ಲಿ ₹21,331 ಕೋಟಿ ಅನುದಾನ ಬಳಕೆಯಾಗಲಿಲ್ಲ, ಯಾವ ಯೋಜನೆಯಲ್ಲೂ ಪ್ರಗತಿ ಇಲ್ಲ. ಇದನ್ನು 'ಡಕೋಟಾ ಸರ್ಕಾರ' ಎನ್ನದೆ ಇನ್ನೇನು ಹೇಳಬೇಕು? ಎಂದು ರಾಜ್ಯ ಕಾಂಗ್ರೆಸ್ ಪ್ರಶ್ನೆ ಮಾಡಿದೆ.</p>.<p>ಆರೋಗ್ಯ ಸೇರಿದಂತೆ ರಾಜ್ಯ ಸರ್ಕಾರದ ಐದು ಇಲಾಖೆಗಳು ಪ್ರಸಕ್ತ ಆರ್ಥಿಕ ವರ್ಷದ ಬಜೆಟ್ನಲ್ಲಿ ಏಳು ಯೋಜನೆಗಳಿಗೆ ಮೀಸಲಿಟ್ಟಿರುವ ಅನುದಾನದ ಬಳಕೆಯಲ್ಲಿ ಹಿಂದುಳಿದಿದ್ದು, ಸೆಪ್ಟೆಂಬರ್ ಅಂತ್ಯದ ವೇಳೆಗೆ ನಿಗದಿಪಡಿಸಿದ್ದ ಗುರಿಗೆ ಹೋಲಿಸಿದರೆ ಒಟ್ಟು ₹ 21,331.65 ಕೋಟಿ ಬಳಕೆಯಾಗದೆ ಉಳಿದಿದೆ.ಮುಖ್ಯ ಕಾರ್ಯದರ್ಶಿ ಪಿ. ರವಿಕುಮಾರ್ ಅಧ್ಯಕ್ಷತೆಯಲ್ಲಿ ಬುಧವಾರ ನಡೆದ ಕರ್ನಾಟಕ ಕಾರ್ಯಕ್ರಮಗಳ (ಕೆಡಿಪಿ) ಪ್ರಗತಿ ಪರಿಶೀಲನಾ ಸಭೆಯಲ್ಲಿ ಮಂಡಿಸಿದ ಅಂಕಿಅಂಶಗಳು ಇದನ್ನು ಬಹಿರಂಗಪಡಿಸಿವೆ. ಕೃಷಿ, ವಸತಿ ಮತ್ತು ನಗರಾಭಿವೃದ್ಧಿ ಇಲಾಖೆಗಳೂ ಈ ಪಟ್ಟಿಯಲ್ಲಿವೆ.</p>.<p>ಈ ಬಗ್ಗೆ ‘ಪ್ರಜಾವಾಣಿ’ ಅ.28ರ ಸಂಚಿಕೆಯಲ್ಲಿ ‘ಬಳಕೆಯೇ ಆಗದ ₹21,331 ಕೋಟಿ’ ಶೀರ್ಷಿಕೆ ಅಡಿಯಲ್ಲಿ ವರದಿ ಪ್ರಕಟಿಸಿತ್ತು. ಇದನ್ನೇ ಉಲ್ಲೇಖಿಸಿ ಕಾಂಗ್ರೆಸ್ ರಾಜ್ಯ ಘಟಕ ಟ್ವೀಟ್ ಮಾಡಿ ಬಿಜೆಪಿ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿದೆ.</p>.<p><strong>ಇದನ್ನೂ ಓದಿ:</strong><a href="www.prajavani.net/district/bengaluru-city/21331-crore-unspent-five-departments-lagging-behind-in-cost-879156.html">ಬಳಕೆಯೇ ಆಗದ ₹21,331 ಕೋಟಿ- ವೆಚ್ಚದಲ್ಲಿ ಹಿಂದುಳಿದ ಐದು ಇಲಾಖೆಗಳು</a></p>.<p>‘ಆಂತರಿಕ ಕಿತ್ತಾಟ, ಖಾತೆ ರಂಪಾಟ, ನಾಯಕತ್ವ ಬದಲಾವಣೆ, ಉಪಚುನಾವಣೆಗಳಲ್ಲಿ ಕಾಲ ಕಳೆದ ಬಿಜೆಪಿ ಸರ್ಕಾರ ಅಭಿವೃದ್ಧಿ ವಿಷಯದಲ್ಲಿ 'ಶೂನ್ಯ ಸಂಪಾದನೆ' ಮಾಡಿದೆ. ವಸತಿ, ಆರೋಗ್ಯ ಸೇರಿದಂತೆ ಹಲವು ಇಲಾಖೆಗಳಲ್ಲಿ ₹21,331 ಕೋಟಿ ಅನುದಾನ ಬಳಕೆಯಾಗಲಿಲ್ಲ, ಯಾವ ಯೋಜನೆಯಲ್ಲೂ ಪ್ರಗತಿ ಇಲ್ಲ. ಇದನ್ನು 'ಡಕೋಟಾ ಸರ್ಕಾರ' ಎನ್ನದೆ ಇನ್ನೇನು ಹೇಳಬೇಕು?’ ಎಂದು ಕಾಂಗ್ರೆಸ್ ಪ್ರಶ್ನಿಸಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು:</strong> ವಸತಿ, ಆರೋಗ್ಯ ಸೇರಿದಂತೆ ಹಲವು ಇಲಾಖೆಗಳಲ್ಲಿ ₹21,331 ಕೋಟಿ ಅನುದಾನ ಬಳಕೆಯಾಗಲಿಲ್ಲ, ಯಾವ ಯೋಜನೆಯಲ್ಲೂ ಪ್ರಗತಿ ಇಲ್ಲ. ಇದನ್ನು 'ಡಕೋಟಾ ಸರ್ಕಾರ' ಎನ್ನದೆ ಇನ್ನೇನು ಹೇಳಬೇಕು? ಎಂದು ರಾಜ್ಯ ಕಾಂಗ್ರೆಸ್ ಪ್ರಶ್ನೆ ಮಾಡಿದೆ.</p>.<p>ಆರೋಗ್ಯ ಸೇರಿದಂತೆ ರಾಜ್ಯ ಸರ್ಕಾರದ ಐದು ಇಲಾಖೆಗಳು ಪ್ರಸಕ್ತ ಆರ್ಥಿಕ ವರ್ಷದ ಬಜೆಟ್ನಲ್ಲಿ ಏಳು ಯೋಜನೆಗಳಿಗೆ ಮೀಸಲಿಟ್ಟಿರುವ ಅನುದಾನದ ಬಳಕೆಯಲ್ಲಿ ಹಿಂದುಳಿದಿದ್ದು, ಸೆಪ್ಟೆಂಬರ್ ಅಂತ್ಯದ ವೇಳೆಗೆ ನಿಗದಿಪಡಿಸಿದ್ದ ಗುರಿಗೆ ಹೋಲಿಸಿದರೆ ಒಟ್ಟು ₹ 21,331.65 ಕೋಟಿ ಬಳಕೆಯಾಗದೆ ಉಳಿದಿದೆ.ಮುಖ್ಯ ಕಾರ್ಯದರ್ಶಿ ಪಿ. ರವಿಕುಮಾರ್ ಅಧ್ಯಕ್ಷತೆಯಲ್ಲಿ ಬುಧವಾರ ನಡೆದ ಕರ್ನಾಟಕ ಕಾರ್ಯಕ್ರಮಗಳ (ಕೆಡಿಪಿ) ಪ್ರಗತಿ ಪರಿಶೀಲನಾ ಸಭೆಯಲ್ಲಿ ಮಂಡಿಸಿದ ಅಂಕಿಅಂಶಗಳು ಇದನ್ನು ಬಹಿರಂಗಪಡಿಸಿವೆ. ಕೃಷಿ, ವಸತಿ ಮತ್ತು ನಗರಾಭಿವೃದ್ಧಿ ಇಲಾಖೆಗಳೂ ಈ ಪಟ್ಟಿಯಲ್ಲಿವೆ.</p>.<p>ಈ ಬಗ್ಗೆ ‘ಪ್ರಜಾವಾಣಿ’ ಅ.28ರ ಸಂಚಿಕೆಯಲ್ಲಿ ‘ಬಳಕೆಯೇ ಆಗದ ₹21,331 ಕೋಟಿ’ ಶೀರ್ಷಿಕೆ ಅಡಿಯಲ್ಲಿ ವರದಿ ಪ್ರಕಟಿಸಿತ್ತು. ಇದನ್ನೇ ಉಲ್ಲೇಖಿಸಿ ಕಾಂಗ್ರೆಸ್ ರಾಜ್ಯ ಘಟಕ ಟ್ವೀಟ್ ಮಾಡಿ ಬಿಜೆಪಿ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿದೆ.</p>.<p><strong>ಇದನ್ನೂ ಓದಿ:</strong><a href="www.prajavani.net/district/bengaluru-city/21331-crore-unspent-five-departments-lagging-behind-in-cost-879156.html">ಬಳಕೆಯೇ ಆಗದ ₹21,331 ಕೋಟಿ- ವೆಚ್ಚದಲ್ಲಿ ಹಿಂದುಳಿದ ಐದು ಇಲಾಖೆಗಳು</a></p>.<p>‘ಆಂತರಿಕ ಕಿತ್ತಾಟ, ಖಾತೆ ರಂಪಾಟ, ನಾಯಕತ್ವ ಬದಲಾವಣೆ, ಉಪಚುನಾವಣೆಗಳಲ್ಲಿ ಕಾಲ ಕಳೆದ ಬಿಜೆಪಿ ಸರ್ಕಾರ ಅಭಿವೃದ್ಧಿ ವಿಷಯದಲ್ಲಿ 'ಶೂನ್ಯ ಸಂಪಾದನೆ' ಮಾಡಿದೆ. ವಸತಿ, ಆರೋಗ್ಯ ಸೇರಿದಂತೆ ಹಲವು ಇಲಾಖೆಗಳಲ್ಲಿ ₹21,331 ಕೋಟಿ ಅನುದಾನ ಬಳಕೆಯಾಗಲಿಲ್ಲ, ಯಾವ ಯೋಜನೆಯಲ್ಲೂ ಪ್ರಗತಿ ಇಲ್ಲ. ಇದನ್ನು 'ಡಕೋಟಾ ಸರ್ಕಾರ' ಎನ್ನದೆ ಇನ್ನೇನು ಹೇಳಬೇಕು?’ ಎಂದು ಕಾಂಗ್ರೆಸ್ ಪ್ರಶ್ನಿಸಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>