<p><strong>ಬೆಂಗಳೂರು</strong>: ಕೇಂದ್ರ ಸರ್ಕಾರದಿಂದ ರಾಜ್ಯಕ್ಕೆ ನಿರಂತರ ಅನ್ಯಾಯವಾಗುತ್ತಿದ್ದು, ರಾಜ್ಯದ ಯೋಜನೆಗಳಿಗೆ ಕೇಂದ್ರ ಸರ್ಕಾರ ಈವರೆಗೆ ನೀಡಿರುವ ಅನುದಾನ ಬಗ್ಗೆ ಶ್ವೇತಪತ್ರ ಮಂಡಿಸಬೇಕು ಎಂದು ಕಾಂಗ್ರೆಸ್ ಸದಸ್ಯರು ಸರ್ಕಾರವನ್ನು ಒತ್ತಾಯಿಸಿದರು.</p>.<p>ವಿಧಾನಸಭೆಯಲ್ಲಿ ಈ ಕುರಿತು ಚರ್ಚೆಯಲ್ಲಿ ಭಾಗವಹಿಸಿ ಮಾತನಾಡಿದ ಕಾಂಗ್ರೆಸ್ನ ಕೆ.ಎಂ.ಶಿವಲಿಂಗೇಗೌಡ, ಜಿಎಸ್ಟಿ ವ್ಯವಸ್ಥೆ ಜಾರಿಗೆ ಬಂದ ಮೇಲೆ ರಾಜ್ಯಕ್ಕೆ ಹೆಚ್ಚು ಅನ್ಯಾಯವಾಗುತ್ತಿದೆ. ಕಾಂಗ್ರೆಸ್ ಮತ್ತು ಬಿಜೆಪಿ ಸೇರಿ ರಾಜ್ಯದ ಪಾಲು ಪಡೆದುಕೊಳ್ಳಲು ಹೋರಾಡಬೇಕು ಎಂದು ಮನವಿ ಮಾಡಿದರು.</p>.<p>ಜಿಎಸ್ಟಿ ಜಾರಿಗೆ ಬರುವುದಕ್ಕೂ ಮೊದಲು ರಾಜ್ಯದಲ್ಲಿ ವ್ಯಾಟ್ ವ್ಯವಸ್ಥೆ ಜಾರಿಯಲ್ಲಿ ಇತ್ತು. ಜಿಎಸ್ಟಿ ಜಾರಿ ಮಾಡುವಾಗ ತೆರಿಗೆ ಸಂಗ್ರಹದಲ್ಲಿ ಕೊರತೆಯಾದರೆ ಆ ಮೊತ್ತವನ್ನು ತುಂಬಿ ಕೊಡುವುದಾಗಿ ಕೇಂದ್ರ ಭರವಸೆ ನೀಡಿತ್ತು. 2022 ರವರೆಗೆ ಕೊರತೆಯನ್ನು ತುಂಬಿ ಕೊಟ್ಟಿತು ಆದರೆ, ಆ ಬಳಿಕ ಕೊರತೆಯನ್ನು ತುಂಬಿ ಕೊಡುತ್ತಿಲ್ಲ ಎಂದು ಶಿವಲಿಂಗೇಗೌಡ ಟೀಕಾ ಪ್ರಹಾರ ನಡೆಸಿದರು.</p>.<p>ಇದಕ್ಕೆ ಬಿಜೆಪಿ ಸದಸ್ಯರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದೂ ಅಲ್ಲದೇ, ಶಿವಲಿಂಗೇಗೌಡರ ಮಾತಿಗೆ ಅಡ್ಡಿಪಡಿಸಿದರು. ಅದಕ್ಕೆ ಪ್ರತಿಕ್ರಿಯಿಸಿದ ಅವರು, ‘ನಾನು ಇಲ್ಲಿ ಸಂತೆ ಭಾಷಣ ಮಾಡಲು ಬಂದಿಲ್ಲ. ಗಂಭೀರ ವಿಷಯ ಪ್ರಸ್ತಾಪಿಸಲು ಬಂದಿದ್ದೇನೆ’ ಎಂದು ತಿರುಗೇಟು ನೀಡಿದರು.