<p><strong>ಬೆಂಗಳೂರು:</strong> ಭ್ರಷ್ಟಾಚಾರ ಮತ್ತು ಅಧಿಕಾರದ ಕಿತ್ತಾಟದಲ್ಲಿ ಮುಳುಗಿರುವ ಕರ್ನಾಟಕದ ಕಾಂಗ್ರೆಸ್ ಸರ್ಕಾರ ರೈತರ ಹಿತಾಸಕ್ತಿಗಳನ್ನು ಸಂಪೂರ್ಣವಾಗಿ ಬಲಿ ಕೊಟ್ಟಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ ವಿಜಯೇಂದ್ರ ಟೀಕಿಸಿದ್ದಾರೆ.</p>.ವಿಜಯೇಂದ್ರ ನೇತೃತ್ವದಲ್ಲಿ ಚುನಾವಣೆ ಎದುರಿಸಿದರೆ ಬಿಜೆಪಿಗೆ 40 ಸ್ಥಾನ: ಯತ್ನಾಳ.<p>ಬೆಳೆಹಾನಿಯ ಪರಿಹಾರ ಪೂರ್ಣವಾಗಿ ತಲುಪದಿರುವ ಬಗ್ಗೆ ಪ್ರಜಾವಾಣಿಯಲ್ಲಿ ಪ್ರಕಟವಾದ ‘ರೈತರಿಗೆ ತಲುಪದ ಪೂರ್ಣ ಪರಿಹಾರ’ ಎನ್ನುವ ವರದಿಯನ್ನು ಉಲ್ಲೇಖಿಸಿ ಅವರು ಫೇಸ್ಬುಕ್ನಲ್ಲಿ ಹೀಗೆ ಬರೆದುಕೊಂಡಿದ್ದಾರೆ.</p><p>‘ಬೆಳೆಹಾನಿ ಸಮೀಕ್ಷೆ ನಡೆಸಿ, ಪ್ರತಿ ಹೆಕ್ಟೇರ್ಗೆ ₹ 17 ಸಾವಿರ ಪರಿಹಾರ ಘೋಷಿಸಲಾಗಿತ್ತು. ಆದರೆ ರೈತರ ಖಾತೆಗೆ ಜಮೆಯಾಗಿದ್ದು ಕೇವಲ ₹ 6,800. ಬೆಳೆಹಾನಿಯ ಪ್ರಮಾಣ ಕಡಿಮೆ ತೋರಿಸಿ, ರೈತರನ್ನು ಯಾಕೆ ವಂಚಿಸುತ್ತಿದ್ದೀರಿ? ರೈತರಿಗೆ ಪೂರ್ಣ ಪರಿಹಾರ ಯಾಕೆ ನೀಡುತ್ತಿಲ್ಲ’ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಪ್ರಶ್ನಿಸಿದ್ದಾರೆ.</p>.ಸರ್ಕಾರದ ಚಳಿ ಬಿಡಿಸಲು ಕಾರ್ಯತಂತ್ರ: ವಿಜಯೇಂದ್ರ.<p>ರೈತರು ಕಣ್ಣೀರಿಡುವಂತೆ ಮಾಡಿದ ಈ ಭ್ರಷ್ಟ ಕಾಂಗ್ರೆಸ್ ಸರ್ಕಾರಕ್ಕೆ ಉಳಿಗಾಲವಿಲ್ಲ ಎಂದು ಕಿಡಿಕಾರಿದ್ದಾರೆ.</p><p>ರೈತರಿಗೆ ದ್ರೋಹ ಎಸಗುತ್ತಿರುವ ಮುಖ್ಯಮಂತ್ರಿಗಳ ವಿರುದ್ಧ, 'ದ್ರೋಹದ ಗ್ಯಾರಂಟಿ' ಸರ್ಕಾರದ ವಿರುದ್ಧ ಸದನದ ಒಳಗೆ ಮತ್ತು ಹೊರಗೆ ಬೃಹತ್ ಹೋರಾಟ ನಡೆಸುವುದು ನಿಶ್ಚಿತ ಎಂದು ಬರೆದುಕೊಂಡಿದ್ದಾರೆ.</p> .ಸರ್ಕಾರಿ ಉದ್ಯೋಗ | ಯುವಜನರನ್ನು ಮರೆತ ಕಾಂಗ್ರೆಸ್ ಸರ್ಕಾರ: ವಿಜಯೇಂದ್ರ.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು:</strong> ಭ್ರಷ್ಟಾಚಾರ ಮತ್ತು ಅಧಿಕಾರದ ಕಿತ್ತಾಟದಲ್ಲಿ ಮುಳುಗಿರುವ ಕರ್ನಾಟಕದ ಕಾಂಗ್ರೆಸ್ ಸರ್ಕಾರ ರೈತರ ಹಿತಾಸಕ್ತಿಗಳನ್ನು ಸಂಪೂರ್ಣವಾಗಿ ಬಲಿ ಕೊಟ್ಟಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ ವಿಜಯೇಂದ್ರ ಟೀಕಿಸಿದ್ದಾರೆ.</p>.ವಿಜಯೇಂದ್ರ ನೇತೃತ್ವದಲ್ಲಿ ಚುನಾವಣೆ ಎದುರಿಸಿದರೆ ಬಿಜೆಪಿಗೆ 40 ಸ್ಥಾನ: ಯತ್ನಾಳ.<p>ಬೆಳೆಹಾನಿಯ ಪರಿಹಾರ ಪೂರ್ಣವಾಗಿ ತಲುಪದಿರುವ ಬಗ್ಗೆ ಪ್ರಜಾವಾಣಿಯಲ್ಲಿ ಪ್ರಕಟವಾದ ‘ರೈತರಿಗೆ ತಲುಪದ ಪೂರ್ಣ ಪರಿಹಾರ’ ಎನ್ನುವ ವರದಿಯನ್ನು ಉಲ್ಲೇಖಿಸಿ ಅವರು ಫೇಸ್ಬುಕ್ನಲ್ಲಿ ಹೀಗೆ ಬರೆದುಕೊಂಡಿದ್ದಾರೆ.</p><p>‘ಬೆಳೆಹಾನಿ ಸಮೀಕ್ಷೆ ನಡೆಸಿ, ಪ್ರತಿ ಹೆಕ್ಟೇರ್ಗೆ ₹ 17 ಸಾವಿರ ಪರಿಹಾರ ಘೋಷಿಸಲಾಗಿತ್ತು. ಆದರೆ ರೈತರ ಖಾತೆಗೆ ಜಮೆಯಾಗಿದ್ದು ಕೇವಲ ₹ 6,800. ಬೆಳೆಹಾನಿಯ ಪ್ರಮಾಣ ಕಡಿಮೆ ತೋರಿಸಿ, ರೈತರನ್ನು ಯಾಕೆ ವಂಚಿಸುತ್ತಿದ್ದೀರಿ? ರೈತರಿಗೆ ಪೂರ್ಣ ಪರಿಹಾರ ಯಾಕೆ ನೀಡುತ್ತಿಲ್ಲ’ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಪ್ರಶ್ನಿಸಿದ್ದಾರೆ.</p>.ಸರ್ಕಾರದ ಚಳಿ ಬಿಡಿಸಲು ಕಾರ್ಯತಂತ್ರ: ವಿಜಯೇಂದ್ರ.<p>ರೈತರು ಕಣ್ಣೀರಿಡುವಂತೆ ಮಾಡಿದ ಈ ಭ್ರಷ್ಟ ಕಾಂಗ್ರೆಸ್ ಸರ್ಕಾರಕ್ಕೆ ಉಳಿಗಾಲವಿಲ್ಲ ಎಂದು ಕಿಡಿಕಾರಿದ್ದಾರೆ.</p><p>ರೈತರಿಗೆ ದ್ರೋಹ ಎಸಗುತ್ತಿರುವ ಮುಖ್ಯಮಂತ್ರಿಗಳ ವಿರುದ್ಧ, 'ದ್ರೋಹದ ಗ್ಯಾರಂಟಿ' ಸರ್ಕಾರದ ವಿರುದ್ಧ ಸದನದ ಒಳಗೆ ಮತ್ತು ಹೊರಗೆ ಬೃಹತ್ ಹೋರಾಟ ನಡೆಸುವುದು ನಿಶ್ಚಿತ ಎಂದು ಬರೆದುಕೊಂಡಿದ್ದಾರೆ.</p> .ಸರ್ಕಾರಿ ಉದ್ಯೋಗ | ಯುವಜನರನ್ನು ಮರೆತ ಕಾಂಗ್ರೆಸ್ ಸರ್ಕಾರ: ವಿಜಯೇಂದ್ರ.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>