</p>.<p>‘ರಾಜ್ಯ ಸರ್ಕಾರ ನಮ್ಮ ಕ್ಷೇತ್ರಗಳಿಗೆ ಸರಿಯಾಗಿ ಅನುದಾನ ನೀಡುತ್ತಿಲ್ಲ, ಕ್ಷೇತ್ರ– ಕ್ಷೇತ್ರಗಳ ಮಧ್ಯೆ ತಾರತಮ್ಯ ಮಾಡಲಾಗುತ್ತಿದೆ. ನಾವೂ ಕರ್ನಾಟಕದಲ್ಲಿ ಇದ್ದೇವೆ, ನಿಮ್ಮ ಸರ್ಕಾರ ಹೀಗೆ ಏಕೆ ಮಾಡುತ್ತಿದೆ’ ಎಂದು ಬಿಜೆಪಿಯ ವೇದವ್ಯಾಸ ಕಾಮತ್ ಪ್ರಶ್ನಿಸಿದರು.</p>.<p>ಈ ವೇಳೆ, ಕಾಂಗ್ರೆಸ್ನ ಶರತ್ ಬಚ್ಚೇಗೌಡ ಅವರು ಪ್ರಧಾನಿ ಮೋದಿ ಅವರ ಕುರಿತು ಆಡಿದ ಮಾತನ್ನು ಕಡತದಿಂದ ತೆಗೆಯುವಂತೆ ವಿರೋಧಪಕ್ಷದ ನಾಯಕ ಆರ್.ಅಶೋಕ ಒತ್ತಾಯಿಸಿದರು. ಬಳಿಕ ಆ ಮಾತುಗಳನ್ನು ಕಡತದಿಂದ ತೆಗೆದುಹಾಕಲು ಉಪಸಭಾಧ್ಯಕ್ಷ ರುದ್ರಪ್ಪ ಲಮಾಣಿ ಸೂಚಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು</strong>: ಕೇಂದ್ರ ಸರ್ಕಾರದಿಂದ ರಾಜ್ಯಕ್ಕೆ ನಿರಂತರ ಅನ್ಯಾಯವಾಗುತ್ತಿದ್ದು, ರಾಜ್ಯದ ಯೋಜನೆಗಳಿಗೆ ಕೇಂದ್ರ ಸರ್ಕಾರ ಈವರೆಗೆ ನೀಡಿರುವ ಅನುದಾನ ಬಗ್ಗೆ ಶ್ವೇತಪತ್ರ ಮಂಡಿಸಬೇಕು ಎಂದು ಕಾಂಗ್ರೆಸ್ ಸದಸ್ಯರು ಸರ್ಕಾರವನ್ನು ಒತ್ತಾಯಿಸಿದರು.</p>.<p>ವಿಧಾನಸಭೆಯಲ್ಲಿ ಈ ಕುರಿತು ಚರ್ಚೆಯಲ್ಲಿ ಭಾಗವಹಿಸಿ ಮಾತನಾಡಿದ ಕಾಂಗ್ರೆಸ್ನ ಕೆ.ಎಂ.ಶಿವಲಿಂಗೇಗೌಡ, ಜಿಎಸ್ಟಿ ವ್ಯವಸ್ಥೆ ಜಾರಿಗೆ ಬಂದ ಮೇಲೆ ರಾಜ್ಯಕ್ಕೆ ಹೆಚ್ಚು ಅನ್ಯಾಯವಾಗುತ್ತಿದೆ. ಕಾಂಗ್ರೆಸ್ ಮತ್ತು ಬಿಜೆಪಿ ಸೇರಿ ರಾಜ್ಯದ ಪಾಲು ಪಡೆದುಕೊಳ್ಳಲು ಹೋರಾಡಬೇಕು ಎಂದು ಮನವಿ ಮಾಡಿದರು.</p>.<p>ಜಿಎಸ್ಟಿ ಜಾರಿಗೆ ಬರುವುದಕ್ಕೂ ಮೊದಲು ರಾಜ್ಯದಲ್ಲಿ ವ್ಯಾಟ್ ವ್ಯವಸ್ಥೆ ಜಾರಿಯಲ್ಲಿ ಇತ್ತು. ಜಿಎಸ್ಟಿ ಜಾರಿ ಮಾಡುವಾಗ ತೆರಿಗೆ ಸಂಗ್ರಹದಲ್ಲಿ ಕೊರತೆಯಾದರೆ ಆ ಮೊತ್ತವನ್ನು ತುಂಬಿ ಕೊಡುವುದಾಗಿ ಕೇಂದ್ರ ಭರವಸೆ ನೀಡಿತ್ತು. 2022 ರವರೆಗೆ ಕೊರತೆಯನ್ನು ತುಂಬಿ ಕೊಟ್ಟಿತು ಆದರೆ, ಆ ಬಳಿಕ ಕೊರತೆಯನ್ನು ತುಂಬಿ ಕೊಡುತ್ತಿಲ್ಲ ಎಂದು ಶಿವಲಿಂಗೇಗೌಡ ಟೀಕಾ ಪ್ರಹಾರ ನಡೆಸಿದರು.</p>.<p>ಇದಕ್ಕೆ ಬಿಜೆಪಿ ಸದಸ್ಯರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದೂ ಅಲ್ಲದೇ, ಶಿವಲಿಂಗೇಗೌಡರ ಮಾತಿಗೆ ಅಡ್ಡಿಪಡಿಸಿದರು. ಅದಕ್ಕೆ ಪ್ರತಿಕ್ರಿಯಿಸಿದ ಅವರು, ‘ನಾನು ಇಲ್ಲಿ ಸಂತೆ ಭಾಷಣ ಮಾಡಲು ಬಂದಿಲ್ಲ. ಗಂಭೀರ ವಿಷಯ ಪ್ರಸ್ತಾಪಿಸಲು ಬಂದಿದ್ದೇನೆ’ ಎಂದು ತಿರುಗೇಟು ನೀಡಿದರು.</p>.<p>‘ರಾಜ್ಯ ಸರ್ಕಾರ ನಮ್ಮ ಕ್ಷೇತ್ರಗಳಿಗೆ ಸರಿಯಾಗಿ ಅನುದಾನ ನೀಡುತ್ತಿಲ್ಲ, ಕ್ಷೇತ್ರ– ಕ್ಷೇತ್ರಗಳ ಮಧ್ಯೆ ತಾರತಮ್ಯ ಮಾಡಲಾಗುತ್ತಿದೆ. ನಾವೂ ಕರ್ನಾಟಕದಲ್ಲಿ ಇದ್ದೇವೆ, ನಿಮ್ಮ ಸರ್ಕಾರ ಹೀಗೆ ಏಕೆ ಮಾಡುತ್ತಿದೆ’ ಎಂದು ಬಿಜೆಪಿಯ ವೇದವ್ಯಾಸ ಕಾಮತ್ ಪ್ರಶ್ನಿಸಿದರು.</p>.<p>ಈ ವೇಳೆ, ಕಾಂಗ್ರೆಸ್ನ ಶರತ್ ಬಚ್ಚೇಗೌಡ ಅವರು ಪ್ರಧಾನಿ ಮೋದಿ ಅವರ ಕುರಿತು ಆಡಿದ ಮಾತನ್ನು ಕಡತದಿಂದ ತೆಗೆಯುವಂತೆ ವಿರೋಧಪಕ್ಷದ ನಾಯಕ ಆರ್.ಅಶೋಕ ಒತ್ತಾಯಿಸಿದರು. ಬಳಿಕ ಆ ಮಾತುಗಳನ್ನು ಕಡತದಿಂದ ತೆಗೆದುಹಾಕಲು ಉಪಸಭಾಧ್ಯಕ್ಷ ರುದ್ರಪ್ಪ ಲಮಾಣಿ ಸೂಚಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>